Homeಕರ್ನಾಟಕದೇಶದಲ್ಲಿ 5.8 ಕೋಟಿ ನಕಲಿ ಪಡಿತರ ಚೀಟಿ ರದ್ದು: ಕೇಂದ್ರ ಆಹಾರ ಸಚಿವಾಲಯ

ದೇಶದಲ್ಲಿ 5.8 ಕೋಟಿ ನಕಲಿ ಪಡಿತರ ಚೀಟಿ ರದ್ದು: ಕೇಂದ್ರ ಆಹಾರ ಸಚಿವಾಲಯ

- Advertisement -
- Advertisement -

ನವದೆಹಲಿ: ದೇಶದಲ್ಲಿ ಸಾರ್ವಜನಿಕ ಪಡಿತರ ವ್ಯವಸ್ಥೆಯ ಡಿಜಿಟಲೀಕರಣಕ್ಕೆ ಚಾಲನೆ ನೀಡಲಾಗಿದ್ದು, 5.8 ಕೋಟಿ ನಕಲಿ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಕೇಂದ್ರ ಆಹಾರ ಸಚಿವಾಲಯವು ಬುಧವಾರ ತಿಳಿಸಿದೆ.

ದೇಶದಲ್ಲಿ ಒಟ್ಟು 80.6 ಕೋಟಿ ಪಡಿತರ ಚೀಟಿಗಳನ್ನು ಹೊಂದಿದ ಕುಟುಂಬಗಳಿವೆ. ಆಧಾರ್‌ ಸಂಖ್ಯೆ  ಪರಿಶೀಲನೆ ಪ್ರಕ್ರಿಯೆ ಮೂಲಕ ಈ ನಕಲಿ ಚೀಟಿಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅದು ಹೇಳಿದೆ.

ಆಹಾರ ಭದ್ರತೆ ಹಿನ್ನಲೆಯಲ್ಲಿ ‘ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ’ಯನ್ನು ಅನುಷ್ಠಾನಗೊಳಿಸಿದೆ.

ಪಿಒಎಸ್

ದೇಶದಾದ್ಯಂತ 5.33 ಲಕ್ಷ ನ್ಯಾಯಬೆಲೆ ಅಂಗಡಿಗಳಲ್ಲಿ ತಂತ್ರಜ್ಞಾನ ಆಧಾರಿತ ಇ–ಪಿಒಎಸ್‌ (ಪಾಯಿಂಟ್‌ ಆಫ್‌ ಸೇಲ್‌) ಸಾಧನಗಳನ್ನು ಅಳವಡಿಸಲಾಗಿದೆ. ಇವುಗಳ ಮೂಲಕ ಪಡಿತರ ವಿತರಣೆ ವೇಳೆ ಆಧಾರ ಸಂಖ್ಯೆಯನ್ನು ದೃಢೀಕರಿಸಲಾಗುತ್ತದೆ. ಅರ್ಹ ಪಡಿತರ ಚೀಟಿದಾರರಿಗೆ ಮಾತ್ರ ಪಡಿತರ ವಿತರಿಸಲಾಗುತ್ತಿದೆ ಎಂದು ತಿಳಿಸಿದೆ.

ಅನರ್ಹ ಪಡಿತರ ಚೀಟಿ ಗುರುತಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲನೆ: ಆಹಾರ ಇಲಾಖೆ 

ಬೆಂಗಳೂರು: ರಾಜ್ಯದಲ್ಲಿ ಒಟ್ಟು 1,50,90,534 ಪಡಿತರ ಚೀಟಿಗಳಿದ್ದು, ಈ ಪೈಕಿ 10,68,042 ಅಂತ್ಯೋದಯ ಕಾರ್ಡ್‌ಗಳು, 1,14,60,137 ಬಿಪಿಎಲ್ ಕಾರ್ಡ್‌ಗಳು, ಉಳಿದಂತೆ, 25,62,355 ಎಪಿಲ್ ಕಾರ್ಡ್‌ಗಳು ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ.

