Homeಚಳವಳಿಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಟೆಂಡರ್ ಮುಖಾಂತರ ಖಾಸಗೀಕರಣಕ್ಕಾಗಿ ಮಾರಾಟ / ಖರೀದಿ ಒಪ್ಪಂದದ ಷರತ್ತುಗಳನ್ನು ಅಂಗೀಕರಿಸುವುದು, ನೌಕರರ ನಿವೃತ್ತಿಯ ಪ್ರಯೋಜನಗಳಾದ ಭವಿಷ್ಯ ನಿಧಿ, ಪಿಂಚಣಿ ಮತ್ತು ವೈದ್ಯಕೀಯ ಪ್ರಯೋಜನಗಳ ಮೊಟಕುಗೊಳಿಸುವಂತಾಗುತ್ತದೆ.

- Advertisement -
- Advertisement -

ಭಾರತದ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ 4,800 ಕ್ಕೂ ಹೆಚ್ಚು ಉದ್ಯೋಗಿಗಳು  ಸರ್ಕಾರದ ಖಾಸಗೀಕರಣದ ವಿರುದ್ಧ 48 ಗಂಟೆಗಳು ಮುಷ್ಕರ ನಡೆಸಿದ್ದಾರೆ. ಕಂಪನಿಯ ತ್ವರಿತ ಖಾಸಗೀಕರಣಕ್ಕೆ ಅನುಕೂಲವಾಗುವ ದೀರ್ಘಾವಧಿಯ ವೇತನ ಇತ್ಯರ್ಥಕ್ಕೆ ಸಹಿ ಹಾಕುವ ನಿರ್ಧಾರದ ವಿರುದ್ಧ ಮುಷ್ಕರ ನಡೆದಿದೆ.

ಸೋಮವಾರ ಬೆಳಿಗ್ಗೆ ಪ್ರಾರಂಭವಾದ ಮುಷ್ಕರಕ್ಕೆ ಬಿಪಿಸಿಎಲ್‌ನ ಕೊಚ್ಚಿ ಮತ್ತು ಮುಂಬೈ ಸಂಸ್ಕರಣಾಗಾರಗಳಲ್ಲಿನ 15 ಒಕ್ಕೂಟಗಳು ಮತ್ತು ದೇಶದ ವಿವಿಧ ಭಾಗಗಳ ನೌಕರರು ಸಾಥ್ ನೀಡಿದ್ದರು. ಕೊಚ್ಚಿ ಮತ್ತು ಮುಂಬೈ  ಸಂಸ್ಕರಣಾಗಾರಗಳು, ಎಲ್‌ಪಿಜಿ ಸ್ಥಾವರಗಳು ಮತ್ತು ಗುರುತು ಮಾಡಿದ್ದ ಡಿಪೋಗಳನ್ನು ಬಂದ್ ಮಾಡಿ ಮೊದಲ ದಿನ ಪ್ರತಿಭಟನೆ ಮಾಡಲಾಗಿದೆ ಎಂದು ಪೆಟ್ರೋಲಿಯಂ ಮತ್ತು ಗ್ಯಾಸ್ ವರ್ಕರ್ಸ್ ಫೆಡರೇಶನ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ನೊಗೆನ್ ಚುಟಿಯಾ ನ್ಯೂಸ್‌ಕ್ಲಿಕ್‌ಗೆ ತಿಳಿಸಿದರು.

ದಲಿತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ: 10 ದಿನ ಕಳೆದರೂ ಆರೋಪಿಯನ್ನು ಬಂಧಿಸದ ಪೊಲೀಸ್
ಇದನ್ನೂ ಓದಿ: ಕೆಜಿಎಫ್: ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ- 10 ದಿನ ಕಳೆದರೂ ಆರೋಪಿಗಳನ್ನು ಬಂಧಿಸದ ಪೋಲಿಸರು

ಮುಷ್ಕರಕ್ಕೆ ಕಾರಣಗಳೇನು..?

ಭಾರತದ ಎರಡನೇ ಅತಿದೊಡ್ಡ ಇಂಧನ ವ್ಯಾಪಾರಿ ಮತ್ತು ಮೂರನೇ ಅತಿದೊಡ್ಡ ತೈಲ ಸಂಸ್ಕರಣಾಕಾರ ಘಟಕ ಬಿಪಿಸಿಎಲ್‌ನಲ್ಲಿ 2017 ರ ಜನವರಿ 1 ರಿಂದ ವೇತನ ಪರಿಷ್ಕರಣೆ ಬಾಕಿ ಉಳಿದಿದೆ. ಆದಾಗ್ಯೂ, ಒಕ್ಕೂಟಗಳು ಸಾರ್ವಜನಿಕ ಉದ್ಯಮ ಇಲಾಖೆಯ ಮಾರ್ಗಸೂಚಿಗಳ ಪ್ರಕಾರ ವೇತನ ಇತ್ಯರ್ಥಕ್ಕೆ ಒತ್ತಾಯಿಸುತ್ತಿವೆ.

