Homeಚಳವಳಿಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಟೆಂಡರ್ ಮುಖಾಂತರ ಖಾಸಗೀಕರಣಕ್ಕಾಗಿ ಮಾರಾಟ / ಖರೀದಿ ಒಪ್ಪಂದದ ಷರತ್ತುಗಳನ್ನು ಅಂಗೀಕರಿಸುವುದು, ನೌಕರರ ನಿವೃತ್ತಿಯ ಪ್ರಯೋಜನಗಳಾದ ಭವಿಷ್ಯ ನಿಧಿ, ಪಿಂಚಣಿ ಮತ್ತು ವೈದ್ಯಕೀಯ ಪ್ರಯೋಜನಗಳ ಮೊಟಕುಗೊಳಿಸುವಂತಾಗುತ್ತದೆ.

- Advertisement -
- Advertisement -

ಭಾರತದ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ 4,800 ಕ್ಕೂ ಹೆಚ್ಚು ಉದ್ಯೋಗಿಗಳು  ಸರ್ಕಾರದ ಖಾಸಗೀಕರಣದ ವಿರುದ್ಧ 48 ಗಂಟೆಗಳು ಮುಷ್ಕರ ನಡೆಸಿದ್ದಾರೆ. ಕಂಪನಿಯ ತ್ವರಿತ ಖಾಸಗೀಕರಣಕ್ಕೆ ಅನುಕೂಲವಾಗುವ ದೀರ್ಘಾವಧಿಯ ವೇತನ ಇತ್ಯರ್ಥಕ್ಕೆ ಸಹಿ ಹಾಕುವ ನಿರ್ಧಾರದ ವಿರುದ್ಧ ಮುಷ್ಕರ ನಡೆದಿದೆ.

ಸೋಮವಾರ ಬೆಳಿಗ್ಗೆ ಪ್ರಾರಂಭವಾದ ಮುಷ್ಕರಕ್ಕೆ ಬಿಪಿಸಿಎಲ್‌ನ ಕೊಚ್ಚಿ ಮತ್ತು ಮುಂಬೈ ಸಂಸ್ಕರಣಾಗಾರಗಳಲ್ಲಿನ 15 ಒಕ್ಕೂಟಗಳು ಮತ್ತು ದೇಶದ ವಿವಿಧ ಭಾಗಗಳ ನೌಕರರು ಸಾಥ್ ನೀಡಿದ್ದರು. ಕೊಚ್ಚಿ ಮತ್ತು ಮುಂಬೈ  ಸಂಸ್ಕರಣಾಗಾರಗಳು, ಎಲ್‌ಪಿಜಿ ಸ್ಥಾವರಗಳು ಮತ್ತು ಗುರುತು ಮಾಡಿದ್ದ ಡಿಪೋಗಳನ್ನು ಬಂದ್ ಮಾಡಿ ಮೊದಲ ದಿನ ಪ್ರತಿಭಟನೆ ಮಾಡಲಾಗಿದೆ ಎಂದು ಪೆಟ್ರೋಲಿಯಂ ಮತ್ತು ಗ್ಯಾಸ್ ವರ್ಕರ್ಸ್ ಫೆಡರೇಶನ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ನೊಗೆನ್ ಚುಟಿಯಾ ನ್ಯೂಸ್‌ಕ್ಲಿಕ್‌ಗೆ ತಿಳಿಸಿದರು.

ದಲಿತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ: 10 ದಿನ ಕಳೆದರೂ ಆರೋಪಿಯನ್ನು ಬಂಧಿಸದ ಪೊಲೀಸ್
ಇದನ್ನೂ ಓದಿ: ಕೆಜಿಎಫ್: ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ- 10 ದಿನ ಕಳೆದರೂ ಆರೋಪಿಗಳನ್ನು ಬಂಧಿಸದ ಪೋಲಿಸರು

ಮುಷ್ಕರಕ್ಕೆ ಕಾರಣಗಳೇನು..?

ಭಾರತದ ಎರಡನೇ ಅತಿದೊಡ್ಡ ಇಂಧನ ವ್ಯಾಪಾರಿ ಮತ್ತು ಮೂರನೇ ಅತಿದೊಡ್ಡ ತೈಲ ಸಂಸ್ಕರಣಾಕಾರ ಘಟಕ ಬಿಪಿಸಿಎಲ್‌ನಲ್ಲಿ 2017 ರ ಜನವರಿ 1 ರಿಂದ ವೇತನ ಪರಿಷ್ಕರಣೆ ಬಾಕಿ ಉಳಿದಿದೆ. ಆದಾಗ್ಯೂ, ಒಕ್ಕೂಟಗಳು ಸಾರ್ವಜನಿಕ ಉದ್ಯಮ ಇಲಾಖೆಯ ಮಾರ್ಗಸೂಚಿಗಳ ಪ್ರಕಾರ ವೇತನ ಇತ್ಯರ್ಥಕ್ಕೆ ಒತ್ತಾಯಿಸುತ್ತಿವೆ.

