Homeಮುಖಪುಟಮಾಧವಿ ಲತಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು

ಮಾಧವಿ ಲತಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು

- Advertisement -
- Advertisement -

ಮತದಾರರನ್ನು ಬೆದರಿಸುವ ಮತ್ತು ಸಾಮರಸ್ಯಕ್ಕೆ ಭಂಗ ತಂದಿರುವ ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಮಾಧವಿ ಲತಾ ಮತ್ತು ಬಿಜೆಪಿ ಪಕ್ಷದ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿ ತೆಲಂಗಾಣ ಫಾರ್ ಪೀಸ್ ಅಂಡ್ ಯೂನಿಟಿ (ಟಿಪಿಯು) ಮಂಗಳವಾರ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದೆ.

44 ಸಾಮಾಜಿಕ ಹಕ್ಕುಗಳ ಕಾರ್ಯಕರ್ತರು ಸಹಿ ಮಾಡಿದ ದೂರಿನಲ್ಲಿ, ಮುಸ್ಲಿಂ ಮಹಿಳಾ ಮತದಾರರು ಮುಸುಕು ತೆಗೆಯುವಂತೆ ಒತ್ತಾಯಿಸಿ, ಅವರ ಗುರುತಿನ ಚೀಟಿಗಳನ್ನು ಪರಿಶೀಲಿಸುವುದು ಮತ್ತು ಅವರ ಗುರುತನ್ನು ಪ್ರಶ್ನಿಸಿರುವುದು ಮುಸ್ಲಿಂ ಮಹಿಳಾ ಮತದಾರರ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ.

ಮಾಧವಿ ಲತಾ ತಮ್ಮ ಕ್ರಮಗಳನ್ನು ಸಮರ್ಥಿಸಿಕೊಂಡರೆ, 1961ರ ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಯಮ 35ರಡಿಯಲ್ಲಿ ಮಾಧವಿ ಲತಾ ವರ್ತನೆ ಶಿಕ್ಷಾರ್ಹವಾಗಿದೆ ಎಂದು ಹೇಳಲಾಗಿದೆ. ಮತದಾರರಿಗೆ ಗುರುತಿನ ಚೀಟಿ ಕಾಯ್ದೆಯಡಿ ವಿತರಿಸಲಾಗಿರುವ ಗುರುತಿನ ಚೀಟಿಗಳನ್ನು ಪರಿಶೀಲಿಸುವ ಅಧಿಕಾರ ಕೇವಲ ಚುನಾವಣಾಧಿಕಾರಿ ಅಥವಾ ಅಧಿಕೃತ ಮತಗಟ್ಟೆ ಅಧಿಕಾರಿಗೆ ಮಾತ್ರವಿದೆ. ಆದ್ದರಿಂದ 1961ರ ಪ್ರಜಾ ಪ್ರತಿನಿಧಿ ಕಾಯ್ದೆಯ ನಿಯಮ 35ರ ಅಡಿ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಲಾಗಿದೆ.

ನಿಯಮಗಳ ಪ್ರಕಾರ, ವ್ಯಕ್ತಿಯೊಬ್ಬರ ಗುರುತನ್ನು ಪ್ರಶ್ನಿಸುವ ಅಧಿಕಾರ ಕೇವಲ ಚುನಾವಣಾಧಿಕಾರಿ ಅಥವಾ ಅವರಿಗೆ ನೆರವು ನೀಡಲು ನೇಮಕಗೊಂಡಿರುವ ನಿರ್ದಿಷ್ಟ ಉದ್ಯೋಗಿಗಳು ಅಥವಾ ಮತಗಟ್ಟೆ ಏಜೆಂಟ್‌ಗಳಿಗೆ ಮಾತ್ರವಿದೆ. ಮಾಧವಿ ಲತಾ ಅವರು ಮತದಾರರನ್ನು ಬೆದರಿಸಲು, ಗುರುತನ್ನು ಹೇಳುವಂತೆ ಒತ್ತಾಯಿಸಲು,  ಗುರುತಿನ ಚೀಟಿಗಳನ್ನು ತೆಗೆದುಕೊಳ್ಳಲು, ವೈಯಕ್ತಿಕ ಮಾಹಿತಿಯ ಪ್ರಶ್ನೆಗಳನ್ನು ಕೇಳಲು ಕಾನೂನಿನಲ್ಲಿ ಯಾವುದೇ ಅವಕಾಶ ಇಲ್ಲ ಎಂದು ದೂರಿನಲ್ಲಿ ಹೇಳಲಾಗಿದೆ.

ಮಾಧವಿ ಲತಾ ಅವರು ಬುರ್ಖಾ ಧರಿಸಿರುವ ಮತ್ತು ತಲೆಗೆ ಸ್ಕಾರ್ಫ್ ಧರಿಸಿದ್ದ ಮುಸ್ಲಿಂ ಮಹಿಳೆಯರನ್ನು ಮಾತ್ರ ಗುರಿಯಾಗಿಸಿಕೊಂಡಿದ್ದಾರೆ ಎಂಬುದು ವರದಿಗಳಿಂದ ಸ್ಪಷ್ಟವಾಗಿದೆ, ಇದು ಕೇವಲ ಕೋಮು ಸೌಹಾರ್ದತೆಗೆ ಭಂಗ ತರುವ ಉದ್ದೇಶವನ್ನು ಹೊಂದಿದೆ ಎಂದು ಕೂಡ ಮುಖ್ಯ ಚುನಾವಣಾ ಆಯುಕ್ತರಿಗೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಲೋಕಸಭೆ ಚುನಾವಣೆಯ 4ನೇ ಹಂತದ ಮತದಾನದ ದಿನ ಹೈದರಾಬಾದ್‌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ, ಆಝಂಪುರದ ಮತಗಟ್ಟೆ ಸಂಖ್ಯೆ 122ಕ್ಕೆ ತೆರಳಿ ಮುಸ್ಲಿಂ ಮಹಿಳೆಯರ ಬುರ್ಖಾದ ಸ್ಕಾರ್ಫ್‌ ತೆಗೆಸಿ ಗುರುತಿನ ಚೀಟಿಗಳನ್ನು ಪರಿಶೀಲಿಸಿದ್ದಾರೆ. ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಇದನ್ನು ಓದಿ: ಹೈದಾರಾಬಾದ್| ಬುರ್ಖಾಧಾರಿ ಮಹಿಳೆಯರ ವೋಟರ್ ಐಡಿ ಪರಿಶೀಲಿಸಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...