Homeಕರ್ನಾಟಕExclusive | ವಾರ್ಡನ್‌ಗಳು, ಕ್ಲರ್ಕ್‌ಗಳು ಸೇರಿ 46 ಲಕ್ಷ ರೂ. ನುಂಗಿದ್ದರು: ಮೈಸೂರು ವಿವಿ ಡೀನ್‌‌

Exclusive | ವಾರ್ಡನ್‌ಗಳು, ಕ್ಲರ್ಕ್‌ಗಳು ಸೇರಿ 46 ಲಕ್ಷ ರೂ. ನುಂಗಿದ್ದರು: ಮೈಸೂರು ವಿವಿ ಡೀನ್‌‌

- Advertisement -
- Advertisement -

ಮೈಸೂರು ವಿಶ್ವವಿದ್ಯಾನಿಲಯದ ಪಿಜಿ ಹಾಸ್ಟೆಲ್‌ಗಳಲ್ಲಿ ಊಟ ನಿಲ್ಲಿಸಲಾಗಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದಾಗ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಡಾ.ಎಸ್‌.ಟಿ.ರಾಮಚಂದ್ರ ವಿದ್ಯಾರ್ಥಿಗಳ ಮೇಲೆ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೈರಲ್‌ ಆಗಿದೆ.

ಕೋವಿಡ್ ಅವಧಿಯಲ್ಲಿ ಹಾಸ್ಟೆಲ್ ಹಾಗೂ ಮೆಸ್‌ಗಳನ್ನು ಮುಚ್ಚಲಾಗಿತ್ತು. ಕಡಿಮೆ ಅವಧಿಯಲ್ಲಿ ಹಾಸ್ಟೆಲ್‌ ತೆರೆದು ಪರೀಕ್ಷೆಗಳನ್ನು ನಡೆಸಲಾಯಿತು. ಈಗ ಹೊಸ ವಿದ್ಯಾರ್ಥಿಗಳ ಪ್ರವೇಶಾತಿಯೂ ನಡೆಯುತ್ತಿದೆ. ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿಗಳು ಮನೆಗೆ ತೆರೆಯದೆ ಹಾಸ್ಟೆಲ್‌ಗಳಲ್ಲೇ ಉಳಿದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುತ್ತಿದ್ದಾರೆ. ಆದರೆ ಊಟ ಅವಧಿ ಮುಗಿದ ವಿದ್ಯಾರ್ಥಿಗಳಿಗೆ ಊಟ ನೀಡುವುದಿಲ್ಲ ಎಂದು ಮೈಸೂರು ವಿವಿ ತಿಳಿಸಿತ್ತು. ಹೀಗೆ ಉಂಟಾಗಿರುವ ಗೊಂದಲದ ವೇಳೆ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕ ಡಾ.ಎಸ್.ಟಿ.ರಾಮಚಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿದಾಗ ‘ಗೂಂಡಾಗಿರಿ’ ಮಾಡಿದ್ದಾರೆ ಎಂದು ಆರೋಪಿಸಿ ವಿಡಿಯೋ ಹರಿಬಿಡಲಾಗಿದೆ.

ಇದರ ಕುರಿತು ಪ್ರತಿಕ್ರಿಯೆ ಪಡೆಯಲು ರಾಮಚಂದ್ರ ಅವರನ್ನು ಸಂಪರ್ಕಿಸಿದಾಗ ಅವರು ಘಟನೆಯ ವಿವರ ಹಾಗೂ ಮೈಸೂರು ವಿವಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. “ನಾನು ತನಿಖೆ ನಡೆಸಿದ್ದರಿಂದ ಸಿಕ್ಕಿಬಿದ್ದವರು ಕೆಲವರನ್ನು ಛೂ ಬಿಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಾದ ಡಾ.ಎಸ್.ಟಿ.ರಾಮಚಂದ್ರ

