Homeಮುಖಪುಟ45ನೇ ಚೆನ್ನೈ ಪುಸ್ತಕ ಮೇಳ: 12 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಪುಸ್ತಕ ಮಾರಾಟ

45ನೇ ಚೆನ್ನೈ ಪುಸ್ತಕ ಮೇಳ: 12 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಪುಸ್ತಕ ಮಾರಾಟ

- Advertisement -
- Advertisement -

ತಮಿಳುನಾಡಿನ ಚೆನ್ನೈ ನಗರದ ನಂದನಂ ವೈಎಂಸಿಎ ಮೈದಾನದಲ್ಲಿ ದಕ್ಷಿಣ ಭಾರತದ ಪುಸ್ತಕ ಮಾರಾಟಗಾರರು ಮತ್ತು ಪ್ರಕಾಶಕರ ಸಂಘ (BAPASI) ಆಯೋಜಿಸಿದ್ದ 45ನೇ ಚೆನ್ನೈ ಪುಸ್ತಕ ಮೇಳಕ್ಕೆ ದೇಶದ ನಾನಾ ಭಾಗಗಳಿಂದ ಸುಮಾರು 15 ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದಾರೆ.

’ಈ ಪುಸ್ತಕ ಮೇಳದಲ್ಲಿ 12 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಪುಸ್ತಕಗಳನ್ನು ಮಾರಾಟ ಮಾಡಲಾಗಿದೆ’ ಎಂದು BAPASI ಅಧ್ಯಕ್ಷ ಎಸ್. ವೈರವನ್ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾದ ನಂತರ ಫೆಬ್ರವರಿ 16 ರಂದು ಪುಸ್ತಕ ಮೇಳ ಆರಂಭವಾಗಿತ್ತು. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಉದ್ಘಾಟಿಸಿದ ಈ ಮೇಳದಲ್ಲಿ ದೇಶಾದ್ಯಂತದ ಪುಸ್ತಕ ಮಾರಾಟಗಾರರ 800 ಕ್ಕೂ ಹೆಚ್ಚು ಮಳಿಗೆಗಳು ಇದ್ದವು.

ಭಾನುವಾರ ಈ ಮೇಳಕ್ಕೆ ತೆರೆ ಎಳೆಯಲಾಗಿದೆ. ನಿರೀಕ್ಷೆಯಂತೆ, ಮೇಳದ ಕೊನೆ ದಿನ ಸಾವಿರಾರು ಜನರು ಸೇರಿದ್ದು, ಪುಸ್ತಕಗಳ ಮಾರಾಟದಲ್ಲಿ ಅತ್ಯಂತ ಏರಿಕೆ ಕಂಡುಬಂದಿದೆ. ಜನರನ್ನು ನಿಯಂತ್ರಿಸಲು ಮೈದಾನದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿ: ರಾಜೇಶ್ವರಿ ತೇಜಸ್ವಿಯವರ ಹೊಸ ಪುಸ್ತಕದ ಆಯ್ದ ಭಾಗ – ‘ನನ್ನ ಡ್ರೈವಿಂಗ್ ಡೈರಿ’

ಈ ಬಾರಿಯ ಮೇಳದಲ್ಲಿ ರಾಜ್ಯ ಸರ್ಕಾರದ ‘ಇಲ್ಲಂ ತೇಡಿ ಕಲ್ವಿ’ (Illam Thedi Kalvi)ಯೋಜನೆ, ವಿಜ್ಞಾನ ಪ್ರದರ್ಶನ, Keezhadi ಛಾಯಾಚಿತ್ರ ಗ್ಯಾಲರಿ ಮತ್ತು ಹಳೆಯ ಕುಂಬಾರಿಕೆ ಕಲಾಕೃತಿಗಳ ಪ್ರದರ್ಶನಕ್ಕೆ ಸಂಬಂಧಿಸಿದ ಮಳಿಗೆಗಳು ಸಹ ಇದ್ದವು.

ಪ್ರಸಿದ್ಧ ನಾಯಕರ ಶಿಲ್ಪಗಳು ಮೇಳದಲ್ಲಿ ಮತ್ತೊಂದು ಆಕರ್ಷಣೆಯಾಗಿದ್ದವು. ಮಾಜಿ ಸಿಎಂ ಎಂ. ಕರುಣಾನಿಧಿ, ಜನಪ್ರಿಯ ತಮಿಳು ಕವಿ ತಿರುವಳ್ಳುವರ್, ಬುದ್ಧ, ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ, ದ್ರಾವಿಡ ಧೀಮಂತ ‘ಪೆರಿಯಾರ್’ ಇವಿ ರಾಮಸಾಮಿ ಮತ್ತಿತರ ನಾಯಕರ ಕಲಾಕೃತಿಗಳು ಮಾರಾಟಕ್ಕೆ ಲಭ್ಯವಿದ್ದವು.

Image
PC: Twitter@bijoyghosh70

’ಜಲ್ಲಿಕಟ್ಟು ಪ್ರತಿಭಟನೆಯ ನಂತರ ಯುವಕರಲ್ಲಿ ರಾಜಕೀಯದ ಪ್ರಜ್ಞೆ ಹೆಚ್ಚಾಗಿದೆ. ಕಳೆದೆರಡು ವರ್ಷಗಳಿಂದ ಜಾತ್ರೆಯಲ್ಲಿ ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸುತ್ತಿದ್ದು, ಈ ಬಾರಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಿರುವಳ್ಳುವರ್ ಮತ್ತು ಪೆರಿಯಾರ್ ಕಲಾಕೃತಿಗಳು ಹೆಚ್ಚು ಮಾರಾಟವಾಗಿವೆ’ ಎಂದು ಶಿಲ್ಪ ಕಲಾವಿದ ಅರುಣ್ ತೈತನ್ ಹೇಳಿದ್ದಾರೆ.

ಈ ಬಾರಿಯ ಮೇಳದಲ್ಲಿ ಅತಿ ಹೆಚ್ಚಿನ ಶಾಲಾ ವಿದ್ಯಾರ್ಥಿಗಳು ಭಾವಹಿಸಿದ್ದರು ಎಂದು BAPASI ಕಾರ್ಯದರ್ಶಿ ಎಸ್‌.ಕೆ.ಮುರುಗನ್ ಹೇಳಿದ್ದಾರೆ.


ಇದನ್ನೂ ಓದಿ: ಭ್ರಮೆ ಮತ್ತು ವಾಸ್ತವಗಳ ನಡುವೆ ಪುಸ್ತಕದ ಆಯ್ದ ಭಾಗ; ಯು.ಜಿ.ಕೃಷ್ಣಮೂರ್ತಿ ರಮಣರನ್ನು ಭೇಟಿಯಾದುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...