Homeಮುಖಪುಟಹಸಿವಿನಿಂದ ಬಳಲುತ್ತಿರುವ 4500 ಭೂಪಾಲ್ ಅನಿಲ ಸೋರಿಕೆ ಸಂತ್ರಸ್ಥ ವಿಧವೆಯರು

ಹಸಿವಿನಿಂದ ಬಳಲುತ್ತಿರುವ 4500 ಭೂಪಾಲ್ ಅನಿಲ ಸೋರಿಕೆ ಸಂತ್ರಸ್ಥ ವಿಧವೆಯರು

ಕಳೆದ ಎಂಟು ತಿಂಗಳಿನಿಂದ ಅನಿಲ ಸೋರಿಕೆ ಸಂತ್ರಸ್ಥರಾದ 4500 ವಿಧವೆಯರಿಗೆ ರಾಜ್ಯ ಸರ್ಕಾರ ಪಿಂಚಣಿಯನ್ನು ಸ್ಥಗಿತಗೊಳಿಸಿದೆ.

- Advertisement -
- Advertisement -

ಕಳೆದ ಎಂಟು ತಿಂಗಳಿಂದ ರಾಜ್ಯ ಸರ್ಕಾರ ಪಿಂಚಣಿಯನ್ನು ಸ್ಥಗಿತಗೊಳಿಸಿದ್ದರಿಂದ ಸುಮಾರು 4,500 ಭೋಪಾಲ್ ಅನಿಲ ಸೋರಿಕೆಯ ಸಂತ್ರಸ್ಥ ವಿಧವೆಯರು ಹಸಿವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ ಅಲ್ಲಿ ಕಾಂಗ್ರೆಸ್ ಸರ್ಕಾರ ಇದ್ದು, ಪ್ರಸ್ತುತ ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಬಿಜೆಪಿ ಸರ್ಕಾರ ಮಾರ್ಚ್‌ನಲ್ಲಿ ಅಧಿಕಾರಕ್ಕೆ ಬಂದಿದೆಯಾರೂ ಪರಿಸ್ಥಿತಿ ಬದಲಾಗಿಲ್ಲ ಎನ್ನಲಾಗಿದೆ.

ಸಂತ್ರಸ್ತ ಅನಿಲ ಪೀಡಿತರಿಗೆ ಸಾಮಾಜಿಕ ಪುನರ್ವಸತಿ ಅಡಿಯಲ್ಲಿ ಪರಿಹಾರ ಮತ್ತು ಪುನರ್ವಸತಿ ಇಲಾಖೆಯಿಂದ ಪ್ರತಿ ತಿಂಗಳು 1,000 ರೂ. ನೀಡಲು, ಈ ಯೋಜನೆಗಾಗಿ ಕೇಂದ್ರ ಸರ್ಕಾರ 30 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. 2011 ರ ಮೇ ತಿಂಗಳಲ್ಲಿ ಪಿಂಚಣಿ ಯೋಜನೆಯನ್ನು ಪ್ರಾರಂಭಿಸಲಾಯಿತು.

ತಮ್ಮ ಪಿಂಚಣಿಯನ್ನು ಪುನರಾರಂಭಿಸಬೇಕೆಂದು ಒತ್ತಾಯಿಸಿ, ವಿಧವೆಯರ ಒಂದು ಸಣ್ಣ ಗುಂಪು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರ ಮನೆಯ ಬಳಿ ಜುಲೈ 17 ರಂದು ಗ್ಯಾಸ್ ಪೀಡಿತ್ ನಿರಾಶ್ರಿತ್ ಪೆನ್ಷನ್ ಭೋಗಿ ಸಂಘರ್ಷ ಮೋರ್ಚಾ ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಸಿತ್ತು.

