Homeಕರ್ನಾಟಕExclusive | ವಾರ್ಡನ್‌ಗಳು, ಕ್ಲರ್ಕ್‌ಗಳು ಸೇರಿ 46 ಲಕ್ಷ ರೂ. ನುಂಗಿದ್ದರು: ಮೈಸೂರು ವಿವಿ ಡೀನ್‌‌

Exclusive | ವಾರ್ಡನ್‌ಗಳು, ಕ್ಲರ್ಕ್‌ಗಳು ಸೇರಿ 46 ಲಕ್ಷ ರೂ. ನುಂಗಿದ್ದರು: ಮೈಸೂರು ವಿವಿ ಡೀನ್‌‌

- Advertisement -
- Advertisement -

ಮೈಸೂರು ವಿಶ್ವವಿದ್ಯಾನಿಲಯದ ಪಿಜಿ ಹಾಸ್ಟೆಲ್‌ಗಳಲ್ಲಿ ಊಟ ನಿಲ್ಲಿಸಲಾಗಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದಾಗ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಡಾ.ಎಸ್‌.ಟಿ.ರಾಮಚಂದ್ರ ವಿದ್ಯಾರ್ಥಿಗಳ ಮೇಲೆ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೈರಲ್‌ ಆಗಿದೆ.

ಕೋವಿಡ್ ಅವಧಿಯಲ್ಲಿ ಹಾಸ್ಟೆಲ್ ಹಾಗೂ ಮೆಸ್‌ಗಳನ್ನು ಮುಚ್ಚಲಾಗಿತ್ತು. ಕಡಿಮೆ ಅವಧಿಯಲ್ಲಿ ಹಾಸ್ಟೆಲ್‌ ತೆರೆದು ಪರೀಕ್ಷೆಗಳನ್ನು ನಡೆಸಲಾಯಿತು. ಈಗ ಹೊಸ ವಿದ್ಯಾರ್ಥಿಗಳ ಪ್ರವೇಶಾತಿಯೂ ನಡೆಯುತ್ತಿದೆ. ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿಗಳು ಮನೆಗೆ ತೆರೆಯದೆ ಹಾಸ್ಟೆಲ್‌ಗಳಲ್ಲೇ ಉಳಿದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುತ್ತಿದ್ದಾರೆ. ಆದರೆ ಊಟ ಅವಧಿ ಮುಗಿದ ವಿದ್ಯಾರ್ಥಿಗಳಿಗೆ ಊಟ ನೀಡುವುದಿಲ್ಲ ಎಂದು ಮೈಸೂರು ವಿವಿ ತಿಳಿಸಿತ್ತು. ಹೀಗೆ ಉಂಟಾಗಿರುವ ಗೊಂದಲದ ವೇಳೆ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕ ಡಾ.ಎಸ್.ಟಿ.ರಾಮಚಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿದಾಗ ‘ಗೂಂಡಾಗಿರಿ’ ಮಾಡಿದ್ದಾರೆ ಎಂದು ಆರೋಪಿಸಿ ವಿಡಿಯೋ ಹರಿಬಿಡಲಾಗಿದೆ.

ಇದರ ಕುರಿತು ಪ್ರತಿಕ್ರಿಯೆ ಪಡೆಯಲು ರಾಮಚಂದ್ರ ಅವರನ್ನು ಸಂಪರ್ಕಿಸಿದಾಗ ಅವರು ಘಟನೆಯ ವಿವರ ಹಾಗೂ ಮೈಸೂರು ವಿವಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. “ನಾನು ತನಿಖೆ ನಡೆಸಿದ್ದರಿಂದ ಸಿಕ್ಕಿಬಿದ್ದವರು ಕೆಲವರನ್ನು ಛೂ ಬಿಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಾದ ಡಾ.ಎಸ್.ಟಿ.ರಾಮಚಂದ್ರ

