Homeಮುಖಪುಟಹಸಿವಿನಿಂದ ಬಳಲುತ್ತಿರುವ 4500 ಭೂಪಾಲ್ ಅನಿಲ ಸೋರಿಕೆ ಸಂತ್ರಸ್ಥ ವಿಧವೆಯರು

ಹಸಿವಿನಿಂದ ಬಳಲುತ್ತಿರುವ 4500 ಭೂಪಾಲ್ ಅನಿಲ ಸೋರಿಕೆ ಸಂತ್ರಸ್ಥ ವಿಧವೆಯರು

ಕಳೆದ ಎಂಟು ತಿಂಗಳಿನಿಂದ ಅನಿಲ ಸೋರಿಕೆ ಸಂತ್ರಸ್ಥರಾದ 4500 ವಿಧವೆಯರಿಗೆ ರಾಜ್ಯ ಸರ್ಕಾರ ಪಿಂಚಣಿಯನ್ನು ಸ್ಥಗಿತಗೊಳಿಸಿದೆ.

- Advertisement -
- Advertisement -

ಕಳೆದ ಎಂಟು ತಿಂಗಳಿಂದ ರಾಜ್ಯ ಸರ್ಕಾರ ಪಿಂಚಣಿಯನ್ನು ಸ್ಥಗಿತಗೊಳಿಸಿದ್ದರಿಂದ ಸುಮಾರು 4,500 ಭೋಪಾಲ್ ಅನಿಲ ಸೋರಿಕೆಯ ಸಂತ್ರಸ್ಥ ವಿಧವೆಯರು ಹಸಿವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ ಅಲ್ಲಿ ಕಾಂಗ್ರೆಸ್ ಸರ್ಕಾರ ಇದ್ದು, ಪ್ರಸ್ತುತ ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಬಿಜೆಪಿ ಸರ್ಕಾರ ಮಾರ್ಚ್‌ನಲ್ಲಿ ಅಧಿಕಾರಕ್ಕೆ ಬಂದಿದೆಯಾರೂ ಪರಿಸ್ಥಿತಿ ಬದಲಾಗಿಲ್ಲ ಎನ್ನಲಾಗಿದೆ.

ಸಂತ್ರಸ್ತ ಅನಿಲ ಪೀಡಿತರಿಗೆ ಸಾಮಾಜಿಕ ಪುನರ್ವಸತಿ ಅಡಿಯಲ್ಲಿ ಪರಿಹಾರ ಮತ್ತು ಪುನರ್ವಸತಿ ಇಲಾಖೆಯಿಂದ ಪ್ರತಿ ತಿಂಗಳು 1,000 ರೂ. ನೀಡಲು, ಈ ಯೋಜನೆಗಾಗಿ ಕೇಂದ್ರ ಸರ್ಕಾರ 30 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. 2011 ರ ಮೇ ತಿಂಗಳಲ್ಲಿ ಪಿಂಚಣಿ ಯೋಜನೆಯನ್ನು ಪ್ರಾರಂಭಿಸಲಾಯಿತು.

ತಮ್ಮ ಪಿಂಚಣಿಯನ್ನು ಪುನರಾರಂಭಿಸಬೇಕೆಂದು ಒತ್ತಾಯಿಸಿ, ವಿಧವೆಯರ ಒಂದು ಸಣ್ಣ ಗುಂಪು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರ ಮನೆಯ ಬಳಿ ಜುಲೈ 17 ರಂದು ಗ್ಯಾಸ್ ಪೀಡಿತ್ ನಿರಾಶ್ರಿತ್ ಪೆನ್ಷನ್ ಭೋಗಿ ಸಂಘರ್ಷ ಮೋರ್ಚಾ ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಸಿತ್ತು.

