Homeಮುಖಪುಟಹಸಿವಿನಿಂದ ಬಳಲುತ್ತಿರುವ 4500 ಭೂಪಾಲ್ ಅನಿಲ ಸೋರಿಕೆ ಸಂತ್ರಸ್ಥ ವಿಧವೆಯರು

ಹಸಿವಿನಿಂದ ಬಳಲುತ್ತಿರುವ 4500 ಭೂಪಾಲ್ ಅನಿಲ ಸೋರಿಕೆ ಸಂತ್ರಸ್ಥ ವಿಧವೆಯರು

ಕಳೆದ ಎಂಟು ತಿಂಗಳಿನಿಂದ ಅನಿಲ ಸೋರಿಕೆ ಸಂತ್ರಸ್ಥರಾದ 4500 ವಿಧವೆಯರಿಗೆ ರಾಜ್ಯ ಸರ್ಕಾರ ಪಿಂಚಣಿಯನ್ನು ಸ್ಥಗಿತಗೊಳಿಸಿದೆ.

- Advertisement -
- Advertisement -

ಕಳೆದ ಎಂಟು ತಿಂಗಳಿಂದ ರಾಜ್ಯ ಸರ್ಕಾರ ಪಿಂಚಣಿಯನ್ನು ಸ್ಥಗಿತಗೊಳಿಸಿದ್ದರಿಂದ ಸುಮಾರು 4,500 ಭೋಪಾಲ್ ಅನಿಲ ಸೋರಿಕೆಯ ಸಂತ್ರಸ್ಥ ವಿಧವೆಯರು ಹಸಿವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ ಅಲ್ಲಿ ಕಾಂಗ್ರೆಸ್ ಸರ್ಕಾರ ಇದ್ದು, ಪ್ರಸ್ತುತ ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಬಿಜೆಪಿ ಸರ್ಕಾರ ಮಾರ್ಚ್‌ನಲ್ಲಿ ಅಧಿಕಾರಕ್ಕೆ ಬಂದಿದೆಯಾರೂ ಪರಿಸ್ಥಿತಿ ಬದಲಾಗಿಲ್ಲ ಎನ್ನಲಾಗಿದೆ.

ಸಂತ್ರಸ್ತ ಅನಿಲ ಪೀಡಿತರಿಗೆ ಸಾಮಾಜಿಕ ಪುನರ್ವಸತಿ ಅಡಿಯಲ್ಲಿ ಪರಿಹಾರ ಮತ್ತು ಪುನರ್ವಸತಿ ಇಲಾಖೆಯಿಂದ ಪ್ರತಿ ತಿಂಗಳು 1,000 ರೂ. ನೀಡಲು, ಈ ಯೋಜನೆಗಾಗಿ ಕೇಂದ್ರ ಸರ್ಕಾರ 30 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. 2011 ರ ಮೇ ತಿಂಗಳಲ್ಲಿ ಪಿಂಚಣಿ ಯೋಜನೆಯನ್ನು ಪ್ರಾರಂಭಿಸಲಾಯಿತು.

ತಮ್ಮ ಪಿಂಚಣಿಯನ್ನು ಪುನರಾರಂಭಿಸಬೇಕೆಂದು ಒತ್ತಾಯಿಸಿ, ವಿಧವೆಯರ ಒಂದು ಸಣ್ಣ ಗುಂಪು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರ ಮನೆಯ ಬಳಿ ಜುಲೈ 17 ರಂದು ಗ್ಯಾಸ್ ಪೀಡಿತ್ ನಿರಾಶ್ರಿತ್ ಪೆನ್ಷನ್ ಭೋಗಿ ಸಂಘರ್ಷ ಮೋರ್ಚಾ ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಸಿತ್ತು.

