Homeಮುಖಪುಟಗಡಿಯಲ್ಲಿನ ರೈತರ ಮೇಲೆ ಹಲ್ಲೆ: ಪೊಲೀಸರಿಗೆ ತಲ್ವಾರ್ ಬೀಸಿದವ ಸೇರಿ 44 ಮಂದಿ ಬಂಧನ

ಗಡಿಯಲ್ಲಿನ ರೈತರ ಮೇಲೆ ಹಲ್ಲೆ: ಪೊಲೀಸರಿಗೆ ತಲ್ವಾರ್ ಬೀಸಿದವ ಸೇರಿ 44 ಮಂದಿ ಬಂಧನ

- Advertisement -
- Advertisement -

ಗಣರಾಜ್ಯೋತ್ಸವದಂದು ನಡೆದ ಟ್ರ್ಯಾಕ್ಟರ್ ಪರೇಡ್‌ ನಂತರ ಶುಕ್ರವಾರ ದೆಹಲಿಯ ಸಿಂಘು ಗಡಿಯಲ್ಲಿ ಉದ್ವಿಗ್ನತೆ ಆರಂಭವಾಗಿತ್ತು. ಸ್ಥಳೀಯರು ಎಂದು ಹೇಳಿಕೊಂಡು ಕೆಲವು ಅನುಮಾನಾಸ್ಪದ ವ್ಯಕ್ತಿಗಳು ಆಯುಧ ಹಿಡಿದು ರೈತರು ಮತ್ತು ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಈ ಅಹಿತಕರ ಘಟನೆಯಲ್ಲಿ ಭಾಗಿಯಾಗಿದ್ದರೆಂದು 44 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ರೈತರು ರಾಷ್ಟ್ರಧ್ವಜವನ್ನು ಅವಮಾನಿಸಿದ್ದಾರೆ ಎಂದು ಆಪಾದಿಸಿ, ಪ್ರತಿಭಟನಾ ನಿರತ ರೈತರ ಮೇಲೆ ಗುಂಪೊಂದು ಹಲ್ಲೆ ನಡೆಸಿತು. ಈ ವೇಳೆ ಕಲ್ಲು ತೂರಾಟ, ಘರ್ಷಣೆ ನಡೆದು ಹಲವು ಮಂದಿ ಗಾಯಗೊಂಡಿದ್ದರು.

ಇದನ್ನೂ ಓದಿ: ಮಧ್ಯರಾತ್ರಿಯ ಮಾಸ್ಟರ್‌ಸ್ಟ್ರೋಕ್: ಸುಳ್ಳು, ಸಂಚು, ದಮನಗಳೇ ತಿರುಗುಬಾಣವಾದ ಗಳಿಗೆ

ಗಾಯಾಗೊಂಡವರಲ್ಲಿ ಅಲೀಪುರ ಠಾಣಾಧಿಕಾರಿ ಪ್ರದೀಪ್ ಪಾಲಿವಾಲ್ ಸೇರಿದ್ದು, ಗಲಭೆಕೋರರಲ್ಲಿನ ಒಬ್ಬ ಖಡ್ಗ ಬೀಸಿದಾಗ ಪ್ರದೀಪ್ ತೀವ್ರವಾಗಿ ಗಾಯಗೊಂಡಿದ್ದರು. ಇವರ ಮೇಲೆ ಖಡ್ಗದಿಂದ ಹಲ್ಲೆ ನಡೆಸಿದ ಆರೋಪದಲ್ಲಿ ನವಾನ್‌ಶಹರ್ ನಿವಾಸಿ ರಂಜೀತ್ ಸಿಂಗ್ ಎಂಬಾತ ಸೇರಿದಂತೆ 44 ಮಂದಿಯನ್ನು ಬಂಧಿಸಲಾಗಿದೆ.

“ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಶುಕ್ರವಾರ ಮಧ್ಯಾಹ್ನದ ವೇಳೆಗೆ ಫಲಕ ಹಾಗೂ ಧ್ವಜಗಳನ್ನು ಹಿಡಿದಿದ್ದ 200ಕ್ಕೂ ಹೆಚ್ಚು ಮಂದಿಯ ಗುಂಪೊಂದು ಆಗಮಿಸಿ, ರೈತರ ಪ್ರತಿಭಟನೆಯಿಂದಾಗಿ ತಮಗೆ ಆರ್ಥಿಕ ಸಂಕಷ್ಟ ತಲೆದೋರಿದೆ. ತಕ್ಷಣ ರೈತರು ಜಾಗ ಖಾಲಿ ಮಾಡಬೇಕು” ಎಂದು ಆಗ್ರಹಿಸಿದರು ಎಂಬುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ ಮುಗಿಸಲು ಕೇಂದ್ರದ ಸಂಚು: ಕ್ರೊನೊಲಜಿ ಹೀಗಿದೆ

ನಂತರ ಈ ಗುಂಪು ಪ್ರತಿಭಟನಾ ಸ್ಥಳಕ್ಕೆ ನುಗ್ಗಿ ರೈತರ ಟೆಂಟ್‌ಗಳನ್ನು ಕಿತ್ತೆಸೆದು, ರೈತರ ವಸ್ತುಗಳನ್ನು ಗುಂಪು ಹಾಳುಗೆಡವಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು.

ಈ ಘಟನೆಯ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಆಯುಧ ಹಿಡಿದ ಕೆಲವರು ಬಂದು ರೈತರ ಮೇಲೆ ದಾಳಿ ಮಾಡಿ, ಅವರ ವಸ್ತುಗಳನ್ನು ಹಾಳುಗೆಡವುತ್ತಿದ್ದಾಗ ಪೊಲೀಸರು ಕೈಕಟ್ಟಿ ನಿಂತಿದ್ದರು ಎಂದು ಹಲವರು ಆರೋಪಿಸಿದ್ದಾರೆ.

ಇನ್ನೂ ಕೆಲವರು ಇದು ಸರ್ಕಾರದ ಸಂಚು ಎಂದು ದೂರಿದ್ದಾರೆ. ಆದರೆ ರೈತರ ಸಂಘಟನೆಗಳು ಇದಾವುದಕ್ಕೂ ಹೆದರುವುದಿಲ್ಲ ಎಂದು ಮತ್ತೊಮ್ಮೆ ಘಂಟಾಘೊಷವಾಗಿ ಹೇಳಿದ್ದಾರೆ.

ನುಗ್ಗಿದ ಈ ಗುಂಪು ಯಾರದು?

ಇಂಥದ್ದೇ ಸಂಘಟನೆಗೆ ಸೇರಿದ ಗುಂಪೆಂದು ತಕ್ಷಣಕ್ಕೆ ಹೇಳಲು ಸಾಧ್ಯವಿಲ್ಲವಾದರೂ, ನಿನ್ನೆ ಸ್ಥಳೀಯರ ಹೆಸರಲ್ಲಿ ಒಂದು ಸಣ್ಣ ಗುಂಪು ಪ್ರತಿಭಟನೆ ಮಾಡಿತ್ತು. ಬಹುಪಾಲು ಮಾಧ್ಯಮಗಳು ಸ್ಥಳೀಯರಿಂದ ಪ್ರತಿಭಟನೆ ಎಂದೇ ಬಿಂಬಿಸಿದ್ದವು.

ಅದರೆ, ಅಲ್ಟ್ ನ್ಯೂಸ್ ನಡೆಸಿದ ಫ್ಯಾಕ್ಟ್ ಚೆಕ್‌ನಲ್ಲಿ, ಹಿಂದೂ-ಸೇನಾ ಸಂಘಟನ್‌ನವರು ಆ ಪ್ರತಿಭಟನೆ ನಡೆಸಿದ್ದರು. ಅದರಲ್ಲಿ ಕೆಲವು ಸ್ಥಳಿಯರನ್ನು ಸೇರಿಸಿಕೊಂಡಿದ್ದರು. ತಮ್ಮದೇ ಸಂಘಟನೆ ಪ್ರತಿಭಟನೆ ನಡೆಸಿದೆ ಎಂದು ಹಿಂದೂ-ಸೇನಾ ಸಂಘಟಣ್ ಅಧ್ಯಕ್ಷ ಅಲ್ಟ್ ನ್ಯೂಸ್ ಎದುರು ಒಪ್ಪಿಕೊಂಡಿದ್ದರು.


ಇದನ್ನೂ ಓದಿ: ‘ಜ. 26ರ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರ ಕಾರಣ’: ಬಿಜೆಪಿ ತೊರೆದ ಹಿರಿಯ ನಾಯಕ ರಾಂಪಾಲ್ ಮಜ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...