Homeಕರ್ನಾಟಕExclusive | ವಾರ್ಡನ್‌ಗಳು, ಕ್ಲರ್ಕ್‌ಗಳು ಸೇರಿ 46 ಲಕ್ಷ ರೂ. ನುಂಗಿದ್ದರು: ಮೈಸೂರು ವಿವಿ ಡೀನ್‌‌

Exclusive | ವಾರ್ಡನ್‌ಗಳು, ಕ್ಲರ್ಕ್‌ಗಳು ಸೇರಿ 46 ಲಕ್ಷ ರೂ. ನುಂಗಿದ್ದರು: ಮೈಸೂರು ವಿವಿ ಡೀನ್‌‌

- Advertisement -
- Advertisement -

ಮೈಸೂರು ವಿಶ್ವವಿದ್ಯಾನಿಲಯದ ಪಿಜಿ ಹಾಸ್ಟೆಲ್‌ಗಳಲ್ಲಿ ಊಟ ನಿಲ್ಲಿಸಲಾಗಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದಾಗ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಡಾ.ಎಸ್‌.ಟಿ.ರಾಮಚಂದ್ರ ವಿದ್ಯಾರ್ಥಿಗಳ ಮೇಲೆ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೈರಲ್‌ ಆಗಿದೆ.

ಕೋವಿಡ್ ಅವಧಿಯಲ್ಲಿ ಹಾಸ್ಟೆಲ್ ಹಾಗೂ ಮೆಸ್‌ಗಳನ್ನು ಮುಚ್ಚಲಾಗಿತ್ತು. ಕಡಿಮೆ ಅವಧಿಯಲ್ಲಿ ಹಾಸ್ಟೆಲ್‌ ತೆರೆದು ಪರೀಕ್ಷೆಗಳನ್ನು ನಡೆಸಲಾಯಿತು. ಈಗ ಹೊಸ ವಿದ್ಯಾರ್ಥಿಗಳ ಪ್ರವೇಶಾತಿಯೂ ನಡೆಯುತ್ತಿದೆ. ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿಗಳು ಮನೆಗೆ ತೆರೆಯದೆ ಹಾಸ್ಟೆಲ್‌ಗಳಲ್ಲೇ ಉಳಿದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುತ್ತಿದ್ದಾರೆ. ಆದರೆ ಊಟ ಅವಧಿ ಮುಗಿದ ವಿದ್ಯಾರ್ಥಿಗಳಿಗೆ ಊಟ ನೀಡುವುದಿಲ್ಲ ಎಂದು ಮೈಸೂರು ವಿವಿ ತಿಳಿಸಿತ್ತು. ಹೀಗೆ ಉಂಟಾಗಿರುವ ಗೊಂದಲದ ವೇಳೆ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕ ಡಾ.ಎಸ್.ಟಿ.ರಾಮಚಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿದಾಗ ‘ಗೂಂಡಾಗಿರಿ’ ಮಾಡಿದ್ದಾರೆ ಎಂದು ಆರೋಪಿಸಿ ವಿಡಿಯೋ ಹರಿಬಿಡಲಾಗಿದೆ.

ಇದರ ಕುರಿತು ಪ್ರತಿಕ್ರಿಯೆ ಪಡೆಯಲು ರಾಮಚಂದ್ರ ಅವರನ್ನು ಸಂಪರ್ಕಿಸಿದಾಗ ಅವರು ಘಟನೆಯ ವಿವರ ಹಾಗೂ ಮೈಸೂರು ವಿವಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. “ನಾನು ತನಿಖೆ ನಡೆಸಿದ್ದರಿಂದ ಸಿಕ್ಕಿಬಿದ್ದವರು ಕೆಲವರನ್ನು ಛೂ ಬಿಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕರಾದ ಡಾ.ಎಸ್.ಟಿ.ರಾಮಚಂದ್ರ

