Homeಮುಖಪುಟದೇಶದಲ್ಲಿ 48% ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳು: NITI ಆಯೋಗದ ಉಪಾಧ್ಯಕ್ಷ

ದೇಶದಲ್ಲಿ 48% ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳು: NITI ಆಯೋಗದ ಉಪಾಧ್ಯಕ್ಷ

- Advertisement -
- Advertisement -

ದೇಶದಲ್ಲಿ ಶೇ. 45ರಷ್ಟು ಮ್ಯಾನೇಜ್‌ಮೆಂಟ್ ಮತ್ತು ಶೇ.48ರಷ್ಟು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗಿದ್ದಾರೆ ಎಂದು NITI ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ.

ಗುರುವಾರ, ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ ಆಯೋಜಿಸಿದ್ದ ‘ಉನ್ನತ ಶಿಕ್ಷಣ ಸಂವಾದ’ವನ್ನು ಉದ್ದೇಶಿಸಿ ಮಾತನಾಡಿದ ಡಾ.ಕುಮಾರ್, ಉನ್ನತ ಶಿಕ್ಷಣದಲ್ಲಿ ನಿರ್ದಿಷ್ಟವಾಗಿ ಮ್ಯಾನೇಜ್‌ಮೆಂಟ್ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಸಾಧಿಸಲು ಒತ್ತು ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಉನ್ನತ ಶಿಕ್ಷಣದಲ್ಲಿ ಶಕ್ತಿ ಕಡಿಮೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅವರು, ದೇಶದಲ್ಲಿ ಉನ್ನತ ಶಿಕ್ಷಣ ಕುಂಠಿತವಾಗಿದೆ. ಶಿಕ್ಷಣದ ಗುಣಮಟ್ಟವನ್ನು ಉತ್ತಮಗೊಳಿಸಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಮ್ಯಾನೇಜ್‌ಮೆಂಟ್ ಕಾಲೇಜುಗಳು ಉದ್ಯಮದ ಅಗತ್ಯತೆಗಳನ್ನು ಪೂರೈಸಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಮೆಷಿನ್ ಲರ್ನಿಂಗ್, ಡೀಪ್ ಲರ್ನಿಂಗ್, ರೋಬೋಟಿಕ್ಸ್ ಮುಂತಾದ ಉದ್ಯೋಗ ಆಧಾರಿತ ಕೋರ್ಸ್ ಗಳನ್ನು ಪ್ರಾರಂಭಿಸಬೇಕು ಸಲಹೆ ನೀಡಿದ್ದಾರೆ.

US UK, ಜಪಾನ್ ಮತ್ತು ಕೆಲವು ಯುರೋಪಿಯನ್ ರಾಷ್ಟ್ರಗಳ ಸಾಲಿನಲ್ಲಿ ಇರುವ ಕೋರ್ಸ್ ಗಳನ್ನು ಸಹ ಅಳವಡಿಸಿಕೊಳ್ಳಿ ಎಂದಿರುವ ಅವರು, ನಮ್ಮ ದೇಶದ ಶೈಕ್ಷಣಿಕ ನೀತಿಯನ್ನು ಸುಧಾರಿಸಬೇಕು. ಅಂದು ಮಾತ್ರ ನಾವು ಉತ್ತಮ ಪಲಿತಾಂಶ ನೀರಿಕ್ಷಿಸಲು ಸಾಧ್ಯ ಎಂದು ಹೇಳಿದ್ದಾರೆ.

ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ಒತ್ತು ನೀಡಿದ ಡಾ.ಕುಮಾರ್, ಭಾರತವು ವಾರ್ಷಿಕವಾಗಿ ತನ್ನ ಬಜೆಟ್‌ನ 0.8 ಪ್ರತಿಶತವನ್ನು ಆರ್ & ಡಿಗೆ ಖರ್ಚು ಮಾಡುತ್ತದೆ. ಇದರ ಪರಿಣಾಮವಾಗಿ ದೇಶವು ಶಿಕ್ಷಣದಲ್ಲಿ ತುಂಬಾ ಹಿಂದುಳಿದಿದೆ. ದಕ್ಷಿಣ ಕೊರಿಯಾದಂತಹ ದೇಶಗಳು ತಮ್ಮ ಬಜೆಟ್ ನಲ್ಲಿ 4.5 ಪ್ರತಿಶತವನ್ನು ಖರ್ಚು ಮಾಡುತ್ತವೆ. ಈ ಕಾರಣಕ್ಕೆ ಉತ್ತಮ ಫಲಿತಾಂಶಗಳನ್ನು ನೀಡುತ್ತವೆ. ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಅಂತಾರಾಜ್ಯ ಜಲವಿವಾದ ಸಂಬಂಧ ಫೆಬ್ರವರಿಯಲ್ಲಿ ಸರ್ವ ಪಕ್ಷ ಸಭೆ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಾಜಕಾರಣಿಗಳು ಮೊದಲು ವಿದ್ಯಾವಂಥರಾಗಬೇಕು ಏಕೆಂದರೆ ಆವರಿಗೆ ಶಿಕ್ಷಣ ಎಷ್ಟು ಮುಖ್ಯ ತಿಳಿಯ ಬೇಕು .
    ಆದರೆ ನಮ್ಮ ನೆಚ್ಚಿನ ಪ್ರಧಾನಿಯ ವರು ಉದ್ಯೋಗ ಕೇಳಿದರೆ ಪಕೋಡ ಬಜ್ಜಿ ಮಾಡು ಅನ್ನುತ್ತಾರೆ ಇದು ಎಷ್ಟರ ಮಟ್ಟಿಗೆ ಸರಿ

  2. ನಮ್ಮನೆಚ್ಚಿನ ಪ್ರಧಾನಿಯವರ ಪ್ರಕಾರ ನಿರುದ್ಯೋಗಿಗಳಾದ ನಾವು ಪಕೋಡಮಾಡುವ,ಆದರೆ ಈ ಉದ್ಯೋಗದಿಂದಾಗುವ ಉತ್ವನ್ನಗಳು global level ಮತ್ತು ಉದಾರೀಕರಣದ ಕಲ್ಪನೆಯನ್ನು ಇಣುಕಿನೋಡಲು ಭಯಂಕರ ಹೆದ ರಿ ಸೋಲುತ್ತವೆ. ಅಂತರರಾಷ್ಟ್ರೀಯಮಟ್ಟದಲ್ಲಿ ಈ ಪಕೋಡ ಉತ್ವನ್ನವು ಬೆಳೆಯದೇಹೋದರೆ ವಿದೇಶಿವಿನಿಮಯ ಹೇಗೆ ಸಾದ್ಯ? ವಿದೇಶದಿಂದ ಹಣ ಹೇಗೆ ಬಂದಾವೂ?
    ಅಂದಮೇಲೆ ನಮ್ಮ ಪ್ರಧಾನಿಯವರ ಈ B Tech in ಪಕೋಡ and it’s research ಮುಂದುವರಿಸುವುದು ಮತ್ತು ಇದರ ಬಗ್ಗೆ ಅಂತರರಾಷ್ಟ್ರೀಯ.ಮಟ್ಟದಲ್ಲಿ ಮಾತನಾಡುವುದು ಎಷ್ಟುಸರಿ.
    ತಿಳಿದ ಆರ್ಥಿಕ ತಜ್ಞರು ಅಭಿಪ್ರಾಯವನ್ನು ವ್ಯಕ್ತಪಡಿಸಿ.
    ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...