Homeಮುಖಪುಟಒಂದು ವರ್ಷದಲ್ಲಿ 5.18 ಕೋಟಿ ಕಾರ್ಮಿಕರನ್ನು ನರೇಗಾ ಯೋಜನೆಯ ಪಟ್ಟಿಯಿಂದ ತೆಗೆಯಲಾಗಿದೆ: ಕೇಂದ್ರ ಸಚಿವರ ಮಾಹಿತಿ

ಒಂದು ವರ್ಷದಲ್ಲಿ 5.18 ಕೋಟಿ ಕಾರ್ಮಿಕರನ್ನು ನರೇಗಾ ಯೋಜನೆಯ ಪಟ್ಟಿಯಿಂದ ತೆಗೆಯಲಾಗಿದೆ: ಕೇಂದ್ರ ಸಚಿವರ ಮಾಹಿತಿ

- Advertisement -
- Advertisement -

2022-23ರಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(MGNREGA)ಯ ಪಟ್ಟಿಯಿಂದ 5.18 ಕೋಟಿ ಕಾರ್ಮಿಕರ ಹೆಸರನ್ನು ಅಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಮಂಗಳವಾರ ಲೋಕಸಭೆಗೆ ತಿಳಿಸಿದರು.

ಅಳಿಸಲಾದ ಹೆಸರುಗಳ ಸಂಖ್ಯೆಯು 2021-’22 ಕ್ಕಿಂತ 247% ಹೆಚ್ಚಾಗಿದೆ. ಈ ಯೋಜನೆಯು ದೇಶದ ಪ್ರತಿ ಗ್ರಾಮೀಣ ಕುಟುಂಬಕ್ಕೆ 100 ದಿನಗಳ ಕೆಲಸವನ್ನು ಖಾತರಿಪಡಿಸುತ್ತದೆ.

ಜನವರಿಯಲ್ಲಿ, ನರೇಂದ್ರ ಮೋದಿ ಸರ್ಕಾರವು MGNREGA ಜಾಬ್ ಕಾರ್ಡ್‌ಗಳನ್ನು ಆಧಾರ್ ಕಾರ್ಡ್‌ಗಳೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿತ್ತು. ಇದಕ್ಕೆ ಕಾರ್ಮಿಕರು ಮತ್ತು ಕಾರ್ಯಕರ್ತರ ಪ್ರತಿಭಟನೆಯ ನಡೆಸಿದರು. ಆದರೂ ಆಧಾರ್ ಆಧಾರಿತ ಪಾವತಿಗಳ ಅನುಷ್ಠಾನದ ಗಡುವನ್ನು ನಾಲ್ಕನೇ ಬಾರಿಗೆ ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.

ಗಡುವನ್ನು ಪೂರೈಸಲು ಪ್ರಯತ್ನಿಸುತ್ತಿರುವ ರಾಜ್ಯ ಸರ್ಕಾರಗಳು ಎರಡು ಡೇಟಾಬೇಸ್‌ಗಳಲ್ಲಿ ದಾಖಲೆಗಳಲ್ಲಿ ವ್ಯತ್ಯಾಸಗಳನ್ನು ಹೊಂದಿರುವ ಕಾರ್ಮಿಕರ ಹೆಸರನ್ನು ತೆಗೆದುಹಾಕುತ್ತಿವೆ, ಹಾಗಾಗಿಯೇ ಯೋಜನೆಯ ಪಟ್ಟಿಯಿಂದ ಕಾರ್ಮಿಕರ ಹೆಸರು ಕೈಬಿಡುವುದಕ್ಕೆ ಕಾರಣವಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

2021-22 ಕ್ಕೆ ಹೋಲಿಸಿದರೆ ಹಿಂದಿನ ಹಣಕಾಸು ವರ್ಷದಲ್ಲಿ 244.3% ರಷ್ಟು ಅಳಿಸುವಿಕೆಯಲ್ಲಿ ಹೆಚ್ಚಳವಾಗಿದೆಯೇ ಎಂದು ಕಾಂಗ್ರೆಸ್ ಸಂಸದರಾದ ಗೌರವ್ ಗೊಗೊಯ್ ಮತ್ತು ವಿಕೆ ಶ್ರೀಕಂದನ್ ಅವರು ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಪ್ರಶ್ನೆಯೊಂದನ್ನು ಕೇಳಿದ್ದರು.

ಅದಕ್ಕೆ ಉತ್ತರಿಸಿದ ಸಚಿವ ಗಿರಿರಾಜ್ ಸಿಂಗ್ ಅವರು, ”2021-’22ರಲ್ಲಿ 1,49,51,247 ಕಾರ್ಮಿಕರ MGNREGA ಜಾಬ್ ಕಾರ್ಡ್‌ಗಳನ್ನು ಅಳಿಸಲಾಗಿದೆ ಮತ್ತು 2022-’23 ರಲ್ಲಿ ಈ ಸಂಖ್ಯೆ 5,18,91,168 ಆಗಿದೆ ಎಂದು ಹೇಳಿದರು.

ಜಾಬ್ ಕಾರ್ಡ್‌ಗಳನ್ನು ಅಳಿಸಲು ವಿವಿಧ ಕಾರಣಗಳು:

”ನಕಲಿ ಜಾಬ್ ಕಾರ್ಡ್, ಕೆಲಸ ಮಾಡಲು ಸಿದ್ಧರಿಲ್ಲದವರು, ಕುಟುಂಬವನ್ನು ಗ್ರಾಮ ಪಂಚಾಯತ್‌ನಿಂದ ಶಾಶ್ವತವಾಗಿ ಸ್ಥಳಾಂತಗೊಂಡಿರುವವರು ಮತ್ತು ಉದ್ಯೋಗ ಕಾರ್ಡ್‌ನಲ್ಲಿರುವ ವ್ಯಕ್ತಿಯ ಅವಧಿ ಮುಗಿದಿದೆ” ಹಾಗಾಗಿ ಅಂತವರ ಜಾಬ್‌ ಕಾರ್ಡ್‌ಗಳನ್ನು ತಗೆಯಲಾಗಿದೆ ಎಂದು ಲೋಕಸಭೆಗೆ ಲಿಖಿತ ಪ್ರತಿಕ್ರಿಯೆಯಲ್ಲಿ ಸಿಂಗ್ ಹೇಳಿದ್ದಾರೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ, 2022-23ರಲ್ಲಿ ಪಶ್ಚಿಮ ಬಂಗಾಳ (83.36 ಲಕ್ಷ) ಅತಿ ಹೆಚ್ಚು ಅಳಿಸುವಿಕೆಗಳನ್ನು ವರದಿ ಮಾಡಿದೆ, ಆಂಧ್ರ ಪ್ರದೇಶ (78.05 ಲಕ್ಷ), ಒಡಿಶಾ (77.78 ಲಕ್ಷ), ಬಿಹಾರ (76.68 ಲಕ್ಷ) ಮತ್ತು ಉತ್ತರ ಪ್ರದೇಶ (62.98 ಲಕ್ಷ).

ಇದನ್ನೂ ಓದಿ: ಇಂದು ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡನೆ: INDIA ಒಕ್ಕೂಟದ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...