Homeಕರ್ನಾಟಕExclusive | ವಾರ್ಡನ್‌ಗಳು, ಕ್ಲರ್ಕ್‌ಗಳು ಸೇರಿ 46 ಲಕ್ಷ ರೂ. ನುಂಗಿದ್ದರು: ಮೈಸೂರು ವಿವಿ ಡೀನ್‌‌

Exclusive | ವಾರ್ಡನ್‌ಗಳು, ಕ್ಲರ್ಕ್‌ಗಳು ಸೇರಿ 46 ಲಕ್ಷ ರೂ. ನುಂಗಿದ್ದರು: ಮೈಸೂರು ವಿವಿ ಡೀನ್‌‌

- Advertisement -
- Advertisement -

ಮೈಸೂರು ವಿಶ್ವವಿದ್ಯಾನಿಲಯದ ಪಿಜಿ ಹಾಸ್ಟೆಲ್‌ಗಳಲ್ಲಿ ಊಟ ನಿಲ್ಲಿಸಲಾಗಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದಾಗ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಡಾ.ಎಸ್‌.ಟಿ.ರಾಮಚಂದ್ರ ವಿದ್ಯಾರ್ಥಿಗಳ ಮೇಲೆ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೈರಲ್‌ ಆಗಿದೆ.

ಕೋವಿಡ್ ಅವಧಿಯಲ್ಲಿ ಹಾಸ್ಟೆಲ್ ಹಾಗೂ ಮೆಸ್‌ಗಳನ್ನು ಮುಚ್ಚಲಾಗಿತ್ತು. ಕಡಿಮೆ ಅವಧಿಯಲ್ಲಿ ಹಾಸ್ಟೆಲ್‌ ತೆರೆದು ಪರೀಕ್ಷೆಗಳನ್ನು ನಡೆಸಲಾಯಿತು. ಈಗ ಹೊಸ ವಿದ್ಯಾರ್ಥಿಗಳ ಪ್ರವೇಶಾತಿಯೂ ನಡೆಯುತ್ತಿದೆ. ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿಗಳು ಮನೆಗೆ ತೆರೆಯದೆ ಹಾಸ್ಟೆಲ್‌ಗಳಲ್ಲೇ ಉಳಿದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುತ್ತಿದ್ದಾರೆ. ಆದರೆ ಊಟ ಅವಧಿ ಮುಗಿದ ವಿದ್ಯಾರ್ಥಿಗಳಿಗೆ ಊಟ ನೀಡುವುದಿಲ್ಲ ಎಂದು ಮೈಸೂರು ವಿವಿ ತಿಳಿಸಿತ್ತು. ಹೀಗೆ ಉಂಟಾಗಿರುವ ಗೊಂದಲದ ವೇಳೆ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕ ಡಾ.ಎಸ್.ಟಿ.ರಾಮಚಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿದಾಗ ‘ಗೂಂಡಾಗಿರಿ’ ಮಾಡಿದ್ದಾರೆ ಎಂದು ಆರೋಪಿಸಿ ವಿಡಿಯೋ ಹರಿಬಿಡಲಾಗಿದೆ.

ಇದರ ಕುರಿತು ಪ್ರತಿಕ್ರಿಯೆ ಪಡೆಯಲು ರಾಮಚಂದ್ರ ಅವರನ್ನು ಸಂಪರ್ಕಿಸಿದಾಗ ಅವರು ಘಟನೆಯ ವಿವರ ಹಾಗೂ ಮೈಸೂರು ವಿವಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. “ನಾನು ತನಿಖೆ ನಡೆಸಿದ್ದರಿಂದ ಸಿಕ್ಕಿಬಿದ್ದವರು ಕೆಲವರನ್ನು ಛೂ ಬಿಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಾದ ಡಾ.ಎಸ್.ಟಿ.ರಾಮಚಂದ್ರ

