Homeಚಳವಳಿಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಟೆಂಡರ್ ಮುಖಾಂತರ ಖಾಸಗೀಕರಣಕ್ಕಾಗಿ ಮಾರಾಟ / ಖರೀದಿ ಒಪ್ಪಂದದ ಷರತ್ತುಗಳನ್ನು ಅಂಗೀಕರಿಸುವುದು, ನೌಕರರ ನಿವೃತ್ತಿಯ ಪ್ರಯೋಜನಗಳಾದ ಭವಿಷ್ಯ ನಿಧಿ, ಪಿಂಚಣಿ ಮತ್ತು ವೈದ್ಯಕೀಯ ಪ್ರಯೋಜನಗಳ ಮೊಟಕುಗೊಳಿಸುವಂತಾಗುತ್ತದೆ.

- Advertisement -
- Advertisement -

ಭಾರತದ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ 4,800 ಕ್ಕೂ ಹೆಚ್ಚು ಉದ್ಯೋಗಿಗಳು  ಸರ್ಕಾರದ ಖಾಸಗೀಕರಣದ ವಿರುದ್ಧ 48 ಗಂಟೆಗಳು ಮುಷ್ಕರ ನಡೆಸಿದ್ದಾರೆ. ಕಂಪನಿಯ ತ್ವರಿತ ಖಾಸಗೀಕರಣಕ್ಕೆ ಅನುಕೂಲವಾಗುವ ದೀರ್ಘಾವಧಿಯ ವೇತನ ಇತ್ಯರ್ಥಕ್ಕೆ ಸಹಿ ಹಾಕುವ ನಿರ್ಧಾರದ ವಿರುದ್ಧ ಮುಷ್ಕರ ನಡೆದಿದೆ.

ಸೋಮವಾರ ಬೆಳಿಗ್ಗೆ ಪ್ರಾರಂಭವಾದ ಮುಷ್ಕರಕ್ಕೆ ಬಿಪಿಸಿಎಲ್‌ನ ಕೊಚ್ಚಿ ಮತ್ತು ಮುಂಬೈ ಸಂಸ್ಕರಣಾಗಾರಗಳಲ್ಲಿನ 15 ಒಕ್ಕೂಟಗಳು ಮತ್ತು ದೇಶದ ವಿವಿಧ ಭಾಗಗಳ ನೌಕರರು ಸಾಥ್ ನೀಡಿದ್ದರು. ಕೊಚ್ಚಿ ಮತ್ತು ಮುಂಬೈ  ಸಂಸ್ಕರಣಾಗಾರಗಳು, ಎಲ್‌ಪಿಜಿ ಸ್ಥಾವರಗಳು ಮತ್ತು ಗುರುತು ಮಾಡಿದ್ದ ಡಿಪೋಗಳನ್ನು ಬಂದ್ ಮಾಡಿ ಮೊದಲ ದಿನ ಪ್ರತಿಭಟನೆ ಮಾಡಲಾಗಿದೆ ಎಂದು ಪೆಟ್ರೋಲಿಯಂ ಮತ್ತು ಗ್ಯಾಸ್ ವರ್ಕರ್ಸ್ ಫೆಡರೇಶನ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ನೊಗೆನ್ ಚುಟಿಯಾ ನ್ಯೂಸ್‌ಕ್ಲಿಕ್‌ಗೆ ತಿಳಿಸಿದರು.

ದಲಿತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ: 10 ದಿನ ಕಳೆದರೂ ಆರೋಪಿಯನ್ನು ಬಂಧಿಸದ ಪೊಲೀಸ್
ಇದನ್ನೂ ಓದಿ: ಕೆಜಿಎಫ್: ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ- 10 ದಿನ ಕಳೆದರೂ ಆರೋಪಿಗಳನ್ನು ಬಂಧಿಸದ ಪೋಲಿಸರು

ಮುಷ್ಕರಕ್ಕೆ ಕಾರಣಗಳೇನು..?

ಭಾರತದ ಎರಡನೇ ಅತಿದೊಡ್ಡ ಇಂಧನ ವ್ಯಾಪಾರಿ ಮತ್ತು ಮೂರನೇ ಅತಿದೊಡ್ಡ ತೈಲ ಸಂಸ್ಕರಣಾಕಾರ ಘಟಕ ಬಿಪಿಸಿಎಲ್‌ನಲ್ಲಿ 2017 ರ ಜನವರಿ 1 ರಿಂದ ವೇತನ ಪರಿಷ್ಕರಣೆ ಬಾಕಿ ಉಳಿದಿದೆ. ಆದಾಗ್ಯೂ, ಒಕ್ಕೂಟಗಳು ಸಾರ್ವಜನಿಕ ಉದ್ಯಮ ಇಲಾಖೆಯ ಮಾರ್ಗಸೂಚಿಗಳ ಪ್ರಕಾರ ವೇತನ ಇತ್ಯರ್ಥಕ್ಕೆ ಒತ್ತಾಯಿಸುತ್ತಿವೆ.

