Homeಕರ್ನಾಟಕExclusive | ವಾರ್ಡನ್‌ಗಳು, ಕ್ಲರ್ಕ್‌ಗಳು ಸೇರಿ 46 ಲಕ್ಷ ರೂ. ನುಂಗಿದ್ದರು: ಮೈಸೂರು ವಿವಿ ಡೀನ್‌‌

Exclusive | ವಾರ್ಡನ್‌ಗಳು, ಕ್ಲರ್ಕ್‌ಗಳು ಸೇರಿ 46 ಲಕ್ಷ ರೂ. ನುಂಗಿದ್ದರು: ಮೈಸೂರು ವಿವಿ ಡೀನ್‌‌

- Advertisement -
- Advertisement -

ಮೈಸೂರು ವಿಶ್ವವಿದ್ಯಾನಿಲಯದ ಪಿಜಿ ಹಾಸ್ಟೆಲ್‌ಗಳಲ್ಲಿ ಊಟ ನಿಲ್ಲಿಸಲಾಗಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದಾಗ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಡಾ.ಎಸ್‌.ಟಿ.ರಾಮಚಂದ್ರ ವಿದ್ಯಾರ್ಥಿಗಳ ಮೇಲೆ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೈರಲ್‌ ಆಗಿದೆ.

ಕೋವಿಡ್ ಅವಧಿಯಲ್ಲಿ ಹಾಸ್ಟೆಲ್ ಹಾಗೂ ಮೆಸ್‌ಗಳನ್ನು ಮುಚ್ಚಲಾಗಿತ್ತು. ಕಡಿಮೆ ಅವಧಿಯಲ್ಲಿ ಹಾಸ್ಟೆಲ್‌ ತೆರೆದು ಪರೀಕ್ಷೆಗಳನ್ನು ನಡೆಸಲಾಯಿತು. ಈಗ ಹೊಸ ವಿದ್ಯಾರ್ಥಿಗಳ ಪ್ರವೇಶಾತಿಯೂ ನಡೆಯುತ್ತಿದೆ. ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿಗಳು ಮನೆಗೆ ತೆರೆಯದೆ ಹಾಸ್ಟೆಲ್‌ಗಳಲ್ಲೇ ಉಳಿದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುತ್ತಿದ್ದಾರೆ. ಆದರೆ ಊಟ ಅವಧಿ ಮುಗಿದ ವಿದ್ಯಾರ್ಥಿಗಳಿಗೆ ಊಟ ನೀಡುವುದಿಲ್ಲ ಎಂದು ಮೈಸೂರು ವಿವಿ ತಿಳಿಸಿತ್ತು. ಹೀಗೆ ಉಂಟಾಗಿರುವ ಗೊಂದಲದ ವೇಳೆ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕ ಡಾ.ಎಸ್.ಟಿ.ರಾಮಚಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿದಾಗ ‘ಗೂಂಡಾಗಿರಿ’ ಮಾಡಿದ್ದಾರೆ ಎಂದು ಆರೋಪಿಸಿ ವಿಡಿಯೋ ಹರಿಬಿಡಲಾಗಿದೆ.

ಇದರ ಕುರಿತು ಪ್ರತಿಕ್ರಿಯೆ ಪಡೆಯಲು ರಾಮಚಂದ್ರ ಅವರನ್ನು ಸಂಪರ್ಕಿಸಿದಾಗ ಅವರು ಘಟನೆಯ ವಿವರ ಹಾಗೂ ಮೈಸೂರು ವಿವಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. “ನಾನು ತನಿಖೆ ನಡೆಸಿದ್ದರಿಂದ ಸಿಕ್ಕಿಬಿದ್ದವರು ಕೆಲವರನ್ನು ಛೂ ಬಿಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಾದ ಡಾ.ಎಸ್.ಟಿ.ರಾಮಚಂದ್ರ