“ಮ್ಯಾನೇಜ್ಮೆಂಟ್ ಬಹಳ ಕಡಿಮೆ ಪರಿಷ್ಕರಣೆಯನ್ನು ನೀಡಿದೆ, ಇದು ಐಒಸಿ, ಒಎನ್‌ಜಿಸಿ, ಎಚ್ಪಿಸಿಎಲ್‌ಗಳಿಗಿಂತ ಕೆಳಗಿದೆ. ದೀರ್ಘಕಾಲದಿಂದ ಬಿಪಿಸಿಎಲ್ ನೌಕರರು ಇತರ ಸಾರ್ವಜನಿಕ ವಲಯದ ತೈಲ ಕಂಪನಿಗಳಿಗೆ ಸಮನಾಗಿ ಪ್ರಯೋಜನಗಳನ್ನು ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದು ಚುಟಿಯಾ ಹೇಳಿದ್ದಾರೆ.

PC: News Click

ಇದನ್ನೂ ಓದಿ: ಉನ್ನಾವೊ: ಅತ್ಯಾಚಾರದ ದೂರು ದಾಖಲಿಸಲು ವಿಫರಾಲದ ಜಿಲ್ಲಾಧಿಕಾರಿ ವಿರುದ್ದ ಕ್ರಮಕ್ಕೆ ಸಿಬಿಐ ಶಿಫಾರಸ್ಸು

ಟೆಂಡರ್ ಮುಖಾಂತರ ಖಾಸಗೀಕರಣಕ್ಕಾಗಿ ಮಾರಾಟ / ಖರೀದಿ ಒಪ್ಪಂದದ ಷರತ್ತುಗಳನ್ನು ಅಂಗೀಕರಿಸುವುದು ನೌಕರರ ನಿವೃತ್ತಿಯ ಪ್ರಯೋಜನಗಳಾದ ಭವಿಷ್ಯ ನಿಧಿ, ಪಿಂಚಣಿ ಮತ್ತು ವೈದ್ಯಕೀಯ ಪ್ರಯೋಜನಗಳ ಮೊಟಕುಗೊಳಿಸುವಂತಾಗುತ್ತದೆ. ಈ ಕುರಿತು ಮಾತುಕತೆಗಾಗಿ ಸಭೆ ಕರೆದು, ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಲು ಮ್ಯಾನೆಜ್‌ಮೆಂಟ್ ನಿರಾಕರಿಸಿದೆ ಎಂದು ಕೊಚ್ಚಿನ್ ರಿಫೈನರಿ ವರ್ಕರ್ಸ್ ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಎಂ.ಜಿ. ಅಜಿ ತಿಳಿಸಿದ್ದಾರೆ.

ಕೊಚ್ಚಿ ರಿಫೈನರಿಸ್‌ನಿಂದಲೇ ಮುಷ್ಕರದಲ್ಲಿ 1,000 ಕ್ಕೂ ಹೆಚ್ಚು ನೌಕರರು ಭಾಗವಹಿಸಿದ್ದರು. ಕೊಚ್ಚಿ ರಿಫೈನರೀಸ್ ವರ್ಕರ್ಸ್ ಅಸೋಸಿಯೇಶನ್ (ಸಿಐಟಿಯು), ಕೊಚ್ಚಿನ್ ರಿಫೈನರೀಸ್ ಎಂಪ್ಲಾಯೀಸ್ ಅಸೋಸಿಯೇಶನ್ (ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್), ರಿಫೈನರಿ ಎಂಪ್ಲಾಯೀಸ್ ಯೂನಿಯನ್ ಮತ್ತು ಬಿಪಿಸಿಎಲ್ ಮಜ್ದೂರ್ ಸಂಘ (ಬಿಎಂಎಸ್) ಗೆ ಸೇರಿದ ನೌಕರರು.

ಕಂಪನಿಯ ಸಂಭಾವ್ಯ ಸ್ವಾಧೀನಪಡಿಸಿಕೊಳ್ಳುವವರಿಗೆ ಬಿಪಿಸಿಎಲ್ನಲ್ಲಿ ನೌಕರರ ರಕ್ಷಣೆ, ಆಸ್ತಿ ತೆಗೆಯುವಿಕೆ ಮತ್ತು ವ್ಯವಹಾರ ಮುಂದುವರಿಕೆ ಕುರಿತು ಮಾರ್ಗದರ್ಶನ ನೀಡುವ ಸರ್ಕಾರದ ನಿರ್ಧಾರವನ್ನು ಬಿಡ್ಡಿಂಗ್‌ ನಂತರದ ಹಂತದಲ್ಲಿ ತಿಳಿಸಲಾಗುತ್ತದೆ. ಇದನ್ನು ಹೂಡಿಕೆ ಇಲಾಖೆ ಹೊರಡಿಸಿದ ಖಾಸಗೀಕರಣ ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ. ಸರ್ಕಾರ ಬಿಪಿಸಿಎಲ್‌ನಲ್ಲಿ ತನ್ನ ಸಂಪೂರ್ಣ 52.98% ಪಾಲನ್ನು ಮಾರಾಟ ಮಾಡುತ್ತಿದೆ.

ಸೆಪ್ಟೆಂಬರ್ 30 ರ ನಂತರ ಅರ್ಹರಿಗೆ ಹಣಕಾಸು ಅಥವಾ ಬೆಲೆ ಬಿಡ್‌ಗಳನ್ನು ಸಲ್ಲಿಸುವಂತೆ ಕೇಳಲಾಗುತ್ತದೆ.


ಇದನ್ನೂ ಓದಿ: ಜನರ ಮೇಲೆ ಸೋಂಕು ನಿವಾರಕ ಸಿಂಪಡಣೆ ಹಾನಿಕಾರಕ: ಕ್ರಮ ಕೈಗೊಳ್ಳುವಂತೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...