ಒಟ್ಟು ಬಿಪಿಎಲ್ ಕಾರ್ಡ್‌ಗಳ ಪೈಕಿ 13,87,652 ಕಾರ್ಡ್‌ಗಳನ್ನು ಅನರ್ಹ ಎಂದು ಗುರುತಿಸಲಾಗಿದೆ. ಅವುಗಳಲ್ಲಿ 98,473 ಆದಾಯ ತೆರಿಗೆ ಪಾವತಿದಾರರು ಹೊಂದಿರುವ ಕಾರ್ಡ್‌ಗಳಾಗಿವೆ. 4,036 ಸರ್ಕಾರಿ ನೌಕರರು ಹೊಂದಿರುವ ಕಾರ್ಡ್‌ಗಳಾಗಿವೆ. ಕುಟುಂಬದ ವಾರ್ಷಿಕ ಆದಾಯ ₹1.20 ಲಕ್ಷಕ್ಕಿಂತ ಹೆಚ್ಚಿರುವವರು ಹೊಂದಿರುವ ಕಾರ್ಡ್‌ಗಳ ಸಂಖ್ಯೆ 10,09,476. ಕಳೆದ ಆರು ತಿಂಗಳುಗಳಿಂದ ಪಡಿತರವನ್ನೇ ಪಡೆಯದ ಕಾರಣಕ್ಕೆ ಅಮಾನತುಗೊಂಡ ಕಾರ್ಡ್‌ಗಳ ಸಂಖ್ಯೆ 2,75,667.

ಅಲ್ಲದೆ, ಮೃತಪಟ್ಟ 1,59,319 ಸದಸ್ಯರ ಹೆಸರುಗಳನ್ನು ಕಾರ್ಡ್‌ನಿಂದ ತೆಗೆದುಹಾಕಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ಅಮಾನತು, ರದ್ದು ಮತ್ತು ಎಪಿಎಲ್ ಕಾರ್ಡ್‌ಗಳಾಗಿ ಬದಲಾಯಿಸಿದ ಒಟ್ಟು ಕಾರ್ಡ್‌ಗಳ ಸಂಖ್ಯೆ 3,81,983.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಲಾಗಿದೆ ಎಂದು ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ…ದಲಿತ ಮಹಿಳೆಯ ಹತ್ಯೆ | 21 ಮಂದಿ ಅಪರಾಧಿಗಳು : ತುಮಕೂರು ನ್ಯಾಯಾಲಯ ಮಹತ್ವದ ತೀರ್ಪು

ಯಾವುದೇ ಪಡಿತರ ಚೀಟಿ ರದ್ದತಿ ಇಲ್ಲ:  ಮುನಿಯಪ್ಪ

ಬೆಂಗಳೂರು: ಬಿಪಿಎಲ್‌, ಎಪಿಎಲ್‌ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತದೆ ಎಂಬುದಾಗಿ ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಅಷ್ಟೆ. ಸರ್ಕಾರ ಎಲ್ಲೂ ಹೇಳಿಲ್ಲ. ಬಿಪಿಎಲ್‌ ಹಾಗೂ ಎಪಿಎಲ್‌ ಪಡಿತರ ಚೀಟಿ ರದ್ದಾಗುವುದಿಲ್ಲ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದ ಯಾವುದೇ ರಾಜ್ಯಗಳಲ್ಲಿ ಶೇ 50ರಷ್ಟು ಬಿಪಿಎಲ್ ಪಡಿತರ ಚೀಟಿಗಳು ಇಲ್ಲ. ಕರ್ನಾಟಕವು ಆರ್ಥಿಕವಾಗಿ ಸುಭದ್ರವಾಗಿ ಇರುವ ರಾಜ್ಯವಾಗಿದ್ದು, ತೆರಿಗೆ ಪಾವತಿಸುವುದರಲ್ಲಿ ಮಹಾರಾಷ್ಟ್ರದ ನಂತರದ ಸ್ಥಾನದಲ್ಲಿದೆ. ಹೀಗಿದ್ದರೂ ಶೇ 75 ರಿಂದ 80 ರಷ್ಟು ಬಿಪಿಎಲ್ ಚೀಟಿಗಳು ಇರಲು ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸಿದೆ. ಇದು ಈ ಸರ್ಕಾರದಲ್ಲಿ ಮಾತ್ರವಲ್ಲ; ಸುಮಾರು 10 ವರ್ಷಗಳಿಂದಲೂ ನಡೆದುಕೊಂಡು ಬಂದಿದೆ. ಕಾಂಗ್ರೆಸ್ ಅಲ್ಲದೇ; ಬಿಜೆಪಿ ಹಾಗೂ ಮೈತ್ರಿ ಸರ್ಕಾರದಲ್ಲಿಯೂ ಚರ್ಚೆಗಳಾಗಿವೆ. ಹೀಗಾಗಿ, ಬಿಪಿಎಲ್‍ಗೆ ಅರ್ಹರಲ್ಲದವರನ್ನು ಎಪಿಎಲ್‍ಗೆ ಬದಲಾಯಿಸಲಾಗುತ್ತದೆ ಹೇಳಿದರು.

ಅರ್ಹರಿಗೆ ಬಿಪಿಎಲ್ಕಾರ್ಡ್ತಪ್ಪಿ ಹೋಗಬಾರದು

ಒಂದು ವೇಳೆ ಬಿಪಿಎಲ್‌ ಕಾರ್ಡ್‌ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್‌ಗೆ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂ‌ದು ಕೆ.ಎಚ್‌.ಮುನಿಯ‌ಪ್ಪ ತಿಳಿಸಿದರು.