“ಮ್ಯಾನೇಜ್ಮೆಂಟ್ ಬಹಳ ಕಡಿಮೆ ಪರಿಷ್ಕರಣೆಯನ್ನು ನೀಡಿದೆ, ಇದು ಐಒಸಿ, ಒಎನ್‌ಜಿಸಿ, ಎಚ್ಪಿಸಿಎಲ್‌ಗಳಿಗಿಂತ ಕೆಳಗಿದೆ. ದೀರ್ಘಕಾಲದಿಂದ ಬಿಪಿಸಿಎಲ್ ನೌಕರರು ಇತರ ಸಾರ್ವಜನಿಕ ವಲಯದ ತೈಲ ಕಂಪನಿಗಳಿಗೆ ಸಮನಾಗಿ ಪ್ರಯೋಜನಗಳನ್ನು ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದು ಚುಟಿಯಾ ಹೇಳಿದ್ದಾರೆ.

PC: News Click

ಇದನ್ನೂ ಓದಿ: ಉನ್ನಾವೊ: ಅತ್ಯಾಚಾರದ ದೂರು ದಾಖಲಿಸಲು ವಿಫರಾಲದ ಜಿಲ್ಲಾಧಿಕಾರಿ ವಿರುದ್ದ ಕ್ರಮಕ್ಕೆ ಸಿಬಿಐ ಶಿಫಾರಸ್ಸು

ಟೆಂಡರ್ ಮುಖಾಂತರ ಖಾಸಗೀಕರಣಕ್ಕಾಗಿ ಮಾರಾಟ / ಖರೀದಿ ಒಪ್ಪಂದದ ಷರತ್ತುಗಳನ್ನು ಅಂಗೀಕರಿಸುವುದು ನೌಕರರ ನಿವೃತ್ತಿಯ ಪ್ರಯೋಜನಗಳಾದ ಭವಿಷ್ಯ ನಿಧಿ, ಪಿಂಚಣಿ ಮತ್ತು ವೈದ್ಯಕೀಯ ಪ್ರಯೋಜನಗಳ ಮೊಟಕುಗೊಳಿಸುವಂತಾಗುತ್ತದೆ. ಈ ಕುರಿತು ಮಾತುಕತೆಗಾಗಿ ಸಭೆ ಕರೆದು, ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಲು ಮ್ಯಾನೆಜ್‌ಮೆಂಟ್ ನಿರಾಕರಿಸಿದೆ ಎಂದು ಕೊಚ್ಚಿನ್ ರಿಫೈನರಿ ವರ್ಕರ್ಸ್ ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಎಂ.ಜಿ. ಅಜಿ ತಿಳಿಸಿದ್ದಾರೆ.

ಕೊಚ್ಚಿ ರಿಫೈನರಿಸ್‌ನಿಂದಲೇ ಮುಷ್ಕರದಲ್ಲಿ 1,000 ಕ್ಕೂ ಹೆಚ್ಚು ನೌಕರರು ಭಾಗವಹಿಸಿದ್ದರು. ಕೊಚ್ಚಿ ರಿಫೈನರೀಸ್ ವರ್ಕರ್ಸ್ ಅಸೋಸಿಯೇಶನ್ (ಸಿಐಟಿಯು), ಕೊಚ್ಚಿನ್ ರಿಫೈನರೀಸ್ ಎಂಪ್ಲಾಯೀಸ್ ಅಸೋಸಿಯೇಶನ್ (ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್), ರಿಫೈನರಿ ಎಂಪ್ಲಾಯೀಸ್ ಯೂನಿಯನ್ ಮತ್ತು ಬಿಪಿಸಿಎಲ್ ಮಜ್ದೂರ್ ಸಂಘ (ಬಿಎಂಎಸ್) ಗೆ ಸೇರಿದ ನೌಕರರು.

ಕಂಪನಿಯ ಸಂಭಾವ್ಯ ಸ್ವಾಧೀನಪಡಿಸಿಕೊಳ್ಳುವವರಿಗೆ ಬಿಪಿಸಿಎಲ್ನಲ್ಲಿ ನೌಕರರ ರಕ್ಷಣೆ, ಆಸ್ತಿ ತೆಗೆಯುವಿಕೆ ಮತ್ತು ವ್ಯವಹಾರ ಮುಂದುವರಿಕೆ ಕುರಿತು ಮಾರ್ಗದರ್ಶನ ನೀಡುವ ಸರ್ಕಾರದ ನಿರ್ಧಾರವನ್ನು ಬಿಡ್ಡಿಂಗ್‌ ನಂತರದ ಹಂತದಲ್ಲಿ ತಿಳಿಸಲಾಗುತ್ತದೆ. ಇದನ್ನು ಹೂಡಿಕೆ ಇಲಾಖೆ ಹೊರಡಿಸಿದ ಖಾಸಗೀಕರಣ ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ. ಸರ್ಕಾರ ಬಿಪಿಸಿಎಲ್‌ನಲ್ಲಿ ತನ್ನ ಸಂಪೂರ್ಣ 52.98% ಪಾಲನ್ನು ಮಾರಾಟ ಮಾಡುತ್ತಿದೆ.

ಸೆಪ್ಟೆಂಬರ್ 30 ರ ನಂತರ ಅರ್ಹರಿಗೆ ಹಣಕಾಸು ಅಥವಾ ಬೆಲೆ ಬಿಡ್‌ಗಳನ್ನು ಸಲ್ಲಿಸುವಂತೆ ಕೇಳಲಾಗುತ್ತದೆ.


ಇದನ್ನೂ ಓದಿ: ಜನರ ಮೇಲೆ ಸೋಂಕು ನಿವಾರಕ ಸಿಂಪಡಣೆ ಹಾನಿಕಾರಕ: ಕ್ರಮ ಕೈಗೊಳ್ಳುವಂತೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...