Homeಚಳವಳಿಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಟೆಂಡರ್ ಮುಖಾಂತರ ಖಾಸಗೀಕರಣಕ್ಕಾಗಿ ಮಾರಾಟ / ಖರೀದಿ ಒಪ್ಪಂದದ ಷರತ್ತುಗಳನ್ನು ಅಂಗೀಕರಿಸುವುದು, ನೌಕರರ ನಿವೃತ್ತಿಯ ಪ್ರಯೋಜನಗಳಾದ ಭವಿಷ್ಯ ನಿಧಿ, ಪಿಂಚಣಿ ಮತ್ತು ವೈದ್ಯಕೀಯ ಪ್ರಯೋಜನಗಳ ಮೊಟಕುಗೊಳಿಸುವಂತಾಗುತ್ತದೆ.

- Advertisement -
- Advertisement -

ಭಾರತದ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ 4,800 ಕ್ಕೂ ಹೆಚ್ಚು ಉದ್ಯೋಗಿಗಳು  ಸರ್ಕಾರದ ಖಾಸಗೀಕರಣದ ವಿರುದ್ಧ 48 ಗಂಟೆಗಳು ಮುಷ್ಕರ ನಡೆಸಿದ್ದಾರೆ. ಕಂಪನಿಯ ತ್ವರಿತ ಖಾಸಗೀಕರಣಕ್ಕೆ ಅನುಕೂಲವಾಗುವ ದೀರ್ಘಾವಧಿಯ ವೇತನ ಇತ್ಯರ್ಥಕ್ಕೆ ಸಹಿ ಹಾಕುವ ನಿರ್ಧಾರದ ವಿರುದ್ಧ ಮುಷ್ಕರ ನಡೆದಿದೆ.

ಸೋಮವಾರ ಬೆಳಿಗ್ಗೆ ಪ್ರಾರಂಭವಾದ ಮುಷ್ಕರಕ್ಕೆ ಬಿಪಿಸಿಎಲ್‌ನ ಕೊಚ್ಚಿ ಮತ್ತು ಮುಂಬೈ ಸಂಸ್ಕರಣಾಗಾರಗಳಲ್ಲಿನ 15 ಒಕ್ಕೂಟಗಳು ಮತ್ತು ದೇಶದ ವಿವಿಧ ಭಾಗಗಳ ನೌಕರರು ಸಾಥ್ ನೀಡಿದ್ದರು. ಕೊಚ್ಚಿ ಮತ್ತು ಮುಂಬೈ  ಸಂಸ್ಕರಣಾಗಾರಗಳು, ಎಲ್‌ಪಿಜಿ ಸ್ಥಾವರಗಳು ಮತ್ತು ಗುರುತು ಮಾಡಿದ್ದ ಡಿಪೋಗಳನ್ನು ಬಂದ್ ಮಾಡಿ ಮೊದಲ ದಿನ ಪ್ರತಿಭಟನೆ ಮಾಡಲಾಗಿದೆ ಎಂದು ಪೆಟ್ರೋಲಿಯಂ ಮತ್ತು ಗ್ಯಾಸ್ ವರ್ಕರ್ಸ್ ಫೆಡರೇಶನ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ನೊಗೆನ್ ಚುಟಿಯಾ ನ್ಯೂಸ್‌ಕ್ಲಿಕ್‌ಗೆ ತಿಳಿಸಿದರು.

ದಲಿತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ: 10 ದಿನ ಕಳೆದರೂ ಆರೋಪಿಯನ್ನು ಬಂಧಿಸದ ಪೊಲೀಸ್
ಇದನ್ನೂ ಓದಿ: ಕೆಜಿಎಫ್: ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ- 10 ದಿನ ಕಳೆದರೂ ಆರೋಪಿಗಳನ್ನು ಬಂಧಿಸದ ಪೋಲಿಸರು

ಮುಷ್ಕರಕ್ಕೆ ಕಾರಣಗಳೇನು..?

ಭಾರತದ ಎರಡನೇ ಅತಿದೊಡ್ಡ ಇಂಧನ ವ್ಯಾಪಾರಿ ಮತ್ತು ಮೂರನೇ ಅತಿದೊಡ್ಡ ತೈಲ ಸಂಸ್ಕರಣಾಕಾರ ಘಟಕ ಬಿಪಿಸಿಎಲ್‌ನಲ್ಲಿ 2017 ರ ಜನವರಿ 1 ರಿಂದ ವೇತನ ಪರಿಷ್ಕರಣೆ ಬಾಕಿ ಉಳಿದಿದೆ. ಆದಾಗ್ಯೂ, ಒಕ್ಕೂಟಗಳು ಸಾರ್ವಜನಿಕ ಉದ್ಯಮ ಇಲಾಖೆಯ ಮಾರ್ಗಸೂಚಿಗಳ ಪ್ರಕಾರ ವೇತನ ಇತ್ಯರ್ಥಕ್ಕೆ ಒತ್ತಾಯಿಸುತ್ತಿವೆ.

