Homeಕರ್ನಾಟಕದೇಶದಲ್ಲಿ 5.8 ಕೋಟಿ ನಕಲಿ ಪಡಿತರ ಚೀಟಿ ರದ್ದು: ಕೇಂದ್ರ ಆಹಾರ ಸಚಿವಾಲಯ

ದೇಶದಲ್ಲಿ 5.8 ಕೋಟಿ ನಕಲಿ ಪಡಿತರ ಚೀಟಿ ರದ್ದು: ಕೇಂದ್ರ ಆಹಾರ ಸಚಿವಾಲಯ

- Advertisement -
- Advertisement -

ನವದೆಹಲಿ: ದೇಶದಲ್ಲಿ ಸಾರ್ವಜನಿಕ ಪಡಿತರ ವ್ಯವಸ್ಥೆಯ ಡಿಜಿಟಲೀಕರಣಕ್ಕೆ ಚಾಲನೆ ನೀಡಲಾಗಿದ್ದು, 5.8 ಕೋಟಿ ನಕಲಿ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಕೇಂದ್ರ ಆಹಾರ ಸಚಿವಾಲಯವು ಬುಧವಾರ ತಿಳಿಸಿದೆ.

ದೇಶದಲ್ಲಿ ಒಟ್ಟು 80.6 ಕೋಟಿ ಪಡಿತರ ಚೀಟಿಗಳನ್ನು ಹೊಂದಿದ ಕುಟುಂಬಗಳಿವೆ. ಆಧಾರ್‌ ಸಂಖ್ಯೆ  ಪರಿಶೀಲನೆ ಪ್ರಕ್ರಿಯೆ ಮೂಲಕ ಈ ನಕಲಿ ಚೀಟಿಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅದು ಹೇಳಿದೆ.

ಆಹಾರ ಭದ್ರತೆ ಹಿನ್ನಲೆಯಲ್ಲಿ ‘ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ’ಯನ್ನು ಅನುಷ್ಠಾನಗೊಳಿಸಿದೆ.

ಪಿಒಎಸ್

ದೇಶದಾದ್ಯಂತ 5.33 ಲಕ್ಷ ನ್ಯಾಯಬೆಲೆ ಅಂಗಡಿಗಳಲ್ಲಿ ತಂತ್ರಜ್ಞಾನ ಆಧಾರಿತ ಇ–ಪಿಒಎಸ್‌ (ಪಾಯಿಂಟ್‌ ಆಫ್‌ ಸೇಲ್‌) ಸಾಧನಗಳನ್ನು ಅಳವಡಿಸಲಾಗಿದೆ. ಇವುಗಳ ಮೂಲಕ ಪಡಿತರ ವಿತರಣೆ ವೇಳೆ ಆಧಾರ ಸಂಖ್ಯೆಯನ್ನು ದೃಢೀಕರಿಸಲಾಗುತ್ತದೆ. ಅರ್ಹ ಪಡಿತರ ಚೀಟಿದಾರರಿಗೆ ಮಾತ್ರ ಪಡಿತರ ವಿತರಿಸಲಾಗುತ್ತಿದೆ ಎಂದು ತಿಳಿಸಿದೆ.

ಅನರ್ಹ ಪಡಿತರ ಚೀಟಿ ಗುರುತಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲನೆ: ಆಹಾರ ಇಲಾಖೆ 

ಬೆಂಗಳೂರು: ರಾಜ್ಯದಲ್ಲಿ ಒಟ್ಟು 1,50,90,534 ಪಡಿತರ ಚೀಟಿಗಳಿದ್ದು, ಈ ಪೈಕಿ 10,68,042 ಅಂತ್ಯೋದಯ ಕಾರ್ಡ್‌ಗಳು, 1,14,60,137 ಬಿಪಿಎಲ್ ಕಾರ್ಡ್‌ಗಳು, ಉಳಿದಂತೆ, 25,62,355 ಎಪಿಲ್ ಕಾರ್ಡ್‌ಗಳು ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ.

ಒಟ್ಟು ಬಿಪಿಎಲ್ ಕಾರ್ಡ್‌ಗಳ ಪೈಕಿ 13,87,652 ಕಾರ್ಡ್‌ಗಳನ್ನು ಅನರ್ಹ ಎಂದು ಗುರುತಿಸಲಾಗಿದೆ. ಅವುಗಳಲ್ಲಿ 98,473 ಆದಾಯ ತೆರಿಗೆ ಪಾವತಿದಾರರು ಹೊಂದಿರುವ ಕಾರ್ಡ್‌ಗಳಾಗಿವೆ. 4,036 ಸರ್ಕಾರಿ ನೌಕರರು ಹೊಂದಿರುವ ಕಾರ್ಡ್‌ಗಳಾಗಿವೆ. ಕುಟುಂಬದ ವಾರ್ಷಿಕ ಆದಾಯ ₹1.20 ಲಕ್ಷಕ್ಕಿಂತ ಹೆಚ್ಚಿರುವವರು ಹೊಂದಿರುವ ಕಾರ್ಡ್‌ಗಳ ಸಂಖ್ಯೆ 10,09,476. ಕಳೆದ ಆರು ತಿಂಗಳುಗಳಿಂದ ಪಡಿತರವನ್ನೇ ಪಡೆಯದ ಕಾರಣಕ್ಕೆ ಅಮಾನತುಗೊಂಡ ಕಾರ್ಡ್‌ಗಳ ಸಂಖ್ಯೆ 2,75,667.