“72 ವಿದ್ಯಾರ್ಥಿಗಳಿಗೆ ಮಾತ್ರ ಮೌಖಿಕ ಸಂದರ್ಶನ (ವೈವಾ), ಪ್ರಾಯೋಗಿಕ ಪರೀಕ್ಷೆ ಹಾಗೂ ಡೆಸಾರ್ಟೇಷನ್‌ ಸಲ್ಲಿಕೆ ಬಾಕಿ ಇದೆ. ಉಳಿದ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರಕ್ರಿಯೆ ಮುಗಿದಿದೆ. ಪರೀಕ್ಷೆ ಮುಗಿದವರು ಮನೆಗೆ ಹೋಗಬೇಕಿತ್ತು. ಆದರೆ ಹೋಗಿಲ್ಲ. ವಿಭಾಗಗಳಲ್ಲಿ ಹೊಸದಾಗಿ ಪ್ರವೇಶ ಪಡೆದವರಿಗೆ (ಹಾಸ್ಟೆಲ್‌ಗೆ ಪ್ರವೇಶ ಪಡೆಯದಿದ್ದರೂ), ಪರೀಕ್ಷೆ ಇದ್ದವರಿಗೆ ಸೇರಿ 250 ಮಂದಿಗೆ ಮಂಗಳವಾರ ಅಡುಗೆ ಮಾಡಿಸಲಾಗಿತ್ತು. ಯಾರಿಗೂ ಊಟ ಮಾಡಲು ಅವಕಾಶ ನೀಡದೆ ವಿಶ್ವ ಪ್ರಸಾದ್ ಎಂಬವವರು ಮೆಸ್‌ಗೆ ಬೀಗ ಹಾಕಿದ್ದರು. ಪರೀಕ್ಷೆ ಇದ್ದ 72 ಮಂದಿ ವಿದ್ಯಾರ್ಥಿಗಳು ದೂರಿದಾಗ ಸ್ಥಳಕ್ಕೆ ಭೇಟಿ ನೀಡಲಾಯಿತು. ರಾಜಾನಂದ ಎಂಬವರು ನನ್ನ ಕೈ ಎಳೆಯೋದು,  ಮೈಮೇಲೆ ಬೀಳೋದು ಮಾಡುತ್ತಿದ್ದ. ಹೊಡೆಯುತ್ತೀಯೇನಪ್ಪ, ಬಾ ಹೊಡಿ ಎಂದು ನಾನು ಮುನ್ನುಗ್ಗಿದೆ ಅಷ್ಟೆ. ಅದನ್ನು ಗೂಂಡಾಗಿರಿ ಎಂದು ಬಿಂಬಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

ಅಕ್ಟೋಬರ್‌‌ 13ರಲ್ಲಿ ಪರೀಕ್ಷೆ ಮುಗಿದರೂ ಇಲ್ಲೇ ಇದ್ದಾರೆ. ಪ್ರವೇಶ ಪಡೆದವರು ಹಾಗೂ ಪರೀಕ್ಷೆ ಇರುವವರು ಸೇರಿ 170 ಮಂದಿ ಮಾತ್ರ ಇರಬೇಕು. ಆದರೆ 600 ಮಂದಿ ಅನಧಿಕೃತವಾಗಿದ್ದಾರೆ. ಅವರ್‍ಯಾರೂ ಅಧಿಕೃತ ಅಲ್ಲ ಎಂದ ಅವರಿಗೆ, ‘ವಿದ್ಯಾರ್ಥಿಗಳಿಗೆ ಎರಡು ವರ್ಷಗಳಿಂದ ಇ.ಬಿ.ಎಲ್‌ ಹೆಚ್ಚುವರಿ ಹಣ ನೀಡಲಾಗಿಲ್ಲ ಯಾಕೆ?’ ಎಂದು ಪ್ರಶ್ನಿಸಿದಾಗ, ‘ಸರ್ಕಾರದಿಂದ ಹಣ ಬಂದಿಲ್ಲ’ ಎಂದರು.

“2019-20ನೇ ಸಾಲಿನ ವಿದ್ಯಾರ್ಥಿವೇತನ ಮಾತ್ರ ಬರುತ್ತಿದೆ. ಲಾಕ್‌ ಡೌನ್‌ ಜಾರಿಯಾದ ಸಮಯದ ಹಣವನ್ನು ಸರ್ಕಾರ ಕೊಡುವುದಿಲ್ಲ. ಇ.ಬಿ.ಎಲ್‌. ಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಬೆಂಗಳೂರಿಗೆ ಹೋಗಿ ಬಂದಿದ್ದು ಇ.ಬಿ.ಎಲ್‌. ಹಣವನ್ನು ನೀಡಬೇಕೆಂದು ಕೋರಿದ್ದೇವೆ. ಸರ್ಕಾರದ ಮಟ್ಟದಲ್ಲಿ ಆಗಬೇಕು. ಯಾವುದೇ ಹಣವೂ ದುರಪಯೋಗಿ ಆಗಿಲ್ಲ. 2021ನೇ ಸಾಲಿನಲ್ಲಿ ಆರು ತಿಂಗಳಿಗೆ ಮಾತ್ರ ಸ್ಕಾಲರ್‌ಶಿಪ್‌ ನೀಡಲಾಗಿದೆ. ಈ ವರ್ಷದ ಸೆಪ್ಟೆಂಬರ್‌, ಅಕ್ಟೋಬರ್‌ ತಿಂಗಳ ವೆಚ್ಚವನ್ನು ವಿಶ್ವವಿದ್ಯಾನಿಲಯದಿಂದ ಭರಿಸಬೇಕು. ವಿದ್ಯಾರ್ಥಿಗಳಿಗೆ ಬರಬೇಕಾದ ಇ.ಬಿ.ಎಲ್‌. ಬಂದರೆ ನಾವು ಅವರಿಗೆ ತಲುಪಿಸುತ್ತೇವೆ” ಎಂದು ಪ್ರತಿಕ್ರಿಯಿಸಿದರು.

