Homeಮುಖಪುಟ45ನೇ ಚೆನ್ನೈ ಪುಸ್ತಕ ಮೇಳ: 12 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಪುಸ್ತಕ ಮಾರಾಟ

45ನೇ ಚೆನ್ನೈ ಪುಸ್ತಕ ಮೇಳ: 12 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಪುಸ್ತಕ ಮಾರಾಟ

- Advertisement -
- Advertisement -

ತಮಿಳುನಾಡಿನ ಚೆನ್ನೈ ನಗರದ ನಂದನಂ ವೈಎಂಸಿಎ ಮೈದಾನದಲ್ಲಿ ದಕ್ಷಿಣ ಭಾರತದ ಪುಸ್ತಕ ಮಾರಾಟಗಾರರು ಮತ್ತು ಪ್ರಕಾಶಕರ ಸಂಘ (BAPASI) ಆಯೋಜಿಸಿದ್ದ 45ನೇ ಚೆನ್ನೈ ಪುಸ್ತಕ ಮೇಳಕ್ಕೆ ದೇಶದ ನಾನಾ ಭಾಗಗಳಿಂದ ಸುಮಾರು 15 ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದಾರೆ.

’ಈ ಪುಸ್ತಕ ಮೇಳದಲ್ಲಿ 12 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಪುಸ್ತಕಗಳನ್ನು ಮಾರಾಟ ಮಾಡಲಾಗಿದೆ’ ಎಂದು BAPASI ಅಧ್ಯಕ್ಷ ಎಸ್. ವೈರವನ್ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾದ ನಂತರ ಫೆಬ್ರವರಿ 16 ರಂದು ಪುಸ್ತಕ ಮೇಳ ಆರಂಭವಾಗಿತ್ತು. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಉದ್ಘಾಟಿಸಿದ ಈ ಮೇಳದಲ್ಲಿ ದೇಶಾದ್ಯಂತದ ಪುಸ್ತಕ ಮಾರಾಟಗಾರರ 800 ಕ್ಕೂ ಹೆಚ್ಚು ಮಳಿಗೆಗಳು ಇದ್ದವು.

ಭಾನುವಾರ ಈ ಮೇಳಕ್ಕೆ ತೆರೆ ಎಳೆಯಲಾಗಿದೆ. ನಿರೀಕ್ಷೆಯಂತೆ, ಮೇಳದ ಕೊನೆ ದಿನ ಸಾವಿರಾರು ಜನರು ಸೇರಿದ್ದು, ಪುಸ್ತಕಗಳ ಮಾರಾಟದಲ್ಲಿ ಅತ್ಯಂತ ಏರಿಕೆ ಕಂಡುಬಂದಿದೆ. ಜನರನ್ನು ನಿಯಂತ್ರಿಸಲು ಮೈದಾನದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿ: ರಾಜೇಶ್ವರಿ ತೇಜಸ್ವಿಯವರ ಹೊಸ ಪುಸ್ತಕದ ಆಯ್ದ ಭಾಗ – ‘ನನ್ನ ಡ್ರೈವಿಂಗ್ ಡೈರಿ’

ಈ ಬಾರಿಯ ಮೇಳದಲ್ಲಿ ರಾಜ್ಯ ಸರ್ಕಾರದ ‘ಇಲ್ಲಂ ತೇಡಿ ಕಲ್ವಿ’ (Illam Thedi Kalvi)ಯೋಜನೆ, ವಿಜ್ಞಾನ ಪ್ರದರ್ಶನ, Keezhadi ಛಾಯಾಚಿತ್ರ ಗ್ಯಾಲರಿ ಮತ್ತು ಹಳೆಯ ಕುಂಬಾರಿಕೆ ಕಲಾಕೃತಿಗಳ ಪ್ರದರ್ಶನಕ್ಕೆ ಸಂಬಂಧಿಸಿದ ಮಳಿಗೆಗಳು ಸಹ ಇದ್ದವು.

ಪ್ರಸಿದ್ಧ ನಾಯಕರ ಶಿಲ್ಪಗಳು ಮೇಳದಲ್ಲಿ ಮತ್ತೊಂದು ಆಕರ್ಷಣೆಯಾಗಿದ್ದವು. ಮಾಜಿ ಸಿಎಂ ಎಂ. ಕರುಣಾನಿಧಿ, ಜನಪ್ರಿಯ ತಮಿಳು ಕವಿ ತಿರುವಳ್ಳುವರ್, ಬುದ್ಧ, ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ, ದ್ರಾವಿಡ ಧೀಮಂತ ‘ಪೆರಿಯಾರ್’ ಇವಿ ರಾಮಸಾಮಿ ಮತ್ತಿತರ ನಾಯಕರ ಕಲಾಕೃತಿಗಳು ಮಾರಾಟಕ್ಕೆ ಲಭ್ಯವಿದ್ದವು.

Image
PC: Twitter@bijoyghosh70

’ಜಲ್ಲಿಕಟ್ಟು ಪ್ರತಿಭಟನೆಯ ನಂತರ ಯುವಕರಲ್ಲಿ ರಾಜಕೀಯದ ಪ್ರಜ್ಞೆ ಹೆಚ್ಚಾಗಿದೆ. ಕಳೆದೆರಡು ವರ್ಷಗಳಿಂದ ಜಾತ್ರೆಯಲ್ಲಿ ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸುತ್ತಿದ್ದು, ಈ ಬಾರಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಿರುವಳ್ಳುವರ್ ಮತ್ತು ಪೆರಿಯಾರ್ ಕಲಾಕೃತಿಗಳು ಹೆಚ್ಚು ಮಾರಾಟವಾಗಿವೆ’ ಎಂದು ಶಿಲ್ಪ ಕಲಾವಿದ ಅರುಣ್ ತೈತನ್ ಹೇಳಿದ್ದಾರೆ.

ಈ ಬಾರಿಯ ಮೇಳದಲ್ಲಿ ಅತಿ ಹೆಚ್ಚಿನ ಶಾಲಾ ವಿದ್ಯಾರ್ಥಿಗಳು ಭಾವಹಿಸಿದ್ದರು ಎಂದು BAPASI ಕಾರ್ಯದರ್ಶಿ ಎಸ್‌.ಕೆ.ಮುರುಗನ್ ಹೇಳಿದ್ದಾರೆ.


ಇದನ್ನೂ ಓದಿ: ಭ್ರಮೆ ಮತ್ತು ವಾಸ್ತವಗಳ ನಡುವೆ ಪುಸ್ತಕದ ಆಯ್ದ ಭಾಗ; ಯು.ಜಿ.ಕೃಷ್ಣಮೂರ್ತಿ ರಮಣರನ್ನು ಭೇಟಿಯಾದುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...