Homeಮುಖಪುಟ43 ಅಪ್ಲಿಕೇಶನ್‌ಗಳ ಬ್ಯಾನ್: ಇದು WTO ನಿಯಮಗಳ ಉಲ್ಲಂಘನೆ ಎಂದ ಚೀನಾ

43 ಅಪ್ಲಿಕೇಶನ್‌ಗಳ ಬ್ಯಾನ್: ಇದು WTO ನಿಯಮಗಳ ಉಲ್ಲಂಘನೆ ಎಂದ ಚೀನಾ

"ಚೀನಾ ಒಡೆತನದ ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸುವ ಸಲುವಾಗಿ ಭಾರತವು ರಾಷ್ಟ್ರೀಯ ಭದ್ರತೆಯ ನೆಪವೊಡ್ಡುವುದನ್ನು ನಾವು ಖಂಡಿಸುತ್ತೇವೆ" ಎಂದು ಚೀನಾ ರಾಯಭಾರ ಕಛೇರಿಯ ವಕ್ತಾರ ಜಿ ರೊಂಗ್ ಹೇಳಿದ್ದಾರೆ

- Advertisement -
- Advertisement -

ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆಯುಂಟಾಗುತ್ತದೆ ಎಂಬ ಕಾರಣಕ್ಕೆ ಚೀನಾ ಒಡೆತನದ ಕೆಲವು ಮೊಬೈಲ್ ಅಪ್ಲಿಕೇಶನ್‌ಗಳೂ ಸೇರಿದಂತೆ ಸುಮಾರು 43 ಅಪ್ಲಿಕೇಶನ್‌ಗಳನ್ನು ನಿನ್ನೆ ಕೇಂದ್ರ ಸರ್ಕಾರ ನಿಷೇಧಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಚೀನಾ, “ಭಾರತದ ಈ ಕ್ರಮವು ವಿಶ್ವ ವ್ಯಾಪಾರ ಸಂಸ್ಥೆಯ (WTO) ನಿಯಮಗಳನ್ನು ಉಲ್ಲಂಘಿಸಿದೆ” ಎಂದು ಆರೋಪಿಸಿದೆ.

ಚೀನಾ-ಭಾರತದ ವಾಸ್ತವಿಕ ಗಡಿ ರೇಖೆಯಿರುವ ಲಡಾಖ್ ಬಳಿ ನಡೆದ ಘರ್ಷಣೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದರು. ಇದರಿಂದ ಎರಡೂ ದೇಶಗಳಿಗೂ ಸಾಕಷ್ಟು ನಷ್ಟವಾಗಿತ್ತು. ಇದಾದ ನಂತರ ಭಾರತ ಚೀನಾ ಒಡೆತನದ ಅಪ್ಲಿಕೇಶನ್‌ಗಳನ್ನು ನಿಷೇಧಿಸುತ್ತಿರುವುದು ಇದು 4 ನೇ ಬಾರಿ. ಇದುವರೆಗೂ ಒಟ್ಟು 267 ಅಪ್ಲಿಕೇಶನ್‌ಗಳನ್ನು ನಿಷೇಧಿಸಿದೆ.

“ಚೀನಾ ಒಡೆತನದ ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸುವ ಸಲುವಾಗಿ ಭಾರತವು ರಾಷ್ಟ್ರೀಯ ಭದ್ರತೆಯ ನೆಪವೊಡ್ಡುವುದನ್ನು ನಾವು ಖಂಡಿಸುತ್ತೇವೆ” ಎಂದು ಚೀನಾ ರಾಯಭಾರ ಕಛೇರಿಯ ವಕ್ತಾರ ಜಿ ರೊಂಗ್ ಹೇಳಿದ್ದಾರೆ.

ಇದನ್ನೂ ಓದಿ: ನೀತಿ ಉಲ್ಲಂಘನೆ: ಗೂಗಲ್ ಪ್ಲೇ ಸ್ಟೋರ್‌ನಿಂದ Paytm ಹೊರಕ್ಕೆ

ಭಾರತದ ಈ ಕ್ರಮ WTO ನಿಯಮಗಳಿಗೆ ವಿರುದ್ಧವಾಗಿರುವುದರಿಂದ ಈ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

“ಚೀನಾ ಸೇರಿದಂತೆ ವಿವಿಧ ದೇಶಗಳ ಮಾರುಕಟ್ಟೆ ಭಾಗಿದಾರರಿಗೆ ನ್ಯಾಯಯುತ, ನಿಸ್ಪಕ್ಷಪಾತ ಮತ್ತು ತಾರತಮ್ಯರಹಿತವಾದ ವ್ಯಾಪಾರ ವಾತಾವರಣವನ್ನು ಭಾರತವು ಒದಗಿಸಿಕೊಡುತ್ತದೆ ಮತ್ತು WTO ನಿಯಮಗಳನ್ನು ಉಲ್ಲಂಘಿಸುವ ಕ್ರಮಗಳನ್ನು ಸರಿಪಡಿಸಿಕೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸ್ವದೇಶಿ ಆಪ್‌ಗಳನ್ನು ತಯಾರಿಸಲು ಐಟಿ ಮಂದಿ ಸವಾಲು ಸ್ವೀಕರಿಸಿ: ಮೋದಿ

“ಎರಡೂ ಕಡೆಯವರು ಪರಸ್ಪರ ಲಾಭಕ್ಕಾಗಿ ದ್ವಿಪಕ್ಷೀಯ ಆರ್ಥಿಕ ಮತ್ತು ವ್ಯಾಪಾರ ಸಂಬಂಧಗಳನ್ನು ಸರಿಯಾದ ಹಾದಿಗೆ ತರಬೇಕು. ಸಂವಾದ ಮತ್ತು ಸಮಾಲೋಚನೆಯ ಆಧಾರದ ಮೇಲೆ ಫಲಿತಾಂಶಗಳನ್ನು ಪಡೆಯಬೇಕು” ಎಂದು ಅವರು ಹೇಳಿದರು.

ಭಾರತವು ಆರಂಭದಲ್ಲಿ 59 ಚೀನಾ ಮೂಲದ ಅಪ್ಲಿಕೇಶನ್‌ಗಳನ್ನು ಜೂನ್ 29 ರಂದು ನಿಷೇಧಿಸಿತ್ತು. ನಂತರ ಜುಲೈ 28 ರಂದು 47, ​​ಸೆಪ್ಟೆಂಬರ್ 2 ರಂದು 118 ಮತ್ತು ನವೆಂಬರ್ 24 ರಂದು 43 ಅಪ್ಲಿಕೇಶನ್‌ಗಳನ್ನು ನಿಷೇಧಿಸಿತು. ಮಂಗಳವಾರ ನಿಷೇಧಿಸಲಾದ ಅಪ್ಲಿಕೇಶನ್‌ಗಳಲ್ಲಿ ಚೀನಾದ ಅತಿದೊಡ್ಡ ಇ-ಕಾಮರ್ಸ್ ಅಲಿಬಾಬಾದ ಅಲಿ ಎಕ್ಸ್‌ಪ್ರೆಸ್ ಅಪ್ಲಿಕೇಶನ್ ಕೂಡಾ ಒಂದು.


ಇದನ್ನೂ ಓದಿ: Fact check: ಕೇಂದ್ರ ಸರ್ಕಾರ ನಮ್ಮ ಮೊಬೈಲ್‌ಗಳನ್ನು ಮೇಲ್ವಿಚಾರಣೆ ಮಾಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...