Homeಚಳವಳಿಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಟೆಂಡರ್ ಮುಖಾಂತರ ಖಾಸಗೀಕರಣಕ್ಕಾಗಿ ಮಾರಾಟ / ಖರೀದಿ ಒಪ್ಪಂದದ ಷರತ್ತುಗಳನ್ನು ಅಂಗೀಕರಿಸುವುದು, ನೌಕರರ ನಿವೃತ್ತಿಯ ಪ್ರಯೋಜನಗಳಾದ ಭವಿಷ್ಯ ನಿಧಿ, ಪಿಂಚಣಿ ಮತ್ತು ವೈದ್ಯಕೀಯ ಪ್ರಯೋಜನಗಳ ಮೊಟಕುಗೊಳಿಸುವಂತಾಗುತ್ತದೆ.

- Advertisement -
- Advertisement -

ಭಾರತದ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ 4,800 ಕ್ಕೂ ಹೆಚ್ಚು ಉದ್ಯೋಗಿಗಳು  ಸರ್ಕಾರದ ಖಾಸಗೀಕರಣದ ವಿರುದ್ಧ 48 ಗಂಟೆಗಳು ಮುಷ್ಕರ ನಡೆಸಿದ್ದಾರೆ. ಕಂಪನಿಯ ತ್ವರಿತ ಖಾಸಗೀಕರಣಕ್ಕೆ ಅನುಕೂಲವಾಗುವ ದೀರ್ಘಾವಧಿಯ ವೇತನ ಇತ್ಯರ್ಥಕ್ಕೆ ಸಹಿ ಹಾಕುವ ನಿರ್ಧಾರದ ವಿರುದ್ಧ ಮುಷ್ಕರ ನಡೆದಿದೆ.

ಸೋಮವಾರ ಬೆಳಿಗ್ಗೆ ಪ್ರಾರಂಭವಾದ ಮುಷ್ಕರಕ್ಕೆ ಬಿಪಿಸಿಎಲ್‌ನ ಕೊಚ್ಚಿ ಮತ್ತು ಮುಂಬೈ ಸಂಸ್ಕರಣಾಗಾರಗಳಲ್ಲಿನ 15 ಒಕ್ಕೂಟಗಳು ಮತ್ತು ದೇಶದ ವಿವಿಧ ಭಾಗಗಳ ನೌಕರರು ಸಾಥ್ ನೀಡಿದ್ದರು. ಕೊಚ್ಚಿ ಮತ್ತು ಮುಂಬೈ  ಸಂಸ್ಕರಣಾಗಾರಗಳು, ಎಲ್‌ಪಿಜಿ ಸ್ಥಾವರಗಳು ಮತ್ತು ಗುರುತು ಮಾಡಿದ್ದ ಡಿಪೋಗಳನ್ನು ಬಂದ್ ಮಾಡಿ ಮೊದಲ ದಿನ ಪ್ರತಿಭಟನೆ ಮಾಡಲಾಗಿದೆ ಎಂದು ಪೆಟ್ರೋಲಿಯಂ ಮತ್ತು ಗ್ಯಾಸ್ ವರ್ಕರ್ಸ್ ಫೆಡರೇಶನ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ನೊಗೆನ್ ಚುಟಿಯಾ ನ್ಯೂಸ್‌ಕ್ಲಿಕ್‌ಗೆ ತಿಳಿಸಿದರು.

ದಲಿತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ: 10 ದಿನ ಕಳೆದರೂ ಆರೋಪಿಯನ್ನು ಬಂಧಿಸದ ಪೊಲೀಸ್
ಇದನ್ನೂ ಓದಿ: ಕೆಜಿಎಫ್: ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ- 10 ದಿನ ಕಳೆದರೂ ಆರೋಪಿಗಳನ್ನು ಬಂಧಿಸದ ಪೋಲಿಸರು

ಮುಷ್ಕರಕ್ಕೆ ಕಾರಣಗಳೇನು..?

ಭಾರತದ ಎರಡನೇ ಅತಿದೊಡ್ಡ ಇಂಧನ ವ್ಯಾಪಾರಿ ಮತ್ತು ಮೂರನೇ ಅತಿದೊಡ್ಡ ತೈಲ ಸಂಸ್ಕರಣಾಕಾರ ಘಟಕ ಬಿಪಿಸಿಎಲ್‌ನಲ್ಲಿ 2017 ರ ಜನವರಿ 1 ರಿಂದ ವೇತನ ಪರಿಷ್ಕರಣೆ ಬಾಕಿ ಉಳಿದಿದೆ. ಆದಾಗ್ಯೂ, ಒಕ್ಕೂಟಗಳು ಸಾರ್ವಜನಿಕ ಉದ್ಯಮ ಇಲಾಖೆಯ ಮಾರ್ಗಸೂಚಿಗಳ ಪ್ರಕಾರ ವೇತನ ಇತ್ಯರ್ಥಕ್ಕೆ ಒತ್ತಾಯಿಸುತ್ತಿವೆ.

