Homeಮುಖಪುಟಹೈದರಾಬಾದ್: ಮತದಾರರ ಪಟ್ಟಿಯಿಂದ 5.41 ಲಕ್ಷ ಮತದಾರರನ್ನು ಕೈ ಬಿಟ್ಟ ಚುನಾವಣಾ ಆಯೋಗ; ವರದಿ

ಹೈದರಾಬಾದ್: ಮತದಾರರ ಪಟ್ಟಿಯಿಂದ 5.41 ಲಕ್ಷ ಮತದಾರರನ್ನು ಕೈ ಬಿಟ್ಟ ಚುನಾವಣಾ ಆಯೋಗ; ವರದಿ

- Advertisement -
- Advertisement -

ಮತದಾರರ ಪಟ್ಟಿಯ ಶುದ್ಧತೆಯನ್ನು ಖಾತರಿಪಡಿಸುವ ನಿಟ್ಟಿನಲ್ಲಿ ತೆಲಂಗಾಣದ ಹೈದರಾಬಾದ್ ಜಿಲ್ಲೆಯ 5.41 ಲಕ್ಷ ಮಂದಿಯ ಹೆಸರನ್ನು ಚುನಾವಣಾ ಆಯೋಗ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದೆ ಎಂದು ದಿ ಹಿಂದೂ ವರದಿ ಮಾಡಿದೆ.

2023ರ ಜನವರಿಯಿಂದೀಚೆಗೆ ಜಿಲ್ಲೆಯ 15 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 47,141 ಮೃತ ಮತದಾರರು, 4,39,801 ಮಂದಿ ಸ್ಥಳಾಂತರಗೊಂಡ ಮತದಾರರು ಮತ್ತು 54,259 ಮಂದಿ ಎರಡು ಕಡೆಗಳಲ್ಲಿ ನೋಂದಾಯಿಸಿದ ಮತದಾರರನ್ನು ಪಟ್ಟಿಯಿಂದ ಕಿತ್ತು ಹಾಕಲಾಗಿದೆ ಎಂದು ವರದಿಗಳು ಹೇಳಿವೆ.

ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಿಂದ ಇದುವರೆಗೆ 1.67 ಲಕ್ಷಕ್ಕೂ ಹೆಚ್ಚು ಮತದಾರರನ್ನು ಪಟ್ಟಿಯಿಂದ ಅಳಿಸಲಾಗಿದೆ ಎಂದು ತಿಳಿದು ಬಂದಿದೆ.

ನಾಂಪಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅತೀ ಹೆಚ್ಚು, ಅಂದರೆ, 21,407 ಮತದಾರರ ಹೆಸರುಗಳನ್ನು ಕೈ ಬಿಡಲಾಗಿದೆ. ಈ ಪೈಕಿ 15,963 ಸ್ಥಳಾಂತರಗೊಂಡ ಮತದಾರರು, 2,843 ಮೃತಪಟ್ಟ ಮತದಾರರು ಮತ್ತು 2,601 ಎರಡು ಬಾರಿ ನೋಂದಾಯಿತ ಮತದಾರರು ಇದ್ದಾರೆ ಎಂದು ಗುರುತಿಸಲಾಗಿದೆ.

ಭಾರತದ ಚುನಾವಣಾ ಆಯೋಗದ ಸೂಚನೆಯಂತೆ 5,41,201 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈ ಬಿಡಲಾಗಿದೆ. ಭಾರತೀಯ ಚುನಾವಣಾ ಆಯೋಗವು ಸೂಚಿಸಿದ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನದ ಪ್ರಕಾರ ಫಾರ್ಮ್-7 ಮತ್ತು ಫಾರ್ಮ್-8 ಅನ್ನು ಸರಿಯಾಗಿ ಸಂಗ್ರಹಿಸುವ ಮೂಲಕ ಎಲ್ಲಾ ಹೆಸರುಗಳನ್ನು ತೆಗೆದು ಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾಗಿ ವರದಿಯಾಗಿದೆ.

ಇದಲ್ಲದೆ, ಮತದಾರರ ಪಟ್ಟಿಗಳ ಶುದ್ಧೀಕರಣದ ಸಮಯದಲ್ಲಿ, ಅನೇಕ ಮತದಾರರ ಪಟ್ಟಿಯಲ್ಲಿ ಪ್ರಮಾಣಿತವಲ್ಲದ ಮನೆ ಸಂಖ್ಯೆ ಕಾಣಿಸಿದ್ದು, ಅಂತಹ ಮತದಾರರನ್ನು ಗುರುತಿಸಲು ಮತ್ತು ತಿದ್ದುಪಡಿ ಮಾಡಲು ಚಾಲನೆ ನೀಡಲಾಗಿದೆ. ಅದರಂತೆ ಪ್ರಮಾಣಿತವಲ್ಲದ ಮನೆ ಸಂಖ್ಯೆ ಹೊಂದಿರುವ ಒಟ್ಟು 1,81,405 ಮತದಾರರನ್ನು ಗುರುತಿಸಲಾಗಿದ್ದು, ಅವರ ಮನೆ ಸಂಖ್ಯೆಗಳನ್ನು ತಿದ್ದುಪಡಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕುಟುಂಬಕ್ಕೆ ಸೇರಿದ ಮತದಾರರನ್ನು ಒಂದೇ ಮತಗಟ್ಟೆಗೆ ಕರೆತರಲು ಕ್ರಮಕೈಗೊಳ್ಳಲಾಗಿದೆ. ಹೈದರಾಬಾದ್‌ನಲ್ಲಿ ಈ ನಿಟ್ಟಿನಲ್ಲಿ ಒಟ್ಟು 3,78,713 ತಿದ್ದುಪಡಿಗಳನ್ನು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ತೆಲಂಗಾಣದ 17 ಲೋಕಸಭಾ ಕ್ಷೇತ್ರಗಳು ಮತ್ತು ಹೈದರಾಬಾದ್‌ನಲ್ಲಿ ನಾಲ್ಕನೇ ಹಂತದಲ್ಲಿ ಮೇ 13ರಂದು ಮತದಾನ ನಡೆಯಲಿದೆ. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ವಿರುದ್ದ ಈ ಬಾರಿ ವಿರಿಂಚಿ ಆಸ್ಪತ್ರೆಗಳ ಮುಖ್ಯಸ್ಥೆ ಮಾಧವಿ ಲತಾ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಹಾಗಾಗಿ, ಕ್ಷೇತ್ರ ಕುತೂಹಲದ ಕೇಂದ್ರವಾಗಿ ಮಾರ್ಪಟ್ಟಿದೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ: ಇಂದು ಮೊದಲ ಹಂತದ ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...