Homeಚಳವಳಿಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಟೆಂಡರ್ ಮುಖಾಂತರ ಖಾಸಗೀಕರಣಕ್ಕಾಗಿ ಮಾರಾಟ / ಖರೀದಿ ಒಪ್ಪಂದದ ಷರತ್ತುಗಳನ್ನು ಅಂಗೀಕರಿಸುವುದು, ನೌಕರರ ನಿವೃತ್ತಿಯ ಪ್ರಯೋಜನಗಳಾದ ಭವಿಷ್ಯ ನಿಧಿ, ಪಿಂಚಣಿ ಮತ್ತು ವೈದ್ಯಕೀಯ ಪ್ರಯೋಜನಗಳ ಮೊಟಕುಗೊಳಿಸುವಂತಾಗುತ್ತದೆ.

- Advertisement -
- Advertisement -

ಭಾರತದ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ 4,800 ಕ್ಕೂ ಹೆಚ್ಚು ಉದ್ಯೋಗಿಗಳು  ಸರ್ಕಾರದ ಖಾಸಗೀಕರಣದ ವಿರುದ್ಧ 48 ಗಂಟೆಗಳು ಮುಷ್ಕರ ನಡೆಸಿದ್ದಾರೆ. ಕಂಪನಿಯ ತ್ವರಿತ ಖಾಸಗೀಕರಣಕ್ಕೆ ಅನುಕೂಲವಾಗುವ ದೀರ್ಘಾವಧಿಯ ವೇತನ ಇತ್ಯರ್ಥಕ್ಕೆ ಸಹಿ ಹಾಕುವ ನಿರ್ಧಾರದ ವಿರುದ್ಧ ಮುಷ್ಕರ ನಡೆದಿದೆ.

ಸೋಮವಾರ ಬೆಳಿಗ್ಗೆ ಪ್ರಾರಂಭವಾದ ಮುಷ್ಕರಕ್ಕೆ ಬಿಪಿಸಿಎಲ್‌ನ ಕೊಚ್ಚಿ ಮತ್ತು ಮುಂಬೈ ಸಂಸ್ಕರಣಾಗಾರಗಳಲ್ಲಿನ 15 ಒಕ್ಕೂಟಗಳು ಮತ್ತು ದೇಶದ ವಿವಿಧ ಭಾಗಗಳ ನೌಕರರು ಸಾಥ್ ನೀಡಿದ್ದರು. ಕೊಚ್ಚಿ ಮತ್ತು ಮುಂಬೈ  ಸಂಸ್ಕರಣಾಗಾರಗಳು, ಎಲ್‌ಪಿಜಿ ಸ್ಥಾವರಗಳು ಮತ್ತು ಗುರುತು ಮಾಡಿದ್ದ ಡಿಪೋಗಳನ್ನು ಬಂದ್ ಮಾಡಿ ಮೊದಲ ದಿನ ಪ್ರತಿಭಟನೆ ಮಾಡಲಾಗಿದೆ ಎಂದು ಪೆಟ್ರೋಲಿಯಂ ಮತ್ತು ಗ್ಯಾಸ್ ವರ್ಕರ್ಸ್ ಫೆಡರೇಶನ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ನೊಗೆನ್ ಚುಟಿಯಾ ನ್ಯೂಸ್‌ಕ್ಲಿಕ್‌ಗೆ ತಿಳಿಸಿದರು.

ದಲಿತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ: 10 ದಿನ ಕಳೆದರೂ ಆರೋಪಿಯನ್ನು ಬಂಧಿಸದ ಪೊಲೀಸ್
ಇದನ್ನೂ ಓದಿ: ಕೆಜಿಎಫ್: ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ- 10 ದಿನ ಕಳೆದರೂ ಆರೋಪಿಗಳನ್ನು ಬಂಧಿಸದ ಪೋಲಿಸರು

ಮುಷ್ಕರಕ್ಕೆ ಕಾರಣಗಳೇನು..?

ಭಾರತದ ಎರಡನೇ ಅತಿದೊಡ್ಡ ಇಂಧನ ವ್ಯಾಪಾರಿ ಮತ್ತು ಮೂರನೇ ಅತಿದೊಡ್ಡ ತೈಲ ಸಂಸ್ಕರಣಾಕಾರ ಘಟಕ ಬಿಪಿಸಿಎಲ್‌ನಲ್ಲಿ 2017 ರ ಜನವರಿ 1 ರಿಂದ ವೇತನ ಪರಿಷ್ಕರಣೆ ಬಾಕಿ ಉಳಿದಿದೆ. ಆದಾಗ್ಯೂ, ಒಕ್ಕೂಟಗಳು ಸಾರ್ವಜನಿಕ ಉದ್ಯಮ ಇಲಾಖೆಯ ಮಾರ್ಗಸೂಚಿಗಳ ಪ್ರಕಾರ ವೇತನ ಇತ್ಯರ್ಥಕ್ಕೆ ಒತ್ತಾಯಿಸುತ್ತಿವೆ.

