Homeಮುಖಪುಟಹಸಿವಿನಿಂದ ಬಳಲುತ್ತಿರುವ 4500 ಭೂಪಾಲ್ ಅನಿಲ ಸೋರಿಕೆ ಸಂತ್ರಸ್ಥ ವಿಧವೆಯರು

ಹಸಿವಿನಿಂದ ಬಳಲುತ್ತಿರುವ 4500 ಭೂಪಾಲ್ ಅನಿಲ ಸೋರಿಕೆ ಸಂತ್ರಸ್ಥ ವಿಧವೆಯರು

ಕಳೆದ ಎಂಟು ತಿಂಗಳಿನಿಂದ ಅನಿಲ ಸೋರಿಕೆ ಸಂತ್ರಸ್ಥರಾದ 4500 ವಿಧವೆಯರಿಗೆ ರಾಜ್ಯ ಸರ್ಕಾರ ಪಿಂಚಣಿಯನ್ನು ಸ್ಥಗಿತಗೊಳಿಸಿದೆ.

- Advertisement -
- Advertisement -

ಕಳೆದ ಎಂಟು ತಿಂಗಳಿಂದ ರಾಜ್ಯ ಸರ್ಕಾರ ಪಿಂಚಣಿಯನ್ನು ಸ್ಥಗಿತಗೊಳಿಸಿದ್ದರಿಂದ ಸುಮಾರು 4,500 ಭೋಪಾಲ್ ಅನಿಲ ಸೋರಿಕೆಯ ಸಂತ್ರಸ್ಥ ವಿಧವೆಯರು ಹಸಿವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ ಅಲ್ಲಿ ಕಾಂಗ್ರೆಸ್ ಸರ್ಕಾರ ಇದ್ದು, ಪ್ರಸ್ತುತ ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಬಿಜೆಪಿ ಸರ್ಕಾರ ಮಾರ್ಚ್‌ನಲ್ಲಿ ಅಧಿಕಾರಕ್ಕೆ ಬಂದಿದೆಯಾರೂ ಪರಿಸ್ಥಿತಿ ಬದಲಾಗಿಲ್ಲ ಎನ್ನಲಾಗಿದೆ.

ಸಂತ್ರಸ್ತ ಅನಿಲ ಪೀಡಿತರಿಗೆ ಸಾಮಾಜಿಕ ಪುನರ್ವಸತಿ ಅಡಿಯಲ್ಲಿ ಪರಿಹಾರ ಮತ್ತು ಪುನರ್ವಸತಿ ಇಲಾಖೆಯಿಂದ ಪ್ರತಿ ತಿಂಗಳು 1,000 ರೂ. ನೀಡಲು, ಈ ಯೋಜನೆಗಾಗಿ ಕೇಂದ್ರ ಸರ್ಕಾರ 30 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. 2011 ರ ಮೇ ತಿಂಗಳಲ್ಲಿ ಪಿಂಚಣಿ ಯೋಜನೆಯನ್ನು ಪ್ರಾರಂಭಿಸಲಾಯಿತು.

ತಮ್ಮ ಪಿಂಚಣಿಯನ್ನು ಪುನರಾರಂಭಿಸಬೇಕೆಂದು ಒತ್ತಾಯಿಸಿ, ವಿಧವೆಯರ ಒಂದು ಸಣ್ಣ ಗುಂಪು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರ ಮನೆಯ ಬಳಿ ಜುಲೈ 17 ರಂದು ಗ್ಯಾಸ್ ಪೀಡಿತ್ ನಿರಾಶ್ರಿತ್ ಪೆನ್ಷನ್ ಭೋಗಿ ಸಂಘರ್ಷ ಮೋರ್ಚಾ ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಸಿತ್ತು.

