Homeಮುಖಪುಟಒಂದು ವರ್ಷದಲ್ಲಿ 5.18 ಕೋಟಿ ಕಾರ್ಮಿಕರನ್ನು ನರೇಗಾ ಯೋಜನೆಯ ಪಟ್ಟಿಯಿಂದ ತೆಗೆಯಲಾಗಿದೆ: ಕೇಂದ್ರ ಸಚಿವರ ಮಾಹಿತಿ

ಒಂದು ವರ್ಷದಲ್ಲಿ 5.18 ಕೋಟಿ ಕಾರ್ಮಿಕರನ್ನು ನರೇಗಾ ಯೋಜನೆಯ ಪಟ್ಟಿಯಿಂದ ತೆಗೆಯಲಾಗಿದೆ: ಕೇಂದ್ರ ಸಚಿವರ ಮಾಹಿತಿ

- Advertisement -
- Advertisement -

2022-23ರಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(MGNREGA)ಯ ಪಟ್ಟಿಯಿಂದ 5.18 ಕೋಟಿ ಕಾರ್ಮಿಕರ ಹೆಸರನ್ನು ಅಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಮಂಗಳವಾರ ಲೋಕಸಭೆಗೆ ತಿಳಿಸಿದರು.

ಅಳಿಸಲಾದ ಹೆಸರುಗಳ ಸಂಖ್ಯೆಯು 2021-’22 ಕ್ಕಿಂತ 247% ಹೆಚ್ಚಾಗಿದೆ. ಈ ಯೋಜನೆಯು ದೇಶದ ಪ್ರತಿ ಗ್ರಾಮೀಣ ಕುಟುಂಬಕ್ಕೆ 100 ದಿನಗಳ ಕೆಲಸವನ್ನು ಖಾತರಿಪಡಿಸುತ್ತದೆ.

ಜನವರಿಯಲ್ಲಿ, ನರೇಂದ್ರ ಮೋದಿ ಸರ್ಕಾರವು MGNREGA ಜಾಬ್ ಕಾರ್ಡ್‌ಗಳನ್ನು ಆಧಾರ್ ಕಾರ್ಡ್‌ಗಳೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿತ್ತು. ಇದಕ್ಕೆ ಕಾರ್ಮಿಕರು ಮತ್ತು ಕಾರ್ಯಕರ್ತರ ಪ್ರತಿಭಟನೆಯ ನಡೆಸಿದರು. ಆದರೂ ಆಧಾರ್ ಆಧಾರಿತ ಪಾವತಿಗಳ ಅನುಷ್ಠಾನದ ಗಡುವನ್ನು ನಾಲ್ಕನೇ ಬಾರಿಗೆ ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.

ಗಡುವನ್ನು ಪೂರೈಸಲು ಪ್ರಯತ್ನಿಸುತ್ತಿರುವ ರಾಜ್ಯ ಸರ್ಕಾರಗಳು ಎರಡು ಡೇಟಾಬೇಸ್‌ಗಳಲ್ಲಿ ದಾಖಲೆಗಳಲ್ಲಿ ವ್ಯತ್ಯಾಸಗಳನ್ನು ಹೊಂದಿರುವ ಕಾರ್ಮಿಕರ ಹೆಸರನ್ನು ತೆಗೆದುಹಾಕುತ್ತಿವೆ, ಹಾಗಾಗಿಯೇ ಯೋಜನೆಯ ಪಟ್ಟಿಯಿಂದ ಕಾರ್ಮಿಕರ ಹೆಸರು ಕೈಬಿಡುವುದಕ್ಕೆ ಕಾರಣವಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

2021-22 ಕ್ಕೆ ಹೋಲಿಸಿದರೆ ಹಿಂದಿನ ಹಣಕಾಸು ವರ್ಷದಲ್ಲಿ 244.3% ರಷ್ಟು ಅಳಿಸುವಿಕೆಯಲ್ಲಿ ಹೆಚ್ಚಳವಾಗಿದೆಯೇ ಎಂದು ಕಾಂಗ್ರೆಸ್ ಸಂಸದರಾದ ಗೌರವ್ ಗೊಗೊಯ್ ಮತ್ತು ವಿಕೆ ಶ್ರೀಕಂದನ್ ಅವರು ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಪ್ರಶ್ನೆಯೊಂದನ್ನು ಕೇಳಿದ್ದರು.

ಅದಕ್ಕೆ ಉತ್ತರಿಸಿದ ಸಚಿವ ಗಿರಿರಾಜ್ ಸಿಂಗ್ ಅವರು, ”2021-’22ರಲ್ಲಿ 1,49,51,247 ಕಾರ್ಮಿಕರ MGNREGA ಜಾಬ್ ಕಾರ್ಡ್‌ಗಳನ್ನು ಅಳಿಸಲಾಗಿದೆ ಮತ್ತು 2022-’23 ರಲ್ಲಿ ಈ ಸಂಖ್ಯೆ 5,18,91,168 ಆಗಿದೆ ಎಂದು ಹೇಳಿದರು.

ಜಾಬ್ ಕಾರ್ಡ್‌ಗಳನ್ನು ಅಳಿಸಲು ವಿವಿಧ ಕಾರಣಗಳು:

”ನಕಲಿ ಜಾಬ್ ಕಾರ್ಡ್, ಕೆಲಸ ಮಾಡಲು ಸಿದ್ಧರಿಲ್ಲದವರು, ಕುಟುಂಬವನ್ನು ಗ್ರಾಮ ಪಂಚಾಯತ್‌ನಿಂದ ಶಾಶ್ವತವಾಗಿ ಸ್ಥಳಾಂತಗೊಂಡಿರುವವರು ಮತ್ತು ಉದ್ಯೋಗ ಕಾರ್ಡ್‌ನಲ್ಲಿರುವ ವ್ಯಕ್ತಿಯ ಅವಧಿ ಮುಗಿದಿದೆ” ಹಾಗಾಗಿ ಅಂತವರ ಜಾಬ್‌ ಕಾರ್ಡ್‌ಗಳನ್ನು ತಗೆಯಲಾಗಿದೆ ಎಂದು ಲೋಕಸಭೆಗೆ ಲಿಖಿತ ಪ್ರತಿಕ್ರಿಯೆಯಲ್ಲಿ ಸಿಂಗ್ ಹೇಳಿದ್ದಾರೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ, 2022-23ರಲ್ಲಿ ಪಶ್ಚಿಮ ಬಂಗಾಳ (83.36 ಲಕ್ಷ) ಅತಿ ಹೆಚ್ಚು ಅಳಿಸುವಿಕೆಗಳನ್ನು ವರದಿ ಮಾಡಿದೆ, ಆಂಧ್ರ ಪ್ರದೇಶ (78.05 ಲಕ್ಷ), ಒಡಿಶಾ (77.78 ಲಕ್ಷ), ಬಿಹಾರ (76.68 ಲಕ್ಷ) ಮತ್ತು ಉತ್ತರ ಪ್ರದೇಶ (62.98 ಲಕ್ಷ).

ಇದನ್ನೂ ಓದಿ: ಇಂದು ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡನೆ: INDIA ಒಕ್ಕೂಟದ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...