ಫೋಟೋ ಕೃಪೆ: ನ್ಯೂಸ್ ಕ್ಲಿಕ್

ವಯಸ್ಸು ಮತ್ತು ಕಾಯಿಲೆಗಳಿಂದಾಗಿ ಕೆಲಸ ಮಾಡಲು ಸಾಧ್ಯವಿಲ್ಲದ ಕಾರಣ ಪಿಂಚಣಿ ಮಾತ್ರವೇ ಬದುಕುಳಿಯುವ ಏಕೈಕ ಜೀವಸೆಲೆ ಎಂದು 60 ವರ್ಷದ ಈ ವಿಧವೆಯರು ಹೇಳಿದ್ದಾರೆ.

1984 ರ ಡಿಸೆಂಬರ್ 2-3 ರಂದು ವಿಷಕಾರಿ ಮೀಥೈಲ್ ಐಸೊಸೈನೈಡ್‌ಗೆ ಸೋರಿಕೆಯಾಗಿ ಹೆಚ್ಚಿನ ವಿಧವೆಯರು ರೋಗಗಳಿಂದ ಬಳಲುತ್ತಿದ್ದಾರೆ.

“ನಾನು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದೇನೆ ಮತ್ತು ದಶಕಗಳಿಂದ ನಿರಂತರ ಚಿಕಿತ್ಸೆಯಲ್ಲಿದ್ದೇನೆ. ನಾನು ಬಟ್ಟೆಗಳನ್ನು ಹೊಲಿಯುತ್ತಿದ್ದೆ, ಆದರೆ ಈಗ ನನಗೆ ಕೆಲಸ ಮಾಡಲು ಸಾಧ್ಯವಿಲ್ಲ. ಪಿಂಚಣಿ ಮತ್ತು ಮಾಸಿಕ ಪಡಿತರವು ಬದುಕುಳಿಯುವ ಏಕೈಕ ಆಶಯವಾಗಿದೆ, ಆದರೆ 2019 ರ ಡಿಸೆಂಬರ್‌ನಿಂದ ನನಗೆ ಯಾವುದೇ ಹಣ ಬಂದಿಲ್ಲ” ಎಂದು 65 ವರ್ಷದ ಸಂತ್ರಸ್ತೆ ಸಾವಿತ್ರಿ ಬಾಯಿ ಹೇಳಿದ್ದಾರೆ.

2010 ರಲ್ಲಿ ಸಿಎಂ ಚೌಹಾನ್ ಮತ್ತು 2018 ರಲ್ಲಿ ಅನಿಲ ಪರಿಹಾರ ಮತ್ತು ಪುನರ್ವಸತಿ ಸಚಿವ ವಿಶ್ವಸ್ ಸಾರಂಗ್ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲು ಪಿಂಚಣಿ ಜೀವಿತಾವಧಿಯವರೆಗೂ ಮುಂದುವರಿಯುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಸ್ಥಗಿತಗೊಳಿಸಲಾಗಿದೆ ಎಂದು 67 ವರ್ಷದ ಇಂದಿರಾ ಹೇಳಿದ್ದಾರೆ.

ಗ್ಯಾಸ್ ಪೀಡಿತ್ ನಿರಾಶ್ರಿತ್ ಪೆನ್ಷನ್ ಭೋಗಿ ಸಂಘರ್ಷ ಮೋರ್ಚಾ ಇದರ ಅಧ್ಯಕ್ಷ, ಬಾಲಕ್ರಿಶನ್ ನಾಮ್ಡಿಯೊ, ಬೀಜೆಪಿ ನೇತೃತ್ವದ ಸರ್ಕಾರ ಕೊರೊನಾ ಸಾಂಕ್ರಮಿಕ್ಕ ಹಣಕಾಸಿನ ನೆರವು ಉಚಿತ ಆಹಾರ ಪೂರೈಸುತ್ತಿರುವಾಗ ಅನಿಲ ಪೀಡಿತ ವಿಧವೆಯರತ್ತ ಗಮನ ಹರಿಸುತ್ತಿಲ್ಲ ಎಂದು ಹೇಳಿದ್ದಾರೆ.