ಫೋಟೋ ಕೃಪೆ: ನ್ಯೂಸ್ ಕ್ಲಿಕ್

ವಯಸ್ಸು ಮತ್ತು ಕಾಯಿಲೆಗಳಿಂದಾಗಿ ಕೆಲಸ ಮಾಡಲು ಸಾಧ್ಯವಿಲ್ಲದ ಕಾರಣ ಪಿಂಚಣಿ ಮಾತ್ರವೇ ಬದುಕುಳಿಯುವ ಏಕೈಕ ಜೀವಸೆಲೆ ಎಂದು 60 ವರ್ಷದ ಈ ವಿಧವೆಯರು ಹೇಳಿದ್ದಾರೆ.

1984 ರ ಡಿಸೆಂಬರ್ 2-3 ರಂದು ವಿಷಕಾರಿ ಮೀಥೈಲ್ ಐಸೊಸೈನೈಡ್‌ಗೆ ಸೋರಿಕೆಯಾಗಿ ಹೆಚ್ಚಿನ ವಿಧವೆಯರು ರೋಗಗಳಿಂದ ಬಳಲುತ್ತಿದ್ದಾರೆ.

“ನಾನು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದೇನೆ ಮತ್ತು ದಶಕಗಳಿಂದ ನಿರಂತರ ಚಿಕಿತ್ಸೆಯಲ್ಲಿದ್ದೇನೆ. ನಾನು ಬಟ್ಟೆಗಳನ್ನು ಹೊಲಿಯುತ್ತಿದ್ದೆ, ಆದರೆ ಈಗ ನನಗೆ ಕೆಲಸ ಮಾಡಲು ಸಾಧ್ಯವಿಲ್ಲ. ಪಿಂಚಣಿ ಮತ್ತು ಮಾಸಿಕ ಪಡಿತರವು ಬದುಕುಳಿಯುವ ಏಕೈಕ ಆಶಯವಾಗಿದೆ, ಆದರೆ 2019 ರ ಡಿಸೆಂಬರ್‌ನಿಂದ ನನಗೆ ಯಾವುದೇ ಹಣ ಬಂದಿಲ್ಲ” ಎಂದು 65 ವರ್ಷದ ಸಂತ್ರಸ್ತೆ ಸಾವಿತ್ರಿ ಬಾಯಿ ಹೇಳಿದ್ದಾರೆ.

2010 ರಲ್ಲಿ ಸಿಎಂ ಚೌಹಾನ್ ಮತ್ತು 2018 ರಲ್ಲಿ ಅನಿಲ ಪರಿಹಾರ ಮತ್ತು ಪುನರ್ವಸತಿ ಸಚಿವ ವಿಶ್ವಸ್ ಸಾರಂಗ್ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲು ಪಿಂಚಣಿ ಜೀವಿತಾವಧಿಯವರೆಗೂ ಮುಂದುವರಿಯುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಸ್ಥಗಿತಗೊಳಿಸಲಾಗಿದೆ ಎಂದು 67 ವರ್ಷದ ಇಂದಿರಾ ಹೇಳಿದ್ದಾರೆ.

ಗ್ಯಾಸ್ ಪೀಡಿತ್ ನಿರಾಶ್ರಿತ್ ಪೆನ್ಷನ್ ಭೋಗಿ ಸಂಘರ್ಷ ಮೋರ್ಚಾ ಇದರ ಅಧ್ಯಕ್ಷ, ಬಾಲಕ್ರಿಶನ್ ನಾಮ್ಡಿಯೊ, ಬೀಜೆಪಿ ನೇತೃತ್ವದ ಸರ್ಕಾರ ಕೊರೊನಾ ಸಾಂಕ್ರಮಿಕ್ಕ ಹಣಕಾಸಿನ ನೆರವು ಉಚಿತ ಆಹಾರ ಪೂರೈಸುತ್ತಿರುವಾಗ ಅನಿಲ ಪೀಡಿತ ವಿಧವೆಯರತ್ತ ಗಮನ ಹರಿಸುತ್ತಿಲ್ಲ ಎಂದು ಹೇಳಿದ್ದಾರೆ.

