Homeಮುಖಪುಟಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ...

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ ಹೇಳಿಕೆ

- Advertisement -
- Advertisement -

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು ನಲವತ್ತ ನಾಲ್ಕು ಶಾಸಕರು ಸಿದ್ಧರಿದ್ದಾರೆ ಎಂದು ಬಿಜೆಪಿ ಶಾಸಕ ಥೋಕ್ಚೋಮ್ ರಾಧೇಶ್ಯಾಮ್ ಸಿಂಗ್ ಬುಧವಾರ (ಮೇ.28) ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿಯಾದ ನಂತರ ಹೇಳಿದ್ದಾರೆ.

ರಾಧೇಶ್ಯಾಮ್ ಸಿಂಗ್, ಇತರ ಒಂಬತ್ತು ಶಾಸಕರೊಂದಿಗೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.

“ಜನರ ಆಶಯದಂತೆ 44 ಶಾಸಕರು ಸರ್ಕಾರ ರಚಿಸಲು ಸಿದ್ಧರಿದ್ದಾರೆ. ನಾವು ಇದನ್ನು ರಾಜ್ಯಪಾಲರಿಗೆ ತಿಳಿಸಿದ್ದೇವೆ. ಈ ಸಮಸ್ಯೆಗೆ ಯಾವ ಪರಿಹಾರಗಳಿವೆ ಎಂಬುದರ ಕುರಿತು ನಾವು ಚರ್ಚಿಸಿದ್ದೇವೆ” ಎಂದು ಸಿಂಗ್ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ.

“ನಾವು ಹೇಳಿದ್ದನ್ನು ರಾಜ್ಯಪಾಲರು ಕೇಳಿಸಿಕೊಂಡಿದ್ದಾರೆ. ಜನರ ಹಿತಾಸಕ್ತಿಗಾಗಿ ಅವರು ಕ್ರಮ ಕೈಗೊಳ್ಳುತ್ತಾರೆ” ಎಂದು ಸಿಂಗ್ ತಿಳಿಸಿದ್ದಾರೆ.

“ಸರ್ಕಾರ ರಚಿಸಲು ಹಕ್ಕು ಮಂಡಿಸುತ್ತೀರಾ?” ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಂಗ್, “ಬಿಜೆಪಿಯ ಕೇಂದ್ರ ನಾಯಕತ್ವವು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದಿದ್ದಾರೆ.

“ಆದಾಗ್ಯೂ, ನಾವು ಸಿದ್ಧರಿದ್ದೇವೆ ಎಂದು ತಿಳಿಸುವುದು ಸರ್ಕಾರ ರಚಿಸಲು ಹಕ್ಕು ಮಂಡಿಸುವುದಕ್ಕೆ ಸಮಾನವಾಗಿದೆ. ಸ್ಪೀಕರ್ ಟಿ. ಸತ್ಯಬ್ರತ ಅವರು 44 ಶಾಸಕರನ್ನು ಪ್ರತ್ಯೇಕವಾಗಿ ಮತ್ತು ಜಂಟಿಯಾಗಿ ಭೇಟಿ ಮಾಡಿದ್ದಾರೆ. ಹೊಸ ಸರ್ಕಾರ ರಚನೆಯನ್ನು ವಿರೋಧಿಸುವವರು ಯಾರೂ ಇಲ್ಲ” ಎಂದು ಸಿಂಗ್ ಹೇಳಿದ್ದಾರೆ.

“ಜನರು ತುಂಬಾ ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಹಿಂದಿನ ಅವಧಿಯಲ್ಲಿ, ಕೋವಿಡ್‌ನಿಂದಾಗಿ ಎರಡು ವರ್ಷಗಳು ಕಳೆದುಹೋಗಿದ್ದವು. ಈ ಅವಧಿಯಲ್ಲಿ, ಸಂಘರ್ಷದಿಂದಾಗಿ ಇನ್ನೂ ಎರಡು ವರ್ಷಗಳು ಕಳೆದುಹೋಗಿವೆ” ಎಂದು ರಾಧೇಶ್ಯಾಮ್ ಸಿಂಗ್ ಹೇಳಿಕೆ ನೀಡದ್ದಾರೆ.

ಮೇ 2023ರಲ್ಲಿ ಭುಗಿಲೆದ್ದ ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷವನ್ನು ಸರ್ಕಾರ ನಿಭಾಯಿಸಿದ ರೀತಿ ಬಗ್ಗೆ ಟೀಕೆಗಳ ನಡುವೆ, ಬಿಜೆಪಿ ನಾಯಕ ಎನ್. ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗಾಗಿ, ಕಳೆದ ಫೆಬ್ರವರಿಯಿಂದ ಮಣಿಪುರ ರಾಷ್ಟ್ರಪತಿ ಆಳ್ವಿಕೆಯಲ್ಲಿದೆ.

