Homeಮುಖಪುಟಒಂದು ವರ್ಷದಲ್ಲಿ 5.18 ಕೋಟಿ ಕಾರ್ಮಿಕರನ್ನು ನರೇಗಾ ಯೋಜನೆಯ ಪಟ್ಟಿಯಿಂದ ತೆಗೆಯಲಾಗಿದೆ: ಕೇಂದ್ರ ಸಚಿವರ ಮಾಹಿತಿ

ಒಂದು ವರ್ಷದಲ್ಲಿ 5.18 ಕೋಟಿ ಕಾರ್ಮಿಕರನ್ನು ನರೇಗಾ ಯೋಜನೆಯ ಪಟ್ಟಿಯಿಂದ ತೆಗೆಯಲಾಗಿದೆ: ಕೇಂದ್ರ ಸಚಿವರ ಮಾಹಿತಿ

- Advertisement -
- Advertisement -

2022-23ರಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(MGNREGA)ಯ ಪಟ್ಟಿಯಿಂದ 5.18 ಕೋಟಿ ಕಾರ್ಮಿಕರ ಹೆಸರನ್ನು ಅಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಮಂಗಳವಾರ ಲೋಕಸಭೆಗೆ ತಿಳಿಸಿದರು.

ಅಳಿಸಲಾದ ಹೆಸರುಗಳ ಸಂಖ್ಯೆಯು 2021-’22 ಕ್ಕಿಂತ 247% ಹೆಚ್ಚಾಗಿದೆ. ಈ ಯೋಜನೆಯು ದೇಶದ ಪ್ರತಿ ಗ್ರಾಮೀಣ ಕುಟುಂಬಕ್ಕೆ 100 ದಿನಗಳ ಕೆಲಸವನ್ನು ಖಾತರಿಪಡಿಸುತ್ತದೆ.

ಜನವರಿಯಲ್ಲಿ, ನರೇಂದ್ರ ಮೋದಿ ಸರ್ಕಾರವು MGNREGA ಜಾಬ್ ಕಾರ್ಡ್‌ಗಳನ್ನು ಆಧಾರ್ ಕಾರ್ಡ್‌ಗಳೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿತ್ತು. ಇದಕ್ಕೆ ಕಾರ್ಮಿಕರು ಮತ್ತು ಕಾರ್ಯಕರ್ತರ ಪ್ರತಿಭಟನೆಯ ನಡೆಸಿದರು. ಆದರೂ ಆಧಾರ್ ಆಧಾರಿತ ಪಾವತಿಗಳ ಅನುಷ್ಠಾನದ ಗಡುವನ್ನು ನಾಲ್ಕನೇ ಬಾರಿಗೆ ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.

ಗಡುವನ್ನು ಪೂರೈಸಲು ಪ್ರಯತ್ನಿಸುತ್ತಿರುವ ರಾಜ್ಯ ಸರ್ಕಾರಗಳು ಎರಡು ಡೇಟಾಬೇಸ್‌ಗಳಲ್ಲಿ ದಾಖಲೆಗಳಲ್ಲಿ ವ್ಯತ್ಯಾಸಗಳನ್ನು ಹೊಂದಿರುವ ಕಾರ್ಮಿಕರ ಹೆಸರನ್ನು ತೆಗೆದುಹಾಕುತ್ತಿವೆ, ಹಾಗಾಗಿಯೇ ಯೋಜನೆಯ ಪಟ್ಟಿಯಿಂದ ಕಾರ್ಮಿಕರ ಹೆಸರು ಕೈಬಿಡುವುದಕ್ಕೆ ಕಾರಣವಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

2021-22 ಕ್ಕೆ ಹೋಲಿಸಿದರೆ ಹಿಂದಿನ ಹಣಕಾಸು ವರ್ಷದಲ್ಲಿ 244.3% ರಷ್ಟು ಅಳಿಸುವಿಕೆಯಲ್ಲಿ ಹೆಚ್ಚಳವಾಗಿದೆಯೇ ಎಂದು ಕಾಂಗ್ರೆಸ್ ಸಂಸದರಾದ ಗೌರವ್ ಗೊಗೊಯ್ ಮತ್ತು ವಿಕೆ ಶ್ರೀಕಂದನ್ ಅವರು ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಪ್ರಶ್ನೆಯೊಂದನ್ನು ಕೇಳಿದ್ದರು.

ಅದಕ್ಕೆ ಉತ್ತರಿಸಿದ ಸಚಿವ ಗಿರಿರಾಜ್ ಸಿಂಗ್ ಅವರು, ”2021-’22ರಲ್ಲಿ 1,49,51,247 ಕಾರ್ಮಿಕರ MGNREGA ಜಾಬ್ ಕಾರ್ಡ್‌ಗಳನ್ನು ಅಳಿಸಲಾಗಿದೆ ಮತ್ತು 2022-’23 ರಲ್ಲಿ ಈ ಸಂಖ್ಯೆ 5,18,91,168 ಆಗಿದೆ ಎಂದು ಹೇಳಿದರು.

ಜಾಬ್ ಕಾರ್ಡ್‌ಗಳನ್ನು ಅಳಿಸಲು ವಿವಿಧ ಕಾರಣಗಳು:

”ನಕಲಿ ಜಾಬ್ ಕಾರ್ಡ್, ಕೆಲಸ ಮಾಡಲು ಸಿದ್ಧರಿಲ್ಲದವರು, ಕುಟುಂಬವನ್ನು ಗ್ರಾಮ ಪಂಚಾಯತ್‌ನಿಂದ ಶಾಶ್ವತವಾಗಿ ಸ್ಥಳಾಂತಗೊಂಡಿರುವವರು ಮತ್ತು ಉದ್ಯೋಗ ಕಾರ್ಡ್‌ನಲ್ಲಿರುವ ವ್ಯಕ್ತಿಯ ಅವಧಿ ಮುಗಿದಿದೆ” ಹಾಗಾಗಿ ಅಂತವರ ಜಾಬ್‌ ಕಾರ್ಡ್‌ಗಳನ್ನು ತಗೆಯಲಾಗಿದೆ ಎಂದು ಲೋಕಸಭೆಗೆ ಲಿಖಿತ ಪ್ರತಿಕ್ರಿಯೆಯಲ್ಲಿ ಸಿಂಗ್ ಹೇಳಿದ್ದಾರೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ, 2022-23ರಲ್ಲಿ ಪಶ್ಚಿಮ ಬಂಗಾಳ (83.36 ಲಕ್ಷ) ಅತಿ ಹೆಚ್ಚು ಅಳಿಸುವಿಕೆಗಳನ್ನು ವರದಿ ಮಾಡಿದೆ, ಆಂಧ್ರ ಪ್ರದೇಶ (78.05 ಲಕ್ಷ), ಒಡಿಶಾ (77.78 ಲಕ್ಷ), ಬಿಹಾರ (76.68 ಲಕ್ಷ) ಮತ್ತು ಉತ್ತರ ಪ್ರದೇಶ (62.98 ಲಕ್ಷ).

ಇದನ್ನೂ ಓದಿ: ಇಂದು ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡನೆ: INDIA ಒಕ್ಕೂಟದ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...