Homeಮುಖಪುಟಶೀಘ್ರದಲ್ಲೇ ಅಮೆರಿಕದಿಂದ 487 ಅಕ್ರಮ ಭಾರತೀಯ ವಲಸಿಗರ ಗಡೀಪಾರು: ಕೇಂದ್ರ ಸರ್ಕಾರ

ಶೀಘ್ರದಲ್ಲೇ ಅಮೆರಿಕದಿಂದ 487 ಅಕ್ರಮ ಭಾರತೀಯ ವಲಸಿಗರ ಗಡೀಪಾರು: ಕೇಂದ್ರ ಸರ್ಕಾರ

- Advertisement -
- Advertisement -

ಅಮೆರಿಕದಲ್ಲಿ ವಾಸಿಸುತ್ತಿರುವ ಇನ್ನೂ 487 ಅಕ್ರಮ ಭಾರತೀಯ ವಲಸಿಗರನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಅವರನ್ನು ಶೀಘ್ರದಲ್ಲೇ ಗಡೀಪಾರು ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಶುಕ್ರವಾರ ಘೋಷಿಸಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, “487 ಶಂಕಿತ ಭಾರತೀಯ ಪ್ರಜೆಗಳನ್ನು ಗಡೀಪಾರು ಆದೇಶಗಳನ್ನು ನೀಡಲಾಗಿದೆ ಎಂದು ಅಮೆರಿಕ ಭಾರತ ಸರ್ಕಾರಕ್ಕೆ ತಿಳಿಸಿದೆ” ಎಂದು ಹೇಳಿದರು.

“ಅಂತಿಮ ಗಡೀಪಾರು ಆದೇಶಗಳೊಂದಿಗೆ 487 ಶಂಕಿತ ಭಾರತೀಯ ನಾಗರಿಕರು ಇದ್ದಾರೆ ಎಂದು ನಮಗೆ ತಿಳಿಸಲಾಗಿದೆ” ಎಂದು ಮಿಶ್ರಿ ಹೇಳಿದರು.

“ಹೆಚ್ಚಿನ ವಿವರಗಳು ಹೊರಬರುತ್ತಿದ್ದಂತೆ ಈ ಸಂಖ್ಯೆಗಳು ಹೆಚ್ಚಾಗಬಹುದು. ಆದರೆ, ಇತರ ವ್ಯಕ್ತಿಗಳ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಯುಎಸ್ ಅಧಿಕಾರಿಗಳು ಇನ್ನೂ ಒದಗಿಸಿಲ್ಲ” ಎಂದು ಎಂದು ವಿದೇಶಾಂಗ ಕಾರ್ಯದರ್ಶಿ ಹೇಳಿದರು. ಗಡೀಪಾರು ಪಟ್ಟಿಯಲ್ಲಿರುವ ಪ್ರಸ್ತುತ 487 ವಲಸಿಗರ ಗುರುತುಗಳನ್ನು ಸರ್ಕಾರ ಪರಿಶೀಲಿಸಿದೆ.

104 ಗಡೀಪಾರು ಮಾಡಲಾದ ವಲಸಿಗರನ್ನು ಹೊತ್ತೊಯ್ಯುವ ಯುಎಸ್ ಮಿಲಿಟರಿ ವಿಮಾನವು ಜನವರಿ 5 ರಂದು ಅಮೃತಸರದಲ್ಲಿ ಬಂದಿಳಿದಿದ್ದು, ಇದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ಅಡಿಯಲ್ಲಿ ಅಕ್ರಮ ವಲಸಿಗರ ವಿರುದ್ಧದ ಕಠಿಣ ಕ್ರಮದ ಭಾಗವಾಗಿ ಮೊದಲ ದೊಡ್ಡ ಪ್ರಮಾಣದ ಗಡೀಪಾರು ಪ್ರಕ್ರಿಯೆ ಇದಾಗಿತ್ತು.

ಅನಧಿಕೃತ ಮಾರ್ಗಗಳ ಮೂಲಕ ಅಮೆರಿಕಕ್ಕೆ ಪ್ರವೇಶಿಸಲು ಯತ್ನಿಸಿದವರು, “ಪ್ರಯಾಣದುದ್ದಕ್ಕೂ ತಮ್ಮ ಕೈ ಮತ್ತು ಕಾಲುಗಳನ್ನು ಬಂಧಿಸಲಾಗಿತ್ತು; ಅಮೃತಸರದಲ್ಲಿ ಇಳಿದ ನಂತರವೇ ಅವುಗಳನ್ನು ಬಿಚ್ಚಲಾಯಿತು” ಎಂದು ಹೇಳಿಕೊಂಡರು.

ಅಮೆರಿಕದಿಂದ ಗಡೀಪಾರು ಮಾಡಲಾದ ಭಾರತೀಯ ನಾಗರಿಕರ ಮೇಲಿನ ಅಮಾನವೀಯ ವರ್ತನೆಯ ವಿಷಯದ ಬಗ್ಗೆ ಮಾತನಾಡಿದ ಮಿಶ್ರಿ, “ಭಾರತ ಸರ್ಕಾರವು ಅಮೆರಿಕ ಅಧಿಕಾರಿಗಳೊಂದಿಗೆ ಈ ವಿಷಯದ ಕುರಿತು ಚರ್ಚಿಸುತ್ತದೆ” ಎಂದು ಹೇಳಿದರು.

ಇದನ್ನೂ ಓದಿ; ‘ಕತ್ತೆ ಮಾರ್ಗ’ದ ಮೂಲಕ ಅಮೆರಿಕ ಪ್ರವೇಶಿಸಲು ₹72 ಲಕ್ಷ ಪಾವತಿಸಿದ್ದ ಹರಿಯಾಣದ ಆಕಾಶ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...