“ಮ್ಯಾನೇಜ್ಮೆಂಟ್ ಬಹಳ ಕಡಿಮೆ ಪರಿಷ್ಕರಣೆಯನ್ನು ನೀಡಿದೆ, ಇದು ಐಒಸಿ, ಒಎನ್‌ಜಿಸಿ, ಎಚ್ಪಿಸಿಎಲ್‌ಗಳಿಗಿಂತ ಕೆಳಗಿದೆ. ದೀರ್ಘಕಾಲದಿಂದ ಬಿಪಿಸಿಎಲ್ ನೌಕರರು ಇತರ ಸಾರ್ವಜನಿಕ ವಲಯದ ತೈಲ ಕಂಪನಿಗಳಿಗೆ ಸಮನಾಗಿ ಪ್ರಯೋಜನಗಳನ್ನು ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದು ಚುಟಿಯಾ ಹೇಳಿದ್ದಾರೆ.

PC: News Click

ಇದನ್ನೂ ಓದಿ: ಉನ್ನಾವೊ: ಅತ್ಯಾಚಾರದ ದೂರು ದಾಖಲಿಸಲು ವಿಫರಾಲದ ಜಿಲ್ಲಾಧಿಕಾರಿ ವಿರುದ್ದ ಕ್ರಮಕ್ಕೆ ಸಿಬಿಐ ಶಿಫಾರಸ್ಸು

ಟೆಂಡರ್ ಮುಖಾಂತರ ಖಾಸಗೀಕರಣಕ್ಕಾಗಿ ಮಾರಾಟ / ಖರೀದಿ ಒಪ್ಪಂದದ ಷರತ್ತುಗಳನ್ನು ಅಂಗೀಕರಿಸುವುದು ನೌಕರರ ನಿವೃತ್ತಿಯ ಪ್ರಯೋಜನಗಳಾದ ಭವಿಷ್ಯ ನಿಧಿ, ಪಿಂಚಣಿ ಮತ್ತು ವೈದ್ಯಕೀಯ ಪ್ರಯೋಜನಗಳ ಮೊಟಕುಗೊಳಿಸುವಂತಾಗುತ್ತದೆ. ಈ ಕುರಿತು ಮಾತುಕತೆಗಾಗಿ ಸಭೆ ಕರೆದು, ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಲು ಮ್ಯಾನೆಜ್‌ಮೆಂಟ್ ನಿರಾಕರಿಸಿದೆ ಎಂದು ಕೊಚ್ಚಿನ್ ರಿಫೈನರಿ ವರ್ಕರ್ಸ್ ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಎಂ.ಜಿ. ಅಜಿ ತಿಳಿಸಿದ್ದಾರೆ.

ಕೊಚ್ಚಿ ರಿಫೈನರಿಸ್‌ನಿಂದಲೇ ಮುಷ್ಕರದಲ್ಲಿ 1,000 ಕ್ಕೂ ಹೆಚ್ಚು ನೌಕರರು ಭಾಗವಹಿಸಿದ್ದರು. ಕೊಚ್ಚಿ ರಿಫೈನರೀಸ್ ವರ್ಕರ್ಸ್ ಅಸೋಸಿಯೇಶನ್ (ಸಿಐಟಿಯು), ಕೊಚ್ಚಿನ್ ರಿಫೈನರೀಸ್ ಎಂಪ್ಲಾಯೀಸ್ ಅಸೋಸಿಯೇಶನ್ (ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್), ರಿಫೈನರಿ ಎಂಪ್ಲಾಯೀಸ್ ಯೂನಿಯನ್ ಮತ್ತು ಬಿಪಿಸಿಎಲ್ ಮಜ್ದೂರ್ ಸಂಘ (ಬಿಎಂಎಸ್) ಗೆ ಸೇರಿದ ನೌಕರರು.

ಕಂಪನಿಯ ಸಂಭಾವ್ಯ ಸ್ವಾಧೀನಪಡಿಸಿಕೊಳ್ಳುವವರಿಗೆ ಬಿಪಿಸಿಎಲ್ನಲ್ಲಿ ನೌಕರರ ರಕ್ಷಣೆ, ಆಸ್ತಿ ತೆಗೆಯುವಿಕೆ ಮತ್ತು ವ್ಯವಹಾರ ಮುಂದುವರಿಕೆ ಕುರಿತು ಮಾರ್ಗದರ್ಶನ ನೀಡುವ ಸರ್ಕಾರದ ನಿರ್ಧಾರವನ್ನು ಬಿಡ್ಡಿಂಗ್‌ ನಂತರದ ಹಂತದಲ್ಲಿ ತಿಳಿಸಲಾಗುತ್ತದೆ. ಇದನ್ನು ಹೂಡಿಕೆ ಇಲಾಖೆ ಹೊರಡಿಸಿದ ಖಾಸಗೀಕರಣ ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ. ಸರ್ಕಾರ ಬಿಪಿಸಿಎಲ್‌ನಲ್ಲಿ ತನ್ನ ಸಂಪೂರ್ಣ 52.98% ಪಾಲನ್ನು ಮಾರಾಟ ಮಾಡುತ್ತಿದೆ.

ಸೆಪ್ಟೆಂಬರ್ 30 ರ ನಂತರ ಅರ್ಹರಿಗೆ ಹಣಕಾಸು ಅಥವಾ ಬೆಲೆ ಬಿಡ್‌ಗಳನ್ನು ಸಲ್ಲಿಸುವಂತೆ ಕೇಳಲಾಗುತ್ತದೆ.


ಇದನ್ನೂ ಓದಿ: ಜನರ ಮೇಲೆ ಸೋಂಕು ನಿವಾರಕ ಸಿಂಪಡಣೆ ಹಾನಿಕಾರಕ: ಕ್ರಮ ಕೈಗೊಳ್ಳುವಂತೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...