“ಅನೇಕ ವಿಧವೆಯರು ಹಸಿವಿನಿಂದ ಬಳಲುತ್ತಿದ್ದಾರೆ, ಏಕೆಂದರೆ ಅವರಿಗೆ ಆರ್ಥಿಕವಾಗಿ ಬೆಂಬಲ ನೀಡಲು ಯಾರೂ ಇಲ್ಲ. ಅವರು ಕೆಲಸ ಮಾಡಲು ಸಾಧ್ಯವಿಲ್ಲ. ಇಂತಹ ಕಷ್ಟದ ಸಮಯದಲ್ಲಿ ಅವರನ್ನು ಬೆಂಬಲಿಸುವ ಬದಲು ಸರ್ಕಾರ ಪಿಂಚಣಿಯನ್ನು ಸ್ಥಗಿತಗೊಳಿಸಿದೆ” ಎಂದು ನಾಮ್ಡಿಯೊ ಹೇಳಿದ್ದಾರೆ.

“ನಾವು ಸಿಎಂ ಚೌಹಾನ್ ಅವರ ಖಾಸಗಿ ಕಾರ್ಯದರ್ಶಿ ಸಂತೋಷ್ ಕುಮಾರ್ ಶರ್ಮಾ ಅವರಿಗೆ ಜ್ಞಾಪಕ ಪತ್ರವನ್ನು ಹಸ್ತಾಂತರಿಸಿದ್ದೇವೆ. ನಮ್ಮ ಬೇಡಿಕೆಗಳನ್ನು ಸಿಎಂಗೆ ರವಾನಿಸುವುದಾಗಿ ಅವರು ಭರವಸೆ ನೀಡಿದರು” ಎಂದು ಅವರು ಹೇಳಿದ್ದಾರೆ.

2016 ರಿಂದ 2017 ರ ನಡುವೆ, ಇಲಾಖೆಯು ಸುಮಾರು ಒಂದು ವರ್ಷದಿಂದ ಪಿಂಚಣಿಯನ್ನು ಸ್ಥಗಿತಗೊಳಿಸಿತ್ತು, ಆದರೆ ಪ್ರತಿಭಟನೆಯ ನಂತರ ಅದನ್ನು ಪುನರಾರಂಭಿಸಲಾಯಿತು.

ಅನಿಲ ಪರಿಹಾರ ಮತ್ತು ಪುನರ್ವಸತಿ ವಿಭಾಗದ ನಿರ್ದೇಶಕ ಬಸಂತ್ ಕುರ್ರೆ ಅವರನ್ನು ಸಂಪರ್ಕಿಸಿದಾಗ, “ಪಿಂಚಣಿ ಯೋಜನೆಯ ಅವಧಿ ಐದು ವರ್ಷಗಳಾಗಿದೆ. ಆದರೆ ಇದನ್ನು ಇನ್ನೂ ಎರಡು ವರ್ಷಗಳವರೆಗೆ ವಿಸ್ತರಿಸಲಾಯಿತು. ಪ್ರಸ್ತುತ ಅದರ ಅನುದಾನದ ಹಣ ಮುಗಿದು ಹೋಗಿದೆ” ಎಂದು ಅವರು ಹೇಳಿದರು.

“ನಾವು ಪ್ರಸ್ತಾವನೆಯನ್ನು ಮುಖ್ಯಂತ್ರಿಯ ಅನುಮೋದನೆಗಾಗಿ ಸಿದ್ಧಪಡಿಸಿ ಕಳುಹಿಸುತ್ತೇವೆ. ಮುಖ್ಯಮಂತ್ರಿ ಅದಕ್ಕೆ ಅನುಮೋದನೆ ನೀಡಿ ನಿಧಿಯನ್ನು ಹಂಚಿದರೆ, ನಾವು ಪಿಂಚಣಿಯನ್ನು ಪುನರಾರಂಭಿಸುತ್ತೇವೆ” ಎಂದು ಅವರು ಹೇಳಿದ್ದಾರೆ.


ಓದಿ: ಮಧ್ಯಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ-ಆತನ ಮೇಲೆಯೇ ದೂರು ದಾಖಲಿಸಿದ ಪೊಲೀಸರು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...