ಅಲ್ಲದೆ, ಮೃತಪಟ್ಟ 1,59,319 ಸದಸ್ಯರ ಹೆಸರುಗಳನ್ನು ಕಾರ್ಡ್‌ನಿಂದ ತೆಗೆದುಹಾಕಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ಅಮಾನತು, ರದ್ದು ಮತ್ತು ಎಪಿಎಲ್ ಕಾರ್ಡ್‌ಗಳಾಗಿ ಬದಲಾಯಿಸಿದ ಒಟ್ಟು ಕಾರ್ಡ್‌ಗಳ ಸಂಖ್ಯೆ 3,81,983.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಲಾಗಿದೆ ಎಂದು ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ…ದಲಿತ ಮಹಿಳೆಯ ಹತ್ಯೆ | 21 ಮಂದಿ ಅಪರಾಧಿಗಳು : ತುಮಕೂರು ನ್ಯಾಯಾಲಯ ಮಹತ್ವದ ತೀರ್ಪು

ಯಾವುದೇ ಪಡಿತರ ಚೀಟಿ ರದ್ದತಿ ಇಲ್ಲ:  ಮುನಿಯಪ್ಪ

ಬೆಂಗಳೂರು: ಬಿಪಿಎಲ್‌, ಎಪಿಎಲ್‌ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತದೆ ಎಂಬುದಾಗಿ ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಅಷ್ಟೆ. ಸರ್ಕಾರ ಎಲ್ಲೂ ಹೇಳಿಲ್ಲ. ಬಿಪಿಎಲ್‌ ಹಾಗೂ ಎಪಿಎಲ್‌ ಪಡಿತರ ಚೀಟಿ ರದ್ದಾಗುವುದಿಲ್ಲ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದ ಯಾವುದೇ ರಾಜ್ಯಗಳಲ್ಲಿ ಶೇ 50ರಷ್ಟು ಬಿಪಿಎಲ್ ಪಡಿತರ ಚೀಟಿಗಳು ಇಲ್ಲ. ಕರ್ನಾಟಕವು ಆರ್ಥಿಕವಾಗಿ ಸುಭದ್ರವಾಗಿ ಇರುವ ರಾಜ್ಯವಾಗಿದ್ದು, ತೆರಿಗೆ ಪಾವತಿಸುವುದರಲ್ಲಿ ಮಹಾರಾಷ್ಟ್ರದ ನಂತರದ ಸ್ಥಾನದಲ್ಲಿದೆ. ಹೀಗಿದ್ದರೂ ಶೇ 75 ರಿಂದ 80 ರಷ್ಟು ಬಿಪಿಎಲ್ ಚೀಟಿಗಳು ಇರಲು ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸಿದೆ. ಇದು ಈ ಸರ್ಕಾರದಲ್ಲಿ ಮಾತ್ರವಲ್ಲ; ಸುಮಾರು 10 ವರ್ಷಗಳಿಂದಲೂ ನಡೆದುಕೊಂಡು ಬಂದಿದೆ. ಕಾಂಗ್ರೆಸ್ ಅಲ್ಲದೇ; ಬಿಜೆಪಿ ಹಾಗೂ ಮೈತ್ರಿ ಸರ್ಕಾರದಲ್ಲಿಯೂ ಚರ್ಚೆಗಳಾಗಿವೆ. ಹೀಗಾಗಿ, ಬಿಪಿಎಲ್‍ಗೆ ಅರ್ಹರಲ್ಲದವರನ್ನು ಎಪಿಎಲ್‍ಗೆ ಬದಲಾಯಿಸಲಾಗುತ್ತದೆ ಹೇಳಿದರು.

ಅರ್ಹರಿಗೆ ಬಿಪಿಎಲ್ಕಾರ್ಡ್ತಪ್ಪಿ ಹೋಗಬಾರದು

ಒಂದು ವೇಳೆ ಬಿಪಿಎಲ್‌ ಕಾರ್ಡ್‌ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್‌ಗೆ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂ‌ದು ಕೆ.ಎಚ್‌.ಮುನಿಯ‌ಪ್ಪ ತಿಳಿಸಿದರು.