“72 ವಿದ್ಯಾರ್ಥಿಗಳಿಗೆ ಮಾತ್ರ ಮೌಖಿಕ ಸಂದರ್ಶನ (ವೈವಾ), ಪ್ರಾಯೋಗಿಕ ಪರೀಕ್ಷೆ ಹಾಗೂ ಡೆಸಾರ್ಟೇಷನ್‌ ಸಲ್ಲಿಕೆ ಬಾಕಿ ಇದೆ. ಉಳಿದ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರಕ್ರಿಯೆ ಮುಗಿದಿದೆ. ಪರೀಕ್ಷೆ ಮುಗಿದವರು ಮನೆಗೆ ಹೋಗಬೇಕಿತ್ತು. ಆದರೆ ಹೋಗಿಲ್ಲ. ವಿಭಾಗಗಳಲ್ಲಿ ಹೊಸದಾಗಿ ಪ್ರವೇಶ ಪಡೆದವರಿಗೆ (ಹಾಸ್ಟೆಲ್‌ಗೆ ಪ್ರವೇಶ ಪಡೆಯದಿದ್ದರೂ), ಪರೀಕ್ಷೆ ಇದ್ದವರಿಗೆ ಸೇರಿ 250 ಮಂದಿಗೆ ಮಂಗಳವಾರ ಅಡುಗೆ ಮಾಡಿಸಲಾಗಿತ್ತು. ಯಾರಿಗೂ ಊಟ ಮಾಡಲು ಅವಕಾಶ ನೀಡದೆ ವಿಶ್ವ ಪ್ರಸಾದ್ ಎಂಬವವರು ಮೆಸ್‌ಗೆ ಬೀಗ ಹಾಕಿದ್ದರು. ಪರೀಕ್ಷೆ ಇದ್ದ 72 ಮಂದಿ ವಿದ್ಯಾರ್ಥಿಗಳು ದೂರಿದಾಗ ಸ್ಥಳಕ್ಕೆ ಭೇಟಿ ನೀಡಲಾಯಿತು. ರಾಜಾನಂದ ಎಂಬವರು ನನ್ನ ಕೈ ಎಳೆಯೋದು,  ಮೈಮೇಲೆ ಬೀಳೋದು ಮಾಡುತ್ತಿದ್ದ. ಹೊಡೆಯುತ್ತೀಯೇನಪ್ಪ, ಬಾ ಹೊಡಿ ಎಂದು ನಾನು ಮುನ್ನುಗ್ಗಿದೆ ಅಷ್ಟೆ. ಅದನ್ನು ಗೂಂಡಾಗಿರಿ ಎಂದು ಬಿಂಬಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

ಅಕ್ಟೋಬರ್‌‌ 13ರಲ್ಲಿ ಪರೀಕ್ಷೆ ಮುಗಿದರೂ ಇಲ್ಲೇ ಇದ್ದಾರೆ. ಪ್ರವೇಶ ಪಡೆದವರು ಹಾಗೂ ಪರೀಕ್ಷೆ ಇರುವವರು ಸೇರಿ 170 ಮಂದಿ ಮಾತ್ರ ಇರಬೇಕು. ಆದರೆ 600 ಮಂದಿ ಅನಧಿಕೃತವಾಗಿದ್ದಾರೆ. ಅವರ್‍ಯಾರೂ ಅಧಿಕೃತ ಅಲ್ಲ ಎಂದ ಅವರಿಗೆ, ‘ವಿದ್ಯಾರ್ಥಿಗಳಿಗೆ ಎರಡು ವರ್ಷಗಳಿಂದ ಇ.ಬಿ.ಎಲ್‌ ಹೆಚ್ಚುವರಿ ಹಣ ನೀಡಲಾಗಿಲ್ಲ ಯಾಕೆ?’ ಎಂದು ಪ್ರಶ್ನಿಸಿದಾಗ, ‘ಸರ್ಕಾರದಿಂದ ಹಣ ಬಂದಿಲ್ಲ’ ಎಂದರು.

“2019-20ನೇ ಸಾಲಿನ ವಿದ್ಯಾರ್ಥಿವೇತನ ಮಾತ್ರ ಬರುತ್ತಿದೆ. ಲಾಕ್‌ ಡೌನ್‌ ಜಾರಿಯಾದ ಸಮಯದ ಹಣವನ್ನು ಸರ್ಕಾರ ಕೊಡುವುದಿಲ್ಲ. ಇ.ಬಿ.ಎಲ್‌. ಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಬೆಂಗಳೂರಿಗೆ ಹೋಗಿ ಬಂದಿದ್ದು ಇ.ಬಿ.ಎಲ್‌. ಹಣವನ್ನು ನೀಡಬೇಕೆಂದು ಕೋರಿದ್ದೇವೆ. ಸರ್ಕಾರದ ಮಟ್ಟದಲ್ಲಿ ಆಗಬೇಕು. ಯಾವುದೇ ಹಣವೂ ದುರಪಯೋಗಿ ಆಗಿಲ್ಲ. 2021ನೇ ಸಾಲಿನಲ್ಲಿ ಆರು ತಿಂಗಳಿಗೆ ಮಾತ್ರ ಸ್ಕಾಲರ್‌ಶಿಪ್‌ ನೀಡಲಾಗಿದೆ. ಈ ವರ್ಷದ ಸೆಪ್ಟೆಂಬರ್‌, ಅಕ್ಟೋಬರ್‌ ತಿಂಗಳ ವೆಚ್ಚವನ್ನು ವಿಶ್ವವಿದ್ಯಾನಿಲಯದಿಂದ ಭರಿಸಬೇಕು. ವಿದ್ಯಾರ್ಥಿಗಳಿಗೆ ಬರಬೇಕಾದ ಇ.ಬಿ.ಎಲ್‌. ಬಂದರೆ ನಾವು ಅವರಿಗೆ ತಲುಪಿಸುತ್ತೇವೆ” ಎಂದು ಪ್ರತಿಕ್ರಿಯಿಸಿದರು.