“72 ವಿದ್ಯಾರ್ಥಿಗಳಿಗೆ ಮಾತ್ರ ಮೌಖಿಕ ಸಂದರ್ಶನ (ವೈವಾ), ಪ್ರಾಯೋಗಿಕ ಪರೀಕ್ಷೆ ಹಾಗೂ ಡೆಸಾರ್ಟೇಷನ್‌ ಸಲ್ಲಿಕೆ ಬಾಕಿ ಇದೆ. ಉಳಿದ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರಕ್ರಿಯೆ ಮುಗಿದಿದೆ. ಪರೀಕ್ಷೆ ಮುಗಿದವರು ಮನೆಗೆ ಹೋಗಬೇಕಿತ್ತು. ಆದರೆ ಹೋಗಿಲ್ಲ. ವಿಭಾಗಗಳಲ್ಲಿ ಹೊಸದಾಗಿ ಪ್ರವೇಶ ಪಡೆದವರಿಗೆ (ಹಾಸ್ಟೆಲ್‌ಗೆ ಪ್ರವೇಶ ಪಡೆಯದಿದ್ದರೂ), ಪರೀಕ್ಷೆ ಇದ್ದವರಿಗೆ ಸೇರಿ 250 ಮಂದಿಗೆ ಮಂಗಳವಾರ ಅಡುಗೆ ಮಾಡಿಸಲಾಗಿತ್ತು. ಯಾರಿಗೂ ಊಟ ಮಾಡಲು ಅವಕಾಶ ನೀಡದೆ ವಿಶ್ವ ಪ್ರಸಾದ್ ಎಂಬವವರು ಮೆಸ್‌ಗೆ ಬೀಗ ಹಾಕಿದ್ದರು. ಪರೀಕ್ಷೆ ಇದ್ದ 72 ಮಂದಿ ವಿದ್ಯಾರ್ಥಿಗಳು ದೂರಿದಾಗ ಸ್ಥಳಕ್ಕೆ ಭೇಟಿ ನೀಡಲಾಯಿತು. ರಾಜಾನಂದ ಎಂಬವರು ನನ್ನ ಕೈ ಎಳೆಯೋದು,  ಮೈಮೇಲೆ ಬೀಳೋದು ಮಾಡುತ್ತಿದ್ದ. ಹೊಡೆಯುತ್ತೀಯೇನಪ್ಪ, ಬಾ ಹೊಡಿ ಎಂದು ನಾನು ಮುನ್ನುಗ್ಗಿದೆ ಅಷ್ಟೆ. ಅದನ್ನು ಗೂಂಡಾಗಿರಿ ಎಂದು ಬಿಂಬಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

ಅಕ್ಟೋಬರ್‌‌ 13ರಲ್ಲಿ ಪರೀಕ್ಷೆ ಮುಗಿದರೂ ಇಲ್ಲೇ ಇದ್ದಾರೆ. ಪ್ರವೇಶ ಪಡೆದವರು ಹಾಗೂ ಪರೀಕ್ಷೆ ಇರುವವರು ಸೇರಿ 170 ಮಂದಿ ಮಾತ್ರ ಇರಬೇಕು. ಆದರೆ 600 ಮಂದಿ ಅನಧಿಕೃತವಾಗಿದ್ದಾರೆ. ಅವರ್‍ಯಾರೂ ಅಧಿಕೃತ ಅಲ್ಲ ಎಂದ ಅವರಿಗೆ, ‘ವಿದ್ಯಾರ್ಥಿಗಳಿಗೆ ಎರಡು ವರ್ಷಗಳಿಂದ ಇ.ಬಿ.ಎಲ್‌ ಹೆಚ್ಚುವರಿ ಹಣ ನೀಡಲಾಗಿಲ್ಲ ಯಾಕೆ?’ ಎಂದು ಪ್ರಶ್ನಿಸಿದಾಗ, ‘ಸರ್ಕಾರದಿಂದ ಹಣ ಬಂದಿಲ್ಲ’ ಎಂದರು.

“2019-20ನೇ ಸಾಲಿನ ವಿದ್ಯಾರ್ಥಿವೇತನ ಮಾತ್ರ ಬರುತ್ತಿದೆ. ಲಾಕ್‌ ಡೌನ್‌ ಜಾರಿಯಾದ ಸಮಯದ ಹಣವನ್ನು ಸರ್ಕಾರ ಕೊಡುವುದಿಲ್ಲ. ಇ.ಬಿ.ಎಲ್‌. ಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಬೆಂಗಳೂರಿಗೆ ಹೋಗಿ ಬಂದಿದ್ದು ಇ.ಬಿ.ಎಲ್‌. ಹಣವನ್ನು ನೀಡಬೇಕೆಂದು ಕೋರಿದ್ದೇವೆ. ಸರ್ಕಾರದ ಮಟ್ಟದಲ್ಲಿ ಆಗಬೇಕು. ಯಾವುದೇ ಹಣವೂ ದುರಪಯೋಗಿ ಆಗಿಲ್ಲ. 2021ನೇ ಸಾಲಿನಲ್ಲಿ ಆರು ತಿಂಗಳಿಗೆ ಮಾತ್ರ ಸ್ಕಾಲರ್‌ಶಿಪ್‌ ನೀಡಲಾಗಿದೆ. ಈ ವರ್ಷದ ಸೆಪ್ಟೆಂಬರ್‌, ಅಕ್ಟೋಬರ್‌ ತಿಂಗಳ ವೆಚ್ಚವನ್ನು ವಿಶ್ವವಿದ್ಯಾನಿಲಯದಿಂದ ಭರಿಸಬೇಕು. ವಿದ್ಯಾರ್ಥಿಗಳಿಗೆ ಬರಬೇಕಾದ ಇ.ಬಿ.ಎಲ್‌. ಬಂದರೆ ನಾವು ಅವರಿಗೆ ತಲುಪಿಸುತ್ತೇವೆ” ಎಂದು ಪ್ರತಿಕ್ರಿಯಿಸಿದರು.