“72 ವಿದ್ಯಾರ್ಥಿಗಳಿಗೆ ಮಾತ್ರ ಮೌಖಿಕ ಸಂದರ್ಶನ (ವೈವಾ), ಪ್ರಾಯೋಗಿಕ ಪರೀಕ್ಷೆ ಹಾಗೂ ಡೆಸಾರ್ಟೇಷನ್‌ ಸಲ್ಲಿಕೆ ಬಾಕಿ ಇದೆ. ಉಳಿದ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರಕ್ರಿಯೆ ಮುಗಿದಿದೆ. ಪರೀಕ್ಷೆ ಮುಗಿದವರು ಮನೆಗೆ ಹೋಗಬೇಕಿತ್ತು. ಆದರೆ ಹೋಗಿಲ್ಲ. ವಿಭಾಗಗಳಲ್ಲಿ ಹೊಸದಾಗಿ ಪ್ರವೇಶ ಪಡೆದವರಿಗೆ (ಹಾಸ್ಟೆಲ್‌ಗೆ ಪ್ರವೇಶ ಪಡೆಯದಿದ್ದರೂ), ಪರೀಕ್ಷೆ ಇದ್ದವರಿಗೆ ಸೇರಿ 250 ಮಂದಿಗೆ ಮಂಗಳವಾರ ಅಡುಗೆ ಮಾಡಿಸಲಾಗಿತ್ತು. ಯಾರಿಗೂ ಊಟ ಮಾಡಲು ಅವಕಾಶ ನೀಡದೆ ವಿಶ್ವ ಪ್ರಸಾದ್ ಎಂಬವವರು ಮೆಸ್‌ಗೆ ಬೀಗ ಹಾಕಿದ್ದರು. ಪರೀಕ್ಷೆ ಇದ್ದ 72 ಮಂದಿ ವಿದ್ಯಾರ್ಥಿಗಳು ದೂರಿದಾಗ ಸ್ಥಳಕ್ಕೆ ಭೇಟಿ ನೀಡಲಾಯಿತು. ರಾಜಾನಂದ ಎಂಬವರು ನನ್ನ ಕೈ ಎಳೆಯೋದು,  ಮೈಮೇಲೆ ಬೀಳೋದು ಮಾಡುತ್ತಿದ್ದ. ಹೊಡೆಯುತ್ತೀಯೇನಪ್ಪ, ಬಾ ಹೊಡಿ ಎಂದು ನಾನು ಮುನ್ನುಗ್ಗಿದೆ ಅಷ್ಟೆ. ಅದನ್ನು ಗೂಂಡಾಗಿರಿ ಎಂದು ಬಿಂಬಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

ಅಕ್ಟೋಬರ್‌‌ 13ರಲ್ಲಿ ಪರೀಕ್ಷೆ ಮುಗಿದರೂ ಇಲ್ಲೇ ಇದ್ದಾರೆ. ಪ್ರವೇಶ ಪಡೆದವರು ಹಾಗೂ ಪರೀಕ್ಷೆ ಇರುವವರು ಸೇರಿ 170 ಮಂದಿ ಮಾತ್ರ ಇರಬೇಕು. ಆದರೆ 600 ಮಂದಿ ಅನಧಿಕೃತವಾಗಿದ್ದಾರೆ. ಅವರ್‍ಯಾರೂ ಅಧಿಕೃತ ಅಲ್ಲ ಎಂದ ಅವರಿಗೆ, ‘ವಿದ್ಯಾರ್ಥಿಗಳಿಗೆ ಎರಡು ವರ್ಷಗಳಿಂದ ಇ.ಬಿ.ಎಲ್‌ ಹೆಚ್ಚುವರಿ ಹಣ ನೀಡಲಾಗಿಲ್ಲ ಯಾಕೆ?’ ಎಂದು ಪ್ರಶ್ನಿಸಿದಾಗ, ‘ಸರ್ಕಾರದಿಂದ ಹಣ ಬಂದಿಲ್ಲ’ ಎಂದರು.

“2019-20ನೇ ಸಾಲಿನ ವಿದ್ಯಾರ್ಥಿವೇತನ ಮಾತ್ರ ಬರುತ್ತಿದೆ. ಲಾಕ್‌ ಡೌನ್‌ ಜಾರಿಯಾದ ಸಮಯದ ಹಣವನ್ನು ಸರ್ಕಾರ ಕೊಡುವುದಿಲ್ಲ. ಇ.ಬಿ.ಎಲ್‌. ಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಬೆಂಗಳೂರಿಗೆ ಹೋಗಿ ಬಂದಿದ್ದು ಇ.ಬಿ.ಎಲ್‌. ಹಣವನ್ನು ನೀಡಬೇಕೆಂದು ಕೋರಿದ್ದೇವೆ. ಸರ್ಕಾರದ ಮಟ್ಟದಲ್ಲಿ ಆಗಬೇಕು. ಯಾವುದೇ ಹಣವೂ ದುರಪಯೋಗಿ ಆಗಿಲ್ಲ. 2021ನೇ ಸಾಲಿನಲ್ಲಿ ಆರು ತಿಂಗಳಿಗೆ ಮಾತ್ರ ಸ್ಕಾಲರ್‌ಶಿಪ್‌ ನೀಡಲಾಗಿದೆ. ಈ ವರ್ಷದ ಸೆಪ್ಟೆಂಬರ್‌, ಅಕ್ಟೋಬರ್‌ ತಿಂಗಳ ವೆಚ್ಚವನ್ನು ವಿಶ್ವವಿದ್ಯಾನಿಲಯದಿಂದ ಭರಿಸಬೇಕು. ವಿದ್ಯಾರ್ಥಿಗಳಿಗೆ ಬರಬೇಕಾದ ಇ.ಬಿ.ಎಲ್‌. ಬಂದರೆ ನಾವು ಅವರಿಗೆ ತಲುಪಿಸುತ್ತೇವೆ” ಎಂದು ಪ್ರತಿಕ್ರಿಯಿಸಿದರು.

