Homeಮುಖಪುಟಹೈದರಾಬಾದ್: ಮತದಾರರ ಪಟ್ಟಿಯಿಂದ 5.41 ಲಕ್ಷ ಮತದಾರರನ್ನು ಕೈ ಬಿಟ್ಟ ಚುನಾವಣಾ ಆಯೋಗ; ವರದಿ

ಹೈದರಾಬಾದ್: ಮತದಾರರ ಪಟ್ಟಿಯಿಂದ 5.41 ಲಕ್ಷ ಮತದಾರರನ್ನು ಕೈ ಬಿಟ್ಟ ಚುನಾವಣಾ ಆಯೋಗ; ವರದಿ

- Advertisement -
- Advertisement -

ಮತದಾರರ ಪಟ್ಟಿಯ ಶುದ್ಧತೆಯನ್ನು ಖಾತರಿಪಡಿಸುವ ನಿಟ್ಟಿನಲ್ಲಿ ತೆಲಂಗಾಣದ ಹೈದರಾಬಾದ್ ಜಿಲ್ಲೆಯ 5.41 ಲಕ್ಷ ಮಂದಿಯ ಹೆಸರನ್ನು ಚುನಾವಣಾ ಆಯೋಗ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದೆ ಎಂದು ದಿ ಹಿಂದೂ ವರದಿ ಮಾಡಿದೆ.

2023ರ ಜನವರಿಯಿಂದೀಚೆಗೆ ಜಿಲ್ಲೆಯ 15 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 47,141 ಮೃತ ಮತದಾರರು, 4,39,801 ಮಂದಿ ಸ್ಥಳಾಂತರಗೊಂಡ ಮತದಾರರು ಮತ್ತು 54,259 ಮಂದಿ ಎರಡು ಕಡೆಗಳಲ್ಲಿ ನೋಂದಾಯಿಸಿದ ಮತದಾರರನ್ನು ಪಟ್ಟಿಯಿಂದ ಕಿತ್ತು ಹಾಕಲಾಗಿದೆ ಎಂದು ವರದಿಗಳು ಹೇಳಿವೆ.

ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಿಂದ ಇದುವರೆಗೆ 1.67 ಲಕ್ಷಕ್ಕೂ ಹೆಚ್ಚು ಮತದಾರರನ್ನು ಪಟ್ಟಿಯಿಂದ ಅಳಿಸಲಾಗಿದೆ ಎಂದು ತಿಳಿದು ಬಂದಿದೆ.

ನಾಂಪಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅತೀ ಹೆಚ್ಚು, ಅಂದರೆ, 21,407 ಮತದಾರರ ಹೆಸರುಗಳನ್ನು ಕೈ ಬಿಡಲಾಗಿದೆ. ಈ ಪೈಕಿ 15,963 ಸ್ಥಳಾಂತರಗೊಂಡ ಮತದಾರರು, 2,843 ಮೃತಪಟ್ಟ ಮತದಾರರು ಮತ್ತು 2,601 ಎರಡು ಬಾರಿ ನೋಂದಾಯಿತ ಮತದಾರರು ಇದ್ದಾರೆ ಎಂದು ಗುರುತಿಸಲಾಗಿದೆ.

ಭಾರತದ ಚುನಾವಣಾ ಆಯೋಗದ ಸೂಚನೆಯಂತೆ 5,41,201 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈ ಬಿಡಲಾಗಿದೆ. ಭಾರತೀಯ ಚುನಾವಣಾ ಆಯೋಗವು ಸೂಚಿಸಿದ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನದ ಪ್ರಕಾರ ಫಾರ್ಮ್-7 ಮತ್ತು ಫಾರ್ಮ್-8 ಅನ್ನು ಸರಿಯಾಗಿ ಸಂಗ್ರಹಿಸುವ ಮೂಲಕ ಎಲ್ಲಾ ಹೆಸರುಗಳನ್ನು ತೆಗೆದು ಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾಗಿ ವರದಿಯಾಗಿದೆ.

ಇದಲ್ಲದೆ, ಮತದಾರರ ಪಟ್ಟಿಗಳ ಶುದ್ಧೀಕರಣದ ಸಮಯದಲ್ಲಿ, ಅನೇಕ ಮತದಾರರ ಪಟ್ಟಿಯಲ್ಲಿ ಪ್ರಮಾಣಿತವಲ್ಲದ ಮನೆ ಸಂಖ್ಯೆ ಕಾಣಿಸಿದ್ದು, ಅಂತಹ ಮತದಾರರನ್ನು ಗುರುತಿಸಲು ಮತ್ತು ತಿದ್ದುಪಡಿ ಮಾಡಲು ಚಾಲನೆ ನೀಡಲಾಗಿದೆ. ಅದರಂತೆ ಪ್ರಮಾಣಿತವಲ್ಲದ ಮನೆ ಸಂಖ್ಯೆ ಹೊಂದಿರುವ ಒಟ್ಟು 1,81,405 ಮತದಾರರನ್ನು ಗುರುತಿಸಲಾಗಿದ್ದು, ಅವರ ಮನೆ ಸಂಖ್ಯೆಗಳನ್ನು ತಿದ್ದುಪಡಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕುಟುಂಬಕ್ಕೆ ಸೇರಿದ ಮತದಾರರನ್ನು ಒಂದೇ ಮತಗಟ್ಟೆಗೆ ಕರೆತರಲು ಕ್ರಮಕೈಗೊಳ್ಳಲಾಗಿದೆ. ಹೈದರಾಬಾದ್‌ನಲ್ಲಿ ಈ ನಿಟ್ಟಿನಲ್ಲಿ ಒಟ್ಟು 3,78,713 ತಿದ್ದುಪಡಿಗಳನ್ನು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ತೆಲಂಗಾಣದ 17 ಲೋಕಸಭಾ ಕ್ಷೇತ್ರಗಳು ಮತ್ತು ಹೈದರಾಬಾದ್‌ನಲ್ಲಿ ನಾಲ್ಕನೇ ಹಂತದಲ್ಲಿ ಮೇ 13ರಂದು ಮತದಾನ ನಡೆಯಲಿದೆ. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ವಿರುದ್ದ ಈ ಬಾರಿ ವಿರಿಂಚಿ ಆಸ್ಪತ್ರೆಗಳ ಮುಖ್ಯಸ್ಥೆ ಮಾಧವಿ ಲತಾ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಹಾಗಾಗಿ, ಕ್ಷೇತ್ರ ಕುತೂಹಲದ ಕೇಂದ್ರವಾಗಿ ಮಾರ್ಪಟ್ಟಿದೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ: ಇಂದು ಮೊದಲ ಹಂತದ ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....