ಅನರ್ಹರನ್ನು ಗುರುತಿಸಿ ಬಿಪಿಎಲ್‌ನಿಂದ ಎಪಿಎಲ್‍ಗೆ ಇಡಲಾಗುತ್ತದೆಯೇ ಹೊರತು ರದ್ದು ಮಾಡಲ್ಲ. ಗುರುವಾರ ಅಂಕಿಅಂಶ ಸಮೇತ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತೇನೆ ಎಂದರು.

ಅರ್ಹರಿಗೆ ಯಾವುದೇ ಕಾರಣಕ್ಕೂ ಬಿಪಿಎಲ್ ಕಾರ್ಡ್ ತಪ್ಪಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಕಾರಣಕ್ಕೂ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು. ಒಂದು ವೇಳೆ ಒಂದಿಬ್ಬರು ಅನರ್ಹರು ಸೇರಿಕೊಂಡರೂ ಪರವಾಗಿಲ್ಲ, ಅರ್ಹರಿಗೆ ತಪ್ಪಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಯಾರಾದರೂ ಬಿಪಿಎಲ್ ನವರು ಇದ್ದರೆ ಅರ್ಜಿ ಹಾಕಿ. ಅಂತಹವರಿಗೆ ಮತ್ತೆ ಕಾರ್ಡ್ ಕೊಡುತ್ತೇವೆ. ಈ ವಿಚಾರದಲ್ಲಿ ಬಿಜೆಪಿಯವರಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ ಎಂದರು.

ಕೇಂದ್ರ ಮಾನದಂಡದಂತೆ ಕಾರ್ಡ್ ಪರಿಶೀಲನೆ : ಡಿ.ಕೆ.ಶಿವಕುಮಾರ್

ಬೆಂಗಳೂರು:ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರಕಾರ ಕೆಲವು ಮಾನದಂಡಗಳನ್ನು ನಿಗದಿಪಡಿಸಿದೆ. ಸರಕಾರ ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ನಮ್ಮ ಸರಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಯ ನೀಡಿದರು.

ಬುಧವಾರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರಕಾರ ಕೆಲವು ಮಾನದಂಡ ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ ಅರ್ಜಿ ಪಡೆದು ಮತ್ತೆ ಬಿಪಿಎಲ್ ಕಾರ್ಡ್ ನೀಡಲಾಗುವುದು. ಯಾರೂ ಗಾಬರಿಯಾಗುವ ಅಗತ್ಯವಿಲ್ಲ. ಕೆಲವು ಕಡೆ ಹೆಚ್ಚುಕಮ್ಮಿಯಾಗಿದ್ದು, ಎಲ್ಲವನ್ನು ಬಗೆಹರಿಸುತ್ತೇವೆ. ದಯಮಾಡಿ ಸಹಕಾರ ನೀಡಿ. ಸರಕಾರಿ ನೌಕರರು, ಸಹಕಾರಿ ಸಂಘಗಳ ಅಧಿಕಾರಿಗಳು, ಆದಾಯ ತೆರಿಗೆ ಪಾವತಿದಾರರು ಬಿಪಿಎಲ್ ಕಾರ್ಡ್ ಹೊಂದಿರುವ ಹಿನ್ನೆಲೆಯಲ್ಲಿ ಈ ಪರಿಷ್ಕರಣೆ ಮಾಡಲಾಗುತ್ತಿದೆ ಎಂದರು.

ಅರ್ಹರಿಗೆ ಮಾತ್ರ ಬಿಪಿಎಲ್‌ ಕಾರ್ಡ್: ಡಾ.ಜಿ.ಪರಮೇಶ್ವರ್

ಬೆಂಗಳೂರು: ವಿರೋಧ ಪಕ್ಷದವರು ಬಿಪಿಎಲ್‌ ಪಡಿತರ ಚೀಟಿಗಳ ಬಗ್ಗೆ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಆದರೆ ಸರಕಾರ ಅನರ್ಹರ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಿ, ಅರ್ಹ ಬಿಪಿಎಲ್‌ ಕಾರ್ಡ್ ಗಳನ್ನು ಉಳಿಸಿಕೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಅನರ್ಹ ಬಿಪಿಎಲ್‌ ಪಡಿತರ ಚೀಟಿ ಹೊಂದಿದವರನ್ನು ಪತ್ತೆ ಹಚ್ಚಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಇದನ್ನೂ ಓದಿ…ಯಾವುದೇ ಕಾರಣಕ್ಕೂ ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ’: ‘ದಿ ಕೇರಳ ಸ್ಟೋರಿ 2’ ಸಿನಿಮಾ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

ಬಜರಂಗದಳ ದೂರು; ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳದ ಪಾದ್ರಿಯನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು

ಬಜರಂಗದಳ ಸದಸ್ಯರ ದೂರಿನ ನಂತರ ಕಾನೂನುಬಾಹಿರ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ತಿರುವನಂತಪುರಂ ಮೂಲದ ಮತ್ತು ಪ್ರಸ್ತುತ ಬಿಹಾರದ ಪಾಟ್ನಾದಲ್ಲಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...