ಸರ್ಕಾರ ಒಬ್ಬ ವಿದ್ಯಾರ್ಥಿಗೆ 1600 ರೂ.ಗಳನ್ನು ತಿಂಗಳಿಗೆ ನೀಡುತ್ತದೆ. ವಿಶ್ವವಿದ್ಯಾನಿಲಯದಿಂದ ಇ.ಬಿ.ಎಲ್‌. 300 ರೂ. ನೀಡಿ, ಒಂದು ತಿಂಗಳ ಮೆಸ್‌ ಬಿಲ್‌ 1900 ರೂ. ಭರಿಸಲಾಗುತ್ತಿದೆ. ಈ ಹಣ ದಿನಸಿ ವೆಚ್ಚವಾಗಿ ಹೋಗುತ್ತದೆ. ಅಡುಗೆ ಭಟ್ಟರಿಗೆ ವಿವಿ ಹಣ ನೀಡುತ್ತದೆ. ಲಾಕ್‌ಡೌನ್‌ ಸಮಯದಲ್ಲಿ ಹಾಸ್ಟೆಲ್‌ಗಳು ಇರಲಿಲ್ಲ. ಹೀಗಾಗಿ ಈ ಸಮಯದ ಹಣವನ್ನು ಸರ್ಕಾರ ನೀಡುವುದಿಲ್ಲ. ಕಳೆದ ವರ್ಷ ಸೆಪ್ಟೆಂಬರ್‌-ಅಕ್ಟೋಬರ್‌ ತಿಂಗಳಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿದೆವು. ವಿಶ್ವವಿದ್ಯಾನಿಲಯವೇ 38 ಲಕ್ಷ ರೂ.ಗಳನ್ನು ಭರಿಸಬೇಕಾಯಿತು. ಈ ಬಾರಿಯೂ ಅಷ್ಟೇ. ಆರು ತಿಂಗಳ ಹಣವನ್ನು ಮಾತ್ರ ಸರ್ಕಾರ ನೀಡುತ್ತದೆ. ಇನ್ನೆರಡು ತಿಂಗಳ ಹಣವನ್ನು ಸರ್ಕಾರವೇ ಭರಿಸಬೇಕಾಗುತ್ತದೆ ಎಂದು ಸಂಕಷ್ಟ ತೋಡಿಕೊಂಡರು.

ಮುಂದುವರಿದು ಮಾತನಾಡಿದ ಅವರು, “ಎರಡು ವರ್ಷಗಳಿಂದ ಇ.ಬಿ.ಎಲ್‌‌. ಹಣ ಬಂದಿಲ್ಲ. ಅದರ ಹಿಂದಿನ ವರ್ಷಗಳಲ್ಲಿಯೂ ಬಹಳ ವಿದ್ಯಾರ್ಥಿಗಳಿಗೆ ಇ.ಬಿ.ಎಲ್‌. ಬಂದಿಲ್ಲ. ಅದನ್ನೆಲ್ಲ ಸರಿ ಮಾಡಲಾಗುತ್ತಿದೆ. ನಾನು ನಿರ್ದೇಶಕನಾಗಿ ಅಧಿಕಾರಕ್ಕೆ ಒಂದು ವರ್ಷ, ಐದು ತಿಂಗಳಾಗಿದೆ. 28 ಲಕ್ಷ ರೂ. ಹೆಚ್ಚುವರಿ ಮೆಸ್‌ ಬಿಲ್‌ ಬಂದಿತ್ತು. ಈ ಹಿಂದೆ ಒಟ್ಟು 46 ಲಕ್ಷ ರೂ.ಗಳನ್ನು ವಾರ್ಡನ್‌ಗಳು, ಕ್ಲರ್ಕ್‌‌ಗಳು ಎಲ್ಲ ಸೇರಿ ತಿಂದಿದ್ದರು. ಅವರನ್ನೆಲ್ಲ ಹಿಡಿದು ತನಿಖೆ ಮಾಡಿಸಿದ್ದೇನೆ. ನಾನು ಯಾರ್‍ಯಾರನ್ನು ಹಿಡಿದಿದ್ದೇನೆಯೋ ಅವರೆಲ್ಲ ಈ ಪ್ರತಿಭಟನೆಯ ಹಿಂದೆ ಇದ್ದಾರೆ” ಎಂದು ಆರೋಪಿಸಿದರು.