ಸರ್ಕಾರ ಒಬ್ಬ ವಿದ್ಯಾರ್ಥಿಗೆ 1600 ರೂ.ಗಳನ್ನು ತಿಂಗಳಿಗೆ ನೀಡುತ್ತದೆ. ವಿಶ್ವವಿದ್ಯಾನಿಲಯದಿಂದ ಇ.ಬಿ.ಎಲ್‌. 300 ರೂ. ನೀಡಿ, ಒಂದು ತಿಂಗಳ ಮೆಸ್‌ ಬಿಲ್‌ 1900 ರೂ. ಭರಿಸಲಾಗುತ್ತಿದೆ. ಈ ಹಣ ದಿನಸಿ ವೆಚ್ಚವಾಗಿ ಹೋಗುತ್ತದೆ. ಅಡುಗೆ ಭಟ್ಟರಿಗೆ ವಿವಿ ಹಣ ನೀಡುತ್ತದೆ. ಲಾಕ್‌ಡೌನ್‌ ಸಮಯದಲ್ಲಿ ಹಾಸ್ಟೆಲ್‌ಗಳು ಇರಲಿಲ್ಲ. ಹೀಗಾಗಿ ಈ ಸಮಯದ ಹಣವನ್ನು ಸರ್ಕಾರ ನೀಡುವುದಿಲ್ಲ. ಕಳೆದ ವರ್ಷ ಸೆಪ್ಟೆಂಬರ್‌-ಅಕ್ಟೋಬರ್‌ ತಿಂಗಳಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿದೆವು. ವಿಶ್ವವಿದ್ಯಾನಿಲಯವೇ 38 ಲಕ್ಷ ರೂ.ಗಳನ್ನು ಭರಿಸಬೇಕಾಯಿತು. ಈ ಬಾರಿಯೂ ಅಷ್ಟೇ. ಆರು ತಿಂಗಳ ಹಣವನ್ನು ಮಾತ್ರ ಸರ್ಕಾರ ನೀಡುತ್ತದೆ. ಇನ್ನೆರಡು ತಿಂಗಳ ಹಣವನ್ನು ಸರ್ಕಾರವೇ ಭರಿಸಬೇಕಾಗುತ್ತದೆ ಎಂದು ಸಂಕಷ್ಟ ತೋಡಿಕೊಂಡರು.

ಮುಂದುವರಿದು ಮಾತನಾಡಿದ ಅವರು, “ಎರಡು ವರ್ಷಗಳಿಂದ ಇ.ಬಿ.ಎಲ್‌‌. ಹಣ ಬಂದಿಲ್ಲ. ಅದರ ಹಿಂದಿನ ವರ್ಷಗಳಲ್ಲಿಯೂ ಬಹಳ ವಿದ್ಯಾರ್ಥಿಗಳಿಗೆ ಇ.ಬಿ.ಎಲ್‌. ಬಂದಿಲ್ಲ. ಅದನ್ನೆಲ್ಲ ಸರಿ ಮಾಡಲಾಗುತ್ತಿದೆ. ನಾನು ನಿರ್ದೇಶಕನಾಗಿ ಅಧಿಕಾರಕ್ಕೆ ಒಂದು ವರ್ಷ, ಐದು ತಿಂಗಳಾಗಿದೆ. 28 ಲಕ್ಷ ರೂ. ಹೆಚ್ಚುವರಿ ಮೆಸ್‌ ಬಿಲ್‌ ಬಂದಿತ್ತು. ಈ ಹಿಂದೆ ಒಟ್ಟು 46 ಲಕ್ಷ ರೂ.ಗಳನ್ನು ವಾರ್ಡನ್‌ಗಳು, ಕ್ಲರ್ಕ್‌‌ಗಳು ಎಲ್ಲ ಸೇರಿ ತಿಂದಿದ್ದರು. ಅವರನ್ನೆಲ್ಲ ಹಿಡಿದು ತನಿಖೆ ಮಾಡಿಸಿದ್ದೇನೆ. ನಾನು ಯಾರ್‍ಯಾರನ್ನು ಹಿಡಿದಿದ್ದೇನೆಯೋ ಅವರೆಲ್ಲ ಈ ಪ್ರತಿಭಟನೆಯ ಹಿಂದೆ ಇದ್ದಾರೆ” ಎಂದು ಆರೋಪಿಸಿದರು.

