Homeಮುಖಪುಟಮಾಧವಿ ಲತಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು

ಮಾಧವಿ ಲತಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು

- Advertisement -
- Advertisement -

ಮತದಾರರನ್ನು ಬೆದರಿಸುವ ಮತ್ತು ಸಾಮರಸ್ಯಕ್ಕೆ ಭಂಗ ತಂದಿರುವ ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಮಾಧವಿ ಲತಾ ಮತ್ತು ಬಿಜೆಪಿ ಪಕ್ಷದ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿ ತೆಲಂಗಾಣ ಫಾರ್ ಪೀಸ್ ಅಂಡ್ ಯೂನಿಟಿ (ಟಿಪಿಯು) ಮಂಗಳವಾರ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದೆ.

44 ಸಾಮಾಜಿಕ ಹಕ್ಕುಗಳ ಕಾರ್ಯಕರ್ತರು ಸಹಿ ಮಾಡಿದ ದೂರಿನಲ್ಲಿ, ಮುಸ್ಲಿಂ ಮಹಿಳಾ ಮತದಾರರು ಮುಸುಕು ತೆಗೆಯುವಂತೆ ಒತ್ತಾಯಿಸಿ, ಅವರ ಗುರುತಿನ ಚೀಟಿಗಳನ್ನು ಪರಿಶೀಲಿಸುವುದು ಮತ್ತು ಅವರ ಗುರುತನ್ನು ಪ್ರಶ್ನಿಸಿರುವುದು ಮುಸ್ಲಿಂ ಮಹಿಳಾ ಮತದಾರರ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ.

ಮಾಧವಿ ಲತಾ ತಮ್ಮ ಕ್ರಮಗಳನ್ನು ಸಮರ್ಥಿಸಿಕೊಂಡರೆ, 1961ರ ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಯಮ 35ರಡಿಯಲ್ಲಿ ಮಾಧವಿ ಲತಾ ವರ್ತನೆ ಶಿಕ್ಷಾರ್ಹವಾಗಿದೆ ಎಂದು ಹೇಳಲಾಗಿದೆ. ಮತದಾರರಿಗೆ ಗುರುತಿನ ಚೀಟಿ ಕಾಯ್ದೆಯಡಿ ವಿತರಿಸಲಾಗಿರುವ ಗುರುತಿನ ಚೀಟಿಗಳನ್ನು ಪರಿಶೀಲಿಸುವ ಅಧಿಕಾರ ಕೇವಲ ಚುನಾವಣಾಧಿಕಾರಿ ಅಥವಾ ಅಧಿಕೃತ ಮತಗಟ್ಟೆ ಅಧಿಕಾರಿಗೆ ಮಾತ್ರವಿದೆ. ಆದ್ದರಿಂದ 1961ರ ಪ್ರಜಾ ಪ್ರತಿನಿಧಿ ಕಾಯ್ದೆಯ ನಿಯಮ 35ರ ಅಡಿ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಲಾಗಿದೆ.

ನಿಯಮಗಳ ಪ್ರಕಾರ, ವ್ಯಕ್ತಿಯೊಬ್ಬರ ಗುರುತನ್ನು ಪ್ರಶ್ನಿಸುವ ಅಧಿಕಾರ ಕೇವಲ ಚುನಾವಣಾಧಿಕಾರಿ ಅಥವಾ ಅವರಿಗೆ ನೆರವು ನೀಡಲು ನೇಮಕಗೊಂಡಿರುವ ನಿರ್ದಿಷ್ಟ ಉದ್ಯೋಗಿಗಳು ಅಥವಾ ಮತಗಟ್ಟೆ ಏಜೆಂಟ್‌ಗಳಿಗೆ ಮಾತ್ರವಿದೆ. ಮಾಧವಿ ಲತಾ ಅವರು ಮತದಾರರನ್ನು ಬೆದರಿಸಲು, ಗುರುತನ್ನು ಹೇಳುವಂತೆ ಒತ್ತಾಯಿಸಲು,  ಗುರುತಿನ ಚೀಟಿಗಳನ್ನು ತೆಗೆದುಕೊಳ್ಳಲು, ವೈಯಕ್ತಿಕ ಮಾಹಿತಿಯ ಪ್ರಶ್ನೆಗಳನ್ನು ಕೇಳಲು ಕಾನೂನಿನಲ್ಲಿ ಯಾವುದೇ ಅವಕಾಶ ಇಲ್ಲ ಎಂದು ದೂರಿನಲ್ಲಿ ಹೇಳಲಾಗಿದೆ.

ಮಾಧವಿ ಲತಾ ಅವರು ಬುರ್ಖಾ ಧರಿಸಿರುವ ಮತ್ತು ತಲೆಗೆ ಸ್ಕಾರ್ಫ್ ಧರಿಸಿದ್ದ ಮುಸ್ಲಿಂ ಮಹಿಳೆಯರನ್ನು ಮಾತ್ರ ಗುರಿಯಾಗಿಸಿಕೊಂಡಿದ್ದಾರೆ ಎಂಬುದು ವರದಿಗಳಿಂದ ಸ್ಪಷ್ಟವಾಗಿದೆ, ಇದು ಕೇವಲ ಕೋಮು ಸೌಹಾರ್ದತೆಗೆ ಭಂಗ ತರುವ ಉದ್ದೇಶವನ್ನು ಹೊಂದಿದೆ ಎಂದು ಕೂಡ ಮುಖ್ಯ ಚುನಾವಣಾ ಆಯುಕ್ತರಿಗೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಲೋಕಸಭೆ ಚುನಾವಣೆಯ 4ನೇ ಹಂತದ ಮತದಾನದ ದಿನ ಹೈದರಾಬಾದ್‌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ, ಆಝಂಪುರದ ಮತಗಟ್ಟೆ ಸಂಖ್ಯೆ 122ಕ್ಕೆ ತೆರಳಿ ಮುಸ್ಲಿಂ ಮಹಿಳೆಯರ ಬುರ್ಖಾದ ಸ್ಕಾರ್ಫ್‌ ತೆಗೆಸಿ ಗುರುತಿನ ಚೀಟಿಗಳನ್ನು ಪರಿಶೀಲಿಸಿದ್ದಾರೆ. ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಇದನ್ನು ಓದಿ: ಹೈದಾರಾಬಾದ್| ಬುರ್ಖಾಧಾರಿ ಮಹಿಳೆಯರ ವೋಟರ್ ಐಡಿ ಪರಿಶೀಲಿಸಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...