Homeನಿಜವೋ ಸುಳ್ಳೋ43 ವರ್ಷದ ಮೇಡಂ ಜೆಎನ್‌ಯುನಲ್ಲಿ ಕಲಿಯುತ್ತಿದ್ದಾರೆ. ಆಶ್ಚರ್ಯವೆಂದರೆ ಆಕೆಯೂ ಮಗಳೂ ಕೂಡ ಅಲ್ಲಿಯ ವಿದ್ಯಾರ್ಥಿನಿ! ನಿಜವೇನು?

43 ವರ್ಷದ ಮೇಡಂ ಜೆಎನ್‌ಯುನಲ್ಲಿ ಕಲಿಯುತ್ತಿದ್ದಾರೆ. ಆಶ್ಚರ್ಯವೆಂದರೆ ಆಕೆಯೂ ಮಗಳೂ ಕೂಡ ಅಲ್ಲಿಯ ವಿದ್ಯಾರ್ಥಿನಿ! ನಿಜವೇನು?

- Advertisement -
- Advertisement -

ಫ್ಯಾಕ್ಟ್‌ಚೆಕ್‌

ಖಾತ್ಯ ವಿಶ್ವವಿದ್ಯಾಲಯ ಜೆಎನ್‌ಯುನಲ್ಲಿ ವಿದ್ಯಾರ್ಥಿಗಳು ಹಾಸ್ಟೆಲ್ ಮತ್ತು ದಾಖಲಾತಿ ಶುಲ್ಕ 300% ಹೆಚ್ಚಳದ ವಿರುದ್ಧ ಹೋರಾಟಕ್ಕಿಳಿದಿದ್ದಾರೆ. ಶುಲ್ಕ ಹೆಚ್ಚಳದ ಆದೇಶ ವಾಪಸ್ ಪಡೆಯುವಂತೆ ಒತ್ತಾಯಿಸಿ ಒಂದು ವಾರದಿಂದ ನಿರಂತರವಾಗಿ ಧೀರೋದಾತ್ತ ಹೋರಾಟ ನಡೆಸುತ್ತಿದ್ದಾರೆ. ಅವರನ್ನು ದಮನ ಮಾಡಲು ಪೊಲೀಸರು ಹಿಂಸೆಗಿಳಿದಿದ್ದಾರೆ.

ಇಂತಹ ಸಮಯದಲ್ಲಿ “43 ವರ್ಷದ ಮೇಡಂ ಜೆಎನ್‌ಯುನಲ್ಲಿ ಕಲಿಯುತ್ತಿದ್ದಾರೆ. ಆಶ್ಚರ್‍ಯವೆಂದರೆ ಆಕೆಯ ಮಗಳೂ ಕೂಡ ಅಲ್ಲಿಯ ವಿದ್ಯಾರ್ಥಿನಿ!” ಎಂಬ ಸಂದೇಶ ಮತ್ತು ಒಬ್ಬರ ಫೋಟೊ ವೈರಲ್ ಆಗಿದೆ. ಆ ಮೂಲಕ ವಿದ್ಯಾಭ್ಯಾಸ ಮುಗಿದರೂ ಸಹ ಜೆಎನ್‌ಯುನಲ್ಲಿ ಉಳಿದಿದ್ದಾರೆ ಎಂಬ ಭಾವನೆ ಮೂಡಿಸಲು ಮುಂದಾಗಿದ್ದಾರೆ.

ಬಿಜೆಪಿ ಐಟಿ ಸೆಲ್‌ನ ರಂಜಿತ್ ಜಾ ಎಂಬುವವರು ಮೊದಲು ಇದನ್ನು ಪೋಸ್ಟ್ ಮಾಡಿದ್ದು 3500ಕ್ಕೂ ಹೆಚ್ಚು ಜನ ಷೇರ್ ಮಾಡಿದ್ದಾರೆ. ಅಲ್ಲದೇ ಹಲವಾರು ಪೇಜ್‌ಗಳಲ್ಲಿ ಈ ಸುದ್ದಿ ಹರಿದಾಡಿದೆ.

ನಿಜವೇನು?

ಆದರೆ ಸತ್ಯ ಏನೆಂದರೆ ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ನವೆಂಬರ್ 15ರಂದು ಝೀ ನ್ಯೂಸ್‌ನವರು ಹೋರಾಟವನ್ನು ವರದಿ ಮಾಡಲು ಜೆಎನ್‌ಯು ಕ್ಯಾಂಪಸ್ಸಿಗೆ ಹೋದಾಗ ಅಲ್ಲಿ ಗೋದಿ ಮೀಡಿಯಾ, ಮಾರಿಕೊಂಡ ಮಾಧ್ಯಮಗಳ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟಿಸಿದರು. ಗೋ ಬ್ಯಾಕ್ ಝೀ ನ್ಯೂಸ್ ಎಂದು ಘೋಷಣೆ ಕೂಗಿ ಕ್ಯಾಂಪಸ್ ಒಳಗೆ ಕಾಲಿಡದಂತೆ ತಡೆದರು. ಅದರಲ್ಲಿ ಒಬ್ಬಾಕೆ ಜೋರಾಗಿ ಘೋಷಣೆ ಕೂಗುತ್ತಿದ್ದಳು. ಆಕೆಯ ಹೆಸರು ಶಾಂಭವಿ ಸಿದ್ದಿ ಆಗಿದ್ದು ಅವರ ವಯಸ್ಸು ಕೇವಲ 23. ಫ್ರೆಂಚ್‌ ವಿಭಾಗದಲ್ಲಿ ಆಕೆ ಎಂಎ ಓದುತ್ತಿದ್ದಾಳೆ. ಆಕೆಯನ್ನೇ ಟಾರ್ಗೆಟ್ ಮಾಡಿದ ಕೆಲವರು ಆ ಫೋಟೊವನ್ನೇ ಬಳಸಿ 43 ವರ್ಷದ ಮಹಿಳೆ ಎಂದು ಸುಳ್ಳು ಹಬ್ಬಿಸಿದ್ದಾರೆ ಅಷ್ಟೇ.

ಈ ಕೆಳಗಿನ ವಿಡಿಯೋದಲ್ಲಿ 2.57 ನಿಮಿಷದಲ್ಲಿ ಆಕೆಯ ಘೋಷಣೆ ಕೂಗುವುದು ಕಾಣುತ್ತದೆ ನೋಡಿ.

43 ವರ್ಷವಾದರೂ ಜೆಎನ್‌ಯು‌ನಲ್ಲಿ ಯಾಕಿರಬೇಕು ಎಂದು ಪ್ರಶ್ನಿಸುವ ಮೂಲಕ ಹಾಸ್ಟೆಲ್‌ ಶುಲ್ಕ ಹೆಚ್ಚಳದ ಹೋರಾಟವನ್ನು ದಿಕ್ಕುತಪ್ಪಿಸಲು ಪ್ರಯತ್ನಿಸಲಾಗುತ್ತಿದೆ. ಇದು ಮಾತ್ರವಲ್ಲದೇ ಇನ್ನು ಹತ್ತಾರು ಫೋಟೊಶಾಪ್‌ ಮಾಡಿದ ಕೆಟ್ಟ ಚಿತ್ರಗಳ್ನನು ಹಾಕಿ ಇದು ಜೆಎನ್‌ಯು ಎಂದು ಹೇಳುವು ಮೂಲಕ ತಪ್ಪು ಸಂದೇಶ ಹರಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...