“ಮ್ಯಾನೇಜ್ಮೆಂಟ್ ಬಹಳ ಕಡಿಮೆ ಪರಿಷ್ಕರಣೆಯನ್ನು ನೀಡಿದೆ, ಇದು ಐಒಸಿ, ಒಎನ್‌ಜಿಸಿ, ಎಚ್ಪಿಸಿಎಲ್‌ಗಳಿಗಿಂತ ಕೆಳಗಿದೆ. ದೀರ್ಘಕಾಲದಿಂದ ಬಿಪಿಸಿಎಲ್ ನೌಕರರು ಇತರ ಸಾರ್ವಜನಿಕ ವಲಯದ ತೈಲ ಕಂಪನಿಗಳಿಗೆ ಸಮನಾಗಿ ಪ್ರಯೋಜನಗಳನ್ನು ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದು ಚುಟಿಯಾ ಹೇಳಿದ್ದಾರೆ.

PC: News Click

ಇದನ್ನೂ ಓದಿ: ಉನ್ನಾವೊ: ಅತ್ಯಾಚಾರದ ದೂರು ದಾಖಲಿಸಲು ವಿಫರಾಲದ ಜಿಲ್ಲಾಧಿಕಾರಿ ವಿರುದ್ದ ಕ್ರಮಕ್ಕೆ ಸಿಬಿಐ ಶಿಫಾರಸ್ಸು

ಟೆಂಡರ್ ಮುಖಾಂತರ ಖಾಸಗೀಕರಣಕ್ಕಾಗಿ ಮಾರಾಟ / ಖರೀದಿ ಒಪ್ಪಂದದ ಷರತ್ತುಗಳನ್ನು ಅಂಗೀಕರಿಸುವುದು ನೌಕರರ ನಿವೃತ್ತಿಯ ಪ್ರಯೋಜನಗಳಾದ ಭವಿಷ್ಯ ನಿಧಿ, ಪಿಂಚಣಿ ಮತ್ತು ವೈದ್ಯಕೀಯ ಪ್ರಯೋಜನಗಳ ಮೊಟಕುಗೊಳಿಸುವಂತಾಗುತ್ತದೆ. ಈ ಕುರಿತು ಮಾತುಕತೆಗಾಗಿ ಸಭೆ ಕರೆದು, ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಲು ಮ್ಯಾನೆಜ್‌ಮೆಂಟ್ ನಿರಾಕರಿಸಿದೆ ಎಂದು ಕೊಚ್ಚಿನ್ ರಿಫೈನರಿ ವರ್ಕರ್ಸ್ ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಎಂ.ಜಿ. ಅಜಿ ತಿಳಿಸಿದ್ದಾರೆ.

ಕೊಚ್ಚಿ ರಿಫೈನರಿಸ್‌ನಿಂದಲೇ ಮುಷ್ಕರದಲ್ಲಿ 1,000 ಕ್ಕೂ ಹೆಚ್ಚು ನೌಕರರು ಭಾಗವಹಿಸಿದ್ದರು. ಕೊಚ್ಚಿ ರಿಫೈನರೀಸ್ ವರ್ಕರ್ಸ್ ಅಸೋಸಿಯೇಶನ್ (ಸಿಐಟಿಯು), ಕೊಚ್ಚಿನ್ ರಿಫೈನರೀಸ್ ಎಂಪ್ಲಾಯೀಸ್ ಅಸೋಸಿಯೇಶನ್ (ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್), ರಿಫೈನರಿ ಎಂಪ್ಲಾಯೀಸ್ ಯೂನಿಯನ್ ಮತ್ತು ಬಿಪಿಸಿಎಲ್ ಮಜ್ದೂರ್ ಸಂಘ (ಬಿಎಂಎಸ್) ಗೆ ಸೇರಿದ ನೌಕರರು.

ಕಂಪನಿಯ ಸಂಭಾವ್ಯ ಸ್ವಾಧೀನಪಡಿಸಿಕೊಳ್ಳುವವರಿಗೆ ಬಿಪಿಸಿಎಲ್ನಲ್ಲಿ ನೌಕರರ ರಕ್ಷಣೆ, ಆಸ್ತಿ ತೆಗೆಯುವಿಕೆ ಮತ್ತು ವ್ಯವಹಾರ ಮುಂದುವರಿಕೆ ಕುರಿತು ಮಾರ್ಗದರ್ಶನ ನೀಡುವ ಸರ್ಕಾರದ ನಿರ್ಧಾರವನ್ನು ಬಿಡ್ಡಿಂಗ್‌ ನಂತರದ ಹಂತದಲ್ಲಿ ತಿಳಿಸಲಾಗುತ್ತದೆ. ಇದನ್ನು ಹೂಡಿಕೆ ಇಲಾಖೆ ಹೊರಡಿಸಿದ ಖಾಸಗೀಕರಣ ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ. ಸರ್ಕಾರ ಬಿಪಿಸಿಎಲ್‌ನಲ್ಲಿ ತನ್ನ ಸಂಪೂರ್ಣ 52.98% ಪಾಲನ್ನು ಮಾರಾಟ ಮಾಡುತ್ತಿದೆ.

ಸೆಪ್ಟೆಂಬರ್ 30 ರ ನಂತರ ಅರ್ಹರಿಗೆ ಹಣಕಾಸು ಅಥವಾ ಬೆಲೆ ಬಿಡ್‌ಗಳನ್ನು ಸಲ್ಲಿಸುವಂತೆ ಕೇಳಲಾಗುತ್ತದೆ.


ಇದನ್ನೂ ಓದಿ: ಜನರ ಮೇಲೆ ಸೋಂಕು ನಿವಾರಕ ಸಿಂಪಡಣೆ ಹಾನಿಕಾರಕ: ಕ್ರಮ ಕೈಗೊಳ್ಳುವಂತೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...