“ಅನೇಕ ವಿಧವೆಯರು ಹಸಿವಿನಿಂದ ಬಳಲುತ್ತಿದ್ದಾರೆ, ಏಕೆಂದರೆ ಅವರಿಗೆ ಆರ್ಥಿಕವಾಗಿ ಬೆಂಬಲ ನೀಡಲು ಯಾರೂ ಇಲ್ಲ. ಅವರು ಕೆಲಸ ಮಾಡಲು ಸಾಧ್ಯವಿಲ್ಲ. ಇಂತಹ ಕಷ್ಟದ ಸಮಯದಲ್ಲಿ ಅವರನ್ನು ಬೆಂಬಲಿಸುವ ಬದಲು ಸರ್ಕಾರ ಪಿಂಚಣಿಯನ್ನು ಸ್ಥಗಿತಗೊಳಿಸಿದೆ” ಎಂದು ನಾಮ್ಡಿಯೊ ಹೇಳಿದ್ದಾರೆ.

“ನಾವು ಸಿಎಂ ಚೌಹಾನ್ ಅವರ ಖಾಸಗಿ ಕಾರ್ಯದರ್ಶಿ ಸಂತೋಷ್ ಕುಮಾರ್ ಶರ್ಮಾ ಅವರಿಗೆ ಜ್ಞಾಪಕ ಪತ್ರವನ್ನು ಹಸ್ತಾಂತರಿಸಿದ್ದೇವೆ. ನಮ್ಮ ಬೇಡಿಕೆಗಳನ್ನು ಸಿಎಂಗೆ ರವಾನಿಸುವುದಾಗಿ ಅವರು ಭರವಸೆ ನೀಡಿದರು” ಎಂದು ಅವರು ಹೇಳಿದ್ದಾರೆ.

2016 ರಿಂದ 2017 ರ ನಡುವೆ, ಇಲಾಖೆಯು ಸುಮಾರು ಒಂದು ವರ್ಷದಿಂದ ಪಿಂಚಣಿಯನ್ನು ಸ್ಥಗಿತಗೊಳಿಸಿತ್ತು, ಆದರೆ ಪ್ರತಿಭಟನೆಯ ನಂತರ ಅದನ್ನು ಪುನರಾರಂಭಿಸಲಾಯಿತು.

ಅನಿಲ ಪರಿಹಾರ ಮತ್ತು ಪುನರ್ವಸತಿ ವಿಭಾಗದ ನಿರ್ದೇಶಕ ಬಸಂತ್ ಕುರ್ರೆ ಅವರನ್ನು ಸಂಪರ್ಕಿಸಿದಾಗ, “ಪಿಂಚಣಿ ಯೋಜನೆಯ ಅವಧಿ ಐದು ವರ್ಷಗಳಾಗಿದೆ. ಆದರೆ ಇದನ್ನು ಇನ್ನೂ ಎರಡು ವರ್ಷಗಳವರೆಗೆ ವಿಸ್ತರಿಸಲಾಯಿತು. ಪ್ರಸ್ತುತ ಅದರ ಅನುದಾನದ ಹಣ ಮುಗಿದು ಹೋಗಿದೆ” ಎಂದು ಅವರು ಹೇಳಿದರು.

“ನಾವು ಪ್ರಸ್ತಾವನೆಯನ್ನು ಮುಖ್ಯಂತ್ರಿಯ ಅನುಮೋದನೆಗಾಗಿ ಸಿದ್ಧಪಡಿಸಿ ಕಳುಹಿಸುತ್ತೇವೆ. ಮುಖ್ಯಮಂತ್ರಿ ಅದಕ್ಕೆ ಅನುಮೋದನೆ ನೀಡಿ ನಿಧಿಯನ್ನು ಹಂಚಿದರೆ, ನಾವು ಪಿಂಚಣಿಯನ್ನು ಪುನರಾರಂಭಿಸುತ್ತೇವೆ” ಎಂದು ಅವರು ಹೇಳಿದ್ದಾರೆ.


ಓದಿ: ಮಧ್ಯಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ-ಆತನ ಮೇಲೆಯೇ ದೂರು ದಾಖಲಿಸಿದ ಪೊಲೀಸರು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...