Homeಮುಖಪುಟದೇಶದಲ್ಲಿ 48% ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳು: NITI ಆಯೋಗದ ಉಪಾಧ್ಯಕ್ಷ

ದೇಶದಲ್ಲಿ 48% ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳು: NITI ಆಯೋಗದ ಉಪಾಧ್ಯಕ್ಷ

- Advertisement -
- Advertisement -

ದೇಶದಲ್ಲಿ ಶೇ. 45ರಷ್ಟು ಮ್ಯಾನೇಜ್‌ಮೆಂಟ್ ಮತ್ತು ಶೇ.48ರಷ್ಟು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗಿದ್ದಾರೆ ಎಂದು NITI ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ.

ಗುರುವಾರ, ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ ಆಯೋಜಿಸಿದ್ದ ‘ಉನ್ನತ ಶಿಕ್ಷಣ ಸಂವಾದ’ವನ್ನು ಉದ್ದೇಶಿಸಿ ಮಾತನಾಡಿದ ಡಾ.ಕುಮಾರ್, ಉನ್ನತ ಶಿಕ್ಷಣದಲ್ಲಿ ನಿರ್ದಿಷ್ಟವಾಗಿ ಮ್ಯಾನೇಜ್‌ಮೆಂಟ್ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಸಾಧಿಸಲು ಒತ್ತು ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಉನ್ನತ ಶಿಕ್ಷಣದಲ್ಲಿ ಶಕ್ತಿ ಕಡಿಮೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅವರು, ದೇಶದಲ್ಲಿ ಉನ್ನತ ಶಿಕ್ಷಣ ಕುಂಠಿತವಾಗಿದೆ. ಶಿಕ್ಷಣದ ಗುಣಮಟ್ಟವನ್ನು ಉತ್ತಮಗೊಳಿಸಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಮ್ಯಾನೇಜ್‌ಮೆಂಟ್ ಕಾಲೇಜುಗಳು ಉದ್ಯಮದ ಅಗತ್ಯತೆಗಳನ್ನು ಪೂರೈಸಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಮೆಷಿನ್ ಲರ್ನಿಂಗ್, ಡೀಪ್ ಲರ್ನಿಂಗ್, ರೋಬೋಟಿಕ್ಸ್ ಮುಂತಾದ ಉದ್ಯೋಗ ಆಧಾರಿತ ಕೋರ್ಸ್ ಗಳನ್ನು ಪ್ರಾರಂಭಿಸಬೇಕು ಸಲಹೆ ನೀಡಿದ್ದಾರೆ.

US UK, ಜಪಾನ್ ಮತ್ತು ಕೆಲವು ಯುರೋಪಿಯನ್ ರಾಷ್ಟ್ರಗಳ ಸಾಲಿನಲ್ಲಿ ಇರುವ ಕೋರ್ಸ್ ಗಳನ್ನು ಸಹ ಅಳವಡಿಸಿಕೊಳ್ಳಿ ಎಂದಿರುವ ಅವರು, ನಮ್ಮ ದೇಶದ ಶೈಕ್ಷಣಿಕ ನೀತಿಯನ್ನು ಸುಧಾರಿಸಬೇಕು. ಅಂದು ಮಾತ್ರ ನಾವು ಉತ್ತಮ ಪಲಿತಾಂಶ ನೀರಿಕ್ಷಿಸಲು ಸಾಧ್ಯ ಎಂದು ಹೇಳಿದ್ದಾರೆ.

ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ಒತ್ತು ನೀಡಿದ ಡಾ.ಕುಮಾರ್, ಭಾರತವು ವಾರ್ಷಿಕವಾಗಿ ತನ್ನ ಬಜೆಟ್‌ನ 0.8 ಪ್ರತಿಶತವನ್ನು ಆರ್ & ಡಿಗೆ ಖರ್ಚು ಮಾಡುತ್ತದೆ. ಇದರ ಪರಿಣಾಮವಾಗಿ ದೇಶವು ಶಿಕ್ಷಣದಲ್ಲಿ ತುಂಬಾ ಹಿಂದುಳಿದಿದೆ. ದಕ್ಷಿಣ ಕೊರಿಯಾದಂತಹ ದೇಶಗಳು ತಮ್ಮ ಬಜೆಟ್ ನಲ್ಲಿ 4.5 ಪ್ರತಿಶತವನ್ನು ಖರ್ಚು ಮಾಡುತ್ತವೆ. ಈ ಕಾರಣಕ್ಕೆ ಉತ್ತಮ ಫಲಿತಾಂಶಗಳನ್ನು ನೀಡುತ್ತವೆ. ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಅಂತಾರಾಜ್ಯ ಜಲವಿವಾದ ಸಂಬಂಧ ಫೆಬ್ರವರಿಯಲ್ಲಿ ಸರ್ವ ಪಕ್ಷ ಸಭೆ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಾಜಕಾರಣಿಗಳು ಮೊದಲು ವಿದ್ಯಾವಂಥರಾಗಬೇಕು ಏಕೆಂದರೆ ಆವರಿಗೆ ಶಿಕ್ಷಣ ಎಷ್ಟು ಮುಖ್ಯ ತಿಳಿಯ ಬೇಕು .
    ಆದರೆ ನಮ್ಮ ನೆಚ್ಚಿನ ಪ್ರಧಾನಿಯ ವರು ಉದ್ಯೋಗ ಕೇಳಿದರೆ ಪಕೋಡ ಬಜ್ಜಿ ಮಾಡು ಅನ್ನುತ್ತಾರೆ ಇದು ಎಷ್ಟರ ಮಟ್ಟಿಗೆ ಸರಿ

  2. ನಮ್ಮನೆಚ್ಚಿನ ಪ್ರಧಾನಿಯವರ ಪ್ರಕಾರ ನಿರುದ್ಯೋಗಿಗಳಾದ ನಾವು ಪಕೋಡಮಾಡುವ,ಆದರೆ ಈ ಉದ್ಯೋಗದಿಂದಾಗುವ ಉತ್ವನ್ನಗಳು global level ಮತ್ತು ಉದಾರೀಕರಣದ ಕಲ್ಪನೆಯನ್ನು ಇಣುಕಿನೋಡಲು ಭಯಂಕರ ಹೆದ ರಿ ಸೋಲುತ್ತವೆ. ಅಂತರರಾಷ್ಟ್ರೀಯಮಟ್ಟದಲ್ಲಿ ಈ ಪಕೋಡ ಉತ್ವನ್ನವು ಬೆಳೆಯದೇಹೋದರೆ ವಿದೇಶಿವಿನಿಮಯ ಹೇಗೆ ಸಾದ್ಯ? ವಿದೇಶದಿಂದ ಹಣ ಹೇಗೆ ಬಂದಾವೂ?
    ಅಂದಮೇಲೆ ನಮ್ಮ ಪ್ರಧಾನಿಯವರ ಈ B Tech in ಪಕೋಡ and it’s research ಮುಂದುವರಿಸುವುದು ಮತ್ತು ಇದರ ಬಗ್ಗೆ ಅಂತರರಾಷ್ಟ್ರೀಯ.ಮಟ್ಟದಲ್ಲಿ ಮಾತನಾಡುವುದು ಎಷ್ಟುಸರಿ.
    ತಿಳಿದ ಆರ್ಥಿಕ ತಜ್ಞರು ಅಭಿಪ್ರಾಯವನ್ನು ವ್ಯಕ್ತಪಡಿಸಿ.
    ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....