“72 ವಿದ್ಯಾರ್ಥಿಗಳಿಗೆ ಮಾತ್ರ ಮೌಖಿಕ ಸಂದರ್ಶನ (ವೈವಾ), ಪ್ರಾಯೋಗಿಕ ಪರೀಕ್ಷೆ ಹಾಗೂ ಡೆಸಾರ್ಟೇಷನ್‌ ಸಲ್ಲಿಕೆ ಬಾಕಿ ಇದೆ. ಉಳಿದ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರಕ್ರಿಯೆ ಮುಗಿದಿದೆ. ಪರೀಕ್ಷೆ ಮುಗಿದವರು ಮನೆಗೆ ಹೋಗಬೇಕಿತ್ತು. ಆದರೆ ಹೋಗಿಲ್ಲ. ವಿಭಾಗಗಳಲ್ಲಿ ಹೊಸದಾಗಿ ಪ್ರವೇಶ ಪಡೆದವರಿಗೆ (ಹಾಸ್ಟೆಲ್‌ಗೆ ಪ್ರವೇಶ ಪಡೆಯದಿದ್ದರೂ), ಪರೀಕ್ಷೆ ಇದ್ದವರಿಗೆ ಸೇರಿ 250 ಮಂದಿಗೆ ಮಂಗಳವಾರ ಅಡುಗೆ ಮಾಡಿಸಲಾಗಿತ್ತು. ಯಾರಿಗೂ ಊಟ ಮಾಡಲು ಅವಕಾಶ ನೀಡದೆ ವಿಶ್ವ ಪ್ರಸಾದ್ ಎಂಬವವರು ಮೆಸ್‌ಗೆ ಬೀಗ ಹಾಕಿದ್ದರು. ಪರೀಕ್ಷೆ ಇದ್ದ 72 ಮಂದಿ ವಿದ್ಯಾರ್ಥಿಗಳು ದೂರಿದಾಗ ಸ್ಥಳಕ್ಕೆ ಭೇಟಿ ನೀಡಲಾಯಿತು. ರಾಜಾನಂದ ಎಂಬವರು ನನ್ನ ಕೈ ಎಳೆಯೋದು,  ಮೈಮೇಲೆ ಬೀಳೋದು ಮಾಡುತ್ತಿದ್ದ. ಹೊಡೆಯುತ್ತೀಯೇನಪ್ಪ, ಬಾ ಹೊಡಿ ಎಂದು ನಾನು ಮುನ್ನುಗ್ಗಿದೆ ಅಷ್ಟೆ. ಅದನ್ನು ಗೂಂಡಾಗಿರಿ ಎಂದು ಬಿಂಬಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

ಅಕ್ಟೋಬರ್‌‌ 13ರಲ್ಲಿ ಪರೀಕ್ಷೆ ಮುಗಿದರೂ ಇಲ್ಲೇ ಇದ್ದಾರೆ. ಪ್ರವೇಶ ಪಡೆದವರು ಹಾಗೂ ಪರೀಕ್ಷೆ ಇರುವವರು ಸೇರಿ 170 ಮಂದಿ ಮಾತ್ರ ಇರಬೇಕು. ಆದರೆ 600 ಮಂದಿ ಅನಧಿಕೃತವಾಗಿದ್ದಾರೆ. ಅವರ್‍ಯಾರೂ ಅಧಿಕೃತ ಅಲ್ಲ ಎಂದ ಅವರಿಗೆ, ‘ವಿದ್ಯಾರ್ಥಿಗಳಿಗೆ ಎರಡು ವರ್ಷಗಳಿಂದ ಇ.ಬಿ.ಎಲ್‌ ಹೆಚ್ಚುವರಿ ಹಣ ನೀಡಲಾಗಿಲ್ಲ ಯಾಕೆ?’ ಎಂದು ಪ್ರಶ್ನಿಸಿದಾಗ, ‘ಸರ್ಕಾರದಿಂದ ಹಣ ಬಂದಿಲ್ಲ’ ಎಂದರು.

“2019-20ನೇ ಸಾಲಿನ ವಿದ್ಯಾರ್ಥಿವೇತನ ಮಾತ್ರ ಬರುತ್ತಿದೆ. ಲಾಕ್‌ ಡೌನ್‌ ಜಾರಿಯಾದ ಸಮಯದ ಹಣವನ್ನು ಸರ್ಕಾರ ಕೊಡುವುದಿಲ್ಲ. ಇ.ಬಿ.ಎಲ್‌. ಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಬೆಂಗಳೂರಿಗೆ ಹೋಗಿ ಬಂದಿದ್ದು ಇ.ಬಿ.ಎಲ್‌. ಹಣವನ್ನು ನೀಡಬೇಕೆಂದು ಕೋರಿದ್ದೇವೆ. ಸರ್ಕಾರದ ಮಟ್ಟದಲ್ಲಿ ಆಗಬೇಕು. ಯಾವುದೇ ಹಣವೂ ದುರಪಯೋಗಿ ಆಗಿಲ್ಲ. 2021ನೇ ಸಾಲಿನಲ್ಲಿ ಆರು ತಿಂಗಳಿಗೆ ಮಾತ್ರ ಸ್ಕಾಲರ್‌ಶಿಪ್‌ ನೀಡಲಾಗಿದೆ. ಈ ವರ್ಷದ ಸೆಪ್ಟೆಂಬರ್‌, ಅಕ್ಟೋಬರ್‌ ತಿಂಗಳ ವೆಚ್ಚವನ್ನು ವಿಶ್ವವಿದ್ಯಾನಿಲಯದಿಂದ ಭರಿಸಬೇಕು. ವಿದ್ಯಾರ್ಥಿಗಳಿಗೆ ಬರಬೇಕಾದ ಇ.ಬಿ.ಎಲ್‌. ಬಂದರೆ ನಾವು ಅವರಿಗೆ ತಲುಪಿಸುತ್ತೇವೆ” ಎಂದು ಪ್ರತಿಕ್ರಿಯಿಸಿದರು.

