Homeಮುಖಪುಟಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ...

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ ಹೇಳಿಕೆ

- Advertisement -
- Advertisement -

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು ನಲವತ್ತ ನಾಲ್ಕು ಶಾಸಕರು ಸಿದ್ಧರಿದ್ದಾರೆ ಎಂದು ಬಿಜೆಪಿ ಶಾಸಕ ಥೋಕ್ಚೋಮ್ ರಾಧೇಶ್ಯಾಮ್ ಸಿಂಗ್ ಬುಧವಾರ (ಮೇ.28) ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿಯಾದ ನಂತರ ಹೇಳಿದ್ದಾರೆ.

ರಾಧೇಶ್ಯಾಮ್ ಸಿಂಗ್, ಇತರ ಒಂಬತ್ತು ಶಾಸಕರೊಂದಿಗೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.

“ಜನರ ಆಶಯದಂತೆ 44 ಶಾಸಕರು ಸರ್ಕಾರ ರಚಿಸಲು ಸಿದ್ಧರಿದ್ದಾರೆ. ನಾವು ಇದನ್ನು ರಾಜ್ಯಪಾಲರಿಗೆ ತಿಳಿಸಿದ್ದೇವೆ. ಈ ಸಮಸ್ಯೆಗೆ ಯಾವ ಪರಿಹಾರಗಳಿವೆ ಎಂಬುದರ ಕುರಿತು ನಾವು ಚರ್ಚಿಸಿದ್ದೇವೆ” ಎಂದು ಸಿಂಗ್ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ.

“ನಾವು ಹೇಳಿದ್ದನ್ನು ರಾಜ್ಯಪಾಲರು ಕೇಳಿಸಿಕೊಂಡಿದ್ದಾರೆ. ಜನರ ಹಿತಾಸಕ್ತಿಗಾಗಿ ಅವರು ಕ್ರಮ ಕೈಗೊಳ್ಳುತ್ತಾರೆ” ಎಂದು ಸಿಂಗ್ ತಿಳಿಸಿದ್ದಾರೆ.

“ಸರ್ಕಾರ ರಚಿಸಲು ಹಕ್ಕು ಮಂಡಿಸುತ್ತೀರಾ?” ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಂಗ್, “ಬಿಜೆಪಿಯ ಕೇಂದ್ರ ನಾಯಕತ್ವವು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದಿದ್ದಾರೆ.

“ಆದಾಗ್ಯೂ, ನಾವು ಸಿದ್ಧರಿದ್ದೇವೆ ಎಂದು ತಿಳಿಸುವುದು ಸರ್ಕಾರ ರಚಿಸಲು ಹಕ್ಕು ಮಂಡಿಸುವುದಕ್ಕೆ ಸಮಾನವಾಗಿದೆ. ಸ್ಪೀಕರ್ ಟಿ. ಸತ್ಯಬ್ರತ ಅವರು 44 ಶಾಸಕರನ್ನು ಪ್ರತ್ಯೇಕವಾಗಿ ಮತ್ತು ಜಂಟಿಯಾಗಿ ಭೇಟಿ ಮಾಡಿದ್ದಾರೆ. ಹೊಸ ಸರ್ಕಾರ ರಚನೆಯನ್ನು ವಿರೋಧಿಸುವವರು ಯಾರೂ ಇಲ್ಲ” ಎಂದು ಸಿಂಗ್ ಹೇಳಿದ್ದಾರೆ.

“ಜನರು ತುಂಬಾ ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಹಿಂದಿನ ಅವಧಿಯಲ್ಲಿ, ಕೋವಿಡ್‌ನಿಂದಾಗಿ ಎರಡು ವರ್ಷಗಳು ಕಳೆದುಹೋಗಿದ್ದವು. ಈ ಅವಧಿಯಲ್ಲಿ, ಸಂಘರ್ಷದಿಂದಾಗಿ ಇನ್ನೂ ಎರಡು ವರ್ಷಗಳು ಕಳೆದುಹೋಗಿವೆ” ಎಂದು ರಾಧೇಶ್ಯಾಮ್ ಸಿಂಗ್ ಹೇಳಿಕೆ ನೀಡದ್ದಾರೆ.

ಮೇ 2023ರಲ್ಲಿ ಭುಗಿಲೆದ್ದ ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷವನ್ನು ಸರ್ಕಾರ ನಿಭಾಯಿಸಿದ ರೀತಿ ಬಗ್ಗೆ ಟೀಕೆಗಳ ನಡುವೆ, ಬಿಜೆಪಿ ನಾಯಕ ಎನ್. ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗಾಗಿ, ಕಳೆದ ಫೆಬ್ರವರಿಯಿಂದ ಮಣಿಪುರ ರಾಷ್ಟ್ರಪತಿ ಆಳ್ವಿಕೆಯಲ್ಲಿದೆ.