ಸರ್ಕಾರ ಒಬ್ಬ ವಿದ್ಯಾರ್ಥಿಗೆ 1600 ರೂ.ಗಳನ್ನು ತಿಂಗಳಿಗೆ ನೀಡುತ್ತದೆ. ವಿಶ್ವವಿದ್ಯಾನಿಲಯದಿಂದ ಇ.ಬಿ.ಎಲ್‌. 300 ರೂ. ನೀಡಿ, ಒಂದು ತಿಂಗಳ ಮೆಸ್‌ ಬಿಲ್‌ 1900 ರೂ. ಭರಿಸಲಾಗುತ್ತಿದೆ. ಈ ಹಣ ದಿನಸಿ ವೆಚ್ಚವಾಗಿ ಹೋಗುತ್ತದೆ. ಅಡುಗೆ ಭಟ್ಟರಿಗೆ ವಿವಿ ಹಣ ನೀಡುತ್ತದೆ. ಲಾಕ್‌ಡೌನ್‌ ಸಮಯದಲ್ಲಿ ಹಾಸ್ಟೆಲ್‌ಗಳು ಇರಲಿಲ್ಲ. ಹೀಗಾಗಿ ಈ ಸಮಯದ ಹಣವನ್ನು ಸರ್ಕಾರ ನೀಡುವುದಿಲ್ಲ. ಕಳೆದ ವರ್ಷ ಸೆಪ್ಟೆಂಬರ್‌-ಅಕ್ಟೋಬರ್‌ ತಿಂಗಳಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿದೆವು. ವಿಶ್ವವಿದ್ಯಾನಿಲಯವೇ 38 ಲಕ್ಷ ರೂ.ಗಳನ್ನು ಭರಿಸಬೇಕಾಯಿತು. ಈ ಬಾರಿಯೂ ಅಷ್ಟೇ. ಆರು ತಿಂಗಳ ಹಣವನ್ನು ಮಾತ್ರ ಸರ್ಕಾರ ನೀಡುತ್ತದೆ. ಇನ್ನೆರಡು ತಿಂಗಳ ಹಣವನ್ನು ಸರ್ಕಾರವೇ ಭರಿಸಬೇಕಾಗುತ್ತದೆ ಎಂದು ಸಂಕಷ್ಟ ತೋಡಿಕೊಂಡರು.

ಮುಂದುವರಿದು ಮಾತನಾಡಿದ ಅವರು, “ಎರಡು ವರ್ಷಗಳಿಂದ ಇ.ಬಿ.ಎಲ್‌‌. ಹಣ ಬಂದಿಲ್ಲ. ಅದರ ಹಿಂದಿನ ವರ್ಷಗಳಲ್ಲಿಯೂ ಬಹಳ ವಿದ್ಯಾರ್ಥಿಗಳಿಗೆ ಇ.ಬಿ.ಎಲ್‌. ಬಂದಿಲ್ಲ. ಅದನ್ನೆಲ್ಲ ಸರಿ ಮಾಡಲಾಗುತ್ತಿದೆ. ನಾನು ನಿರ್ದೇಶಕನಾಗಿ ಅಧಿಕಾರಕ್ಕೆ ಒಂದು ವರ್ಷ, ಐದು ತಿಂಗಳಾಗಿದೆ. 28 ಲಕ್ಷ ರೂ. ಹೆಚ್ಚುವರಿ ಮೆಸ್‌ ಬಿಲ್‌ ಬಂದಿತ್ತು. ಈ ಹಿಂದೆ ಒಟ್ಟು 46 ಲಕ್ಷ ರೂ.ಗಳನ್ನು ವಾರ್ಡನ್‌ಗಳು, ಕ್ಲರ್ಕ್‌‌ಗಳು ಎಲ್ಲ ಸೇರಿ ತಿಂದಿದ್ದರು. ಅವರನ್ನೆಲ್ಲ ಹಿಡಿದು ತನಿಖೆ ಮಾಡಿಸಿದ್ದೇನೆ. ನಾನು ಯಾರ್‍ಯಾರನ್ನು ಹಿಡಿದಿದ್ದೇನೆಯೋ ಅವರೆಲ್ಲ ಈ ಪ್ರತಿಭಟನೆಯ ಹಿಂದೆ ಇದ್ದಾರೆ” ಎಂದು ಆರೋಪಿಸಿದರು.

