Homeಚಳವಳಿಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಟೆಂಡರ್ ಮುಖಾಂತರ ಖಾಸಗೀಕರಣಕ್ಕಾಗಿ ಮಾರಾಟ / ಖರೀದಿ ಒಪ್ಪಂದದ ಷರತ್ತುಗಳನ್ನು ಅಂಗೀಕರಿಸುವುದು, ನೌಕರರ ನಿವೃತ್ತಿಯ ಪ್ರಯೋಜನಗಳಾದ ಭವಿಷ್ಯ ನಿಧಿ, ಪಿಂಚಣಿ ಮತ್ತು ವೈದ್ಯಕೀಯ ಪ್ರಯೋಜನಗಳ ಮೊಟಕುಗೊಳಿಸುವಂತಾಗುತ್ತದೆ.

- Advertisement -
- Advertisement -

ಭಾರತದ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ 4,800 ಕ್ಕೂ ಹೆಚ್ಚು ಉದ್ಯೋಗಿಗಳು  ಸರ್ಕಾರದ ಖಾಸಗೀಕರಣದ ವಿರುದ್ಧ 48 ಗಂಟೆಗಳು ಮುಷ್ಕರ ನಡೆಸಿದ್ದಾರೆ. ಕಂಪನಿಯ ತ್ವರಿತ ಖಾಸಗೀಕರಣಕ್ಕೆ ಅನುಕೂಲವಾಗುವ ದೀರ್ಘಾವಧಿಯ ವೇತನ ಇತ್ಯರ್ಥಕ್ಕೆ ಸಹಿ ಹಾಕುವ ನಿರ್ಧಾರದ ವಿರುದ್ಧ ಮುಷ್ಕರ ನಡೆದಿದೆ.

ಸೋಮವಾರ ಬೆಳಿಗ್ಗೆ ಪ್ರಾರಂಭವಾದ ಮುಷ್ಕರಕ್ಕೆ ಬಿಪಿಸಿಎಲ್‌ನ ಕೊಚ್ಚಿ ಮತ್ತು ಮುಂಬೈ ಸಂಸ್ಕರಣಾಗಾರಗಳಲ್ಲಿನ 15 ಒಕ್ಕೂಟಗಳು ಮತ್ತು ದೇಶದ ವಿವಿಧ ಭಾಗಗಳ ನೌಕರರು ಸಾಥ್ ನೀಡಿದ್ದರು. ಕೊಚ್ಚಿ ಮತ್ತು ಮುಂಬೈ  ಸಂಸ್ಕರಣಾಗಾರಗಳು, ಎಲ್‌ಪಿಜಿ ಸ್ಥಾವರಗಳು ಮತ್ತು ಗುರುತು ಮಾಡಿದ್ದ ಡಿಪೋಗಳನ್ನು ಬಂದ್ ಮಾಡಿ ಮೊದಲ ದಿನ ಪ್ರತಿಭಟನೆ ಮಾಡಲಾಗಿದೆ ಎಂದು ಪೆಟ್ರೋಲಿಯಂ ಮತ್ತು ಗ್ಯಾಸ್ ವರ್ಕರ್ಸ್ ಫೆಡರೇಶನ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ನೊಗೆನ್ ಚುಟಿಯಾ ನ್ಯೂಸ್‌ಕ್ಲಿಕ್‌ಗೆ ತಿಳಿಸಿದರು.

ದಲಿತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ: 10 ದಿನ ಕಳೆದರೂ ಆರೋಪಿಯನ್ನು ಬಂಧಿಸದ ಪೊಲೀಸ್
ಇದನ್ನೂ ಓದಿ: ಕೆಜಿಎಫ್: ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ- 10 ದಿನ ಕಳೆದರೂ ಆರೋಪಿಗಳನ್ನು ಬಂಧಿಸದ ಪೋಲಿಸರು

ಮುಷ್ಕರಕ್ಕೆ ಕಾರಣಗಳೇನು..?

ಭಾರತದ ಎರಡನೇ ಅತಿದೊಡ್ಡ ಇಂಧನ ವ್ಯಾಪಾರಿ ಮತ್ತು ಮೂರನೇ ಅತಿದೊಡ್ಡ ತೈಲ ಸಂಸ್ಕರಣಾಕಾರ ಘಟಕ ಬಿಪಿಸಿಎಲ್‌ನಲ್ಲಿ 2017 ರ ಜನವರಿ 1 ರಿಂದ ವೇತನ ಪರಿಷ್ಕರಣೆ ಬಾಕಿ ಉಳಿದಿದೆ. ಆದಾಗ್ಯೂ, ಒಕ್ಕೂಟಗಳು ಸಾರ್ವಜನಿಕ ಉದ್ಯಮ ಇಲಾಖೆಯ ಮಾರ್ಗಸೂಚಿಗಳ ಪ್ರಕಾರ ವೇತನ ಇತ್ಯರ್ಥಕ್ಕೆ ಒತ್ತಾಯಿಸುತ್ತಿವೆ.