ಸರ್ಕಾರ ಒಬ್ಬ ವಿದ್ಯಾರ್ಥಿಗೆ 1600 ರೂ.ಗಳನ್ನು ತಿಂಗಳಿಗೆ ನೀಡುತ್ತದೆ. ವಿಶ್ವವಿದ್ಯಾನಿಲಯದಿಂದ ಇ.ಬಿ.ಎಲ್‌. 300 ರೂ. ನೀಡಿ, ಒಂದು ತಿಂಗಳ ಮೆಸ್‌ ಬಿಲ್‌ 1900 ರೂ. ಭರಿಸಲಾಗುತ್ತಿದೆ. ಈ ಹಣ ದಿನಸಿ ವೆಚ್ಚವಾಗಿ ಹೋಗುತ್ತದೆ. ಅಡುಗೆ ಭಟ್ಟರಿಗೆ ವಿವಿ ಹಣ ನೀಡುತ್ತದೆ. ಲಾಕ್‌ಡೌನ್‌ ಸಮಯದಲ್ಲಿ ಹಾಸ್ಟೆಲ್‌ಗಳು ಇರಲಿಲ್ಲ. ಹೀಗಾಗಿ ಈ ಸಮಯದ ಹಣವನ್ನು ಸರ್ಕಾರ ನೀಡುವುದಿಲ್ಲ. ಕಳೆದ ವರ್ಷ ಸೆಪ್ಟೆಂಬರ್‌-ಅಕ್ಟೋಬರ್‌ ತಿಂಗಳಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿದೆವು. ವಿಶ್ವವಿದ್ಯಾನಿಲಯವೇ 38 ಲಕ್ಷ ರೂ.ಗಳನ್ನು ಭರಿಸಬೇಕಾಯಿತು. ಈ ಬಾರಿಯೂ ಅಷ್ಟೇ. ಆರು ತಿಂಗಳ ಹಣವನ್ನು ಮಾತ್ರ ಸರ್ಕಾರ ನೀಡುತ್ತದೆ. ಇನ್ನೆರಡು ತಿಂಗಳ ಹಣವನ್ನು ಸರ್ಕಾರವೇ ಭರಿಸಬೇಕಾಗುತ್ತದೆ ಎಂದು ಸಂಕಷ್ಟ ತೋಡಿಕೊಂಡರು.

ಮುಂದುವರಿದು ಮಾತನಾಡಿದ ಅವರು, “ಎರಡು ವರ್ಷಗಳಿಂದ ಇ.ಬಿ.ಎಲ್‌‌. ಹಣ ಬಂದಿಲ್ಲ. ಅದರ ಹಿಂದಿನ ವರ್ಷಗಳಲ್ಲಿಯೂ ಬಹಳ ವಿದ್ಯಾರ್ಥಿಗಳಿಗೆ ಇ.ಬಿ.ಎಲ್‌. ಬಂದಿಲ್ಲ. ಅದನ್ನೆಲ್ಲ ಸರಿ ಮಾಡಲಾಗುತ್ತಿದೆ. ನಾನು ನಿರ್ದೇಶಕನಾಗಿ ಅಧಿಕಾರಕ್ಕೆ ಒಂದು ವರ್ಷ, ಐದು ತಿಂಗಳಾಗಿದೆ. 28 ಲಕ್ಷ ರೂ. ಹೆಚ್ಚುವರಿ ಮೆಸ್‌ ಬಿಲ್‌ ಬಂದಿತ್ತು. ಈ ಹಿಂದೆ ಒಟ್ಟು 46 ಲಕ್ಷ ರೂ.ಗಳನ್ನು ವಾರ್ಡನ್‌ಗಳು, ಕ್ಲರ್ಕ್‌‌ಗಳು ಎಲ್ಲ ಸೇರಿ ತಿಂದಿದ್ದರು. ಅವರನ್ನೆಲ್ಲ ಹಿಡಿದು ತನಿಖೆ ಮಾಡಿಸಿದ್ದೇನೆ. ನಾನು ಯಾರ್‍ಯಾರನ್ನು ಹಿಡಿದಿದ್ದೇನೆಯೋ ಅವರೆಲ್ಲ ಈ ಪ್ರತಿಭಟನೆಯ ಹಿಂದೆ ಇದ್ದಾರೆ” ಎಂದು ಆರೋಪಿಸಿದರು.

