Homeಮುಖಪುಟಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ...

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ ಹೇಳಿಕೆ

- Advertisement -
- Advertisement -

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು ನಲವತ್ತ ನಾಲ್ಕು ಶಾಸಕರು ಸಿದ್ಧರಿದ್ದಾರೆ ಎಂದು ಬಿಜೆಪಿ ಶಾಸಕ ಥೋಕ್ಚೋಮ್ ರಾಧೇಶ್ಯಾಮ್ ಸಿಂಗ್ ಬುಧವಾರ (ಮೇ.28) ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿಯಾದ ನಂತರ ಹೇಳಿದ್ದಾರೆ.

ರಾಧೇಶ್ಯಾಮ್ ಸಿಂಗ್, ಇತರ ಒಂಬತ್ತು ಶಾಸಕರೊಂದಿಗೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.

“ಜನರ ಆಶಯದಂತೆ 44 ಶಾಸಕರು ಸರ್ಕಾರ ರಚಿಸಲು ಸಿದ್ಧರಿದ್ದಾರೆ. ನಾವು ಇದನ್ನು ರಾಜ್ಯಪಾಲರಿಗೆ ತಿಳಿಸಿದ್ದೇವೆ. ಈ ಸಮಸ್ಯೆಗೆ ಯಾವ ಪರಿಹಾರಗಳಿವೆ ಎಂಬುದರ ಕುರಿತು ನಾವು ಚರ್ಚಿಸಿದ್ದೇವೆ” ಎಂದು ಸಿಂಗ್ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ.

“ನಾವು ಹೇಳಿದ್ದನ್ನು ರಾಜ್ಯಪಾಲರು ಕೇಳಿಸಿಕೊಂಡಿದ್ದಾರೆ. ಜನರ ಹಿತಾಸಕ್ತಿಗಾಗಿ ಅವರು ಕ್ರಮ ಕೈಗೊಳ್ಳುತ್ತಾರೆ” ಎಂದು ಸಿಂಗ್ ತಿಳಿಸಿದ್ದಾರೆ.

“ಸರ್ಕಾರ ರಚಿಸಲು ಹಕ್ಕು ಮಂಡಿಸುತ್ತೀರಾ?” ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಂಗ್, “ಬಿಜೆಪಿಯ ಕೇಂದ್ರ ನಾಯಕತ್ವವು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದಿದ್ದಾರೆ.

“ಆದಾಗ್ಯೂ, ನಾವು ಸಿದ್ಧರಿದ್ದೇವೆ ಎಂದು ತಿಳಿಸುವುದು ಸರ್ಕಾರ ರಚಿಸಲು ಹಕ್ಕು ಮಂಡಿಸುವುದಕ್ಕೆ ಸಮಾನವಾಗಿದೆ. ಸ್ಪೀಕರ್ ಟಿ. ಸತ್ಯಬ್ರತ ಅವರು 44 ಶಾಸಕರನ್ನು ಪ್ರತ್ಯೇಕವಾಗಿ ಮತ್ತು ಜಂಟಿಯಾಗಿ ಭೇಟಿ ಮಾಡಿದ್ದಾರೆ. ಹೊಸ ಸರ್ಕಾರ ರಚನೆಯನ್ನು ವಿರೋಧಿಸುವವರು ಯಾರೂ ಇಲ್ಲ” ಎಂದು ಸಿಂಗ್ ಹೇಳಿದ್ದಾರೆ.

“ಜನರು ತುಂಬಾ ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಹಿಂದಿನ ಅವಧಿಯಲ್ಲಿ, ಕೋವಿಡ್‌ನಿಂದಾಗಿ ಎರಡು ವರ್ಷಗಳು ಕಳೆದುಹೋಗಿದ್ದವು. ಈ ಅವಧಿಯಲ್ಲಿ, ಸಂಘರ್ಷದಿಂದಾಗಿ ಇನ್ನೂ ಎರಡು ವರ್ಷಗಳು ಕಳೆದುಹೋಗಿವೆ” ಎಂದು ರಾಧೇಶ್ಯಾಮ್ ಸಿಂಗ್ ಹೇಳಿಕೆ ನೀಡದ್ದಾರೆ.

ಮೇ 2023ರಲ್ಲಿ ಭುಗಿಲೆದ್ದ ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷವನ್ನು ಸರ್ಕಾರ ನಿಭಾಯಿಸಿದ ರೀತಿ ಬಗ್ಗೆ ಟೀಕೆಗಳ ನಡುವೆ, ಬಿಜೆಪಿ ನಾಯಕ ಎನ್. ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗಾಗಿ, ಕಳೆದ ಫೆಬ್ರವರಿಯಿಂದ ಮಣಿಪುರ ರಾಷ್ಟ್ರಪತಿ ಆಳ್ವಿಕೆಯಲ್ಲಿದೆ.

