Homeಮುಖಪುಟಪಟೇಲ್ ಏಕತಾ ಪ್ರತಿಮೆಯ 5.24 ಕೋಟಿ ರೂ. ಟಿಕೆಟ್ ಹಣ ಕಳ್ಳತನ!: ದೂರು ದಾಖಲು

ಪಟೇಲ್ ಏಕತಾ ಪ್ರತಿಮೆಯ 5.24 ಕೋಟಿ ರೂ. ಟಿಕೆಟ್ ಹಣ ಕಳ್ಳತನ!: ದೂರು ದಾಖಲು

ಏಜೆನ್ಸಿಯು ಆಡಳಿತ ಮಂಡಳಿಯ ಖಾತೆಗೆ ಹಣವನ್ನು ಸಂಗ್ರಹವಾದ ಮರುದಿನ ಠೇವಣಿ ಇಡಬೇಕಾಗಿತ್ತು, ಆದರೆ ಒಂದುವರೆ ವರ್ಷದಿಂದ 5,24,77,375 ಮೊತ್ತವನ್ನು ಜಮೆ ಮಾಡಿಲ್ಲ.

- Advertisement -
- Advertisement -

ಗುಜರಾತ್‌‌ನಲ್ಲಿರುವ ಸರ್ದಾರ್ ವಲ್ಲಭಾಯ್ ಪಟೇಲ್ ಏಕತಾ ಪ್ರತಿಮೆ ವೀಕ್ಷಣೆಯ ಟಿಕೆಟ್ ಮಾರಾಟದಿಂದ ಸಂಗ್ರಹವಾಗಿದ್ದ 5.24 ಕೋಟಿ ರುಪಾಯಿ ಮೊತ್ತವನ್ನು ಠೇವಣಿ ಇಡದೆ ಬ್ಯಾಂಕ್‌ಗೆ ಮೋಸ ಮಾಡಿದ ಆರೋಪದ ಮೇಲೆ ಗುಜರಾತ್‌ನ ನಗದು ಸಂಗ್ರಹ ಏಜೆನ್ಸಿಯ ಕೆಲವು ನೌಕರರ ವಿರುದ್ಧ ಕೇವಡಿಯಾ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

2018 ರ ನವೆಂಬರ್‌‌ನಿಂದ 2020 ರ ಮಾರ್ಚ್ ವರೆಗಿನ ಅವಧಿಯಲ್ಲಿ ಸಂಗ್ರಹವಾಗಿರುವ ಹಣವನ್ನು, ಟಿಕೆಟ್‌ ಮಾರಾಟ ಮತ್ತು ಹಣ ಸಂಗ್ರಹಿಸುವ ಹೊಣೆ ಹೊತ್ತ ಏಜೆನ್ಸಿಯು ವಡೋದರಾದಲ್ಲಿನ ಖಾಸಗಿ ಬ್ಯಾಂಕ್‌ನಲ್ಲಿ ಏಕತಾ ಪ್ರತಿಮೆ ಆಡಳಿತ ಮಂಡಳಿ ಹೊಂದಿರುವ ಖಾತೆಗೆ ಸಂದಾಯ ಮಾಡಿಲ್ಲ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಏಕತಾ ಪ್ರತಿಮೆ: ಬುಡಕಟ್ಟು ಜನರ ಭೂಮಿ ಕಿತ್ತುಕೊಳ್ಳುತ್ತಿರುವ ಗುಜರಾತ್ ಸರ್ಕಾರ

“ಏಜೆನ್ಸಿಯು ಆಡಳಿತ ಮಂಡಳಿಯ ಖಾತೆಗೆ ಹಣವನ್ನು ಸಂಗ್ರಹವಾದ ಮರುದಿನ ಠೇವಣಿ ಇಡಬೇಕಾಗಿತ್ತು, ಆದರೆ ಒಂದುವರೆ ವರ್ಷದಿಂದ 5,24,77,375 ಮೊತ್ತವನ್ನು ಜಮೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಬ್ಯಾಂಕ್‌ನ ವ್ಯವಸ್ಥಾಪಕರು ನೀಡಿರುವ ದೂರಿನ ಅನ್ವಯ ಏಜೆನ್ಸಿಯ ನೌಕರರ ವಿರುದ್ಧ FIR‌ ದಾಖಲಿಸಲಾಗಿದೆ” ಎಂದು ಡಿಎಸ್‌ಪಿ ವಾಣಿ ದುಧಾತ್‌ ತಿಳಿಸಿದ್ದಾರೆ.

“ಟಿಕೆಟ್‌ ಮಾರಾಟ ಮತ್ತು ಸಂಗ್ರಹವಾದ ಹಣವನ್ನು ಬ್ಯಾಂಕ್‌ಗೆ ತಲುಪಿಸುವ ಸಲುವಾಗಿ ಬ್ಯಾಂಕ್‌ ಈ ಏಜೆನ್ಸಿಯನ್ನು ನೇಮಿಸಿಕೊಂಡಿದೆ. ಈ ಹಣ ನಾಪತ್ತೆಯಾದ ಪ್ರಕರಣಕ್ಕೂ ಏಕತಾ ಪ್ರತಿಮೆಯ ಮಂಡಳಿಗೂ ಸಂಬಂಧವಿಲ್ಲ. ಇದು ಬ್ಯಾಂಕ್‌ ಹಾಗೂ ಟಿಕೆಟ್‌ ಮಾರಾಟ ಮಾಡುವ ಏಜೆನ್ಸಿ ನಡುವಿನ ಸಮಸ್ಯೆ” ಏಕತಾ ಪ್ರತಿಮೆ ಮಂಡಳಿಯ ಅಧಿಕಾರಿ ಹೇಳಿದ್ದಾರೆ.

ಏಕತಾ ಪ್ರತಿಮೆ ಎಂದು ಕರೆಯಲ್ಪಡುವ ದೇಶದ ಮೊದಲ ಗೃಹಮಂತ್ರಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಭವ್ಯವಾದ ಮೂರ್ತಿಯು ಗುಜರತ್‌ನ ನರ್ಮದಾ ಜಿಲ್ಲೆಯ ಕೆವಾಡಿಯಾದಲ್ಲಿದ್ದು, ಈ ಪ್ರತಿಮೆಯನ್ನು ಅಕ್ಟೋಬರ್ 2018 ರಲ್ಲಿ ಉದ್ಘಾಟಿಸಲಾಗಿತ್ತು.


ಇದನ್ನೂ ಓದಿ: ಪ್ರತಿಮೆ, ಪ್ರವಾಸೋದ್ಯಮ, ಒಂದಷ್ಟು ಅಂಕಗಣಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...