Homeಮುಖಪುಟ43 ಅಪ್ಲಿಕೇಶನ್‌ಗಳ ಬ್ಯಾನ್: ಇದು WTO ನಿಯಮಗಳ ಉಲ್ಲಂಘನೆ ಎಂದ ಚೀನಾ

43 ಅಪ್ಲಿಕೇಶನ್‌ಗಳ ಬ್ಯಾನ್: ಇದು WTO ನಿಯಮಗಳ ಉಲ್ಲಂಘನೆ ಎಂದ ಚೀನಾ

"ಚೀನಾ ಒಡೆತನದ ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸುವ ಸಲುವಾಗಿ ಭಾರತವು ರಾಷ್ಟ್ರೀಯ ಭದ್ರತೆಯ ನೆಪವೊಡ್ಡುವುದನ್ನು ನಾವು ಖಂಡಿಸುತ್ತೇವೆ" ಎಂದು ಚೀನಾ ರಾಯಭಾರ ಕಛೇರಿಯ ವಕ್ತಾರ ಜಿ ರೊಂಗ್ ಹೇಳಿದ್ದಾರೆ

- Advertisement -
- Advertisement -

ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆಯುಂಟಾಗುತ್ತದೆ ಎಂಬ ಕಾರಣಕ್ಕೆ ಚೀನಾ ಒಡೆತನದ ಕೆಲವು ಮೊಬೈಲ್ ಅಪ್ಲಿಕೇಶನ್‌ಗಳೂ ಸೇರಿದಂತೆ ಸುಮಾರು 43 ಅಪ್ಲಿಕೇಶನ್‌ಗಳನ್ನು ನಿನ್ನೆ ಕೇಂದ್ರ ಸರ್ಕಾರ ನಿಷೇಧಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಚೀನಾ, “ಭಾರತದ ಈ ಕ್ರಮವು ವಿಶ್ವ ವ್ಯಾಪಾರ ಸಂಸ್ಥೆಯ (WTO) ನಿಯಮಗಳನ್ನು ಉಲ್ಲಂಘಿಸಿದೆ” ಎಂದು ಆರೋಪಿಸಿದೆ.

ಚೀನಾ-ಭಾರತದ ವಾಸ್ತವಿಕ ಗಡಿ ರೇಖೆಯಿರುವ ಲಡಾಖ್ ಬಳಿ ನಡೆದ ಘರ್ಷಣೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದರು. ಇದರಿಂದ ಎರಡೂ ದೇಶಗಳಿಗೂ ಸಾಕಷ್ಟು ನಷ್ಟವಾಗಿತ್ತು. ಇದಾದ ನಂತರ ಭಾರತ ಚೀನಾ ಒಡೆತನದ ಅಪ್ಲಿಕೇಶನ್‌ಗಳನ್ನು ನಿಷೇಧಿಸುತ್ತಿರುವುದು ಇದು 4 ನೇ ಬಾರಿ. ಇದುವರೆಗೂ ಒಟ್ಟು 267 ಅಪ್ಲಿಕೇಶನ್‌ಗಳನ್ನು ನಿಷೇಧಿಸಿದೆ.

“ಚೀನಾ ಒಡೆತನದ ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸುವ ಸಲುವಾಗಿ ಭಾರತವು ರಾಷ್ಟ್ರೀಯ ಭದ್ರತೆಯ ನೆಪವೊಡ್ಡುವುದನ್ನು ನಾವು ಖಂಡಿಸುತ್ತೇವೆ” ಎಂದು ಚೀನಾ ರಾಯಭಾರ ಕಛೇರಿಯ ವಕ್ತಾರ ಜಿ ರೊಂಗ್ ಹೇಳಿದ್ದಾರೆ.

ಇದನ್ನೂ ಓದಿ: ನೀತಿ ಉಲ್ಲಂಘನೆ: ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಹೊರಕ್ಕೆ

ಭಾರತದ ಈ ಕ್ರಮ WTO ನಿಯಮಗಳಿಗೆ ವಿರುದ್ಧವಾಗಿರುವುದರಿಂದ ಈ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

“ಚೀನಾ ಸೇರಿದಂತೆ ವಿವಿಧ ದೇಶಗಳ ಮಾರುಕಟ್ಟೆ ಭಾಗಿದಾರರಿಗೆ ನ್ಯಾಯಯುತ, ನಿಸ್ಪಕ್ಷಪಾತ ಮತ್ತು ತಾರತಮ್ಯರಹಿತವಾದ ವ್ಯಾಪಾರ ವಾತಾವರಣವನ್ನು ಭಾರತವು ಒದಗಿಸಿಕೊಡುತ್ತದೆ ಮತ್ತು WTO ನಿಯಮಗಳನ್ನು ಉಲ್ಲಂಘಿಸುವ ಕ್ರಮಗಳನ್ನು ಸರಿಪಡಿಸಿಕೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸ್ವದೇಶಿ ಆಪ್‌ಗಳನ್ನು ತಯಾರಿಸಲು ಐಟಿ ಮಂದಿ ಸವಾಲು ಸ್ವೀಕರಿಸಿ: ಮೋದಿ

“ಎರಡೂ ಕಡೆಯವರು ಪರಸ್ಪರ ಲಾಭಕ್ಕಾಗಿ ದ್ವಿಪಕ್ಷೀಯ ಆರ್ಥಿಕ ಮತ್ತು ವ್ಯಾಪಾರ ಸಂಬಂಧಗಳನ್ನು ಸರಿಯಾದ ಹಾದಿಗೆ ತರಬೇಕು. ಸಂವಾದ ಮತ್ತು ಸಮಾಲೋಚನೆಯ ಆಧಾರದ ಮೇಲೆ ಫಲಿತಾಂಶಗಳನ್ನು ಪಡೆಯಬೇಕು” ಎಂದು ಅವರು ಹೇಳಿದರು.

ಭಾರತವು ಆರಂಭದಲ್ಲಿ 59 ಚೀನಾ ಮೂಲದ ಅಪ್ಲಿಕೇಶನ್‌ಗಳನ್ನು ಜೂನ್ 29 ರಂದು ನಿಷೇಧಿಸಿತ್ತು. ನಂತರ ಜುಲೈ 28 ರಂದು 47, ​​ಸೆಪ್ಟೆಂಬರ್ 2 ರಂದು 118 ಮತ್ತು ನವೆಂಬರ್ 24 ರಂದು 43 ಅಪ್ಲಿಕೇಶನ್‌ಗಳನ್ನು ನಿಷೇಧಿಸಿತು. ಮಂಗಳವಾರ ನಿಷೇಧಿಸಲಾದ ಅಪ್ಲಿಕೇಶನ್‌ಗಳಲ್ಲಿ ಚೀನಾದ ಅತಿದೊಡ್ಡ ಇ-ಕಾಮರ್ಸ್ ಅಲಿಬಾಬಾದ ಅಲಿ ಎಕ್ಸ್‌ಪ್ರೆಸ್ ಅಪ್ಲಿಕೇಶನ್ ಕೂಡಾ ಒಂದು.


ಇದನ್ನೂ ಓದಿ: Fact check: ಕೇಂದ್ರ ಸರ್ಕಾರ ನಮ್ಮ ಮೊಬೈಲ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...