Homeಮುಖಪುಟ4ನೇ ತರಗತಿಯ ಮಗುವಿನ ಮೇಲೆ ಶಿಕ್ಷಕರಿಂದಲೇ ಅತ್ಯಾಚಾರ: ಜಾರ್ಖಂಡ್ ನಲ್ಲೊಂದು ಅಮಾನವೀಯ ಕೃತ್ಯ

4ನೇ ತರಗತಿಯ ಮಗುವಿನ ಮೇಲೆ ಶಿಕ್ಷಕರಿಂದಲೇ ಅತ್ಯಾಚಾರ: ಜಾರ್ಖಂಡ್ ನಲ್ಲೊಂದು ಅಮಾನವೀಯ ಕೃತ್ಯ

- Advertisement -
- Advertisement -

ಜಾರ್ಖಂಡ್‌ನ ಧನ್ಬಾದ್ ಜಿಲ್ಲೆಯ ಶಾಲೆಯೊಂದರ 4 ನೇ ತರಗತಿ ಮಗುವನ್ನು ಶಾಲೆಯ ವಿಶ್ರಾಂತಿ ಕೊಠಡಿಯಲ್ಲಿ ಉಪ ಪ್ರಾಂಶುಪಾಲರು ಮತ್ತು ತರಗತಿ ಶಿಕ್ಷಕರು ಸೇರಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಒಂದು ತಿಂಗಳ ಹಿಂದೆ ಶಾಲೆಯ ವಿಶ್ರಾಂತಿ ಕೊಠಡಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ ಶಾಲೆಯ ಇಬ್ಬರು ಶಿಕ್ಷಕರ ವಿರುದ್ಧ ಕತ್ರಾಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂಬತ್ತು ವರ್ಷದ ಸಂತ್ರಸ್ತ ಮಗುವಿನ ದೂರಿನ ಆಧಾರದ ಮೇಲೆ ಶನಿವಾರ ಎಫ್‌ಐಆರ್ ದಾಖಲಿಸಲಾಗಿದೆ. ವಿಷಯ ಗಂಭೀರವಾಗಿದೆ, ಹಾಗಾಗಿ “ಪೊಲೀಸರು ಈ ಪ್ರಕರಣವನ್ನು ಎಲ್ಲಾ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ ಮತ್ತು ವೈದ್ಯಕೀಯ ಪರೀಕ್ಷಾ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು.” ಎಂದು ಧನ್ಬಾದ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಿಶೋರ್ ಕೌಶಲ್ ಭಾನುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ

ಪಾಟಲಿಪುತ್ರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಬಾಲಕಿಯ ವೈದ್ಯಕೀಯ ಪರೀಕ್ಷೆಯನ್ನು ಭಾನುವಾರ ನಡೆಸಲಾಗಿದೆ ಎಂದು ಪಿಎಂಸಿಎಚ್ ಅಧೀಕ್ಷಕ ಡಾ.ಎಚ್.ಕೆ.ಸಿಂಗ್ ತಿಳಿಸಿದ್ದಾರೆ. ಎಫ್‌ಐಆರ್ ದಾಖಲಾದ ನಂತರ ಪೊಲೀಸರು ಬಾಲಕಿಯ ಹೇಳಿಕೆಯನ್ನು ಸೆಕ್ಷನ್ 164 ರ ಅಡಿಯಲ್ಲಿ ಸ್ಥಳೀಯ ನ್ಯಾಯಾಲಯದಲ್ಲಿ ದಾಖಲಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆ ಮತ್ತು ಪೊಕ್ಸೊ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಉಪ-ಪ್ರಾಂಶುಪಾಲರು ಮತ್ತು ಶಾಲೆಯ ಸಿಕ್ ರೂಂ ನರ್ಸ್ ಸೇರಿದಂತೆ ಇಬ್ಬರು ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಏನಾಯಿತು?
ಎಫ್‌ಐಆರ್ ಪ್ರಕಾರ, ಒಂದು ತಿಂಗಳ ಹಿಂದೆ ಬಾಲಕಿ ತನ್ನ ತರಗತಿಯಲ್ಲಿ ಮೂರ್ಚೆ ಹೋಗಿದ್ದಳು. ಆಗ ಒಬ್ಬ ಶಿಕ್ಷಕ ಬಾಲಕಿಯನ್ನು ವಿಶ್ರಾಂತಿ ಕೊಠಡಿಗೆ ಕಳಿಸಿದ್ದನು. ಅಲ್ಲಿ ನರ್ಸ್ ಅವಳ ಔಷಧಿಯನ್ನು ಕೊಟ್ಟ ನಂತರ ಬಾಲಕಿ ಪ್ರಜ್ಞೆ ತಪ್ಪಿದ್ದಾಳೆ. ಆಗ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಉಪ ಪ್ರಾಂಶುಪಾಲರು ಮತ್ತು ತರಗತಿ ಶಿಕ್ಷಕರು (ಕ್ಲಾಸ್ ಟೀಚರ್) ಈ ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆ ಬಾಲಕಿಯ ಆರೋಗ್ಯ ಸುಧಾರಿಸದ ಕಾರಣದಿಂದ ಕೆಲವು ದಿನಗಳ ನಂತರ ಬಾಲಕಿಯ ಕುಟುಂಬದವರು ವೈದ್ಯರ ಬಳಿಗೆ ಕರೆದೊಯ್ದರು. ಪರೀಕ್ಷಿಸಿದ ವೈದ್ಯರು ಬಾಲಕಿಯ ಮೇಲೆ ಏನಾದರೂ ಸಂಭವಿಸಿದೆ ಎಂದು ಭಾವಿಸಿ ವಿಚಾರಿಸಿದಾಗ ಬಾಲಕಿಯು ತನ್ನ ಮೇಲಾದ ದೌರ್ಜನ್ಯವನ್ನು ತನ್ನ ಹೆತ್ತವರಿಗೆ ವಿವರಿಸಿದ್ದಾಳೆ. ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಾಲೆಯ ಪ್ರಾಂಶುಪಾಲರನ್ನು ವಿಚಾರಣೆಗೊಳಪಡಿಸಿದೆ.

ಆಪಾದಿತ ಘಟನೆಯ ಬಗ್ಗೆ ಸಂತ್ರಸ್ತ ಮಗು ತನಗೆ ಮಾಹಿತಿ ನೀಡಿಲ್ಲ ಎಂದು ಶಾಲೆಯ ಪ್ರಾಂಶುಪಾಲ ತನುಶ್ರೀ ಬ್ಯಾನರ್ಜಿ ತಿಳಿಸಿದ್ದಾರೆ. “ಶಾಲೆಯ ವಿಶ್ರಾಂತಿ ಕೊಠಡಿಯು ಯಾವಾಗಲೂ ತುಂಬಿರುವುದರಿಂದ ಇದನ್ನು ನಾನು ನಂಬುವುದಿಲ್ಲ. ಆದರೂ ಆರೋಪವು ಗಂಭೀರವಾಗಿದೆ ಮತ್ತು ಶಾಲೆಯು ಪೊಲೀಸರೊಂದಿಗೆ ಅವರ ತನಿಖೆಯಲ್ಲಿ ಸಹಕರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...