ಅನರ್ಹರನ್ನು ಗುರುತಿಸಿ ಬಿಪಿಎಲ್‌ನಿಂದ ಎಪಿಎಲ್‍ಗೆ ಇಡಲಾಗುತ್ತದೆಯೇ ಹೊರತು ರದ್ದು ಮಾಡಲ್ಲ. ಗುರುವಾರ ಅಂಕಿಅಂಶ ಸಮೇತ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತೇನೆ ಎಂದರು.

ಅರ್ಹರಿಗೆ ಯಾವುದೇ ಕಾರಣಕ್ಕೂ ಬಿಪಿಎಲ್ ಕಾರ್ಡ್ ತಪ್ಪಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಕಾರಣಕ್ಕೂ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು. ಒಂದು ವೇಳೆ ಒಂದಿಬ್ಬರು ಅನರ್ಹರು ಸೇರಿಕೊಂಡರೂ ಪರವಾಗಿಲ್ಲ, ಅರ್ಹರಿಗೆ ತಪ್ಪಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಯಾರಾದರೂ ಬಿಪಿಎಲ್ ನವರು ಇದ್ದರೆ ಅರ್ಜಿ ಹಾಕಿ. ಅಂತಹವರಿಗೆ ಮತ್ತೆ ಕಾರ್ಡ್ ಕೊಡುತ್ತೇವೆ. ಈ ವಿಚಾರದಲ್ಲಿ ಬಿಜೆಪಿಯವರಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ ಎಂದರು.

ಕೇಂದ್ರ ಮಾನದಂಡದಂತೆ ಕಾರ್ಡ್ ಪರಿಶೀಲನೆ : ಡಿ.ಕೆ.ಶಿವಕುಮಾರ್

ಬೆಂಗಳೂರು:ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರಕಾರ ಕೆಲವು ಮಾನದಂಡಗಳನ್ನು ನಿಗದಿಪಡಿಸಿದೆ. ಸರಕಾರ ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ನಮ್ಮ ಸರಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಯ ನೀಡಿದರು.

ಬುಧವಾರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರಕಾರ ಕೆಲವು ಮಾನದಂಡ ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ ಅರ್ಜಿ ಪಡೆದು ಮತ್ತೆ ಬಿಪಿಎಲ್ ಕಾರ್ಡ್ ನೀಡಲಾಗುವುದು. ಯಾರೂ ಗಾಬರಿಯಾಗುವ ಅಗತ್ಯವಿಲ್ಲ. ಕೆಲವು ಕಡೆ ಹೆಚ್ಚುಕಮ್ಮಿಯಾಗಿದ್ದು, ಎಲ್ಲವನ್ನು ಬಗೆಹರಿಸುತ್ತೇವೆ. ದಯಮಾಡಿ ಸಹಕಾರ ನೀಡಿ. ಸರಕಾರಿ ನೌಕರರು, ಸಹಕಾರಿ ಸಂಘಗಳ ಅಧಿಕಾರಿಗಳು, ಆದಾಯ ತೆರಿಗೆ ಪಾವತಿದಾರರು ಬಿಪಿಎಲ್ ಕಾರ್ಡ್ ಹೊಂದಿರುವ ಹಿನ್ನೆಲೆಯಲ್ಲಿ ಈ ಪರಿಷ್ಕರಣೆ ಮಾಡಲಾಗುತ್ತಿದೆ ಎಂದರು.

ಅರ್ಹರಿಗೆ ಮಾತ್ರ ಬಿಪಿಎಲ್‌ ಕಾರ್ಡ್: ಡಾ.ಜಿ.ಪರಮೇಶ್ವರ್

ಬೆಂಗಳೂರು: ವಿರೋಧ ಪಕ್ಷದವರು ಬಿಪಿಎಲ್‌ ಪಡಿತರ ಚೀಟಿಗಳ ಬಗ್ಗೆ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಆದರೆ ಸರಕಾರ ಅನರ್ಹರ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಿ, ಅರ್ಹ ಬಿಪಿಎಲ್‌ ಕಾರ್ಡ್ ಗಳನ್ನು ಉಳಿಸಿಕೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಅನರ್ಹ ಬಿಪಿಎಲ್‌ ಪಡಿತರ ಚೀಟಿ ಹೊಂದಿದವರನ್ನು ಪತ್ತೆ ಹಚ್ಚಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಇದನ್ನೂ ಓದಿ…ಯಾವುದೇ ಕಾರಣಕ್ಕೂ ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...