ಫೋಟೋ ಕೃಪೆ: ನ್ಯೂಸ್ ಕ್ಲಿಕ್

ವಯಸ್ಸು ಮತ್ತು ಕಾಯಿಲೆಗಳಿಂದಾಗಿ ಕೆಲಸ ಮಾಡಲು ಸಾಧ್ಯವಿಲ್ಲದ ಕಾರಣ ಪಿಂಚಣಿ ಮಾತ್ರವೇ ಬದುಕುಳಿಯುವ ಏಕೈಕ ಜೀವಸೆಲೆ ಎಂದು 60 ವರ್ಷದ ಈ ವಿಧವೆಯರು ಹೇಳಿದ್ದಾರೆ.

1984 ರ ಡಿಸೆಂಬರ್ 2-3 ರಂದು ವಿಷಕಾರಿ ಮೀಥೈಲ್ ಐಸೊಸೈನೈಡ್‌ಗೆ ಸೋರಿಕೆಯಾಗಿ ಹೆಚ್ಚಿನ ವಿಧವೆಯರು ರೋಗಗಳಿಂದ ಬಳಲುತ್ತಿದ್ದಾರೆ.

“ನಾನು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದೇನೆ ಮತ್ತು ದಶಕಗಳಿಂದ ನಿರಂತರ ಚಿಕಿತ್ಸೆಯಲ್ಲಿದ್ದೇನೆ. ನಾನು ಬಟ್ಟೆಗಳನ್ನು ಹೊಲಿಯುತ್ತಿದ್ದೆ, ಆದರೆ ಈಗ ನನಗೆ ಕೆಲಸ ಮಾಡಲು ಸಾಧ್ಯವಿಲ್ಲ. ಪಿಂಚಣಿ ಮತ್ತು ಮಾಸಿಕ ಪಡಿತರವು ಬದುಕುಳಿಯುವ ಏಕೈಕ ಆಶಯವಾಗಿದೆ, ಆದರೆ 2019 ರ ಡಿಸೆಂಬರ್‌ನಿಂದ ನನಗೆ ಯಾವುದೇ ಹಣ ಬಂದಿಲ್ಲ” ಎಂದು 65 ವರ್ಷದ ಸಂತ್ರಸ್ತೆ ಸಾವಿತ್ರಿ ಬಾಯಿ ಹೇಳಿದ್ದಾರೆ.

2010 ರಲ್ಲಿ ಸಿಎಂ ಚೌಹಾನ್ ಮತ್ತು 2018 ರಲ್ಲಿ ಅನಿಲ ಪರಿಹಾರ ಮತ್ತು ಪುನರ್ವಸತಿ ಸಚಿವ ವಿಶ್ವಸ್ ಸಾರಂಗ್ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲು ಪಿಂಚಣಿ ಜೀವಿತಾವಧಿಯವರೆಗೂ ಮುಂದುವರಿಯುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಸ್ಥಗಿತಗೊಳಿಸಲಾಗಿದೆ ಎಂದು 67 ವರ್ಷದ ಇಂದಿರಾ ಹೇಳಿದ್ದಾರೆ.

ಗ್ಯಾಸ್ ಪೀಡಿತ್ ನಿರಾಶ್ರಿತ್ ಪೆನ್ಷನ್ ಭೋಗಿ ಸಂಘರ್ಷ ಮೋರ್ಚಾ ಇದರ ಅಧ್ಯಕ್ಷ, ಬಾಲಕ್ರಿಶನ್ ನಾಮ್ಡಿಯೊ, ಬೀಜೆಪಿ ನೇತೃತ್ವದ ಸರ್ಕಾರ ಕೊರೊನಾ ಸಾಂಕ್ರಮಿಕ್ಕ ಹಣಕಾಸಿನ ನೆರವು ಉಚಿತ ಆಹಾರ ಪೂರೈಸುತ್ತಿರುವಾಗ ಅನಿಲ ಪೀಡಿತ ವಿಧವೆಯರತ್ತ ಗಮನ ಹರಿಸುತ್ತಿಲ್ಲ ಎಂದು ಹೇಳಿದ್ದಾರೆ.