ಸರ್ಕಾರ ಒಬ್ಬ ವಿದ್ಯಾರ್ಥಿಗೆ 1600 ರೂ.ಗಳನ್ನು ತಿಂಗಳಿಗೆ ನೀಡುತ್ತದೆ. ವಿಶ್ವವಿದ್ಯಾನಿಲಯದಿಂದ ಇ.ಬಿ.ಎಲ್‌. 300 ರೂ. ನೀಡಿ, ಒಂದು ತಿಂಗಳ ಮೆಸ್‌ ಬಿಲ್‌ 1900 ರೂ. ಭರಿಸಲಾಗುತ್ತಿದೆ. ಈ ಹಣ ದಿನಸಿ ವೆಚ್ಚವಾಗಿ ಹೋಗುತ್ತದೆ. ಅಡುಗೆ ಭಟ್ಟರಿಗೆ ವಿವಿ ಹಣ ನೀಡುತ್ತದೆ. ಲಾಕ್‌ಡೌನ್‌ ಸಮಯದಲ್ಲಿ ಹಾಸ್ಟೆಲ್‌ಗಳು ಇರಲಿಲ್ಲ. ಹೀಗಾಗಿ ಈ ಸಮಯದ ಹಣವನ್ನು ಸರ್ಕಾರ ನೀಡುವುದಿಲ್ಲ. ಕಳೆದ ವರ್ಷ ಸೆಪ್ಟೆಂಬರ್‌-ಅಕ್ಟೋಬರ್‌ ತಿಂಗಳಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿದೆವು. ವಿಶ್ವವಿದ್ಯಾನಿಲಯವೇ 38 ಲಕ್ಷ ರೂ.ಗಳನ್ನು ಭರಿಸಬೇಕಾಯಿತು. ಈ ಬಾರಿಯೂ ಅಷ್ಟೇ. ಆರು ತಿಂಗಳ ಹಣವನ್ನು ಮಾತ್ರ ಸರ್ಕಾರ ನೀಡುತ್ತದೆ. ಇನ್ನೆರಡು ತಿಂಗಳ ಹಣವನ್ನು ಸರ್ಕಾರವೇ ಭರಿಸಬೇಕಾಗುತ್ತದೆ ಎಂದು ಸಂಕಷ್ಟ ತೋಡಿಕೊಂಡರು.

ಮುಂದುವರಿದು ಮಾತನಾಡಿದ ಅವರು, “ಎರಡು ವರ್ಷಗಳಿಂದ ಇ.ಬಿ.ಎಲ್‌‌. ಹಣ ಬಂದಿಲ್ಲ. ಅದರ ಹಿಂದಿನ ವರ್ಷಗಳಲ್ಲಿಯೂ ಬಹಳ ವಿದ್ಯಾರ್ಥಿಗಳಿಗೆ ಇ.ಬಿ.ಎಲ್‌. ಬಂದಿಲ್ಲ. ಅದನ್ನೆಲ್ಲ ಸರಿ ಮಾಡಲಾಗುತ್ತಿದೆ. ನಾನು ನಿರ್ದೇಶಕನಾಗಿ ಅಧಿಕಾರಕ್ಕೆ ಒಂದು ವರ್ಷ, ಐದು ತಿಂಗಳಾಗಿದೆ. 28 ಲಕ್ಷ ರೂ. ಹೆಚ್ಚುವರಿ ಮೆಸ್‌ ಬಿಲ್‌ ಬಂದಿತ್ತು. ಈ ಹಿಂದೆ ಒಟ್ಟು 46 ಲಕ್ಷ ರೂ.ಗಳನ್ನು ವಾರ್ಡನ್‌ಗಳು, ಕ್ಲರ್ಕ್‌‌ಗಳು ಎಲ್ಲ ಸೇರಿ ತಿಂದಿದ್ದರು. ಅವರನ್ನೆಲ್ಲ ಹಿಡಿದು ತನಿಖೆ ಮಾಡಿಸಿದ್ದೇನೆ. ನಾನು ಯಾರ್‍ಯಾರನ್ನು ಹಿಡಿದಿದ್ದೇನೆಯೋ ಅವರೆಲ್ಲ ಈ ಪ್ರತಿಭಟನೆಯ ಹಿಂದೆ ಇದ್ದಾರೆ” ಎಂದು ಆರೋಪಿಸಿದರು.