“ಮ್ಯಾನೇಜ್ಮೆಂಟ್ ಬಹಳ ಕಡಿಮೆ ಪರಿಷ್ಕರಣೆಯನ್ನು ನೀಡಿದೆ, ಇದು ಐಒಸಿ, ಒಎನ್‌ಜಿಸಿ, ಎಚ್ಪಿಸಿಎಲ್‌ಗಳಿಗಿಂತ ಕೆಳಗಿದೆ. ದೀರ್ಘಕಾಲದಿಂದ ಬಿಪಿಸಿಎಲ್ ನೌಕರರು ಇತರ ಸಾರ್ವಜನಿಕ ವಲಯದ ತೈಲ ಕಂಪನಿಗಳಿಗೆ ಸಮನಾಗಿ ಪ್ರಯೋಜನಗಳನ್ನು ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದು ಚುಟಿಯಾ ಹೇಳಿದ್ದಾರೆ.

PC: News Click

ಇದನ್ನೂ ಓದಿ: ಉನ್ನಾವೊ: ಅತ್ಯಾಚಾರದ ದೂರು ದಾಖಲಿಸಲು ವಿಫರಾಲದ ಜಿಲ್ಲಾಧಿಕಾರಿ ವಿರುದ್ದ ಕ್ರಮಕ್ಕೆ ಸಿಬಿಐ ಶಿಫಾರಸ್ಸು

ಟೆಂಡರ್ ಮುಖಾಂತರ ಖಾಸಗೀಕರಣಕ್ಕಾಗಿ ಮಾರಾಟ / ಖರೀದಿ ಒಪ್ಪಂದದ ಷರತ್ತುಗಳನ್ನು ಅಂಗೀಕರಿಸುವುದು ನೌಕರರ ನಿವೃತ್ತಿಯ ಪ್ರಯೋಜನಗಳಾದ ಭವಿಷ್ಯ ನಿಧಿ, ಪಿಂಚಣಿ ಮತ್ತು ವೈದ್ಯಕೀಯ ಪ್ರಯೋಜನಗಳ ಮೊಟಕುಗೊಳಿಸುವಂತಾಗುತ್ತದೆ. ಈ ಕುರಿತು ಮಾತುಕತೆಗಾಗಿ ಸಭೆ ಕರೆದು, ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಲು ಮ್ಯಾನೆಜ್‌ಮೆಂಟ್ ನಿರಾಕರಿಸಿದೆ ಎಂದು ಕೊಚ್ಚಿನ್ ರಿಫೈನರಿ ವರ್ಕರ್ಸ್ ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಎಂ.ಜಿ. ಅಜಿ ತಿಳಿಸಿದ್ದಾರೆ.

ಕೊಚ್ಚಿ ರಿಫೈನರಿಸ್‌ನಿಂದಲೇ ಮುಷ್ಕರದಲ್ಲಿ 1,000 ಕ್ಕೂ ಹೆಚ್ಚು ನೌಕರರು ಭಾಗವಹಿಸಿದ್ದರು. ಕೊಚ್ಚಿ ರಿಫೈನರೀಸ್ ವರ್ಕರ್ಸ್ ಅಸೋಸಿಯೇಶನ್ (ಸಿಐಟಿಯು), ಕೊಚ್ಚಿನ್ ರಿಫೈನರೀಸ್ ಎಂಪ್ಲಾಯೀಸ್ ಅಸೋಸಿಯೇಶನ್ (ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್), ರಿಫೈನರಿ ಎಂಪ್ಲಾಯೀಸ್ ಯೂನಿಯನ್ ಮತ್ತು ಬಿಪಿಸಿಎಲ್ ಮಜ್ದೂರ್ ಸಂಘ (ಬಿಎಂಎಸ್) ಗೆ ಸೇರಿದ ನೌಕರರು.

ಕಂಪನಿಯ ಸಂಭಾವ್ಯ ಸ್ವಾಧೀನಪಡಿಸಿಕೊಳ್ಳುವವರಿಗೆ ಬಿಪಿಸಿಎಲ್ನಲ್ಲಿ ನೌಕರರ ರಕ್ಷಣೆ, ಆಸ್ತಿ ತೆಗೆಯುವಿಕೆ ಮತ್ತು ವ್ಯವಹಾರ ಮುಂದುವರಿಕೆ ಕುರಿತು ಮಾರ್ಗದರ್ಶನ ನೀಡುವ ಸರ್ಕಾರದ ನಿರ್ಧಾರವನ್ನು ಬಿಡ್ಡಿಂಗ್‌ ನಂತರದ ಹಂತದಲ್ಲಿ ತಿಳಿಸಲಾಗುತ್ತದೆ. ಇದನ್ನು ಹೂಡಿಕೆ ಇಲಾಖೆ ಹೊರಡಿಸಿದ ಖಾಸಗೀಕರಣ ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ. ಸರ್ಕಾರ ಬಿಪಿಸಿಎಲ್‌ನಲ್ಲಿ ತನ್ನ ಸಂಪೂರ್ಣ 52.98% ಪಾಲನ್ನು ಮಾರಾಟ ಮಾಡುತ್ತಿದೆ.

ಸೆಪ್ಟೆಂಬರ್ 30 ರ ನಂತರ ಅರ್ಹರಿಗೆ ಹಣಕಾಸು ಅಥವಾ ಬೆಲೆ ಬಿಡ್‌ಗಳನ್ನು ಸಲ್ಲಿಸುವಂತೆ ಕೇಳಲಾಗುತ್ತದೆ.


ಇದನ್ನೂ ಓದಿ: ಜನರ ಮೇಲೆ ಸೋಂಕು ನಿವಾರಕ ಸಿಂಪಡಣೆ ಹಾನಿಕಾರಕ: ಕ್ರಮ ಕೈಗೊಳ್ಳುವಂತೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...