Homeಅಂತರಾಷ್ಟ್ರೀಯಇಂದು ಟರ್ಕಿಯಲ್ಲಿ ಮತ್ತೆ 5.6 ಭೂಕಂಪನ: 3 ತಿಂಗಳ ತುರ್ತು ಪರಿಸ್ಥಿತಿ ಘೋಷಣೆ

ಇಂದು ಟರ್ಕಿಯಲ್ಲಿ ಮತ್ತೆ 5.6 ಭೂಕಂಪನ: 3 ತಿಂಗಳ ತುರ್ತು ಪರಿಸ್ಥಿತಿ ಘೋಷಣೆ

- Advertisement -
- Advertisement -

ಭೂಕಂಪ ಪೀಡಿತ ಟರ್ಕಿ ಮತ್ತು ಸಿರಿಯಾದಲ್ಲಿ ಅವಶೇಷಗಳಡಿಯಲ್ಲಿ ಬದುಕುಳಿದ ಸಂತ್ರಸ್ತರಿಗಾಗಿ ಶೋಧ ಮುಂದುವರಿದಿದೆ. ಭಯಾನಕ ಅವಘಡದಲ್ಲಿ ಇದುವರೆಗೆ 5,100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದಕ್ಷಿಣ ಟರ್ಕಿಯಲ್ಲಿನ ವಿನಾಶಕಾರಿ ಭೂಕಂಪಗಳಿಂದ ಪ್ರಭಾವಿತವಾಗಿರುವ 10 ಪ್ರಾಂತ್ಯಗಳನ್ನು ವಿಪತ್ತು ವಲಯವೆಂದು ಘೋಷಿಸಿದ್ದಾರೆ. ಅಧ್ಯಕ್ಷ ತಯ್ಯಿಪ್ ಎರ್ಡೊಗನ್ ಅವರು 3 ತಿಂಗಳ ತುರ್ತು ಪರಿಸ್ಥಿತಿ  ಮತ್ತು 7 ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದಾರೆ.

ರಕ್ಷಣೆ ಮತ್ತು ಪರಿಹಾರ ತಂಡಗಳು ಪ್ರಪಂಚಾದ್ಯಂತ ಟರ್ಕಿಗೆ ಆಗಮಿಸುತ್ತಿವೆ. ಸಾವು ನೋವಿನ ಹಿನ್ನೆಲೆಯಲ್ಲಿ 70 ದೇಶಗಳು ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯವನ್ನು ನೀಡಿವೆ ಮತ್ತು ಭೂಕಂಪಗಳಿಂದ ಪ್ರಭಾವಿತರಾದ ಜನರಿಗೆ ತಾತ್ಕಾಲಿಕವಾಗಿ ವಸತಿ ಕಲ್ಪಿಸಲು ಪಶ್ಚಿಮಕ್ಕೆ ಪ್ರವಾಸೋದ್ಯಮ ಕೇಂದ್ರವಾದ ಅಂಟಲ್ಯದಲ್ಲಿ ಹೋಟೆಲ್‌ಗಳನ್ನು ತೆರೆಯಲು ಟರ್ಕಿ ಯೋಜಿಸಿದೆ ಎಂದು ಎರ್ಡೊಗನ್ ಹೇಳಿದ್ದಾರೆ.

20,000 ಜನರಿಗೆ ಗಾಯಗಳಾಗಿವೆ. ಕುಸಿದ ಕಟ್ಟಡದಿಂದ ರಕ್ಷಿಸಲ್ಪಟ್ಟವರಲ್ಲಿ ಘಾನಾದ ಫುಟ್ಬಾಲ್ ಆಟಗಾರ ಕ್ರಿಶ್ಚಿಯನ್ ಅಟ್ಸು ಕೂಡ ಸೇರಿದ್ದಾರೆ. ಭೂಕಂಪ ಪೀಡಿತ ಪ್ರದೇಶಕ್ಕೆ ಭಾರತ ಸರ್ಕಾರವು ಅಂಕಾರಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಸಮನ್ವಯದಲ್ಲಿ ಮೊದಲ ಬ್ಯಾಚ್ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ.

ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅನೇಕ ಜನರು ಸಾವನ್ನಪ್ಪಿದ್ದಾರೆ, ಜನರು ನಿದ್ದೆಯಲ್ಲಿರುವಾಗಲೇ ಕಟ್ಟಡಗಳು ನೆಲಸಮಗೊಂಡಿವೆ. ಸೈಪ್ರಸ್ ದ್ವೀಪದಷ್ಟು ದೂರದವರೆಗೂ ಭೂಮಿ ಕಂಪಿಸಿದೆ. ಅದರೊಟ್ಟಿಗೆ ಇಂದು ಸಹ ಟರ್ಕಿಯಲ್ಲಿ 5.6 ಕಂಪನ ಸಂಭವಿಸಿದೆ. ಇದರಿಂದಾಗಿ ಜೀವಹಾನಿಗಳು ಹೆಚ್ಚಾಗಿವೆ.

”ಐತಿಹಾಸಿಕವಾಗಿ, ಕೇಂದ್ರದ ಇತಿಹಾಸದಲ್ಲಿ ದಾಖಲಾದ ಅತಿದೊಡ್ಡ ಭೂಕಂಪವಿದು” ಎಂದು ಸರ್ಕಾರದ ಪರ ರೇಡಿಯೊಗೆ ಸಿರಿಯಾದ ರಾಷ್ಟ್ರೀಯ ಭೂಕಂಪ ಕೇಂದ್ರದ ಮುಖ್ಯಸ್ಥರಾದ ರೇಡ್ ಅಹ್ಮದ್ ತಿಳಿಸಿದರು.

ಟರ್ಕಿಯ ಅಕಾಡೆಮಿ ಆಫ್ ಸೈನ್ಸಸ್‌ನ ಭೂಕಂಪ ತಜ್ಞ ನಾಸಿ ಗೊರೂರ್ ಅವರು, ಇದರಿಂದ ಮುಂದೆ ಯಾವುದೇ ಪ್ರವಾಹಗಳು ಆಗದಂತೆ ತಪ್ಪಿಸಲು ಆ ಪ್ರದೇಶದ ಅಣೆಕಟ್ಟುಗಳು ಬಿರುಕುಬಿಟ್ಟಿರುವ ಬಗ್ಗೆ ತಕ್ಷಣವೇ ಪರಿಶೀಲಿಸುವಂತೆ ಸ್ಥಳೀಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ವಿಶ್ವದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ಟಾಪ್ 10 ನಗರಗಳು | ಸಂಕ್ಷಿಪ್ತ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...