60 ಸದಸ್ಯ ಬಲದ ವಿಧಾನಸಭೆಯಲ್ಲಿ ಪ್ರಸ್ತುತ 59 ಶಾಸಕರಿದ್ದು, ಒಬ್ಬರು ಶಾಸಕರ ಮರಣದಿಂದಾಗಿ ಒಂದು ಸ್ಥಾನ ಖಾಲಿ ಇದೆ.

ಬಿಜೆಪಿ ನೇತೃತ್ವದ ಒಕ್ಕೂಟದಲ್ಲಿ 32 ಮೈತೇಯಿ ಶಾಸಕರು, ಮೂವರು ಮಣಿಪುರಿ ಮುಸ್ಲಿಂ ಶಾಸಕರು ಮತ್ತು ಒಂಬತ್ತು ನಾಗಾ ಶಾಸಕರು ಸೇರಿ ಒಟ್ಟು 44 ಜನರಿದ್ದಾರೆ.

ಕಾಂಗ್ರೆಸ್‌ನ ಐವರು ಶಾಸಕರಿದ್ದು, ಅವರೆಲ್ಲರೂ ಮೈತೇಯಿ ಸಮುದಾಯಕ್ಕೆ ಸೇರಿದವರು.

ಉಳಿದ 10 ಶಾಸಕರು ಕುಕಿಗಳು. ಅವರಲ್ಲಿ ಏಳು ಮಂದಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಗೆದ್ದವರು. ಇಬ್ಬರು ಕುಕಿ ಪೀಪಲ್ಸ್ ಅಲೈಯನ್ಸ್‌ಗೆ ಸೇರಿದವರು ಮತ್ತು ಒಬ್ಬರು ಸ್ವತಂತ್ರರು.

ಸರ್ಕಾರಿ ಬಸ್ಸಿನ ವಿಂಡ್ ಶೀಲ್ಡ್ ಮೇಲೆ ಬರೆದಿದ್ದ ಮಣಿಪುರ ರಾಜ್ಯದ ಹೆಸರನ್ನು ಭದ್ರತಾ ಪಡೆಗಳು ಮರೆಮಾಡಿದ್ದಕ್ಕೆ ಮೈತೇಯಿ ಜನವಸತಿ ಪ್ರದೇಶವಾದ ಇಂಫಾಲ್ ಕಣಿವೆಯಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿರುವ ಮಧ್ಯೆ ಸರ್ಕಾರ ರಚನೆಯೆ ಬೆಳವಣಿಗೆ ನಡೆದಿದೆ.

ಮೇ 20ರಂದು ಗ್ವಾಲ್ತಾಬಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಕ್ಷಮೆಯಾಚಿಸಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ಭದ್ರತಾ ಸಲಹೆಗಾರ ​​ರಾಜೀನಾಮೆ ನೀಡಬೇಕು ಎಂದು ಮೈತೇಯಿ ಗುಂಪುಗಳು ಒತ್ತಾಯಿಸಿವೆ.

ಮೇ 2023ರಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಜನಾಂಗೀಯ ಕಲಹ ಪ್ರಾರಂಭವಾದಾಗಿನಿಂದ, ಮೈತೇಯಿ ಗುಂಪುಗಳು ಯಾವುದೇ ಶಾಂತಿ ಪ್ರಕ್ರಿಯೆಯಲ್ಲಿ ರಾಜ್ಯದ ಪ್ರಾದೇಶಿಕ ಸಮಗ್ರತೆಯ ಬಗ್ಗೆ ಮಾತುಕತೆಗೆ ಅವಕಾಶವಿಲ್ಲ ಎಂದು ವಾದಿಸುತ್ತಿವೆ. ಆದರೆ, ಕುಕಿ-ಝೋ ಸಂಘಟನೆಗಳು ಬಿಕ್ಕಟ್ಟನ್ನು ಪರಿಹರಿಸಲು ಏಕೈಕ ಪರಿಹಾರವೆಂದರೆ ತಮ್ಮ ಸಮುದಾಯ ವಾಸಿಸುವ ಬೆಟ್ಟದ ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತವನ್ನು ರಚಿಸುವುದು ಎಂದು ಪ್ರತಿಪಾದಿಸುತ್ತಿವೆ.

ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಕೈಗೊಂಡಿರುವ ಹಲವಾರು ಕ್ರಮಗಳಿಂದಾಗಿ ಇತ್ತೀಚಿನ ತಿಂಗಳುಗಳಲ್ಲಿ ರಾಜ್ಯದಲ್ಲಿ ಹಿಂಸಚಾರ ಕಡಿಮೆಯಾಗುತ್ತಿದ್ದ ಎನ್ನಲಾಗುತ್ತಿತ್ತು. ಈ ನಡುವೆ ಗ್ವಾಲ್ತಾಬಿ ಘಟನೆಯಿಂದ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ ಎಂದು ವರದಿಗಳು ಹೇಳಿವೆ.

ಮಣಿಪುರದಲ್ಲಿ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಫಲ: ಕಾಂಗ್ರೆಸ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...