Homeಮುಖಪುಟ43 ಅಪ್ಲಿಕೇಶನ್‌ಗಳ ಬ್ಯಾನ್: ಇದು WTO ನಿಯಮಗಳ ಉಲ್ಲಂಘನೆ ಎಂದ ಚೀನಾ

43 ಅಪ್ಲಿಕೇಶನ್‌ಗಳ ಬ್ಯಾನ್: ಇದು WTO ನಿಯಮಗಳ ಉಲ್ಲಂಘನೆ ಎಂದ ಚೀನಾ

"ಚೀನಾ ಒಡೆತನದ ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸುವ ಸಲುವಾಗಿ ಭಾರತವು ರಾಷ್ಟ್ರೀಯ ಭದ್ರತೆಯ ನೆಪವೊಡ್ಡುವುದನ್ನು ನಾವು ಖಂಡಿಸುತ್ತೇವೆ" ಎಂದು ಚೀನಾ ರಾಯಭಾರ ಕಛೇರಿಯ ವಕ್ತಾರ ಜಿ ರೊಂಗ್ ಹೇಳಿದ್ದಾರೆ

- Advertisement -
- Advertisement -

ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆಯುಂಟಾಗುತ್ತದೆ ಎಂಬ ಕಾರಣಕ್ಕೆ ಚೀನಾ ಒಡೆತನದ ಕೆಲವು ಮೊಬೈಲ್ ಅಪ್ಲಿಕೇಶನ್‌ಗಳೂ ಸೇರಿದಂತೆ ಸುಮಾರು 43 ಅಪ್ಲಿಕೇಶನ್‌ಗಳನ್ನು ನಿನ್ನೆ ಕೇಂದ್ರ ಸರ್ಕಾರ ನಿಷೇಧಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಚೀನಾ, “ಭಾರತದ ಈ ಕ್ರಮವು ವಿಶ್ವ ವ್ಯಾಪಾರ ಸಂಸ್ಥೆಯ (WTO) ನಿಯಮಗಳನ್ನು ಉಲ್ಲಂಘಿಸಿದೆ” ಎಂದು ಆರೋಪಿಸಿದೆ.

ಚೀನಾ-ಭಾರತದ ವಾಸ್ತವಿಕ ಗಡಿ ರೇಖೆಯಿರುವ ಲಡಾಖ್ ಬಳಿ ನಡೆದ ಘರ್ಷಣೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದರು. ಇದರಿಂದ ಎರಡೂ ದೇಶಗಳಿಗೂ ಸಾಕಷ್ಟು ನಷ್ಟವಾಗಿತ್ತು. ಇದಾದ ನಂತರ ಭಾರತ ಚೀನಾ ಒಡೆತನದ ಅಪ್ಲಿಕೇಶನ್‌ಗಳನ್ನು ನಿಷೇಧಿಸುತ್ತಿರುವುದು ಇದು 4 ನೇ ಬಾರಿ. ಇದುವರೆಗೂ ಒಟ್ಟು 267 ಅಪ್ಲಿಕೇಶನ್‌ಗಳನ್ನು ನಿಷೇಧಿಸಿದೆ.

“ಚೀನಾ ಒಡೆತನದ ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸುವ ಸಲುವಾಗಿ ಭಾರತವು ರಾಷ್ಟ್ರೀಯ ಭದ್ರತೆಯ ನೆಪವೊಡ್ಡುವುದನ್ನು ನಾವು ಖಂಡಿಸುತ್ತೇವೆ” ಎಂದು ಚೀನಾ ರಾಯಭಾರ ಕಛೇರಿಯ ವಕ್ತಾರ ಜಿ ರೊಂಗ್ ಹೇಳಿದ್ದಾರೆ.

ಇದನ್ನೂ ಓದಿ: ನೀತಿ ಉಲ್ಲಂಘನೆ: ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಹೊರಕ್ಕೆ

ಭಾರತದ ಈ ಕ್ರಮ WTO ನಿಯಮಗಳಿಗೆ ವಿರುದ್ಧವಾಗಿರುವುದರಿಂದ ಈ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

“ಚೀನಾ ಸೇರಿದಂತೆ ವಿವಿಧ ದೇಶಗಳ ಮಾರುಕಟ್ಟೆ ಭಾಗಿದಾರರಿಗೆ ನ್ಯಾಯಯುತ, ನಿಸ್ಪಕ್ಷಪಾತ ಮತ್ತು ತಾರತಮ್ಯರಹಿತವಾದ ವ್ಯಾಪಾರ ವಾತಾವರಣವನ್ನು ಭಾರತವು ಒದಗಿಸಿಕೊಡುತ್ತದೆ ಮತ್ತು WTO ನಿಯಮಗಳನ್ನು ಉಲ್ಲಂಘಿಸುವ ಕ್ರಮಗಳನ್ನು ಸರಿಪಡಿಸಿಕೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸ್ವದೇಶಿ ಆಪ್‌ಗಳನ್ನು ತಯಾರಿಸಲು ಐಟಿ ಮಂದಿ ಸವಾಲು ಸ್ವೀಕರಿಸಿ: ಮೋದಿ

“ಎರಡೂ ಕಡೆಯವರು ಪರಸ್ಪರ ಲಾಭಕ್ಕಾಗಿ ದ್ವಿಪಕ್ಷೀಯ ಆರ್ಥಿಕ ಮತ್ತು ವ್ಯಾಪಾರ ಸಂಬಂಧಗಳನ್ನು ಸರಿಯಾದ ಹಾದಿಗೆ ತರಬೇಕು. ಸಂವಾದ ಮತ್ತು ಸಮಾಲೋಚನೆಯ ಆಧಾರದ ಮೇಲೆ ಫಲಿತಾಂಶಗಳನ್ನು ಪಡೆಯಬೇಕು” ಎಂದು ಅವರು ಹೇಳಿದರು.

ಭಾರತವು ಆರಂಭದಲ್ಲಿ 59 ಚೀನಾ ಮೂಲದ ಅಪ್ಲಿಕೇಶನ್‌ಗಳನ್ನು ಜೂನ್ 29 ರಂದು ನಿಷೇಧಿಸಿತ್ತು. ನಂತರ ಜುಲೈ 28 ರಂದು 47, ​​ಸೆಪ್ಟೆಂಬರ್ 2 ರಂದು 118 ಮತ್ತು ನವೆಂಬರ್ 24 ರಂದು 43 ಅಪ್ಲಿಕೇಶನ್‌ಗಳನ್ನು ನಿಷೇಧಿಸಿತು. ಮಂಗಳವಾರ ನಿಷೇಧಿಸಲಾದ ಅಪ್ಲಿಕೇಶನ್‌ಗಳಲ್ಲಿ ಚೀನಾದ ಅತಿದೊಡ್ಡ ಇ-ಕಾಮರ್ಸ್ ಅಲಿಬಾಬಾದ ಅಲಿ ಎಕ್ಸ್‌ಪ್ರೆಸ್ ಅಪ್ಲಿಕೇಶನ್ ಕೂಡಾ ಒಂದು.


ಇದನ್ನೂ ಓದಿ: Fact check: ಕೇಂದ್ರ ಸರ್ಕಾರ ನಮ್ಮ ಮೊಬೈಲ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...