“ನನ್ನ ಮೇಲೆ ನೂರು ರೂಪಾಯಿ ಭ್ರಷ್ಟಾಚಾರ ಇದ್ದರು ನನ್ನನ್ನು ಜೈಲಿಗೆ ಹಾಕಿರಿ. ನಾನು ಸಹ ಪ್ರಾಧ್ಯಾಪಕ. ನನ್ನ ಮೇಲೆ ಆರೋಪ ಬಂದರೆ ಇವತ್ತೇ ಈ ನಿರ್ದೇಶಕನ ಸ್ಥಾನ ಬಿಡುತ್ತೇನೆ” ಎಂದು ಸ್ಪಷ್ಟಪಡಿಸಿದರು.

ಎಲ್ಲ ಹಾಸ್ಟೆಲ್‌ಗಳನ್ನು ಸೇರಿ 4,300 ವಿದ್ಯಾರ್ಥಿಗಳು ಇದ್ದಾರೆ. ಕೇವಲ 2% ವಿದ್ಯಾರ್ಥಿಗಳು ಮಾತ್ರ ಹೀಗೆ ತಿರುಗಿ ಬೀಳುತ್ತಿದ್ದಾರೆ. ಕೆಲವರನ್ನು ನನಗಾಗದವರು ಛೂ ಬಿಡುತ್ತಿದ್ದಾರೆ. ನನ್ನಿಂದ ರೋಲ್‌ಕಾಲ್‌ ಮಾಡಲು ನೋಡುತ್ತಿದ್ದಾರೆ ಎಂದು ದೂರಿದರು.

ಪರೀಕ್ಷೆ ಮುಗಿದ ಮೇಲೂ ಮೆಸ್‌ ನಡೆಸಿದರೆ ಏಕೆ ಮೆಸ್‌ ನಡೆಸುತ್ತಿದ್ದೀರಿ ಎಂದು ಆಡಿಟರ್‌ ನನ್ನನ್ನು ಕೇಳುತ್ತಾರೆ. ಮುನ್ನೂರು ಜನರು ಇರುವಲ್ಲಿ, ಐನ್ನೂರು ಜನರಿಗೆ ಊಟ ಯಾಕೆ ಹಾಕಿದ್ದೀರಿ ಎಂದು ನನ್ನನ್ನು ಪ್ರಶ್ನಿಸುತ್ತಾರೆ” ನಾನೇನು ಉತ್ತರ ನೀಡಲಿ” ಎಂದು ಕೇಳಿದರು.

“ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿವೆ. ಈಗ ಉಳಿದಿರುವ ವಿದ್ಯಾರ್ಥಿಗಳನ್ನು ಖಾಲಿ ಮಾಡಿಸಲೇಬೇಕಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುವ ವಿದ್ಯಾರ್ಥಿಗಳು ಇದ್ದಾರೆ. ಅವಧಿ ಮುಗಿದ ಮೇಲೆಯೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲ್ಲ. ಅಕ್ಟೋಬರ್‌ 31ಕ್ಕೆ ಕ್ಲೋಸ್‌ ಮಾಡಿಸಿ, ಹೊಸ ವಿದ್ಯಾರ್ಥಿಗಳಿಗೆ ನವೆಂಬರ್‌ 1ರಿಂದ ಅವಕಾಶ ನೀಡಲಾಗುತ್ತಿದೆ” ಎಂದರು.


ಇದನ್ನೂ ಓದಿರಿ: ನೀಟ್ ವಿರೋಧಿಸಿ SFI ಯಿಂದ ದೇಶಾದ್ಯಂತ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...