“ಮ್ಯಾನೇಜ್ಮೆಂಟ್ ಬಹಳ ಕಡಿಮೆ ಪರಿಷ್ಕರಣೆಯನ್ನು ನೀಡಿದೆ, ಇದು ಐಒಸಿ, ಒಎನ್‌ಜಿಸಿ, ಎಚ್ಪಿಸಿಎಲ್‌ಗಳಿಗಿಂತ ಕೆಳಗಿದೆ. ದೀರ್ಘಕಾಲದಿಂದ ಬಿಪಿಸಿಎಲ್ ನೌಕರರು ಇತರ ಸಾರ್ವಜನಿಕ ವಲಯದ ತೈಲ ಕಂಪನಿಗಳಿಗೆ ಸಮನಾಗಿ ಪ್ರಯೋಜನಗಳನ್ನು ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದು ಚುಟಿಯಾ ಹೇಳಿದ್ದಾರೆ.

PC: News Click

ಇದನ್ನೂ ಓದಿ: ಉನ್ನಾವೊ: ಅತ್ಯಾಚಾರದ ದೂರು ದಾಖಲಿಸಲು ವಿಫರಾಲದ ಜಿಲ್ಲಾಧಿಕಾರಿ ವಿರುದ್ದ ಕ್ರಮಕ್ಕೆ ಸಿಬಿಐ ಶಿಫಾರಸ್ಸು

ಟೆಂಡರ್ ಮುಖಾಂತರ ಖಾಸಗೀಕರಣಕ್ಕಾಗಿ ಮಾರಾಟ / ಖರೀದಿ ಒಪ್ಪಂದದ ಷರತ್ತುಗಳನ್ನು ಅಂಗೀಕರಿಸುವುದು ನೌಕರರ ನಿವೃತ್ತಿಯ ಪ್ರಯೋಜನಗಳಾದ ಭವಿಷ್ಯ ನಿಧಿ, ಪಿಂಚಣಿ ಮತ್ತು ವೈದ್ಯಕೀಯ ಪ್ರಯೋಜನಗಳ ಮೊಟಕುಗೊಳಿಸುವಂತಾಗುತ್ತದೆ. ಈ ಕುರಿತು ಮಾತುಕತೆಗಾಗಿ ಸಭೆ ಕರೆದು, ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಲು ಮ್ಯಾನೆಜ್‌ಮೆಂಟ್ ನಿರಾಕರಿಸಿದೆ ಎಂದು ಕೊಚ್ಚಿನ್ ರಿಫೈನರಿ ವರ್ಕರ್ಸ್ ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಎಂ.ಜಿ. ಅಜಿ ತಿಳಿಸಿದ್ದಾರೆ.

ಕೊಚ್ಚಿ ರಿಫೈನರಿಸ್‌ನಿಂದಲೇ ಮುಷ್ಕರದಲ್ಲಿ 1,000 ಕ್ಕೂ ಹೆಚ್ಚು ನೌಕರರು ಭಾಗವಹಿಸಿದ್ದರು. ಕೊಚ್ಚಿ ರಿಫೈನರೀಸ್ ವರ್ಕರ್ಸ್ ಅಸೋಸಿಯೇಶನ್ (ಸಿಐಟಿಯು), ಕೊಚ್ಚಿನ್ ರಿಫೈನರೀಸ್ ಎಂಪ್ಲಾಯೀಸ್ ಅಸೋಸಿಯೇಶನ್ (ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್), ರಿಫೈನರಿ ಎಂಪ್ಲಾಯೀಸ್ ಯೂನಿಯನ್ ಮತ್ತು ಬಿಪಿಸಿಎಲ್ ಮಜ್ದೂರ್ ಸಂಘ (ಬಿಎಂಎಸ್) ಗೆ ಸೇರಿದ ನೌಕರರು.

ಕಂಪನಿಯ ಸಂಭಾವ್ಯ ಸ್ವಾಧೀನಪಡಿಸಿಕೊಳ್ಳುವವರಿಗೆ ಬಿಪಿಸಿಎಲ್ನಲ್ಲಿ ನೌಕರರ ರಕ್ಷಣೆ, ಆಸ್ತಿ ತೆಗೆಯುವಿಕೆ ಮತ್ತು ವ್ಯವಹಾರ ಮುಂದುವರಿಕೆ ಕುರಿತು ಮಾರ್ಗದರ್ಶನ ನೀಡುವ ಸರ್ಕಾರದ ನಿರ್ಧಾರವನ್ನು ಬಿಡ್ಡಿಂಗ್‌ ನಂತರದ ಹಂತದಲ್ಲಿ ತಿಳಿಸಲಾಗುತ್ತದೆ. ಇದನ್ನು ಹೂಡಿಕೆ ಇಲಾಖೆ ಹೊರಡಿಸಿದ ಖಾಸಗೀಕರಣ ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ. ಸರ್ಕಾರ ಬಿಪಿಸಿಎಲ್‌ನಲ್ಲಿ ತನ್ನ ಸಂಪೂರ್ಣ 52.98% ಪಾಲನ್ನು ಮಾರಾಟ ಮಾಡುತ್ತಿದೆ.

ಸೆಪ್ಟೆಂಬರ್ 30 ರ ನಂತರ ಅರ್ಹರಿಗೆ ಹಣಕಾಸು ಅಥವಾ ಬೆಲೆ ಬಿಡ್‌ಗಳನ್ನು ಸಲ್ಲಿಸುವಂತೆ ಕೇಳಲಾಗುತ್ತದೆ.


ಇದನ್ನೂ ಓದಿ: ಜನರ ಮೇಲೆ ಸೋಂಕು ನಿವಾರಕ ಸಿಂಪಡಣೆ ಹಾನಿಕಾರಕ: ಕ್ರಮ ಕೈಗೊಳ್ಳುವಂತೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...