Homeನಿಜವೋ ಸುಳ್ಳೋ43 ವರ್ಷದ ಮೇಡಂ ಜೆಎನ್‌ಯುನಲ್ಲಿ ಕಲಿಯುತ್ತಿದ್ದಾರೆ. ಆಶ್ಚರ್ಯವೆಂದರೆ ಆಕೆಯೂ ಮಗಳೂ ಕೂಡ ಅಲ್ಲಿಯ ವಿದ್ಯಾರ್ಥಿನಿ! ನಿಜವೇನು?

43 ವರ್ಷದ ಮೇಡಂ ಜೆಎನ್‌ಯುನಲ್ಲಿ ಕಲಿಯುತ್ತಿದ್ದಾರೆ. ಆಶ್ಚರ್ಯವೆಂದರೆ ಆಕೆಯೂ ಮಗಳೂ ಕೂಡ ಅಲ್ಲಿಯ ವಿದ್ಯಾರ್ಥಿನಿ! ನಿಜವೇನು?

- Advertisement -
- Advertisement -

ಫ್ಯಾಕ್ಟ್‌ಚೆಕ್‌

ಖಾತ್ಯ ವಿಶ್ವವಿದ್ಯಾಲಯ ಜೆಎನ್‌ಯುನಲ್ಲಿ ವಿದ್ಯಾರ್ಥಿಗಳು ಹಾಸ್ಟೆಲ್ ಮತ್ತು ದಾಖಲಾತಿ ಶುಲ್ಕ 300% ಹೆಚ್ಚಳದ ವಿರುದ್ಧ ಹೋರಾಟಕ್ಕಿಳಿದಿದ್ದಾರೆ. ಶುಲ್ಕ ಹೆಚ್ಚಳದ ಆದೇಶ ವಾಪಸ್ ಪಡೆಯುವಂತೆ ಒತ್ತಾಯಿಸಿ ಒಂದು ವಾರದಿಂದ ನಿರಂತರವಾಗಿ ಧೀರೋದಾತ್ತ ಹೋರಾಟ ನಡೆಸುತ್ತಿದ್ದಾರೆ. ಅವರನ್ನು ದಮನ ಮಾಡಲು ಪೊಲೀಸರು ಹಿಂಸೆಗಿಳಿದಿದ್ದಾರೆ.

ಇಂತಹ ಸಮಯದಲ್ಲಿ “43 ವರ್ಷದ ಮೇಡಂ ಜೆಎನ್‌ಯುನಲ್ಲಿ ಕಲಿಯುತ್ತಿದ್ದಾರೆ. ಆಶ್ಚರ್‍ಯವೆಂದರೆ ಆಕೆಯ ಮಗಳೂ ಕೂಡ ಅಲ್ಲಿಯ ವಿದ್ಯಾರ್ಥಿನಿ!” ಎಂಬ ಸಂದೇಶ ಮತ್ತು ಒಬ್ಬರ ಫೋಟೊ ವೈರಲ್ ಆಗಿದೆ. ಆ ಮೂಲಕ ವಿದ್ಯಾಭ್ಯಾಸ ಮುಗಿದರೂ ಸಹ ಜೆಎನ್‌ಯುನಲ್ಲಿ ಉಳಿದಿದ್ದಾರೆ ಎಂಬ ಭಾವನೆ ಮೂಡಿಸಲು ಮುಂದಾಗಿದ್ದಾರೆ.

ಬಿಜೆಪಿ ಐಟಿ ಸೆಲ್‌ನ ರಂಜಿತ್ ಜಾ ಎಂಬುವವರು ಮೊದಲು ಇದನ್ನು ಪೋಸ್ಟ್ ಮಾಡಿದ್ದು 3500ಕ್ಕೂ ಹೆಚ್ಚು ಜನ ಷೇರ್ ಮಾಡಿದ್ದಾರೆ. ಅಲ್ಲದೇ ಹಲವಾರು ಪೇಜ್‌ಗಳಲ್ಲಿ ಈ ಸುದ್ದಿ ಹರಿದಾಡಿದೆ.

ನಿಜವೇನು?

ಆದರೆ ಸತ್ಯ ಏನೆಂದರೆ ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ನವೆಂಬರ್ 15ರಂದು ಝೀ ನ್ಯೂಸ್‌ನವರು ಹೋರಾಟವನ್ನು ವರದಿ ಮಾಡಲು ಜೆಎನ್‌ಯು ಕ್ಯಾಂಪಸ್ಸಿಗೆ ಹೋದಾಗ ಅಲ್ಲಿ ಗೋದಿ ಮೀಡಿಯಾ, ಮಾರಿಕೊಂಡ ಮಾಧ್ಯಮಗಳ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟಿಸಿದರು. ಗೋ ಬ್ಯಾಕ್ ಝೀ ನ್ಯೂಸ್ ಎಂದು ಘೋಷಣೆ ಕೂಗಿ ಕ್ಯಾಂಪಸ್ ಒಳಗೆ ಕಾಲಿಡದಂತೆ ತಡೆದರು. ಅದರಲ್ಲಿ ಒಬ್ಬಾಕೆ ಜೋರಾಗಿ ಘೋಷಣೆ ಕೂಗುತ್ತಿದ್ದಳು. ಆಕೆಯ ಹೆಸರು ಶಾಂಭವಿ ಸಿದ್ದಿ ಆಗಿದ್ದು ಅವರ ವಯಸ್ಸು ಕೇವಲ 23. ಫ್ರೆಂಚ್‌ ವಿಭಾಗದಲ್ಲಿ ಆಕೆ ಎಂಎ ಓದುತ್ತಿದ್ದಾಳೆ. ಆಕೆಯನ್ನೇ ಟಾರ್ಗೆಟ್ ಮಾಡಿದ ಕೆಲವರು ಆ ಫೋಟೊವನ್ನೇ ಬಳಸಿ 43 ವರ್ಷದ ಮಹಿಳೆ ಎಂದು ಸುಳ್ಳು ಹಬ್ಬಿಸಿದ್ದಾರೆ ಅಷ್ಟೇ.

ಈ ಕೆಳಗಿನ ವಿಡಿಯೋದಲ್ಲಿ 2.57 ನಿಮಿಷದಲ್ಲಿ ಆಕೆಯ ಘೋಷಣೆ ಕೂಗುವುದು ಕಾಣುತ್ತದೆ ನೋಡಿ.

43 ವರ್ಷವಾದರೂ ಜೆಎನ್‌ಯು‌ನಲ್ಲಿ ಯಾಕಿರಬೇಕು ಎಂದು ಪ್ರಶ್ನಿಸುವ ಮೂಲಕ ಹಾಸ್ಟೆಲ್‌ ಶುಲ್ಕ ಹೆಚ್ಚಳದ ಹೋರಾಟವನ್ನು ದಿಕ್ಕುತಪ್ಪಿಸಲು ಪ್ರಯತ್ನಿಸಲಾಗುತ್ತಿದೆ. ಇದು ಮಾತ್ರವಲ್ಲದೇ ಇನ್ನು ಹತ್ತಾರು ಫೋಟೊಶಾಪ್‌ ಮಾಡಿದ ಕೆಟ್ಟ ಚಿತ್ರಗಳ್ನನು ಹಾಕಿ ಇದು ಜೆಎನ್‌ಯು ಎಂದು ಹೇಳುವು ಮೂಲಕ ತಪ್ಪು ಸಂದೇಶ ಹರಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...