Homeಮುಖಪುಟ45ನೇ ಚೆನ್ನೈ ಪುಸ್ತಕ ಮೇಳ: 12 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಪುಸ್ತಕ ಮಾರಾಟ

45ನೇ ಚೆನ್ನೈ ಪುಸ್ತಕ ಮೇಳ: 12 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಪುಸ್ತಕ ಮಾರಾಟ

- Advertisement -
- Advertisement -

ತಮಿಳುನಾಡಿನ ಚೆನ್ನೈ ನಗರದ ನಂದನಂ ವೈಎಂಸಿಎ ಮೈದಾನದಲ್ಲಿ ದಕ್ಷಿಣ ಭಾರತದ ಪುಸ್ತಕ ಮಾರಾಟಗಾರರು ಮತ್ತು ಪ್ರಕಾಶಕರ ಸಂಘ (BAPASI) ಆಯೋಜಿಸಿದ್ದ 45ನೇ ಚೆನ್ನೈ ಪುಸ್ತಕ ಮೇಳಕ್ಕೆ ದೇಶದ ನಾನಾ ಭಾಗಗಳಿಂದ ಸುಮಾರು 15 ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದಾರೆ.

’ಈ ಪುಸ್ತಕ ಮೇಳದಲ್ಲಿ 12 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಪುಸ್ತಕಗಳನ್ನು ಮಾರಾಟ ಮಾಡಲಾಗಿದೆ’ ಎಂದು BAPASI ಅಧ್ಯಕ್ಷ ಎಸ್. ವೈರವನ್ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾದ ನಂತರ ಫೆಬ್ರವರಿ 16 ರಂದು ಪುಸ್ತಕ ಮೇಳ ಆರಂಭವಾಗಿತ್ತು. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಉದ್ಘಾಟಿಸಿದ ಈ ಮೇಳದಲ್ಲಿ ದೇಶಾದ್ಯಂತದ ಪುಸ್ತಕ ಮಾರಾಟಗಾರರ 800 ಕ್ಕೂ ಹೆಚ್ಚು ಮಳಿಗೆಗಳು ಇದ್ದವು.

ಭಾನುವಾರ ಈ ಮೇಳಕ್ಕೆ ತೆರೆ ಎಳೆಯಲಾಗಿದೆ. ನಿರೀಕ್ಷೆಯಂತೆ, ಮೇಳದ ಕೊನೆ ದಿನ ಸಾವಿರಾರು ಜನರು ಸೇರಿದ್ದು, ಪುಸ್ತಕಗಳ ಮಾರಾಟದಲ್ಲಿ ಅತ್ಯಂತ ಏರಿಕೆ ಕಂಡುಬಂದಿದೆ. ಜನರನ್ನು ನಿಯಂತ್ರಿಸಲು ಮೈದಾನದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿ: ರಾಜೇಶ್ವರಿ ತೇಜಸ್ವಿಯವರ ಹೊಸ ಪುಸ್ತಕದ ಆಯ್ದ ಭಾಗ – ‘ನನ್ನ ಡ್ರೈವಿಂಗ್ ಡೈರಿ’

ಈ ಬಾರಿಯ ಮೇಳದಲ್ಲಿ ರಾಜ್ಯ ಸರ್ಕಾರದ ‘ಇಲ್ಲಂ ತೇಡಿ ಕಲ್ವಿ’ (Illam Thedi Kalvi)ಯೋಜನೆ, ವಿಜ್ಞಾನ ಪ್ರದರ್ಶನ, Keezhadi ಛಾಯಾಚಿತ್ರ ಗ್ಯಾಲರಿ ಮತ್ತು ಹಳೆಯ ಕುಂಬಾರಿಕೆ ಕಲಾಕೃತಿಗಳ ಪ್ರದರ್ಶನಕ್ಕೆ ಸಂಬಂಧಿಸಿದ ಮಳಿಗೆಗಳು ಸಹ ಇದ್ದವು.

ಪ್ರಸಿದ್ಧ ನಾಯಕರ ಶಿಲ್ಪಗಳು ಮೇಳದಲ್ಲಿ ಮತ್ತೊಂದು ಆಕರ್ಷಣೆಯಾಗಿದ್ದವು. ಮಾಜಿ ಸಿಎಂ ಎಂ. ಕರುಣಾನಿಧಿ, ಜನಪ್ರಿಯ ತಮಿಳು ಕವಿ ತಿರುವಳ್ಳುವರ್, ಬುದ್ಧ, ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ, ದ್ರಾವಿಡ ಧೀಮಂತ ‘ಪೆರಿಯಾರ್’ ಇವಿ ರಾಮಸಾಮಿ ಮತ್ತಿತರ ನಾಯಕರ ಕಲಾಕೃತಿಗಳು ಮಾರಾಟಕ್ಕೆ ಲಭ್ಯವಿದ್ದವು.

Image
PC: Twitter@bijoyghosh70

’ಜಲ್ಲಿಕಟ್ಟು ಪ್ರತಿಭಟನೆಯ ನಂತರ ಯುವಕರಲ್ಲಿ ರಾಜಕೀಯದ ಪ್ರಜ್ಞೆ ಹೆಚ್ಚಾಗಿದೆ. ಕಳೆದೆರಡು ವರ್ಷಗಳಿಂದ ಜಾತ್ರೆಯಲ್ಲಿ ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸುತ್ತಿದ್ದು, ಈ ಬಾರಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಿರುವಳ್ಳುವರ್ ಮತ್ತು ಪೆರಿಯಾರ್ ಕಲಾಕೃತಿಗಳು ಹೆಚ್ಚು ಮಾರಾಟವಾಗಿವೆ’ ಎಂದು ಶಿಲ್ಪ ಕಲಾವಿದ ಅರುಣ್ ತೈತನ್ ಹೇಳಿದ್ದಾರೆ.

ಈ ಬಾರಿಯ ಮೇಳದಲ್ಲಿ ಅತಿ ಹೆಚ್ಚಿನ ಶಾಲಾ ವಿದ್ಯಾರ್ಥಿಗಳು ಭಾವಹಿಸಿದ್ದರು ಎಂದು BAPASI ಕಾರ್ಯದರ್ಶಿ ಎಸ್‌.ಕೆ.ಮುರುಗನ್ ಹೇಳಿದ್ದಾರೆ.


ಇದನ್ನೂ ಓದಿ: ಭ್ರಮೆ ಮತ್ತು ವಾಸ್ತವಗಳ ನಡುವೆ ಪುಸ್ತಕದ ಆಯ್ದ ಭಾಗ; ಯು.ಜಿ.ಕೃಷ್ಣಮೂರ್ತಿ ರಮಣರನ್ನು ಭೇಟಿಯಾದುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...