Homeಮುಖಪುಟ45ನೇ ಚೆನ್ನೈ ಪುಸ್ತಕ ಮೇಳ: 12 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಪುಸ್ತಕ ಮಾರಾಟ

45ನೇ ಚೆನ್ನೈ ಪುಸ್ತಕ ಮೇಳ: 12 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಪುಸ್ತಕ ಮಾರಾಟ

- Advertisement -
- Advertisement -

ತಮಿಳುನಾಡಿನ ಚೆನ್ನೈ ನಗರದ ನಂದನಂ ವೈಎಂಸಿಎ ಮೈದಾನದಲ್ಲಿ ದಕ್ಷಿಣ ಭಾರತದ ಪುಸ್ತಕ ಮಾರಾಟಗಾರರು ಮತ್ತು ಪ್ರಕಾಶಕರ ಸಂಘ (BAPASI) ಆಯೋಜಿಸಿದ್ದ 45ನೇ ಚೆನ್ನೈ ಪುಸ್ತಕ ಮೇಳಕ್ಕೆ ದೇಶದ ನಾನಾ ಭಾಗಗಳಿಂದ ಸುಮಾರು 15 ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದಾರೆ.

’ಈ ಪುಸ್ತಕ ಮೇಳದಲ್ಲಿ 12 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಪುಸ್ತಕಗಳನ್ನು ಮಾರಾಟ ಮಾಡಲಾಗಿದೆ’ ಎಂದು BAPASI ಅಧ್ಯಕ್ಷ ಎಸ್. ವೈರವನ್ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾದ ನಂತರ ಫೆಬ್ರವರಿ 16 ರಂದು ಪುಸ್ತಕ ಮೇಳ ಆರಂಭವಾಗಿತ್ತು. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಉದ್ಘಾಟಿಸಿದ ಈ ಮೇಳದಲ್ಲಿ ದೇಶಾದ್ಯಂತದ ಪುಸ್ತಕ ಮಾರಾಟಗಾರರ 800 ಕ್ಕೂ ಹೆಚ್ಚು ಮಳಿಗೆಗಳು ಇದ್ದವು.

ಭಾನುವಾರ ಈ ಮೇಳಕ್ಕೆ ತೆರೆ ಎಳೆಯಲಾಗಿದೆ. ನಿರೀಕ್ಷೆಯಂತೆ, ಮೇಳದ ಕೊನೆ ದಿನ ಸಾವಿರಾರು ಜನರು ಸೇರಿದ್ದು, ಪುಸ್ತಕಗಳ ಮಾರಾಟದಲ್ಲಿ ಅತ್ಯಂತ ಏರಿಕೆ ಕಂಡುಬಂದಿದೆ. ಜನರನ್ನು ನಿಯಂತ್ರಿಸಲು ಮೈದಾನದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿ: ರಾಜೇಶ್ವರಿ ತೇಜಸ್ವಿಯವರ ಹೊಸ ಪುಸ್ತಕದ ಆಯ್ದ ಭಾಗ – ‘ನನ್ನ ಡ್ರೈವಿಂಗ್ ಡೈರಿ’

ಈ ಬಾರಿಯ ಮೇಳದಲ್ಲಿ ರಾಜ್ಯ ಸರ್ಕಾರದ ‘ಇಲ್ಲಂ ತೇಡಿ ಕಲ್ವಿ’ (Illam Thedi Kalvi)ಯೋಜನೆ, ವಿಜ್ಞಾನ ಪ್ರದರ್ಶನ, Keezhadi ಛಾಯಾಚಿತ್ರ ಗ್ಯಾಲರಿ ಮತ್ತು ಹಳೆಯ ಕುಂಬಾರಿಕೆ ಕಲಾಕೃತಿಗಳ ಪ್ರದರ್ಶನಕ್ಕೆ ಸಂಬಂಧಿಸಿದ ಮಳಿಗೆಗಳು ಸಹ ಇದ್ದವು.

ಪ್ರಸಿದ್ಧ ನಾಯಕರ ಶಿಲ್ಪಗಳು ಮೇಳದಲ್ಲಿ ಮತ್ತೊಂದು ಆಕರ್ಷಣೆಯಾಗಿದ್ದವು. ಮಾಜಿ ಸಿಎಂ ಎಂ. ಕರುಣಾನಿಧಿ, ಜನಪ್ರಿಯ ತಮಿಳು ಕವಿ ತಿರುವಳ್ಳುವರ್, ಬುದ್ಧ, ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ, ದ್ರಾವಿಡ ಧೀಮಂತ ‘ಪೆರಿಯಾರ್’ ಇವಿ ರಾಮಸಾಮಿ ಮತ್ತಿತರ ನಾಯಕರ ಕಲಾಕೃತಿಗಳು ಮಾರಾಟಕ್ಕೆ ಲಭ್ಯವಿದ್ದವು.

Image
PC: Twitter@bijoyghosh70

’ಜಲ್ಲಿಕಟ್ಟು ಪ್ರತಿಭಟನೆಯ ನಂತರ ಯುವಕರಲ್ಲಿ ರಾಜಕೀಯದ ಪ್ರಜ್ಞೆ ಹೆಚ್ಚಾಗಿದೆ. ಕಳೆದೆರಡು ವರ್ಷಗಳಿಂದ ಜಾತ್ರೆಯಲ್ಲಿ ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸುತ್ತಿದ್ದು, ಈ ಬಾರಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಿರುವಳ್ಳುವರ್ ಮತ್ತು ಪೆರಿಯಾರ್ ಕಲಾಕೃತಿಗಳು ಹೆಚ್ಚು ಮಾರಾಟವಾಗಿವೆ’ ಎಂದು ಶಿಲ್ಪ ಕಲಾವಿದ ಅರುಣ್ ತೈತನ್ ಹೇಳಿದ್ದಾರೆ.

ಈ ಬಾರಿಯ ಮೇಳದಲ್ಲಿ ಅತಿ ಹೆಚ್ಚಿನ ಶಾಲಾ ವಿದ್ಯಾರ್ಥಿಗಳು ಭಾವಹಿಸಿದ್ದರು ಎಂದು BAPASI ಕಾರ್ಯದರ್ಶಿ ಎಸ್‌.ಕೆ.ಮುರುಗನ್ ಹೇಳಿದ್ದಾರೆ.


ಇದನ್ನೂ ಓದಿ: ಭ್ರಮೆ ಮತ್ತು ವಾಸ್ತವಗಳ ನಡುವೆ ಪುಸ್ತಕದ ಆಯ್ದ ಭಾಗ; ಯು.ಜಿ.ಕೃಷ್ಣಮೂರ್ತಿ ರಮಣರನ್ನು ಭೇಟಿಯಾದುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...