60 ಸದಸ್ಯ ಬಲದ ವಿಧಾನಸಭೆಯಲ್ಲಿ ಪ್ರಸ್ತುತ 59 ಶಾಸಕರಿದ್ದು, ಒಬ್ಬರು ಶಾಸಕರ ಮರಣದಿಂದಾಗಿ ಒಂದು ಸ್ಥಾನ ಖಾಲಿ ಇದೆ.

ಬಿಜೆಪಿ ನೇತೃತ್ವದ ಒಕ್ಕೂಟದಲ್ಲಿ 32 ಮೈತೇಯಿ ಶಾಸಕರು, ಮೂವರು ಮಣಿಪುರಿ ಮುಸ್ಲಿಂ ಶಾಸಕರು ಮತ್ತು ಒಂಬತ್ತು ನಾಗಾ ಶಾಸಕರು ಸೇರಿ ಒಟ್ಟು 44 ಜನರಿದ್ದಾರೆ.

ಕಾಂಗ್ರೆಸ್‌ನ ಐವರು ಶಾಸಕರಿದ್ದು, ಅವರೆಲ್ಲರೂ ಮೈತೇಯಿ ಸಮುದಾಯಕ್ಕೆ ಸೇರಿದವರು.

ಉಳಿದ 10 ಶಾಸಕರು ಕುಕಿಗಳು. ಅವರಲ್ಲಿ ಏಳು ಮಂದಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಗೆದ್ದವರು. ಇಬ್ಬರು ಕುಕಿ ಪೀಪಲ್ಸ್ ಅಲೈಯನ್ಸ್‌ಗೆ ಸೇರಿದವರು ಮತ್ತು ಒಬ್ಬರು ಸ್ವತಂತ್ರರು.

ಸರ್ಕಾರಿ ಬಸ್ಸಿನ ವಿಂಡ್ ಶೀಲ್ಡ್ ಮೇಲೆ ಬರೆದಿದ್ದ ಮಣಿಪುರ ರಾಜ್ಯದ ಹೆಸರನ್ನು ಭದ್ರತಾ ಪಡೆಗಳು ಮರೆಮಾಡಿದ್ದಕ್ಕೆ ಮೈತೇಯಿ ಜನವಸತಿ ಪ್ರದೇಶವಾದ ಇಂಫಾಲ್ ಕಣಿವೆಯಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿರುವ ಮಧ್ಯೆ ಸರ್ಕಾರ ರಚನೆಯೆ ಬೆಳವಣಿಗೆ ನಡೆದಿದೆ.

ಮೇ 20ರಂದು ಗ್ವಾಲ್ತಾಬಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಕ್ಷಮೆಯಾಚಿಸಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ಭದ್ರತಾ ಸಲಹೆಗಾರ ​​ರಾಜೀನಾಮೆ ನೀಡಬೇಕು ಎಂದು ಮೈತೇಯಿ ಗುಂಪುಗಳು ಒತ್ತಾಯಿಸಿವೆ.

ಮೇ 2023ರಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಜನಾಂಗೀಯ ಕಲಹ ಪ್ರಾರಂಭವಾದಾಗಿನಿಂದ, ಮೈತೇಯಿ ಗುಂಪುಗಳು ಯಾವುದೇ ಶಾಂತಿ ಪ್ರಕ್ರಿಯೆಯಲ್ಲಿ ರಾಜ್ಯದ ಪ್ರಾದೇಶಿಕ ಸಮಗ್ರತೆಯ ಬಗ್ಗೆ ಮಾತುಕತೆಗೆ ಅವಕಾಶವಿಲ್ಲ ಎಂದು ವಾದಿಸುತ್ತಿವೆ. ಆದರೆ, ಕುಕಿ-ಝೋ ಸಂಘಟನೆಗಳು ಬಿಕ್ಕಟ್ಟನ್ನು ಪರಿಹರಿಸಲು ಏಕೈಕ ಪರಿಹಾರವೆಂದರೆ ತಮ್ಮ ಸಮುದಾಯ ವಾಸಿಸುವ ಬೆಟ್ಟದ ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತವನ್ನು ರಚಿಸುವುದು ಎಂದು ಪ್ರತಿಪಾದಿಸುತ್ತಿವೆ.

ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಕೈಗೊಂಡಿರುವ ಹಲವಾರು ಕ್ರಮಗಳಿಂದಾಗಿ ಇತ್ತೀಚಿನ ತಿಂಗಳುಗಳಲ್ಲಿ ರಾಜ್ಯದಲ್ಲಿ ಹಿಂಸಚಾರ ಕಡಿಮೆಯಾಗುತ್ತಿದ್ದ ಎನ್ನಲಾಗುತ್ತಿತ್ತು. ಈ ನಡುವೆ ಗ್ವಾಲ್ತಾಬಿ ಘಟನೆಯಿಂದ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ ಎಂದು ವರದಿಗಳು ಹೇಳಿವೆ.

ಮಣಿಪುರದಲ್ಲಿ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಫಲ: ಕಾಂಗ್ರೆಸ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...