60 ಸದಸ್ಯ ಬಲದ ವಿಧಾನಸಭೆಯಲ್ಲಿ ಪ್ರಸ್ತುತ 59 ಶಾಸಕರಿದ್ದು, ಒಬ್ಬರು ಶಾಸಕರ ಮರಣದಿಂದಾಗಿ ಒಂದು ಸ್ಥಾನ ಖಾಲಿ ಇದೆ.

ಬಿಜೆಪಿ ನೇತೃತ್ವದ ಒಕ್ಕೂಟದಲ್ಲಿ 32 ಮೈತೇಯಿ ಶಾಸಕರು, ಮೂವರು ಮಣಿಪುರಿ ಮುಸ್ಲಿಂ ಶಾಸಕರು ಮತ್ತು ಒಂಬತ್ತು ನಾಗಾ ಶಾಸಕರು ಸೇರಿ ಒಟ್ಟು 44 ಜನರಿದ್ದಾರೆ.

ಕಾಂಗ್ರೆಸ್‌ನ ಐವರು ಶಾಸಕರಿದ್ದು, ಅವರೆಲ್ಲರೂ ಮೈತೇಯಿ ಸಮುದಾಯಕ್ಕೆ ಸೇರಿದವರು.

ಉಳಿದ 10 ಶಾಸಕರು ಕುಕಿಗಳು. ಅವರಲ್ಲಿ ಏಳು ಮಂದಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಗೆದ್ದವರು. ಇಬ್ಬರು ಕುಕಿ ಪೀಪಲ್ಸ್ ಅಲೈಯನ್ಸ್‌ಗೆ ಸೇರಿದವರು ಮತ್ತು ಒಬ್ಬರು ಸ್ವತಂತ್ರರು.

ಸರ್ಕಾರಿ ಬಸ್ಸಿನ ವಿಂಡ್ ಶೀಲ್ಡ್ ಮೇಲೆ ಬರೆದಿದ್ದ ಮಣಿಪುರ ರಾಜ್ಯದ ಹೆಸರನ್ನು ಭದ್ರತಾ ಪಡೆಗಳು ಮರೆಮಾಡಿದ್ದಕ್ಕೆ ಮೈತೇಯಿ ಜನವಸತಿ ಪ್ರದೇಶವಾದ ಇಂಫಾಲ್ ಕಣಿವೆಯಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿರುವ ಮಧ್ಯೆ ಸರ್ಕಾರ ರಚನೆಯೆ ಬೆಳವಣಿಗೆ ನಡೆದಿದೆ.

ಮೇ 20ರಂದು ಗ್ವಾಲ್ತಾಬಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಕ್ಷಮೆಯಾಚಿಸಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ಭದ್ರತಾ ಸಲಹೆಗಾರ ​​ರಾಜೀನಾಮೆ ನೀಡಬೇಕು ಎಂದು ಮೈತೇಯಿ ಗುಂಪುಗಳು ಒತ್ತಾಯಿಸಿವೆ.

ಮೇ 2023ರಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಜನಾಂಗೀಯ ಕಲಹ ಪ್ರಾರಂಭವಾದಾಗಿನಿಂದ, ಮೈತೇಯಿ ಗುಂಪುಗಳು ಯಾವುದೇ ಶಾಂತಿ ಪ್ರಕ್ರಿಯೆಯಲ್ಲಿ ರಾಜ್ಯದ ಪ್ರಾದೇಶಿಕ ಸಮಗ್ರತೆಯ ಬಗ್ಗೆ ಮಾತುಕತೆಗೆ ಅವಕಾಶವಿಲ್ಲ ಎಂದು ವಾದಿಸುತ್ತಿವೆ. ಆದರೆ, ಕುಕಿ-ಝೋ ಸಂಘಟನೆಗಳು ಬಿಕ್ಕಟ್ಟನ್ನು ಪರಿಹರಿಸಲು ಏಕೈಕ ಪರಿಹಾರವೆಂದರೆ ತಮ್ಮ ಸಮುದಾಯ ವಾಸಿಸುವ ಬೆಟ್ಟದ ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತವನ್ನು ರಚಿಸುವುದು ಎಂದು ಪ್ರತಿಪಾದಿಸುತ್ತಿವೆ.

ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಕೈಗೊಂಡಿರುವ ಹಲವಾರು ಕ್ರಮಗಳಿಂದಾಗಿ ಇತ್ತೀಚಿನ ತಿಂಗಳುಗಳಲ್ಲಿ ರಾಜ್ಯದಲ್ಲಿ ಹಿಂಸಚಾರ ಕಡಿಮೆಯಾಗುತ್ತಿದ್ದ ಎನ್ನಲಾಗುತ್ತಿತ್ತು. ಈ ನಡುವೆ ಗ್ವಾಲ್ತಾಬಿ ಘಟನೆಯಿಂದ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ ಎಂದು ವರದಿಗಳು ಹೇಳಿವೆ.

ಮಣಿಪುರದಲ್ಲಿ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಫಲ: ಕಾಂಗ್ರೆಸ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...