“ಮ್ಯಾನೇಜ್ಮೆಂಟ್ ಬಹಳ ಕಡಿಮೆ ಪರಿಷ್ಕರಣೆಯನ್ನು ನೀಡಿದೆ, ಇದು ಐಒಸಿ, ಒಎನ್‌ಜಿಸಿ, ಎಚ್ಪಿಸಿಎಲ್‌ಗಳಿಗಿಂತ ಕೆಳಗಿದೆ. ದೀರ್ಘಕಾಲದಿಂದ ಬಿಪಿಸಿಎಲ್ ನೌಕರರು ಇತರ ಸಾರ್ವಜನಿಕ ವಲಯದ ತೈಲ ಕಂಪನಿಗಳಿಗೆ ಸಮನಾಗಿ ಪ್ರಯೋಜನಗಳನ್ನು ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದು ಚುಟಿಯಾ ಹೇಳಿದ್ದಾರೆ.

PC: News Click

ಇದನ್ನೂ ಓದಿ: ಉನ್ನಾವೊ: ಅತ್ಯಾಚಾರದ ದೂರು ದಾಖಲಿಸಲು ವಿಫರಾಲದ ಜಿಲ್ಲಾಧಿಕಾರಿ ವಿರುದ್ದ ಕ್ರಮಕ್ಕೆ ಸಿಬಿಐ ಶಿಫಾರಸ್ಸು

ಟೆಂಡರ್ ಮುಖಾಂತರ ಖಾಸಗೀಕರಣಕ್ಕಾಗಿ ಮಾರಾಟ / ಖರೀದಿ ಒಪ್ಪಂದದ ಷರತ್ತುಗಳನ್ನು ಅಂಗೀಕರಿಸುವುದು ನೌಕರರ ನಿವೃತ್ತಿಯ ಪ್ರಯೋಜನಗಳಾದ ಭವಿಷ್ಯ ನಿಧಿ, ಪಿಂಚಣಿ ಮತ್ತು ವೈದ್ಯಕೀಯ ಪ್ರಯೋಜನಗಳ ಮೊಟಕುಗೊಳಿಸುವಂತಾಗುತ್ತದೆ. ಈ ಕುರಿತು ಮಾತುಕತೆಗಾಗಿ ಸಭೆ ಕರೆದು, ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಲು ಮ್ಯಾನೆಜ್‌ಮೆಂಟ್ ನಿರಾಕರಿಸಿದೆ ಎಂದು ಕೊಚ್ಚಿನ್ ರಿಫೈನರಿ ವರ್ಕರ್ಸ್ ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಎಂ.ಜಿ. ಅಜಿ ತಿಳಿಸಿದ್ದಾರೆ.

ಕೊಚ್ಚಿ ರಿಫೈನರಿಸ್‌ನಿಂದಲೇ ಮುಷ್ಕರದಲ್ಲಿ 1,000 ಕ್ಕೂ ಹೆಚ್ಚು ನೌಕರರು ಭಾಗವಹಿಸಿದ್ದರು. ಕೊಚ್ಚಿ ರಿಫೈನರೀಸ್ ವರ್ಕರ್ಸ್ ಅಸೋಸಿಯೇಶನ್ (ಸಿಐಟಿಯು), ಕೊಚ್ಚಿನ್ ರಿಫೈನರೀಸ್ ಎಂಪ್ಲಾಯೀಸ್ ಅಸೋಸಿಯೇಶನ್ (ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್), ರಿಫೈನರಿ ಎಂಪ್ಲಾಯೀಸ್ ಯೂನಿಯನ್ ಮತ್ತು ಬಿಪಿಸಿಎಲ್ ಮಜ್ದೂರ್ ಸಂಘ (ಬಿಎಂಎಸ್) ಗೆ ಸೇರಿದ ನೌಕರರು.

ಕಂಪನಿಯ ಸಂಭಾವ್ಯ ಸ್ವಾಧೀನಪಡಿಸಿಕೊಳ್ಳುವವರಿಗೆ ಬಿಪಿಸಿಎಲ್ನಲ್ಲಿ ನೌಕರರ ರಕ್ಷಣೆ, ಆಸ್ತಿ ತೆಗೆಯುವಿಕೆ ಮತ್ತು ವ್ಯವಹಾರ ಮುಂದುವರಿಕೆ ಕುರಿತು ಮಾರ್ಗದರ್ಶನ ನೀಡುವ ಸರ್ಕಾರದ ನಿರ್ಧಾರವನ್ನು ಬಿಡ್ಡಿಂಗ್‌ ನಂತರದ ಹಂತದಲ್ಲಿ ತಿಳಿಸಲಾಗುತ್ತದೆ. ಇದನ್ನು ಹೂಡಿಕೆ ಇಲಾಖೆ ಹೊರಡಿಸಿದ ಖಾಸಗೀಕರಣ ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ. ಸರ್ಕಾರ ಬಿಪಿಸಿಎಲ್‌ನಲ್ಲಿ ತನ್ನ ಸಂಪೂರ್ಣ 52.98% ಪಾಲನ್ನು ಮಾರಾಟ ಮಾಡುತ್ತಿದೆ.

ಸೆಪ್ಟೆಂಬರ್ 30 ರ ನಂತರ ಅರ್ಹರಿಗೆ ಹಣಕಾಸು ಅಥವಾ ಬೆಲೆ ಬಿಡ್‌ಗಳನ್ನು ಸಲ್ಲಿಸುವಂತೆ ಕೇಳಲಾಗುತ್ತದೆ.


ಇದನ್ನೂ ಓದಿ: ಜನರ ಮೇಲೆ ಸೋಂಕು ನಿವಾರಕ ಸಿಂಪಡಣೆ ಹಾನಿಕಾರಕ: ಕ್ರಮ ಕೈಗೊಳ್ಳುವಂತೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...