“ನನ್ನ ಮೇಲೆ ನೂರು ರೂಪಾಯಿ ಭ್ರಷ್ಟಾಚಾರ ಇದ್ದರು ನನ್ನನ್ನು ಜೈಲಿಗೆ ಹಾಕಿರಿ. ನಾನು ಸಹ ಪ್ರಾಧ್ಯಾಪಕ. ನನ್ನ ಮೇಲೆ ಆರೋಪ ಬಂದರೆ ಇವತ್ತೇ ಈ ನಿರ್ದೇಶಕನ ಸ್ಥಾನ ಬಿಡುತ್ತೇನೆ” ಎಂದು ಸ್ಪಷ್ಟಪಡಿಸಿದರು.

ಎಲ್ಲ ಹಾಸ್ಟೆಲ್‌ಗಳನ್ನು ಸೇರಿ 4,300 ವಿದ್ಯಾರ್ಥಿಗಳು ಇದ್ದಾರೆ. ಕೇವಲ 2% ವಿದ್ಯಾರ್ಥಿಗಳು ಮಾತ್ರ ಹೀಗೆ ತಿರುಗಿ ಬೀಳುತ್ತಿದ್ದಾರೆ. ಕೆಲವರನ್ನು ನನಗಾಗದವರು ಛೂ ಬಿಡುತ್ತಿದ್ದಾರೆ. ನನ್ನಿಂದ ರೋಲ್‌ಕಾಲ್‌ ಮಾಡಲು ನೋಡುತ್ತಿದ್ದಾರೆ ಎಂದು ದೂರಿದರು.

ಪರೀಕ್ಷೆ ಮುಗಿದ ಮೇಲೂ ಮೆಸ್‌ ನಡೆಸಿದರೆ ಏಕೆ ಮೆಸ್‌ ನಡೆಸುತ್ತಿದ್ದೀರಿ ಎಂದು ಆಡಿಟರ್‌ ನನ್ನನ್ನು ಕೇಳುತ್ತಾರೆ. ಮುನ್ನೂರು ಜನರು ಇರುವಲ್ಲಿ, ಐನ್ನೂರು ಜನರಿಗೆ ಊಟ ಯಾಕೆ ಹಾಕಿದ್ದೀರಿ ಎಂದು ನನ್ನನ್ನು ಪ್ರಶ್ನಿಸುತ್ತಾರೆ” ನಾನೇನು ಉತ್ತರ ನೀಡಲಿ” ಎಂದು ಕೇಳಿದರು.

“ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿವೆ. ಈಗ ಉಳಿದಿರುವ ವಿದ್ಯಾರ್ಥಿಗಳನ್ನು ಖಾಲಿ ಮಾಡಿಸಲೇಬೇಕಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುವ ವಿದ್ಯಾರ್ಥಿಗಳು ಇದ್ದಾರೆ. ಅವಧಿ ಮುಗಿದ ಮೇಲೆಯೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲ್ಲ. ಅಕ್ಟೋಬರ್‌ 31ಕ್ಕೆ ಕ್ಲೋಸ್‌ ಮಾಡಿಸಿ, ಹೊಸ ವಿದ್ಯಾರ್ಥಿಗಳಿಗೆ ನವೆಂಬರ್‌ 1ರಿಂದ ಅವಕಾಶ ನೀಡಲಾಗುತ್ತಿದೆ” ಎಂದರು.


ಇದನ್ನೂ ಓದಿರಿ: ನೀಟ್ ವಿರೋಧಿಸಿ SFI ಯಿಂದ ದೇಶಾದ್ಯಂತ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...