Homeಮುಖಪುಟ43 ಅಪ್ಲಿಕೇಶನ್‌ಗಳ ಬ್ಯಾನ್: ಇದು WTO ನಿಯಮಗಳ ಉಲ್ಲಂಘನೆ ಎಂದ ಚೀನಾ

43 ಅಪ್ಲಿಕೇಶನ್‌ಗಳ ಬ್ಯಾನ್: ಇದು WTO ನಿಯಮಗಳ ಉಲ್ಲಂಘನೆ ಎಂದ ಚೀನಾ

"ಚೀನಾ ಒಡೆತನದ ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸುವ ಸಲುವಾಗಿ ಭಾರತವು ರಾಷ್ಟ್ರೀಯ ಭದ್ರತೆಯ ನೆಪವೊಡ್ಡುವುದನ್ನು ನಾವು ಖಂಡಿಸುತ್ತೇವೆ" ಎಂದು ಚೀನಾ ರಾಯಭಾರ ಕಛೇರಿಯ ವಕ್ತಾರ ಜಿ ರೊಂಗ್ ಹೇಳಿದ್ದಾರೆ

- Advertisement -
- Advertisement -

ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆಯುಂಟಾಗುತ್ತದೆ ಎಂಬ ಕಾರಣಕ್ಕೆ ಚೀನಾ ಒಡೆತನದ ಕೆಲವು ಮೊಬೈಲ್ ಅಪ್ಲಿಕೇಶನ್‌ಗಳೂ ಸೇರಿದಂತೆ ಸುಮಾರು 43 ಅಪ್ಲಿಕೇಶನ್‌ಗಳನ್ನು ನಿನ್ನೆ ಕೇಂದ್ರ ಸರ್ಕಾರ ನಿಷೇಧಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಚೀನಾ, “ಭಾರತದ ಈ ಕ್ರಮವು ವಿಶ್ವ ವ್ಯಾಪಾರ ಸಂಸ್ಥೆಯ (WTO) ನಿಯಮಗಳನ್ನು ಉಲ್ಲಂಘಿಸಿದೆ” ಎಂದು ಆರೋಪಿಸಿದೆ.

ಚೀನಾ-ಭಾರತದ ವಾಸ್ತವಿಕ ಗಡಿ ರೇಖೆಯಿರುವ ಲಡಾಖ್ ಬಳಿ ನಡೆದ ಘರ್ಷಣೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದರು. ಇದರಿಂದ ಎರಡೂ ದೇಶಗಳಿಗೂ ಸಾಕಷ್ಟು ನಷ್ಟವಾಗಿತ್ತು. ಇದಾದ ನಂತರ ಭಾರತ ಚೀನಾ ಒಡೆತನದ ಅಪ್ಲಿಕೇಶನ್‌ಗಳನ್ನು ನಿಷೇಧಿಸುತ್ತಿರುವುದು ಇದು 4 ನೇ ಬಾರಿ. ಇದುವರೆಗೂ ಒಟ್ಟು 267 ಅಪ್ಲಿಕೇಶನ್‌ಗಳನ್ನು ನಿಷೇಧಿಸಿದೆ.

“ಚೀನಾ ಒಡೆತನದ ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸುವ ಸಲುವಾಗಿ ಭಾರತವು ರಾಷ್ಟ್ರೀಯ ಭದ್ರತೆಯ ನೆಪವೊಡ್ಡುವುದನ್ನು ನಾವು ಖಂಡಿಸುತ್ತೇವೆ” ಎಂದು ಚೀನಾ ರಾಯಭಾರ ಕಛೇರಿಯ ವಕ್ತಾರ ಜಿ ರೊಂಗ್ ಹೇಳಿದ್ದಾರೆ.

ಇದನ್ನೂ ಓದಿ: ನೀತಿ ಉಲ್ಲಂಘನೆ: ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಹೊರಕ್ಕೆ

ಭಾರತದ ಈ ಕ್ರಮ WTO ನಿಯಮಗಳಿಗೆ ವಿರುದ್ಧವಾಗಿರುವುದರಿಂದ ಈ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

“ಚೀನಾ ಸೇರಿದಂತೆ ವಿವಿಧ ದೇಶಗಳ ಮಾರುಕಟ್ಟೆ ಭಾಗಿದಾರರಿಗೆ ನ್ಯಾಯಯುತ, ನಿಸ್ಪಕ್ಷಪಾತ ಮತ್ತು ತಾರತಮ್ಯರಹಿತವಾದ ವ್ಯಾಪಾರ ವಾತಾವರಣವನ್ನು ಭಾರತವು ಒದಗಿಸಿಕೊಡುತ್ತದೆ ಮತ್ತು WTO ನಿಯಮಗಳನ್ನು ಉಲ್ಲಂಘಿಸುವ ಕ್ರಮಗಳನ್ನು ಸರಿಪಡಿಸಿಕೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸ್ವದೇಶಿ ಆಪ್‌ಗಳನ್ನು ತಯಾರಿಸಲು ಐಟಿ ಮಂದಿ ಸವಾಲು ಸ್ವೀಕರಿಸಿ: ಮೋದಿ

“ಎರಡೂ ಕಡೆಯವರು ಪರಸ್ಪರ ಲಾಭಕ್ಕಾಗಿ ದ್ವಿಪಕ್ಷೀಯ ಆರ್ಥಿಕ ಮತ್ತು ವ್ಯಾಪಾರ ಸಂಬಂಧಗಳನ್ನು ಸರಿಯಾದ ಹಾದಿಗೆ ತರಬೇಕು. ಸಂವಾದ ಮತ್ತು ಸಮಾಲೋಚನೆಯ ಆಧಾರದ ಮೇಲೆ ಫಲಿತಾಂಶಗಳನ್ನು ಪಡೆಯಬೇಕು” ಎಂದು ಅವರು ಹೇಳಿದರು.

ಭಾರತವು ಆರಂಭದಲ್ಲಿ 59 ಚೀನಾ ಮೂಲದ ಅಪ್ಲಿಕೇಶನ್‌ಗಳನ್ನು ಜೂನ್ 29 ರಂದು ನಿಷೇಧಿಸಿತ್ತು. ನಂತರ ಜುಲೈ 28 ರಂದು 47, ​​ಸೆಪ್ಟೆಂಬರ್ 2 ರಂದು 118 ಮತ್ತು ನವೆಂಬರ್ 24 ರಂದು 43 ಅಪ್ಲಿಕೇಶನ್‌ಗಳನ್ನು ನಿಷೇಧಿಸಿತು. ಮಂಗಳವಾರ ನಿಷೇಧಿಸಲಾದ ಅಪ್ಲಿಕೇಶನ್‌ಗಳಲ್ಲಿ ಚೀನಾದ ಅತಿದೊಡ್ಡ ಇ-ಕಾಮರ್ಸ್ ಅಲಿಬಾಬಾದ ಅಲಿ ಎಕ್ಸ್‌ಪ್ರೆಸ್ ಅಪ್ಲಿಕೇಶನ್ ಕೂಡಾ ಒಂದು.


ಇದನ್ನೂ ಓದಿ: Fact check: ಕೇಂದ್ರ ಸರ್ಕಾರ ನಮ್ಮ ಮೊಬೈಲ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...