“ನನ್ನ ಮೇಲೆ ನೂರು ರೂಪಾಯಿ ಭ್ರಷ್ಟಾಚಾರ ಇದ್ದರು ನನ್ನನ್ನು ಜೈಲಿಗೆ ಹಾಕಿರಿ. ನಾನು ಸಹ ಪ್ರಾಧ್ಯಾಪಕ. ನನ್ನ ಮೇಲೆ ಆರೋಪ ಬಂದರೆ ಇವತ್ತೇ ಈ ನಿರ್ದೇಶಕನ ಸ್ಥಾನ ಬಿಡುತ್ತೇನೆ” ಎಂದು ಸ್ಪಷ್ಟಪಡಿಸಿದರು.

ಎಲ್ಲ ಹಾಸ್ಟೆಲ್‌ಗಳನ್ನು ಸೇರಿ 4,300 ವಿದ್ಯಾರ್ಥಿಗಳು ಇದ್ದಾರೆ. ಕೇವಲ 2% ವಿದ್ಯಾರ್ಥಿಗಳು ಮಾತ್ರ ಹೀಗೆ ತಿರುಗಿ ಬೀಳುತ್ತಿದ್ದಾರೆ. ಕೆಲವರನ್ನು ನನಗಾಗದವರು ಛೂ ಬಿಡುತ್ತಿದ್ದಾರೆ. ನನ್ನಿಂದ ರೋಲ್‌ಕಾಲ್‌ ಮಾಡಲು ನೋಡುತ್ತಿದ್ದಾರೆ ಎಂದು ದೂರಿದರು.

ಪರೀಕ್ಷೆ ಮುಗಿದ ಮೇಲೂ ಮೆಸ್‌ ನಡೆಸಿದರೆ ಏಕೆ ಮೆಸ್‌ ನಡೆಸುತ್ತಿದ್ದೀರಿ ಎಂದು ಆಡಿಟರ್‌ ನನ್ನನ್ನು ಕೇಳುತ್ತಾರೆ. ಮುನ್ನೂರು ಜನರು ಇರುವಲ್ಲಿ, ಐನ್ನೂರು ಜನರಿಗೆ ಊಟ ಯಾಕೆ ಹಾಕಿದ್ದೀರಿ ಎಂದು ನನ್ನನ್ನು ಪ್ರಶ್ನಿಸುತ್ತಾರೆ” ನಾನೇನು ಉತ್ತರ ನೀಡಲಿ” ಎಂದು ಕೇಳಿದರು.

“ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿವೆ. ಈಗ ಉಳಿದಿರುವ ವಿದ್ಯಾರ್ಥಿಗಳನ್ನು ಖಾಲಿ ಮಾಡಿಸಲೇಬೇಕಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುವ ವಿದ್ಯಾರ್ಥಿಗಳು ಇದ್ದಾರೆ. ಅವಧಿ ಮುಗಿದ ಮೇಲೆಯೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲ್ಲ. ಅಕ್ಟೋಬರ್‌ 31ಕ್ಕೆ ಕ್ಲೋಸ್‌ ಮಾಡಿಸಿ, ಹೊಸ ವಿದ್ಯಾರ್ಥಿಗಳಿಗೆ ನವೆಂಬರ್‌ 1ರಿಂದ ಅವಕಾಶ ನೀಡಲಾಗುತ್ತಿದೆ” ಎಂದರು.


ಇದನ್ನೂ ಓದಿರಿ: ನೀಟ್ ವಿರೋಧಿಸಿ SFI ಯಿಂದ ದೇಶಾದ್ಯಂತ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....