ಫೋಟೋ ಕೃಪೆ: ನ್ಯೂಸ್ ಕ್ಲಿಕ್

ವಯಸ್ಸು ಮತ್ತು ಕಾಯಿಲೆಗಳಿಂದಾಗಿ ಕೆಲಸ ಮಾಡಲು ಸಾಧ್ಯವಿಲ್ಲದ ಕಾರಣ ಪಿಂಚಣಿ ಮಾತ್ರವೇ ಬದುಕುಳಿಯುವ ಏಕೈಕ ಜೀವಸೆಲೆ ಎಂದು 60 ವರ್ಷದ ಈ ವಿಧವೆಯರು ಹೇಳಿದ್ದಾರೆ.

1984 ರ ಡಿಸೆಂಬರ್ 2-3 ರಂದು ವಿಷಕಾರಿ ಮೀಥೈಲ್ ಐಸೊಸೈನೈಡ್‌ಗೆ ಸೋರಿಕೆಯಾಗಿ ಹೆಚ್ಚಿನ ವಿಧವೆಯರು ರೋಗಗಳಿಂದ ಬಳಲುತ್ತಿದ್ದಾರೆ.

“ನಾನು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದೇನೆ ಮತ್ತು ದಶಕಗಳಿಂದ ನಿರಂತರ ಚಿಕಿತ್ಸೆಯಲ್ಲಿದ್ದೇನೆ. ನಾನು ಬಟ್ಟೆಗಳನ್ನು ಹೊಲಿಯುತ್ತಿದ್ದೆ, ಆದರೆ ಈಗ ನನಗೆ ಕೆಲಸ ಮಾಡಲು ಸಾಧ್ಯವಿಲ್ಲ. ಪಿಂಚಣಿ ಮತ್ತು ಮಾಸಿಕ ಪಡಿತರವು ಬದುಕುಳಿಯುವ ಏಕೈಕ ಆಶಯವಾಗಿದೆ, ಆದರೆ 2019 ರ ಡಿಸೆಂಬರ್‌ನಿಂದ ನನಗೆ ಯಾವುದೇ ಹಣ ಬಂದಿಲ್ಲ” ಎಂದು 65 ವರ್ಷದ ಸಂತ್ರಸ್ತೆ ಸಾವಿತ್ರಿ ಬಾಯಿ ಹೇಳಿದ್ದಾರೆ.

2010 ರಲ್ಲಿ ಸಿಎಂ ಚೌಹಾನ್ ಮತ್ತು 2018 ರಲ್ಲಿ ಅನಿಲ ಪರಿಹಾರ ಮತ್ತು ಪುನರ್ವಸತಿ ಸಚಿವ ವಿಶ್ವಸ್ ಸಾರಂಗ್ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲು ಪಿಂಚಣಿ ಜೀವಿತಾವಧಿಯವರೆಗೂ ಮುಂದುವರಿಯುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಸ್ಥಗಿತಗೊಳಿಸಲಾಗಿದೆ ಎಂದು 67 ವರ್ಷದ ಇಂದಿರಾ ಹೇಳಿದ್ದಾರೆ.

ಗ್ಯಾಸ್ ಪೀಡಿತ್ ನಿರಾಶ್ರಿತ್ ಪೆನ್ಷನ್ ಭೋಗಿ ಸಂಘರ್ಷ ಮೋರ್ಚಾ ಇದರ ಅಧ್ಯಕ್ಷ, ಬಾಲಕ್ರಿಶನ್ ನಾಮ್ಡಿಯೊ, ಬೀಜೆಪಿ ನೇತೃತ್ವದ ಸರ್ಕಾರ ಕೊರೊನಾ ಸಾಂಕ್ರಮಿಕ್ಕ ಹಣಕಾಸಿನ ನೆರವು ಉಚಿತ ಆಹಾರ ಪೂರೈಸುತ್ತಿರುವಾಗ ಅನಿಲ ಪೀಡಿತ ವಿಧವೆಯರತ್ತ ಗಮನ ಹರಿಸುತ್ತಿಲ್ಲ ಎಂದು ಹೇಳಿದ್ದಾರೆ.

