Homeನಿಜವೋ ಸುಳ್ಳೋ43 ವರ್ಷದ ಮೇಡಂ ಜೆಎನ್‌ಯುನಲ್ಲಿ ಕಲಿಯುತ್ತಿದ್ದಾರೆ. ಆಶ್ಚರ್ಯವೆಂದರೆ ಆಕೆಯೂ ಮಗಳೂ ಕೂಡ ಅಲ್ಲಿಯ ವಿದ್ಯಾರ್ಥಿನಿ! ನಿಜವೇನು?

43 ವರ್ಷದ ಮೇಡಂ ಜೆಎನ್‌ಯುನಲ್ಲಿ ಕಲಿಯುತ್ತಿದ್ದಾರೆ. ಆಶ್ಚರ್ಯವೆಂದರೆ ಆಕೆಯೂ ಮಗಳೂ ಕೂಡ ಅಲ್ಲಿಯ ವಿದ್ಯಾರ್ಥಿನಿ! ನಿಜವೇನು?

- Advertisement -
- Advertisement -

ಫ್ಯಾಕ್ಟ್‌ಚೆಕ್‌

ಖಾತ್ಯ ವಿಶ್ವವಿದ್ಯಾಲಯ ಜೆಎನ್‌ಯುನಲ್ಲಿ ವಿದ್ಯಾರ್ಥಿಗಳು ಹಾಸ್ಟೆಲ್ ಮತ್ತು ದಾಖಲಾತಿ ಶುಲ್ಕ 300% ಹೆಚ್ಚಳದ ವಿರುದ್ಧ ಹೋರಾಟಕ್ಕಿಳಿದಿದ್ದಾರೆ. ಶುಲ್ಕ ಹೆಚ್ಚಳದ ಆದೇಶ ವಾಪಸ್ ಪಡೆಯುವಂತೆ ಒತ್ತಾಯಿಸಿ ಒಂದು ವಾರದಿಂದ ನಿರಂತರವಾಗಿ ಧೀರೋದಾತ್ತ ಹೋರಾಟ ನಡೆಸುತ್ತಿದ್ದಾರೆ. ಅವರನ್ನು ದಮನ ಮಾಡಲು ಪೊಲೀಸರು ಹಿಂಸೆಗಿಳಿದಿದ್ದಾರೆ.

ಇಂತಹ ಸಮಯದಲ್ಲಿ “43 ವರ್ಷದ ಮೇಡಂ ಜೆಎನ್‌ಯುನಲ್ಲಿ ಕಲಿಯುತ್ತಿದ್ದಾರೆ. ಆಶ್ಚರ್‍ಯವೆಂದರೆ ಆಕೆಯ ಮಗಳೂ ಕೂಡ ಅಲ್ಲಿಯ ವಿದ್ಯಾರ್ಥಿನಿ!” ಎಂಬ ಸಂದೇಶ ಮತ್ತು ಒಬ್ಬರ ಫೋಟೊ ವೈರಲ್ ಆಗಿದೆ. ಆ ಮೂಲಕ ವಿದ್ಯಾಭ್ಯಾಸ ಮುಗಿದರೂ ಸಹ ಜೆಎನ್‌ಯುನಲ್ಲಿ ಉಳಿದಿದ್ದಾರೆ ಎಂಬ ಭಾವನೆ ಮೂಡಿಸಲು ಮುಂದಾಗಿದ್ದಾರೆ.

ಬಿಜೆಪಿ ಐಟಿ ಸೆಲ್‌ನ ರಂಜಿತ್ ಜಾ ಎಂಬುವವರು ಮೊದಲು ಇದನ್ನು ಪೋಸ್ಟ್ ಮಾಡಿದ್ದು 3500ಕ್ಕೂ ಹೆಚ್ಚು ಜನ ಷೇರ್ ಮಾಡಿದ್ದಾರೆ. ಅಲ್ಲದೇ ಹಲವಾರು ಪೇಜ್‌ಗಳಲ್ಲಿ ಈ ಸುದ್ದಿ ಹರಿದಾಡಿದೆ.

ನಿಜವೇನು?

ಆದರೆ ಸತ್ಯ ಏನೆಂದರೆ ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ನವೆಂಬರ್ 15ರಂದು ಝೀ ನ್ಯೂಸ್‌ನವರು ಹೋರಾಟವನ್ನು ವರದಿ ಮಾಡಲು ಜೆಎನ್‌ಯು ಕ್ಯಾಂಪಸ್ಸಿಗೆ ಹೋದಾಗ ಅಲ್ಲಿ ಗೋದಿ ಮೀಡಿಯಾ, ಮಾರಿಕೊಂಡ ಮಾಧ್ಯಮಗಳ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟಿಸಿದರು. ಗೋ ಬ್ಯಾಕ್ ಝೀ ನ್ಯೂಸ್ ಎಂದು ಘೋಷಣೆ ಕೂಗಿ ಕ್ಯಾಂಪಸ್ ಒಳಗೆ ಕಾಲಿಡದಂತೆ ತಡೆದರು. ಅದರಲ್ಲಿ ಒಬ್ಬಾಕೆ ಜೋರಾಗಿ ಘೋಷಣೆ ಕೂಗುತ್ತಿದ್ದಳು. ಆಕೆಯ ಹೆಸರು ಶಾಂಭವಿ ಸಿದ್ದಿ ಆಗಿದ್ದು ಅವರ ವಯಸ್ಸು ಕೇವಲ 23. ಫ್ರೆಂಚ್‌ ವಿಭಾಗದಲ್ಲಿ ಆಕೆ ಎಂಎ ಓದುತ್ತಿದ್ದಾಳೆ. ಆಕೆಯನ್ನೇ ಟಾರ್ಗೆಟ್ ಮಾಡಿದ ಕೆಲವರು ಆ ಫೋಟೊವನ್ನೇ ಬಳಸಿ 43 ವರ್ಷದ ಮಹಿಳೆ ಎಂದು ಸುಳ್ಳು ಹಬ್ಬಿಸಿದ್ದಾರೆ ಅಷ್ಟೇ.

ಈ ಕೆಳಗಿನ ವಿಡಿಯೋದಲ್ಲಿ 2.57 ನಿಮಿಷದಲ್ಲಿ ಆಕೆಯ ಘೋಷಣೆ ಕೂಗುವುದು ಕಾಣುತ್ತದೆ ನೋಡಿ.

43 ವರ್ಷವಾದರೂ ಜೆಎನ್‌ಯು‌ನಲ್ಲಿ ಯಾಕಿರಬೇಕು ಎಂದು ಪ್ರಶ್ನಿಸುವ ಮೂಲಕ ಹಾಸ್ಟೆಲ್‌ ಶುಲ್ಕ ಹೆಚ್ಚಳದ ಹೋರಾಟವನ್ನು ದಿಕ್ಕುತಪ್ಪಿಸಲು ಪ್ರಯತ್ನಿಸಲಾಗುತ್ತಿದೆ. ಇದು ಮಾತ್ರವಲ್ಲದೇ ಇನ್ನು ಹತ್ತಾರು ಫೋಟೊಶಾಪ್‌ ಮಾಡಿದ ಕೆಟ್ಟ ಚಿತ್ರಗಳ್ನನು ಹಾಕಿ ಇದು ಜೆಎನ್‌ಯು ಎಂದು ಹೇಳುವು ಮೂಲಕ ತಪ್ಪು ಸಂದೇಶ ಹರಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...