Homeಮುಖಪುಟಗಡಿಯಲ್ಲಿನ ರೈತರ ಮೇಲೆ ಹಲ್ಲೆ: ಪೊಲೀಸರಿಗೆ ತಲ್ವಾರ್ ಬೀಸಿದವ ಸೇರಿ 44 ಮಂದಿ ಬಂಧನ

ಗಡಿಯಲ್ಲಿನ ರೈತರ ಮೇಲೆ ಹಲ್ಲೆ: ಪೊಲೀಸರಿಗೆ ತಲ್ವಾರ್ ಬೀಸಿದವ ಸೇರಿ 44 ಮಂದಿ ಬಂಧನ

- Advertisement -
- Advertisement -

ಗಣರಾಜ್ಯೋತ್ಸವದಂದು ನಡೆದ ಟ್ರ್ಯಾಕ್ಟರ್ ಪರೇಡ್‌ ನಂತರ ಶುಕ್ರವಾರ ದೆಹಲಿಯ ಸಿಂಘು ಗಡಿಯಲ್ಲಿ ಉದ್ವಿಗ್ನತೆ ಆರಂಭವಾಗಿತ್ತು. ಸ್ಥಳೀಯರು ಎಂದು ಹೇಳಿಕೊಂಡು ಕೆಲವು ಅನುಮಾನಾಸ್ಪದ ವ್ಯಕ್ತಿಗಳು ಆಯುಧ ಹಿಡಿದು ರೈತರು ಮತ್ತು ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಈ ಅಹಿತಕರ ಘಟನೆಯಲ್ಲಿ ಭಾಗಿಯಾಗಿದ್ದರೆಂದು 44 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ರೈತರು ರಾಷ್ಟ್ರಧ್ವಜವನ್ನು ಅವಮಾನಿಸಿದ್ದಾರೆ ಎಂದು ಆಪಾದಿಸಿ, ಪ್ರತಿಭಟನಾ ನಿರತ ರೈತರ ಮೇಲೆ ಗುಂಪೊಂದು ಹಲ್ಲೆ ನಡೆಸಿತು. ಈ ವೇಳೆ ಕಲ್ಲು ತೂರಾಟ, ಘರ್ಷಣೆ ನಡೆದು ಹಲವು ಮಂದಿ ಗಾಯಗೊಂಡಿದ್ದರು.

ಇದನ್ನೂ ಓದಿ: ಮಧ್ಯರಾತ್ರಿಯ ಮಾಸ್ಟರ್‌ಸ್ಟ್ರೋಕ್: ಸುಳ್ಳು, ಸಂಚು, ದಮನಗಳೇ ತಿರುಗುಬಾಣವಾದ ಗಳಿಗೆ

ಗಾಯಾಗೊಂಡವರಲ್ಲಿ ಅಲೀಪುರ ಠಾಣಾಧಿಕಾರಿ ಪ್ರದೀಪ್ ಪಾಲಿವಾಲ್ ಸೇರಿದ್ದು, ಗಲಭೆಕೋರರಲ್ಲಿನ ಒಬ್ಬ ಖಡ್ಗ ಬೀಸಿದಾಗ ಪ್ರದೀಪ್ ತೀವ್ರವಾಗಿ ಗಾಯಗೊಂಡಿದ್ದರು. ಇವರ ಮೇಲೆ ಖಡ್ಗದಿಂದ ಹಲ್ಲೆ ನಡೆಸಿದ ಆರೋಪದಲ್ಲಿ ನವಾನ್‌ಶಹರ್ ನಿವಾಸಿ ರಂಜೀತ್ ಸಿಂಗ್ ಎಂಬಾತ ಸೇರಿದಂತೆ 44 ಮಂದಿಯನ್ನು ಬಂಧಿಸಲಾಗಿದೆ.

“ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಶುಕ್ರವಾರ ಮಧ್ಯಾಹ್ನದ ವೇಳೆಗೆ ಫಲಕ ಹಾಗೂ ಧ್ವಜಗಳನ್ನು ಹಿಡಿದಿದ್ದ 200ಕ್ಕೂ ಹೆಚ್ಚು ಮಂದಿಯ ಗುಂಪೊಂದು ಆಗಮಿಸಿ, ರೈತರ ಪ್ರತಿಭಟನೆಯಿಂದಾಗಿ ತಮಗೆ ಆರ್ಥಿಕ ಸಂಕಷ್ಟ ತಲೆದೋರಿದೆ. ತಕ್ಷಣ ರೈತರು ಜಾಗ ಖಾಲಿ ಮಾಡಬೇಕು” ಎಂದು ಆಗ್ರಹಿಸಿದರು ಎಂಬುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ ಮುಗಿಸಲು ಕೇಂದ್ರದ ಸಂಚು: ಕ್ರೊನೊಲಜಿ ಹೀಗಿದೆ

ನಂತರ ಈ ಗುಂಪು ಪ್ರತಿಭಟನಾ ಸ್ಥಳಕ್ಕೆ ನುಗ್ಗಿ ರೈತರ ಟೆಂಟ್‌ಗಳನ್ನು ಕಿತ್ತೆಸೆದು, ರೈತರ ವಸ್ತುಗಳನ್ನು ಗುಂಪು ಹಾಳುಗೆಡವಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು.

ಈ ಘಟನೆಯ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಆಯುಧ ಹಿಡಿದ ಕೆಲವರು ಬಂದು ರೈತರ ಮೇಲೆ ದಾಳಿ ಮಾಡಿ, ಅವರ ವಸ್ತುಗಳನ್ನು ಹಾಳುಗೆಡವುತ್ತಿದ್ದಾಗ ಪೊಲೀಸರು ಕೈಕಟ್ಟಿ ನಿಂತಿದ್ದರು ಎಂದು ಹಲವರು ಆರೋಪಿಸಿದ್ದಾರೆ.

ಇನ್ನೂ ಕೆಲವರು ಇದು ಸರ್ಕಾರದ ಸಂಚು ಎಂದು ದೂರಿದ್ದಾರೆ. ಆದರೆ ರೈತರ ಸಂಘಟನೆಗಳು ಇದಾವುದಕ್ಕೂ ಹೆದರುವುದಿಲ್ಲ ಎಂದು ಮತ್ತೊಮ್ಮೆ ಘಂಟಾಘೊಷವಾಗಿ ಹೇಳಿದ್ದಾರೆ.

ನುಗ್ಗಿದ ಈ ಗುಂಪು ಯಾರದು?

ಇಂಥದ್ದೇ ಸಂಘಟನೆಗೆ ಸೇರಿದ ಗುಂಪೆಂದು ತಕ್ಷಣಕ್ಕೆ ಹೇಳಲು ಸಾಧ್ಯವಿಲ್ಲವಾದರೂ, ನಿನ್ನೆ ಸ್ಥಳೀಯರ ಹೆಸರಲ್ಲಿ ಒಂದು ಸಣ್ಣ ಗುಂಪು ಪ್ರತಿಭಟನೆ ಮಾಡಿತ್ತು. ಬಹುಪಾಲು ಮಾಧ್ಯಮಗಳು ಸ್ಥಳೀಯರಿಂದ ಪ್ರತಿಭಟನೆ ಎಂದೇ ಬಿಂಬಿಸಿದ್ದವು.

ಅದರೆ, ಅಲ್ಟ್ ನ್ಯೂಸ್ ನಡೆಸಿದ ಫ್ಯಾಕ್ಟ್ ಚೆಕ್‌ನಲ್ಲಿ, ಹಿಂದೂ-ಸೇನಾ ಸಂಘಟನ್‌ನವರು ಆ ಪ್ರತಿಭಟನೆ ನಡೆಸಿದ್ದರು. ಅದರಲ್ಲಿ ಕೆಲವು ಸ್ಥಳಿಯರನ್ನು ಸೇರಿಸಿಕೊಂಡಿದ್ದರು. ತಮ್ಮದೇ ಸಂಘಟನೆ ಪ್ರತಿಭಟನೆ ನಡೆಸಿದೆ ಎಂದು ಹಿಂದೂ-ಸೇನಾ ಸಂಘಟಣ್ ಅಧ್ಯಕ್ಷ ಅಲ್ಟ್ ನ್ಯೂಸ್ ಎದುರು ಒಪ್ಪಿಕೊಂಡಿದ್ದರು.


ಇದನ್ನೂ ಓದಿ: ‘ಜ. 26ರ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರ ಕಾರಣ’: ಬಿಜೆಪಿ ತೊರೆದ ಹಿರಿಯ ನಾಯಕ ರಾಂಪಾಲ್ ಮಜ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...