“ನನ್ನ ಮೇಲೆ ನೂರು ರೂಪಾಯಿ ಭ್ರಷ್ಟಾಚಾರ ಇದ್ದರು ನನ್ನನ್ನು ಜೈಲಿಗೆ ಹಾಕಿರಿ. ನಾನು ಸಹ ಪ್ರಾಧ್ಯಾಪಕ. ನನ್ನ ಮೇಲೆ ಆರೋಪ ಬಂದರೆ ಇವತ್ತೇ ಈ ನಿರ್ದೇಶಕನ ಸ್ಥಾನ ಬಿಡುತ್ತೇನೆ” ಎಂದು ಸ್ಪಷ್ಟಪಡಿಸಿದರು.

ಎಲ್ಲ ಹಾಸ್ಟೆಲ್‌ಗಳನ್ನು ಸೇರಿ 4,300 ವಿದ್ಯಾರ್ಥಿಗಳು ಇದ್ದಾರೆ. ಕೇವಲ 2% ವಿದ್ಯಾರ್ಥಿಗಳು ಮಾತ್ರ ಹೀಗೆ ತಿರುಗಿ ಬೀಳುತ್ತಿದ್ದಾರೆ. ಕೆಲವರನ್ನು ನನಗಾಗದವರು ಛೂ ಬಿಡುತ್ತಿದ್ದಾರೆ. ನನ್ನಿಂದ ರೋಲ್‌ಕಾಲ್‌ ಮಾಡಲು ನೋಡುತ್ತಿದ್ದಾರೆ ಎಂದು ದೂರಿದರು.

ಪರೀಕ್ಷೆ ಮುಗಿದ ಮೇಲೂ ಮೆಸ್‌ ನಡೆಸಿದರೆ ಏಕೆ ಮೆಸ್‌ ನಡೆಸುತ್ತಿದ್ದೀರಿ ಎಂದು ಆಡಿಟರ್‌ ನನ್ನನ್ನು ಕೇಳುತ್ತಾರೆ. ಮುನ್ನೂರು ಜನರು ಇರುವಲ್ಲಿ, ಐನ್ನೂರು ಜನರಿಗೆ ಊಟ ಯಾಕೆ ಹಾಕಿದ್ದೀರಿ ಎಂದು ನನ್ನನ್ನು ಪ್ರಶ್ನಿಸುತ್ತಾರೆ” ನಾನೇನು ಉತ್ತರ ನೀಡಲಿ” ಎಂದು ಕೇಳಿದರು.

“ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿವೆ. ಈಗ ಉಳಿದಿರುವ ವಿದ್ಯಾರ್ಥಿಗಳನ್ನು ಖಾಲಿ ಮಾಡಿಸಲೇಬೇಕಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುವ ವಿದ್ಯಾರ್ಥಿಗಳು ಇದ್ದಾರೆ. ಅವಧಿ ಮುಗಿದ ಮೇಲೆಯೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲ್ಲ. ಅಕ್ಟೋಬರ್‌ 31ಕ್ಕೆ ಕ್ಲೋಸ್‌ ಮಾಡಿಸಿ, ಹೊಸ ವಿದ್ಯಾರ್ಥಿಗಳಿಗೆ ನವೆಂಬರ್‌ 1ರಿಂದ ಅವಕಾಶ ನೀಡಲಾಗುತ್ತಿದೆ” ಎಂದರು.


ಇದನ್ನೂ ಓದಿರಿ: ನೀಟ್ ವಿರೋಧಿಸಿ SFI ಯಿಂದ ದೇಶಾದ್ಯಂತ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...