“ಅನೇಕ ವಿಧವೆಯರು ಹಸಿವಿನಿಂದ ಬಳಲುತ್ತಿದ್ದಾರೆ, ಏಕೆಂದರೆ ಅವರಿಗೆ ಆರ್ಥಿಕವಾಗಿ ಬೆಂಬಲ ನೀಡಲು ಯಾರೂ ಇಲ್ಲ. ಅವರು ಕೆಲಸ ಮಾಡಲು ಸಾಧ್ಯವಿಲ್ಲ. ಇಂತಹ ಕಷ್ಟದ ಸಮಯದಲ್ಲಿ ಅವರನ್ನು ಬೆಂಬಲಿಸುವ ಬದಲು ಸರ್ಕಾರ ಪಿಂಚಣಿಯನ್ನು ಸ್ಥಗಿತಗೊಳಿಸಿದೆ” ಎಂದು ನಾಮ್ಡಿಯೊ ಹೇಳಿದ್ದಾರೆ.

“ನಾವು ಸಿಎಂ ಚೌಹಾನ್ ಅವರ ಖಾಸಗಿ ಕಾರ್ಯದರ್ಶಿ ಸಂತೋಷ್ ಕುಮಾರ್ ಶರ್ಮಾ ಅವರಿಗೆ ಜ್ಞಾಪಕ ಪತ್ರವನ್ನು ಹಸ್ತಾಂತರಿಸಿದ್ದೇವೆ. ನಮ್ಮ ಬೇಡಿಕೆಗಳನ್ನು ಸಿಎಂಗೆ ರವಾನಿಸುವುದಾಗಿ ಅವರು ಭರವಸೆ ನೀಡಿದರು” ಎಂದು ಅವರು ಹೇಳಿದ್ದಾರೆ.

2016 ರಿಂದ 2017 ರ ನಡುವೆ, ಇಲಾಖೆಯು ಸುಮಾರು ಒಂದು ವರ್ಷದಿಂದ ಪಿಂಚಣಿಯನ್ನು ಸ್ಥಗಿತಗೊಳಿಸಿತ್ತು, ಆದರೆ ಪ್ರತಿಭಟನೆಯ ನಂತರ ಅದನ್ನು ಪುನರಾರಂಭಿಸಲಾಯಿತು.

ಅನಿಲ ಪರಿಹಾರ ಮತ್ತು ಪುನರ್ವಸತಿ ವಿಭಾಗದ ನಿರ್ದೇಶಕ ಬಸಂತ್ ಕುರ್ರೆ ಅವರನ್ನು ಸಂಪರ್ಕಿಸಿದಾಗ, “ಪಿಂಚಣಿ ಯೋಜನೆಯ ಅವಧಿ ಐದು ವರ್ಷಗಳಾಗಿದೆ. ಆದರೆ ಇದನ್ನು ಇನ್ನೂ ಎರಡು ವರ್ಷಗಳವರೆಗೆ ವಿಸ್ತರಿಸಲಾಯಿತು. ಪ್ರಸ್ತುತ ಅದರ ಅನುದಾನದ ಹಣ ಮುಗಿದು ಹೋಗಿದೆ” ಎಂದು ಅವರು ಹೇಳಿದರು.

“ನಾವು ಪ್ರಸ್ತಾವನೆಯನ್ನು ಮುಖ್ಯಂತ್ರಿಯ ಅನುಮೋದನೆಗಾಗಿ ಸಿದ್ಧಪಡಿಸಿ ಕಳುಹಿಸುತ್ತೇವೆ. ಮುಖ್ಯಮಂತ್ರಿ ಅದಕ್ಕೆ ಅನುಮೋದನೆ ನೀಡಿ ನಿಧಿಯನ್ನು ಹಂಚಿದರೆ, ನಾವು ಪಿಂಚಣಿಯನ್ನು ಪುನರಾರಂಭಿಸುತ್ತೇವೆ” ಎಂದು ಅವರು ಹೇಳಿದ್ದಾರೆ.


ಓದಿ: ಮಧ್ಯಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ-ಆತನ ಮೇಲೆಯೇ ದೂರು ದಾಖಲಿಸಿದ ಪೊಲೀಸರು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...