“ನನ್ನ ಮೇಲೆ ನೂರು ರೂಪಾಯಿ ಭ್ರಷ್ಟಾಚಾರ ಇದ್ದರು ನನ್ನನ್ನು ಜೈಲಿಗೆ ಹಾಕಿರಿ. ನಾನು ಸಹ ಪ್ರಾಧ್ಯಾಪಕ. ನನ್ನ ಮೇಲೆ ಆರೋಪ ಬಂದರೆ ಇವತ್ತೇ ಈ ನಿರ್ದೇಶಕನ ಸ್ಥಾನ ಬಿಡುತ್ತೇನೆ” ಎಂದು ಸ್ಪಷ್ಟಪಡಿಸಿದರು.

ಎಲ್ಲ ಹಾಸ್ಟೆಲ್‌ಗಳನ್ನು ಸೇರಿ 4,300 ವಿದ್ಯಾರ್ಥಿಗಳು ಇದ್ದಾರೆ. ಕೇವಲ 2% ವಿದ್ಯಾರ್ಥಿಗಳು ಮಾತ್ರ ಹೀಗೆ ತಿರುಗಿ ಬೀಳುತ್ತಿದ್ದಾರೆ. ಕೆಲವರನ್ನು ನನಗಾಗದವರು ಛೂ ಬಿಡುತ್ತಿದ್ದಾರೆ. ನನ್ನಿಂದ ರೋಲ್‌ಕಾಲ್‌ ಮಾಡಲು ನೋಡುತ್ತಿದ್ದಾರೆ ಎಂದು ದೂರಿದರು.

ಪರೀಕ್ಷೆ ಮುಗಿದ ಮೇಲೂ ಮೆಸ್‌ ನಡೆಸಿದರೆ ಏಕೆ ಮೆಸ್‌ ನಡೆಸುತ್ತಿದ್ದೀರಿ ಎಂದು ಆಡಿಟರ್‌ ನನ್ನನ್ನು ಕೇಳುತ್ತಾರೆ. ಮುನ್ನೂರು ಜನರು ಇರುವಲ್ಲಿ, ಐನ್ನೂರು ಜನರಿಗೆ ಊಟ ಯಾಕೆ ಹಾಕಿದ್ದೀರಿ ಎಂದು ನನ್ನನ್ನು ಪ್ರಶ್ನಿಸುತ್ತಾರೆ” ನಾನೇನು ಉತ್ತರ ನೀಡಲಿ” ಎಂದು ಕೇಳಿದರು.

“ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿವೆ. ಈಗ ಉಳಿದಿರುವ ವಿದ್ಯಾರ್ಥಿಗಳನ್ನು ಖಾಲಿ ಮಾಡಿಸಲೇಬೇಕಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುವ ವಿದ್ಯಾರ್ಥಿಗಳು ಇದ್ದಾರೆ. ಅವಧಿ ಮುಗಿದ ಮೇಲೆಯೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲ್ಲ. ಅಕ್ಟೋಬರ್‌ 31ಕ್ಕೆ ಕ್ಲೋಸ್‌ ಮಾಡಿಸಿ, ಹೊಸ ವಿದ್ಯಾರ್ಥಿಗಳಿಗೆ ನವೆಂಬರ್‌ 1ರಿಂದ ಅವಕಾಶ ನೀಡಲಾಗುತ್ತಿದೆ” ಎಂದರು.


ಇದನ್ನೂ ಓದಿರಿ: ನೀಟ್ ವಿರೋಧಿಸಿ SFI ಯಿಂದ ದೇಶಾದ್ಯಂತ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...