Homeಮುಖಪುಟ4ನೇ ತರಗತಿಯ ಮಗುವಿನ ಮೇಲೆ ಶಿಕ್ಷಕರಿಂದಲೇ ಅತ್ಯಾಚಾರ: ಜಾರ್ಖಂಡ್ ನಲ್ಲೊಂದು ಅಮಾನವೀಯ ಕೃತ್ಯ

4ನೇ ತರಗತಿಯ ಮಗುವಿನ ಮೇಲೆ ಶಿಕ್ಷಕರಿಂದಲೇ ಅತ್ಯಾಚಾರ: ಜಾರ್ಖಂಡ್ ನಲ್ಲೊಂದು ಅಮಾನವೀಯ ಕೃತ್ಯ

- Advertisement -
- Advertisement -

ಜಾರ್ಖಂಡ್‌ನ ಧನ್ಬಾದ್ ಜಿಲ್ಲೆಯ ಶಾಲೆಯೊಂದರ 4 ನೇ ತರಗತಿ ಮಗುವನ್ನು ಶಾಲೆಯ ವಿಶ್ರಾಂತಿ ಕೊಠಡಿಯಲ್ಲಿ ಉಪ ಪ್ರಾಂಶುಪಾಲರು ಮತ್ತು ತರಗತಿ ಶಿಕ್ಷಕರು ಸೇರಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಒಂದು ತಿಂಗಳ ಹಿಂದೆ ಶಾಲೆಯ ವಿಶ್ರಾಂತಿ ಕೊಠಡಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ ಶಾಲೆಯ ಇಬ್ಬರು ಶಿಕ್ಷಕರ ವಿರುದ್ಧ ಕತ್ರಾಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂಬತ್ತು ವರ್ಷದ ಸಂತ್ರಸ್ತ ಮಗುವಿನ ದೂರಿನ ಆಧಾರದ ಮೇಲೆ ಶನಿವಾರ ಎಫ್‌ಐಆರ್ ದಾಖಲಿಸಲಾಗಿದೆ. ವಿಷಯ ಗಂಭೀರವಾಗಿದೆ, ಹಾಗಾಗಿ “ಪೊಲೀಸರು ಈ ಪ್ರಕರಣವನ್ನು ಎಲ್ಲಾ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ ಮತ್ತು ವೈದ್ಯಕೀಯ ಪರೀಕ್ಷಾ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು.” ಎಂದು ಧನ್ಬಾದ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಿಶೋರ್ ಕೌಶಲ್ ಭಾನುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ

ಪಾಟಲಿಪುತ್ರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಬಾಲಕಿಯ ವೈದ್ಯಕೀಯ ಪರೀಕ್ಷೆಯನ್ನು ಭಾನುವಾರ ನಡೆಸಲಾಗಿದೆ ಎಂದು ಪಿಎಂಸಿಎಚ್ ಅಧೀಕ್ಷಕ ಡಾ.ಎಚ್.ಕೆ.ಸಿಂಗ್ ತಿಳಿಸಿದ್ದಾರೆ. ಎಫ್‌ಐಆರ್ ದಾಖಲಾದ ನಂತರ ಪೊಲೀಸರು ಬಾಲಕಿಯ ಹೇಳಿಕೆಯನ್ನು ಸೆಕ್ಷನ್ 164 ರ ಅಡಿಯಲ್ಲಿ ಸ್ಥಳೀಯ ನ್ಯಾಯಾಲಯದಲ್ಲಿ ದಾಖಲಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆ ಮತ್ತು ಪೊಕ್ಸೊ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಉಪ-ಪ್ರಾಂಶುಪಾಲರು ಮತ್ತು ಶಾಲೆಯ ಸಿಕ್ ರೂಂ ನರ್ಸ್ ಸೇರಿದಂತೆ ಇಬ್ಬರು ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಏನಾಯಿತು?
ಎಫ್‌ಐಆರ್ ಪ್ರಕಾರ, ಒಂದು ತಿಂಗಳ ಹಿಂದೆ ಬಾಲಕಿ ತನ್ನ ತರಗತಿಯಲ್ಲಿ ಮೂರ್ಚೆ ಹೋಗಿದ್ದಳು. ಆಗ ಒಬ್ಬ ಶಿಕ್ಷಕ ಬಾಲಕಿಯನ್ನು ವಿಶ್ರಾಂತಿ ಕೊಠಡಿಗೆ ಕಳಿಸಿದ್ದನು. ಅಲ್ಲಿ ನರ್ಸ್ ಅವಳ ಔಷಧಿಯನ್ನು ಕೊಟ್ಟ ನಂತರ ಬಾಲಕಿ ಪ್ರಜ್ಞೆ ತಪ್ಪಿದ್ದಾಳೆ. ಆಗ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಉಪ ಪ್ರಾಂಶುಪಾಲರು ಮತ್ತು ತರಗತಿ ಶಿಕ್ಷಕರು (ಕ್ಲಾಸ್ ಟೀಚರ್) ಈ ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆ ಬಾಲಕಿಯ ಆರೋಗ್ಯ ಸುಧಾರಿಸದ ಕಾರಣದಿಂದ ಕೆಲವು ದಿನಗಳ ನಂತರ ಬಾಲಕಿಯ ಕುಟುಂಬದವರು ವೈದ್ಯರ ಬಳಿಗೆ ಕರೆದೊಯ್ದರು. ಪರೀಕ್ಷಿಸಿದ ವೈದ್ಯರು ಬಾಲಕಿಯ ಮೇಲೆ ಏನಾದರೂ ಸಂಭವಿಸಿದೆ ಎಂದು ಭಾವಿಸಿ ವಿಚಾರಿಸಿದಾಗ ಬಾಲಕಿಯು ತನ್ನ ಮೇಲಾದ ದೌರ್ಜನ್ಯವನ್ನು ತನ್ನ ಹೆತ್ತವರಿಗೆ ವಿವರಿಸಿದ್ದಾಳೆ. ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಾಲೆಯ ಪ್ರಾಂಶುಪಾಲರನ್ನು ವಿಚಾರಣೆಗೊಳಪಡಿಸಿದೆ.

ಆಪಾದಿತ ಘಟನೆಯ ಬಗ್ಗೆ ಸಂತ್ರಸ್ತ ಮಗು ತನಗೆ ಮಾಹಿತಿ ನೀಡಿಲ್ಲ ಎಂದು ಶಾಲೆಯ ಪ್ರಾಂಶುಪಾಲ ತನುಶ್ರೀ ಬ್ಯಾನರ್ಜಿ ತಿಳಿಸಿದ್ದಾರೆ. “ಶಾಲೆಯ ವಿಶ್ರಾಂತಿ ಕೊಠಡಿಯು ಯಾವಾಗಲೂ ತುಂಬಿರುವುದರಿಂದ ಇದನ್ನು ನಾನು ನಂಬುವುದಿಲ್ಲ. ಆದರೂ ಆರೋಪವು ಗಂಭೀರವಾಗಿದೆ ಮತ್ತು ಶಾಲೆಯು ಪೊಲೀಸರೊಂದಿಗೆ ಅವರ ತನಿಖೆಯಲ್ಲಿ ಸಹಕರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...