“ಅನೇಕ ವಿಧವೆಯರು ಹಸಿವಿನಿಂದ ಬಳಲುತ್ತಿದ್ದಾರೆ, ಏಕೆಂದರೆ ಅವರಿಗೆ ಆರ್ಥಿಕವಾಗಿ ಬೆಂಬಲ ನೀಡಲು ಯಾರೂ ಇಲ್ಲ. ಅವರು ಕೆಲಸ ಮಾಡಲು ಸಾಧ್ಯವಿಲ್ಲ. ಇಂತಹ ಕಷ್ಟದ ಸಮಯದಲ್ಲಿ ಅವರನ್ನು ಬೆಂಬಲಿಸುವ ಬದಲು ಸರ್ಕಾರ ಪಿಂಚಣಿಯನ್ನು ಸ್ಥಗಿತಗೊಳಿಸಿದೆ” ಎಂದು ನಾಮ್ಡಿಯೊ ಹೇಳಿದ್ದಾರೆ.

“ನಾವು ಸಿಎಂ ಚೌಹಾನ್ ಅವರ ಖಾಸಗಿ ಕಾರ್ಯದರ್ಶಿ ಸಂತೋಷ್ ಕುಮಾರ್ ಶರ್ಮಾ ಅವರಿಗೆ ಜ್ಞಾಪಕ ಪತ್ರವನ್ನು ಹಸ್ತಾಂತರಿಸಿದ್ದೇವೆ. ನಮ್ಮ ಬೇಡಿಕೆಗಳನ್ನು ಸಿಎಂಗೆ ರವಾನಿಸುವುದಾಗಿ ಅವರು ಭರವಸೆ ನೀಡಿದರು” ಎಂದು ಅವರು ಹೇಳಿದ್ದಾರೆ.

2016 ರಿಂದ 2017 ರ ನಡುವೆ, ಇಲಾಖೆಯು ಸುಮಾರು ಒಂದು ವರ್ಷದಿಂದ ಪಿಂಚಣಿಯನ್ನು ಸ್ಥಗಿತಗೊಳಿಸಿತ್ತು, ಆದರೆ ಪ್ರತಿಭಟನೆಯ ನಂತರ ಅದನ್ನು ಪುನರಾರಂಭಿಸಲಾಯಿತು.

ಅನಿಲ ಪರಿಹಾರ ಮತ್ತು ಪುನರ್ವಸತಿ ವಿಭಾಗದ ನಿರ್ದೇಶಕ ಬಸಂತ್ ಕುರ್ರೆ ಅವರನ್ನು ಸಂಪರ್ಕಿಸಿದಾಗ, “ಪಿಂಚಣಿ ಯೋಜನೆಯ ಅವಧಿ ಐದು ವರ್ಷಗಳಾಗಿದೆ. ಆದರೆ ಇದನ್ನು ಇನ್ನೂ ಎರಡು ವರ್ಷಗಳವರೆಗೆ ವಿಸ್ತರಿಸಲಾಯಿತು. ಪ್ರಸ್ತುತ ಅದರ ಅನುದಾನದ ಹಣ ಮುಗಿದು ಹೋಗಿದೆ” ಎಂದು ಅವರು ಹೇಳಿದರು.

“ನಾವು ಪ್ರಸ್ತಾವನೆಯನ್ನು ಮುಖ್ಯಂತ್ರಿಯ ಅನುಮೋದನೆಗಾಗಿ ಸಿದ್ಧಪಡಿಸಿ ಕಳುಹಿಸುತ್ತೇವೆ. ಮುಖ್ಯಮಂತ್ರಿ ಅದಕ್ಕೆ ಅನುಮೋದನೆ ನೀಡಿ ನಿಧಿಯನ್ನು ಹಂಚಿದರೆ, ನಾವು ಪಿಂಚಣಿಯನ್ನು ಪುನರಾರಂಭಿಸುತ್ತೇವೆ” ಎಂದು ಅವರು ಹೇಳಿದ್ದಾರೆ.


ಓದಿ: ಮಧ್ಯಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ-ಆತನ ಮೇಲೆಯೇ ದೂರು ದಾಖಲಿಸಿದ ಪೊಲೀಸರು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...