Homeಮುಖಪುಟ4ನೇ ತರಗತಿಯ ಮಗುವಿನ ಮೇಲೆ ಶಿಕ್ಷಕರಿಂದಲೇ ಅತ್ಯಾಚಾರ: ಜಾರ್ಖಂಡ್ ನಲ್ಲೊಂದು ಅಮಾನವೀಯ ಕೃತ್ಯ

4ನೇ ತರಗತಿಯ ಮಗುವಿನ ಮೇಲೆ ಶಿಕ್ಷಕರಿಂದಲೇ ಅತ್ಯಾಚಾರ: ಜಾರ್ಖಂಡ್ ನಲ್ಲೊಂದು ಅಮಾನವೀಯ ಕೃತ್ಯ

- Advertisement -
- Advertisement -

ಜಾರ್ಖಂಡ್‌ನ ಧನ್ಬಾದ್ ಜಿಲ್ಲೆಯ ಶಾಲೆಯೊಂದರ 4 ನೇ ತರಗತಿ ಮಗುವನ್ನು ಶಾಲೆಯ ವಿಶ್ರಾಂತಿ ಕೊಠಡಿಯಲ್ಲಿ ಉಪ ಪ್ರಾಂಶುಪಾಲರು ಮತ್ತು ತರಗತಿ ಶಿಕ್ಷಕರು ಸೇರಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಒಂದು ತಿಂಗಳ ಹಿಂದೆ ಶಾಲೆಯ ವಿಶ್ರಾಂತಿ ಕೊಠಡಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ ಶಾಲೆಯ ಇಬ್ಬರು ಶಿಕ್ಷಕರ ವಿರುದ್ಧ ಕತ್ರಾಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂಬತ್ತು ವರ್ಷದ ಸಂತ್ರಸ್ತ ಮಗುವಿನ ದೂರಿನ ಆಧಾರದ ಮೇಲೆ ಶನಿವಾರ ಎಫ್‌ಐಆರ್ ದಾಖಲಿಸಲಾಗಿದೆ. ವಿಷಯ ಗಂಭೀರವಾಗಿದೆ, ಹಾಗಾಗಿ “ಪೊಲೀಸರು ಈ ಪ್ರಕರಣವನ್ನು ಎಲ್ಲಾ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ ಮತ್ತು ವೈದ್ಯಕೀಯ ಪರೀಕ್ಷಾ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು.” ಎಂದು ಧನ್ಬಾದ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಿಶೋರ್ ಕೌಶಲ್ ಭಾನುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ

ಪಾಟಲಿಪುತ್ರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಬಾಲಕಿಯ ವೈದ್ಯಕೀಯ ಪರೀಕ್ಷೆಯನ್ನು ಭಾನುವಾರ ನಡೆಸಲಾಗಿದೆ ಎಂದು ಪಿಎಂಸಿಎಚ್ ಅಧೀಕ್ಷಕ ಡಾ.ಎಚ್.ಕೆ.ಸಿಂಗ್ ತಿಳಿಸಿದ್ದಾರೆ. ಎಫ್‌ಐಆರ್ ದಾಖಲಾದ ನಂತರ ಪೊಲೀಸರು ಬಾಲಕಿಯ ಹೇಳಿಕೆಯನ್ನು ಸೆಕ್ಷನ್ 164 ರ ಅಡಿಯಲ್ಲಿ ಸ್ಥಳೀಯ ನ್ಯಾಯಾಲಯದಲ್ಲಿ ದಾಖಲಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆ ಮತ್ತು ಪೊಕ್ಸೊ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಉಪ-ಪ್ರಾಂಶುಪಾಲರು ಮತ್ತು ಶಾಲೆಯ ಸಿಕ್ ರೂಂ ನರ್ಸ್ ಸೇರಿದಂತೆ ಇಬ್ಬರು ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಏನಾಯಿತು?
ಎಫ್‌ಐಆರ್ ಪ್ರಕಾರ, ಒಂದು ತಿಂಗಳ ಹಿಂದೆ ಬಾಲಕಿ ತನ್ನ ತರಗತಿಯಲ್ಲಿ ಮೂರ್ಚೆ ಹೋಗಿದ್ದಳು. ಆಗ ಒಬ್ಬ ಶಿಕ್ಷಕ ಬಾಲಕಿಯನ್ನು ವಿಶ್ರಾಂತಿ ಕೊಠಡಿಗೆ ಕಳಿಸಿದ್ದನು. ಅಲ್ಲಿ ನರ್ಸ್ ಅವಳ ಔಷಧಿಯನ್ನು ಕೊಟ್ಟ ನಂತರ ಬಾಲಕಿ ಪ್ರಜ್ಞೆ ತಪ್ಪಿದ್ದಾಳೆ. ಆಗ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಉಪ ಪ್ರಾಂಶುಪಾಲರು ಮತ್ತು ತರಗತಿ ಶಿಕ್ಷಕರು (ಕ್ಲಾಸ್ ಟೀಚರ್) ಈ ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆ ಬಾಲಕಿಯ ಆರೋಗ್ಯ ಸುಧಾರಿಸದ ಕಾರಣದಿಂದ ಕೆಲವು ದಿನಗಳ ನಂತರ ಬಾಲಕಿಯ ಕುಟುಂಬದವರು ವೈದ್ಯರ ಬಳಿಗೆ ಕರೆದೊಯ್ದರು. ಪರೀಕ್ಷಿಸಿದ ವೈದ್ಯರು ಬಾಲಕಿಯ ಮೇಲೆ ಏನಾದರೂ ಸಂಭವಿಸಿದೆ ಎಂದು ಭಾವಿಸಿ ವಿಚಾರಿಸಿದಾಗ ಬಾಲಕಿಯು ತನ್ನ ಮೇಲಾದ ದೌರ್ಜನ್ಯವನ್ನು ತನ್ನ ಹೆತ್ತವರಿಗೆ ವಿವರಿಸಿದ್ದಾಳೆ. ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಾಲೆಯ ಪ್ರಾಂಶುಪಾಲರನ್ನು ವಿಚಾರಣೆಗೊಳಪಡಿಸಿದೆ.

ಆಪಾದಿತ ಘಟನೆಯ ಬಗ್ಗೆ ಸಂತ್ರಸ್ತ ಮಗು ತನಗೆ ಮಾಹಿತಿ ನೀಡಿಲ್ಲ ಎಂದು ಶಾಲೆಯ ಪ್ರಾಂಶುಪಾಲ ತನುಶ್ರೀ ಬ್ಯಾನರ್ಜಿ ತಿಳಿಸಿದ್ದಾರೆ. “ಶಾಲೆಯ ವಿಶ್ರಾಂತಿ ಕೊಠಡಿಯು ಯಾವಾಗಲೂ ತುಂಬಿರುವುದರಿಂದ ಇದನ್ನು ನಾನು ನಂಬುವುದಿಲ್ಲ. ಆದರೂ ಆರೋಪವು ಗಂಭೀರವಾಗಿದೆ ಮತ್ತು ಶಾಲೆಯು ಪೊಲೀಸರೊಂದಿಗೆ ಅವರ ತನಿಖೆಯಲ್ಲಿ ಸಹಕರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...