Homeಮುಖಪುಟಮಾಧವಿ ಲತಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು

ಮಾಧವಿ ಲತಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು

- Advertisement -
- Advertisement -

ಮತದಾರರನ್ನು ಬೆದರಿಸುವ ಮತ್ತು ಸಾಮರಸ್ಯಕ್ಕೆ ಭಂಗ ತಂದಿರುವ ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಮಾಧವಿ ಲತಾ ಮತ್ತು ಬಿಜೆಪಿ ಪಕ್ಷದ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿ ತೆಲಂಗಾಣ ಫಾರ್ ಪೀಸ್ ಅಂಡ್ ಯೂನಿಟಿ (ಟಿಪಿಯು) ಮಂಗಳವಾರ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದೆ.

44 ಸಾಮಾಜಿಕ ಹಕ್ಕುಗಳ ಕಾರ್ಯಕರ್ತರು ಸಹಿ ಮಾಡಿದ ದೂರಿನಲ್ಲಿ, ಮುಸ್ಲಿಂ ಮಹಿಳಾ ಮತದಾರರು ಮುಸುಕು ತೆಗೆಯುವಂತೆ ಒತ್ತಾಯಿಸಿ, ಅವರ ಗುರುತಿನ ಚೀಟಿಗಳನ್ನು ಪರಿಶೀಲಿಸುವುದು ಮತ್ತು ಅವರ ಗುರುತನ್ನು ಪ್ರಶ್ನಿಸಿರುವುದು ಮುಸ್ಲಿಂ ಮಹಿಳಾ ಮತದಾರರ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ.

ಮಾಧವಿ ಲತಾ ತಮ್ಮ ಕ್ರಮಗಳನ್ನು ಸಮರ್ಥಿಸಿಕೊಂಡರೆ, 1961ರ ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಯಮ 35ರಡಿಯಲ್ಲಿ ಮಾಧವಿ ಲತಾ ವರ್ತನೆ ಶಿಕ್ಷಾರ್ಹವಾಗಿದೆ ಎಂದು ಹೇಳಲಾಗಿದೆ. ಮತದಾರರಿಗೆ ಗುರುತಿನ ಚೀಟಿ ಕಾಯ್ದೆಯಡಿ ವಿತರಿಸಲಾಗಿರುವ ಗುರುತಿನ ಚೀಟಿಗಳನ್ನು ಪರಿಶೀಲಿಸುವ ಅಧಿಕಾರ ಕೇವಲ ಚುನಾವಣಾಧಿಕಾರಿ ಅಥವಾ ಅಧಿಕೃತ ಮತಗಟ್ಟೆ ಅಧಿಕಾರಿಗೆ ಮಾತ್ರವಿದೆ. ಆದ್ದರಿಂದ 1961ರ ಪ್ರಜಾ ಪ್ರತಿನಿಧಿ ಕಾಯ್ದೆಯ ನಿಯಮ 35ರ ಅಡಿ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಲಾಗಿದೆ.

ನಿಯಮಗಳ ಪ್ರಕಾರ, ವ್ಯಕ್ತಿಯೊಬ್ಬರ ಗುರುತನ್ನು ಪ್ರಶ್ನಿಸುವ ಅಧಿಕಾರ ಕೇವಲ ಚುನಾವಣಾಧಿಕಾರಿ ಅಥವಾ ಅವರಿಗೆ ನೆರವು ನೀಡಲು ನೇಮಕಗೊಂಡಿರುವ ನಿರ್ದಿಷ್ಟ ಉದ್ಯೋಗಿಗಳು ಅಥವಾ ಮತಗಟ್ಟೆ ಏಜೆಂಟ್‌ಗಳಿಗೆ ಮಾತ್ರವಿದೆ. ಮಾಧವಿ ಲತಾ ಅವರು ಮತದಾರರನ್ನು ಬೆದರಿಸಲು, ಗುರುತನ್ನು ಹೇಳುವಂತೆ ಒತ್ತಾಯಿಸಲು,  ಗುರುತಿನ ಚೀಟಿಗಳನ್ನು ತೆಗೆದುಕೊಳ್ಳಲು, ವೈಯಕ್ತಿಕ ಮಾಹಿತಿಯ ಪ್ರಶ್ನೆಗಳನ್ನು ಕೇಳಲು ಕಾನೂನಿನಲ್ಲಿ ಯಾವುದೇ ಅವಕಾಶ ಇಲ್ಲ ಎಂದು ದೂರಿನಲ್ಲಿ ಹೇಳಲಾಗಿದೆ.

ಮಾಧವಿ ಲತಾ ಅವರು ಬುರ್ಖಾ ಧರಿಸಿರುವ ಮತ್ತು ತಲೆಗೆ ಸ್ಕಾರ್ಫ್ ಧರಿಸಿದ್ದ ಮುಸ್ಲಿಂ ಮಹಿಳೆಯರನ್ನು ಮಾತ್ರ ಗುರಿಯಾಗಿಸಿಕೊಂಡಿದ್ದಾರೆ ಎಂಬುದು ವರದಿಗಳಿಂದ ಸ್ಪಷ್ಟವಾಗಿದೆ, ಇದು ಕೇವಲ ಕೋಮು ಸೌಹಾರ್ದತೆಗೆ ಭಂಗ ತರುವ ಉದ್ದೇಶವನ್ನು ಹೊಂದಿದೆ ಎಂದು ಕೂಡ ಮುಖ್ಯ ಚುನಾವಣಾ ಆಯುಕ್ತರಿಗೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಲೋಕಸಭೆ ಚುನಾವಣೆಯ 4ನೇ ಹಂತದ ಮತದಾನದ ದಿನ ಹೈದರಾಬಾದ್‌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ, ಆಝಂಪುರದ ಮತಗಟ್ಟೆ ಸಂಖ್ಯೆ 122ಕ್ಕೆ ತೆರಳಿ ಮುಸ್ಲಿಂ ಮಹಿಳೆಯರ ಬುರ್ಖಾದ ಸ್ಕಾರ್ಫ್‌ ತೆಗೆಸಿ ಗುರುತಿನ ಚೀಟಿಗಳನ್ನು ಪರಿಶೀಲಿಸಿದ್ದಾರೆ. ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಇದನ್ನು ಓದಿ: ಹೈದಾರಾಬಾದ್| ಬುರ್ಖಾಧಾರಿ ಮಹಿಳೆಯರ ವೋಟರ್ ಐಡಿ ಪರಿಶೀಲಿಸಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...